Tuesday | August 25, 2026 |

16,625 ಕೆರೆಗಳಲ್ಲಿ ಶೇಕಡ 30ಕ್ಕಿಂತಲೂ ಕಡಿಮೆ ಪ್ರಮಾಣದ ನೀರು; ಜನ, ಜಾನುವಾರುಗಳಿಗೆ ಸಂಕಷ್ಟ

ಬೆಂಗಳೂರು; ತೀವ್ರ ಬರಗಾಲಕ್ಕೆ ತುತ್ತಾಗಿರುವ ರಾಜ್ಯದಲ್ಲಿ ಹನಿ ನೀರಿಗೂ ತತ್ವಾರ ಶುರುವಾಗಿದೆ. ಇದರ ಮಧ್ಯೆಯೇ ರಾಜ್ಯದ 16,625 ಕೆರೆಗಳಲ್ಲಿ ಶೇಕಡ 30ಕ್ಕಿಂತಲೂ ಕಡಿಮೆ ಪ್ರಮಾಣದ ನೀರಿದೆ. ಹೀಗಾಗಿ ನಗರ ಪ್ರದೇಶಗಳನ್ನೂ ಒಳಗೊಂಡಂತೆ ಕೆರೆ ಸುತ್ತಮುತ್ತಲಿನ ಜನ-ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಂತಾಗುವ ಪರಿಸ್ಥಿತಿ ತಲೆದೋರಿದೆ.

 

ಕೆರೆಗಳಲ್ಲಿ ನೀರು ಖಾಲಿ ಆಗುತ್ತಿರುವ ಕುರಿತು ಅಭಿವೃದ್ಧಿ ಆಯುಕ್ತರಾದ ಡಾ ಶಾಲಿನಿ ರಜನೀಶ್‌ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಹವಮಾನ ಅವಲೋಕನ ಸಮಿತಿ ಸಭೆಯಲ್ಲಿ ಕೆರೆಗಳಲ್ಲಿನ ನೀರಿನ ಪರಿಸ್ಥಿತಿ ಕುರಿತು ಚರ್ಚೆಯಾಗಿದೆ. 2024ರ ಮಾರ್ಚ್‌ 28ರಂದು ನಡೆದಿದ್ದ ಸಭೆಯ ನಡವಳಿಗಳು ‘ದಿ ಫೈಲ್‌’ ಗೆ ಲಭ್ಯವಾಗಿದೆ.

 

ಮುಂಗಾರಿಗಿಂತ ಮುಂಚಿತವಾಗಿ ಕೆರೆಗಳಿಗೆ ಸಾಕಷ್ಟು ಮಳೆ ನೀರು ಸಂಗ್ರಹಣೆ ಮಾಡಲು ಅಗತ್ಯವಿರುವ ಎಲ್ಲಾ ಕಾಮಗಾರಿಗಳನ್ನು ವಿವಿಧ ಇಲಾಖೆಗಳ ಯೋಜನೆಗಳಡಿಯಲ್ಲಿ ಕೈಗೆತ್ತಿಕೊಳ್ಳಬೇಕು ಎಂದು ಡಾ ಶಾಲಿನಿ ರಜನೀಶ್‌ ಅವರು 2024ರ ಮಾರ್ಚ್‌ 30ರಂದು ಎಲ್ಲಾ ಇಲಾಖೆಗಳ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

 

ರಾಜ್ಯದಲ್ಲಿ ಜಿಲ್ಲಾ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 12,657, ಸಣ್ಣ ನೀರಾವರಿ ಇಲಾಖೆಯಲ್ಲಿ 3,252, ಜಲಸಂಪನ್ಮೂಲ ಇಲಾಖೆಯಲ್ಲಿ 85, ಪೌರಾಡಳಿತ ಇಲಾಖೆ ವ್ಯಾಪ್ತಿಯಲ್ಲಿ 248, ಕರ್ನಾಟಕ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ 377, ಕೆಪಿಸಿಎಲ್‌ ವ್ಯಾಪ್ತಿಯಲ್ಲಿ 6 ಕೆರೆ ಸೇರಿದಂತೆ ಒಟ್ಟಾರೆ 16,625 ಕೆರೆಗಳಿವೆ. ಈ ಕೆರೆಗಳಲ್ಲಿ ಸುಮಾರು ಶೇಕಡಾ 30ಕ್ಕಿಂತಲೂ ಕಡಿಮೆ ಪ್ರಮಾಣದ ನೀರಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

 

ಕರ್ನಾಟಕ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿನ ಕೆರೆಗಳ ಪೈಕಿ ಚಿತ್ರದುರ್ಗದಲ್ಲಿ 25, ಕೋಲಾರದಲ್ಲಿ 15, ಶಿವಮೊಗ್ಗದಲ್ಲಿ 75, ತುಮಕೂರಿನಲ್ಲಿ 27, ಉತ್ತರ ಕನ್ನಡದಲ್ಲಿ 28 ಕೆರೆಗಳಿವೆ. ಈ ಕೆರೆಗಳಲ್ಲಿಯೂ ಶೇ.30ಕ್ಕಿಂತಲೂ ಕಡಿಮೆ ನೀರಿದೆ ಎಂಬುದು ಪತ್ರದಿಂದ ಗೊತ್ತಾಗಿದೆ.

