Thursday | August 20, 2026 |

ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಅಕ್ರಮ; ಆರೋಪಿತರ ಮನವಿಯಲ್ಲಿ ಉನ್ನತ ಶಿಕ್ಷಣ ಸಚಿವರ ಕಚೇರಿಯ ಪ್ರಸ್ತಾಪ

ಬೆಂಗಳೂರು; ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಈಗಾಗಲೇ ಸಚಿವ ಬಿ ನಾಗೇಂದ್ರ ಅವರ ತಲೆದಂಡವೂ ಆಗಿದೆ. ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಶರಣ ಪ್ರಕಾಶ್‌ ಪಾಟೀಲ್‌ ಅವರ ಹೆಸರೂ ಈ ಪ್ರಕರಣದಲ್ಲಿ ತೇಲಿ ಬಂದಿದೆ.

 

ಈ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಖುದ್ದು ಡಾ ಶರಣ ಪ್ರಕಾಶ್‌ ಪಾಟೀಲ್‌ ಅವರು ಸ್ಪಷ್ಟನೆಯನ್ನೂ ನೀಡಿದ್ದಾರೆ. ಏತನ್ಮಧ್ಯೆ ಆರೋಪಿತ ಅಧಿಕಾರಿಯೊಬ್ಬರು ನ್ಯಾಯಾಲಯಕ್ಕೆ ಸಲ್ಲಿಸಿರುವ ಮನವಿ ಪತ್ರದಲ್ಲಿ ವಿಧಾನಸೌಧದಲ್ಲಿರುವ ಉನ್ನತ ಶಿಕ್ಷಣ ಸಚಿವ ಕಚೇರಿ ಎಂದು ನಮೂದಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

 

ವಾಸ್ತವದಲ್ಲಿ ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್‍‌ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣ ಪ್ರಕಾಶ್‌ ಪಾಟೀಲ್‌ ಅವರ ಕಚೇರಿಯೂ ವಿಧಾನಸೌಧದಲ್ಲಿಲ್ಲ. ಬದಲಿಗೆ ಡಾ ಶರಣ ಪ್ರಕಾಶ್‌ ಪಾಟೀಲ್‌ ಅವರ ಕಚೇರಿಯು ವಿಕಾಸಸೌಧದ ಎರಡನೇ ಮಹಡಿಯಲ್ಲಿದೆ. ಮತ್ತು ಡಾ ಎಂ ಸಿ ಸುಧಾಕರ್‍‌ ಅವರ ಕಚೇರಿಯೂ ಸಹ ವಿಕಾಸಸೌಧದ ಮೂರನೇ ಮಹಡಿ (ಹೈಕೋರ್ಟ್‌ ಎದುರು)ಯಲ್ಲಿದೆ.

 

ಆದರೂ ಆರೋಪಿತ ಅಧಿಕಾರಿಯೊಬ್ಬರು ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ವಿಧಾನಸೌಧದಲ್ಲಿರುವ ಉನ್ನತ ಶಿಕ್ಷಣ ಸಚಿವರ ಕಚೇರಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿ ರಕ್ಷಿಸಿಡಬೇಕು ಮತ್ತು ಸಾಕ್ಷಿಯಾಗಿ ಪರಿಗಣಿಸಬೇಕು ಎಂದು ಕೋರಿದ್ದಾರೆ.

 

ಆರೋಪಿತ ಅಧಿಕಾರಿಯು ನ್ಯಾಯಾಲಯಕ್ಕೆ ಸಲ್ಲಿಸಿರುವ ಮನವಿ ಪತ್ರದಲ್ಲಿ ನಮೂದಿಸಿರುವಂತೆ ಸಚಿವರು ಮತ್ತು ಅವರು ಎಲ್ಲಿ ಕಚೇರಿ ಹೊಂದಿದ್ದಾರೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.

 

ಮತ್ತೊಂದು ವಿಶೇಷವೆಂದರೆ ವಿಧಾನಸೌಧ ಮತ್ತು ವಿಕಾಸಸೌಧದ ಕಾರಿಡಾರ್‍‌ನ ನಾಲ್ಕು ಮೂಲೆಯಲ್ಲಿಯೂ ಸಿಸಿಟಿವಿ ಅಳವಡಿಸಲಾಗಿದೆಯೇ ವಿನಃ ಸಚಿವರ ಕೊಠಡಿಯೂ ಸೇರಿದಂತೆ ಯಾವ ಕೊಠಡಿಗಳಿಗೂ ಸಿಸಿಟಿವಿ ಅಳವಡಿಸಿಲ್ಲ.

