Wednesday | March 25, 2026 |

ಮೀಡಿಯಾ ಮಾನಿಟಿರಿಂಗ್‌ಗೆ 38.97 ಲಕ್ಷ ವೆಚ್ಚ; ಮೀಡಿಯಾ ಹ್ಯಾಂಗರ್‌ಗೆ 4(ಜಿ) ವಿನಾಯಿತಿ ನೀಡಿದ ಸರ್ಕಾರ

Support THE-FILE

spot_img

ಬೆಂಗಳೂರು; 2024ನೇ ಸಾಲಿನ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಮೀಡಿಯಾ ಮಾನಿಟರಿಂಗ್‌ ಸೇವೆಯನ್ನು ಮೀಡಿಯಾ ಹ್ಯಾಂಗರ್‌ ಸಂಸ್ಥೆಯಿಂದ ಪಡೆಯಲು ರಾಜ್ಯ ಸರ್ಕಾರವು ಮುಂದಾಗಿದೆ.

 

ಲೋಕಸಭೆ ಚುನಾವಣೆಗೆ ಮತದಾರರ ಜಾಗೃತಿ, ಮತದಾರರನ್ನು ಸೆಳೆಯುವ ಉದ್ದೇಶದಿಂದ 49 ಲಕ್ಷ ರು ಮೊತ್ತದಲ್ಲಿ ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ನ ಸೇವೆ ಪಡೆದಿರುವ ಬೆನ್ನಲ್ಲೇ ಮೀಡಿಯಾ ಮಾನಿಟರಿಂಗ್‌ಗಾಗಿ 2 ತಿಂಗಳ ಅವಧಿಗೆ 38.97 ಲಕ್ಷ ರು. ವೆಚ್ಚ ಮಾಡುತ್ತಿರುವುದು ಮುನ್ನೆಲೆಗೆ ಬಂದಿದೆ.

 

ಅಧಿಸೂಚನೆಯಲ್ಲೇನಿದೆ?

 

2024ನೇ ಸಾಲಿನ ಲೋಕಸಭೆ ಚುನಾವಣೆ ಸಂಬಂಧಿಸಿದಂತೆ ಮೀಡಿಯಾ ಮಾನಿಟರಿಂಗ್‌ ಮಾಡಲು 2 ತಿಂಗಳ ಅಧಿಗೆ 38,97,832 (ಜಿಎಸ್‌ಟಿ ಒಳಗೊಂಡಂತೆ) ವೆಚ್ಚದಲ್ಲಿ ಮೀಡಿಯಾ ಹ್ಯಾಂಗರ್‌ ಸಂಸ್ಥೆಯ ಸೇವೆಯನ್ನು ಪಡೆಯಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರ ಕಲಂ 4(ಜಿ) ರಡಿ ವಿನಾಯಿತಿ ನೀಡಿರುವುದು 2024ರ ಫೆ.28ರಂದು ಹೊರಡಿಸಿರುವ ಅಧಿಸೂಚನೆಯಿಂದ ಗೊತ್ತಾಗಿದೆ.

 

 

ಮೀಡಿಯಾ ಹ್ಯಾಂಗರ್‌ ಸಂಸ್ಥೆಯು ಸಾಮಾಜಿಕ ಜಾಲತಾಣ, ಸಾರ್ವಜನಿಕ, ಸಂಪರ್ಕ, ಸಿನಿಮಾ ವಲಯದಲ್ಲಿ ಕಾರ್ಯನಿರ್ವಹಿಸಿರುವುದು ಕಂಪನಿಯ ವೆಬ್‌ಸೈಟ್‌ನಿಂದ ತಿಳಿದು ಬಂದಿದೆ. ಈ ಕಂಪನಿಯನ್ನು ಅನಿಲ್‌ ಬುದ್ದರ್‌ ಲುಲ್ಲಾ ಎಂಬುವರು ಮುನ್ನಡೆಸುತ್ತಿದ್ದಾರೆ ಎಂದು ಗೊತ್ತಾಗಿದೆ.

 

ಅಲ್ಲದೇ ಈ ಸಂಸ್ಥೆಯು  ಬಿಬಿಎಂಪಿ, ಬೆಂಗಳೂರು ಸ್ಮಾರ್ಟ್‌ ಸಿಟಿ, ಆರೋಗ್ಯ, ಹೋಟೆಲ್‌ ಉದ್ಯಮ ಸೇರಿದಂತೆ ಕಾರ್ಪೋರೇಟ್‌ ವಲಯದ ವಿವಿಧ ಕಂಪನಿಗಳಿಗೂ ಸೇವೆ ನೀಡಿದೆ. ಸಾಮಾಜಿಕ ಜಾಲತಾಣ ನಿರ್ವಹಿಸುವುದು, ರೀಲ್ಸ್‌ಗಳ ನಿರ್ಮಾಣ ಮಾಡುವುದು, ಸಮೀಕ್ಷೆ ಮಾಡುವುದು ಸೇರಿದಂತೆ ಇನ್ನಿತರೆ ಕೆಲಸಗಳಲ್ಲಿ ತೊಡಗಿಸಿಕೊಂಡಿರುವುದು ವೆಬ್‌ಸೈಟ್‌ನಿಂದ ಗೊತ್ತಾಗಿದೆ.