 

2023ರ ಡಿಸೆಂಬರ್‍‌ ಅಂತ್ಯಕ್ಕೆ ರಾಜ್ಯದ ಸುಮಾರು 1,288ಕ್ಕೂ ಹೆಚ್ಚು ಕೆರೆಗಳಲ್ಲಿ ಶೇ.30ರಷ್ಟು ಮಾತ್ರ ನೀರಿತ್ತು. ಇದರಲ್ಲಿ 425ಕ್ಕೂ ಹೆಚ್ಚು ಕೆರೆಗಳಲ್ಲಿ ಒಂದು ಹನಿಯೂ ನೀರಿರಲಿಲ್ಲ. 1033 ಕೆರೆಗಳಲ್ಲಿ ಶೇ.31 ರಿಂದ 50 ರಷ್ಟು ನೀರಿತ್ತು. 760 ಕೆರೆಯಲ್ಲಿ ಶೇ.51 ರಿಂದ 99 ಭಾಗ ನೀರಿತ್ತು.

 

ತುಮಕೂರು ಜಿಲ್ಲೆಯಲ್ಲಿ 371 ಕೆರೆಗಳಿವೆ. ಇದರಲ್ಲಿ ಡಿಸೆಂಬರ್‍‌ ಅಂತ್ಯಕ್ಕೇ 68 ಕೆರೆಯಲ್ಲಿ ನೀರಿರಲಿಲ್ಲ. ಬೆಳಗಾವಿ ಜಿಲ್ಲೆಯಲ್ಲಿ 290 ಕೆರೆಗಳ ಪೈಕಿ 113 ಕೆರೆಯಲ್ಲಿ ನೀರಿಲ್ಲದಂತಾಗಿತ್ತು. ವಿಜಯಪುರ, ಬಾಗಲಕೋಟೆ, ಚಾಮರಾಜನಗರ, ಕಲಬುರಗಿ, ಬಳ್ಳಾರಿ, ವಿಜಯನಗರ ಮತ್ತಿತರ ಜಿಲ್ಲೆಗಳಲ್ಲೂ ಇಂತದ್ದೇ ಪರಿಸ್ಥಿತಿ ಇತ್ತು.

 

ಬೆಂಗಳೂರು ನಗರ ಜಿಲ್ಲೆಯಲ್ಲಿ 149 ಕೆರೆಗಳ ಜೀರ್ಣೋದ್ಧಾರಕ್ಕೆ ಮುಂದಾಗಿರುವ ಸರ್ಕಾರವು ಇದಕ್ಕಾಗಿ 910.70 ಕೋಟಿ ರು ಅಂದಾಜು ವೆಚ್ಚದ ಕಾರ್ಯ ಯೋಜನೆಯನ್ನು ಸಿದ್ಧಪಡಿಸಿದೆ. ಇದರಲ್ಲಿ ಕೆರೆಗಳ ನೀರಿನ ಸಾಮರ್ಥ್ಯ ಸೇರಿದಂತೆ ಇನ್ನಿತರೆ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ 656.15 ಕೋಟಿ ರು., ಇತರೆ ಕಾಮಗಾರಿಗಳಿಗೆ 254.56 ಕೋಟಿ ರು ಸೇರಿದೆ.

 

ಬೆಂಗಳೂರು ದಕ್ಷಿಣ ವ್ಯಾಪ್ತಿಯ ಕೆರೆಗಳಿಗೆ 69.68 ಕೋಟಿ ರು., ಬೆಂಗಳೂರು ಪೂರ್ವಕ್ಕೆ 73.97 ಕೋಟಿ ರು., ಬೆಂಗಳೂರು ಉತ್ತರಕ್ಕೆ 102.75 ಕೋಟಿ ರು., ಆನೇಕಲ್‌ ತಾಲೂಕಿನಲ್ಲಿನ ಮೂರು ಘಟಕಗಳಿಗೆ 421.6 ಕೋಟಿ ರು., ಯಲಹಂಕದ 2 ಘಟಕಗಳಲ್ಲಿ 242.4 ಕೋಟಿ ರು ಅಂದಾಜಿಸಿದೆ.

Hot this week

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

Related Articles

Popular Categories

error: Content is protected !!