 

ಇಡೀ ವಿಧಾನಸೌಧದಲ್ಲಿ 89 ಸಿಸಿಟಿವಿ ಕ್ಯಾಮೆರಾಗಳಿವೆ. ಈ ಪೈಕಿ 16 ಮಾತ್ರ ಕಾರ್ಯನಿರ್ವಹಿಸುತ್ತಿವೆ. ವಿಧಾನಸೌಧದ ಪ್ರಮುಖ ನಾಲ್ಕು ಪ್ರವೇಶ ದ್ವಾರಗಳ ಕೆಲ ಭಾಗಗಳನ್ನು ಹೊರತುಪಡಿಸಿದರೆ ಹಲವು ತಿಂಗಳುಗಳಿಂದ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ತಿಳಿದು ಬಂದಿದೆ.

 

ಆರೋಪಿ ಅಧಿಕಾರಿಯ ಮನವಿಯಲ್ಲೇನಿದೆ?

 

ನಿಗಮದ ಅಧ್ಯಕ್ಷರಾದ ಬಸವರಾಜ್ ದದ್ದಲ್ ಜೊತೆ ನಡೆಸಿರುವ ಸಂಭಾಷಣೆಯನ್ನು ಎಸ್‌ಐಟಿ  ವಶಪಡಿಸಿಕೊಂಡಿದ್ದು ಅದನ್ನು ನಾಶ ಮಾಡುವ ಸಂಭವವಿರುತ್ತದೆ. ಹಾಗಾಗಿ ಅದರ ಒಂದು ಪ್ರತಿಯನ್ನು ನ್ಯಾಯಾಲಯ  ಪಡೆದುಕೊಳ್ಳಬೇಕು. ವಿಧಾನಸೌಧದಲ್ಲಿರುವ ಉನ್ನತ ಶಿಕ್ಷಣ ಸಚಿವರ ಅವರ ಕಾರ್ಯಾಲಯದ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಯೂನಿಯನ್ ಬ್ಯಾಂಕಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ನಾಶ ಮಾಡುವ ಸಂಭವವಿದ್ದು ಅವುಗಳನ್ನು ಕೂಡ ಸಾಕ್ಷಿಯಾಗಿ ಪರಿಗಣಿಸಬೇಕು ಎಂದು ಆರೋಪಿತ ಅಧಿಕಾರಿಯು ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ.

 

ಆರೋಪಿತ ಅಧಿಕಾರಿಯು ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣಪತ್ರವನ್ನಾಧರಿಸಿ ಪ್ರತಿಪಕ್ಷ ಬಿಜೆಪಿಯೂ ಟ್ವೀಟ್‌ ಮಾಡಿದೆ.

 

‘ಕಾಂಗ್ರೆಸ್ಸಿನ ಬಹುತೇಕ ನಾಯಕರು ಸೇರಿಕೊಂಡು ಮಾಡಿರುವ ಮಹಾನ್ ಭ್ರಷ್ಟಾಚಾರ. ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಭಾಗಿಯಾಗಿರುವ ಈ ಒಂದು ಹಗರಣವನ್ನು ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸುವುದು ಅಸಾಧ್ಯ, ಆದಕಾರಣ ಸಿದ್ದರಾಮಯ್ಯನವರು ಈ ಪ್ರಕರಣವನ್ನು ಸಿಬಿಐಗೆ ವಹಿಸಿ ತಾವು ಕೂಡ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು,’ ಎಂದು ಆಗ್ರಹಿಸಿದೆ.

Hot this week

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...
Please Scan to make Your Contribution

Topics

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಫ್ರೀಡಂ ಹಬ್ಬಕ್ಕೆ 6 ಕೋಟಿ ವೆಚ್ಚ!; ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಕೆಲಸ ಆರಂಭಿಸಿದ ಕಂಪನಿ

ಬೆಂಗಳೂರು; ಹೊಸದಾಗಿ ವಿದ್ಯಾರ್ಥಿ ನಿಲಯಗಳ ಆರಂಭ, ಅನುಮೋದಿತ ಕಾಮಗಾರಿಗಳ ಕಾರ್ಯಭಾರಕ್ಕೆ ನಲುಗಿ...

Related Articles

Popular Categories

error: Content is protected !!