 

ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮತದಾರರ ಜಾಗೃತಿ, ಮತದಾರರನ್ನು ಸೆಳೆಯಲು ಶೀತಲ್‌ ಶೆಟ್ಟಿ ಅವರ ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌ ಸೇವೆ ಪಡೆಯುತ್ತಿದೆ.

 

ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌ನಿಂದ ಮೂರು ತಿಂಗಳವರೆಗೆ ಸೇವೆ ಪಡೆಯಲಿರುವ ಸರ್ಕಾರವು ಇದಕ್ಕಾಗಿ 49.00 ಲಕ್ಷ ರು. ವೆಚ್ಚ ಮಾಡುತ್ತಿದೆ.

ರಾಮ್ ಲಲ್ಲಾನ ವಿಡಿಯೋ ಪ್ರಸ್ತುತಿಪಡಿಸಿದ್ದ ಶೀಟೇಲ್ಸ್‌ಗೆ 4(ಜಿ) ವಿನಾಯಿತಿ; ಮತದಾರರ ಜಾಗೃತಿಗೆ 49 ಲಕ್ಷ ವೆಚ್ಚ

ಇದೇ ಏಪ್ರಿಲ್‌ ಮತ್ತು ಜೂನ್‌ನಲ್ಲಿ ಲೋಕಸಭೆ ಚುನಾವಣೆಗಳು ನಡೆಯಲಿವೆ ಎಂದು ಗೊತ್ತಿದ್ದರೂ ಸಹ ಸರ್ಕಾರವು ಈ ಸಂಬಂಧ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿರಲಿಲ್ಲ. ಅಲ್ಲದೇ ಯಾವುದೇ ಟೆಂಡರ್‌ ಆಗಲೀ, ಅಲ್ಪಾವಧಿ ಟೆಂಡರ್‌, ಆಸಕ್ತಿ ವ್ಯಕ್ತಪಡಿಸುವಿಕೆ (ಇಒಐ)ಯನ್ನೂ ಆಹ್ವಾನಿಸಿರಲಿಲ್ಲ ಎಂದು ಗೊತ್ತಾಗಿದೆ.

 

ಮೂಲತಃ ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌, ಸಿನಿಮಾ ಸೇರಿದಂತೆ ಮನರಂಜನೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದೆ. ಮತದಾರರ ಜಾಗೃತಿ ಕುರಿತು ಸರ್ಕಾರದ ಯೋಜನೆಗಳಲ್ಲಿ ತೊಡಗಿಸಿಕೊಂಡಿರುವುದು ಕಂಡುಬಂದಿಲ್ಲ. ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿಯೂ ಈ ಬಗ್ಗೆ ಯಾವುದೇ ಮಾಹಿತಿ, ವಿವರಗಳಿಲ್ಲ.

 

ವಿಶೇಷವೆಂದರೇ ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌ ಕಂಪನಿಯು ಅಯೋಧ್ಯೆಯ ರಾಮ ಲಲ್ಲಾನ ಕುರಿತು ವಿಡಿಯೋವನ್ನು ಜನವರಿ 2024ರಲ್ಲಿ ಪ್ರಸ್ತುತಿ ಪಡಿಸಿತ್ತು.

 

‘ಪ್ರತಿ ಸ್ವರದಲ್ಲಿ ಸಂಭ್ರಮ, ಆಲಾಪದಲ್ಲಿ ಜೋಗುಳ, ನೂರಾರು ಕಾಲ ಕಾದು ಕುಳಿತ ಜನರಿಗೆ ಎದ್ದು ಕುಣಿದು ಜೈ ಶ್ರೀ ರಾಮ್ ಎನ್ನುತ್ತಾ ಅದ್ಧೂರಿಯಾಗಿ ಆಯೋಧ್ಯೆಗೆ ರಾಮ ಲಲ್ಲಾನನ್ನು ಈ ಹಾಡಿನೊಂದಿಗೆ ಬರ ಮಾಡಿಕೊಳ್ಳುವ ಸಮಯ. ಘರ್ಜಿಸಿ ಹೇಳಿ, ಜೈ ಶ್ರೀ ರಾಮ್!!,’ ಎಂದು ಪ್ರಚುರಪಡಿಸಿರುವುದನ್ನು ಸ್ಮರಿಸಬಹುದು.

Hot this week

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

Topics

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

Related Articles

Popular Categories

error: Content is protected !!