Tuesday | June 9, 2026 |

ಸಂಚಿತ ನಿಧಿಯಿಂದ 1,494 ಕೋಟಿ ರು ಹೊರಗಿರಿಸಿ ವ್ಯವಹಾರ?; 30 ದಿನಗಳಾದರೂ ಉತ್ತರವಿಲ್ಲ

ಬೆಂಗಳೂರು; 2022-23ನೇ ಹಣಕಾಸಿನ ವರ್ಷದಲ್ಲಿ ತಾಲೂಕು ಪಂಚಾಯ್ತಿಗಳಲ್ಲಿ ಖರ್ಚಾಗದೇ ಉಳಿದಿರುವ 1,494 ಕೋಟಿ ರು ಗಳನ್ನು ಸಂವಿಧಾನದ ವಿಧಿಗೆ ವಿರುದ್ಧವಾಗಿ ಬಳಕೆ ಮಾಡಿಕೊಂಡಿದೆಯೇ ಎಂಬ ಕುರಿತು ಕೇಳಿದ್ದ ಪ್ರಶ್ನೆಗಳಿಗೆ  ಆರ್ಥಿಕ ಇಲಾಖೆಯು 30  ದಿವಸಗಳಾದರೂ ಉತ್ತರ ನೀಡಿಲ್ಲ.

 

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನಕ್ಕೆ ಉತ್ತರ ನೀಡಿದ್ದ ಕಡತವನ್ನೇ  ತೆರೆದಿಲ್ಲ ಎಂದು ಆರ್ಥಿಕ ಇಲಾಖೆಯು ಆರ್‍‌ಟಿಐ ಅರ್ಜಿಗೆ ಹಿಂಬರಹ ನೀಡಿತ್ತು. ಇದರ ಬೆನ್ನಲ್ಲೇ 30 ದಿನಗಳಾದರೂ ಸಹ ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌ ಕೆ ಅತೀಕ್‌ ಮತ್ತು ಜಂಟಿ ಕಾರ್ಯದರ್ಶಿ ನಿತೀಶ್ ಅವರೂ ಸಹ ಯಾವುದೇ ಉತ್ತರವನ್ನೂ ನೀಡಿಲ್ಲ.

 

2022-23ನೇ ಹಣಕಾಸಿನ ಸಾಲಿನಲ್ಲಿ ಜಿಲ್ಲಾ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿಗಳ Fund 22ರಡಿ ಖರ್ಚಾಗದೇ ಉಳಿಕೆ ಇರುವ  1,494 ಕೋಟಿ ಮೊತ್ತವು  ಖಜಾನೆಯಲ್ಲಿ ಸ್ವೀಕೃತವಾಗಿದೆಯೇ ಅಥವಾ ಇಲ್ಲವೇ ಎಂಬ ಕುರಿತು ‘ದಿ ಫೈಲ್‌’ ಪ್ರತಿಕ್ರಿಯೆ/ಉತ್ತರ ಬಯಸಿ 2024ರ ಮೇ 21ರಂದೇ ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಎಲ್‌ ಕೆ ಅತೀಕ್‌ ಅವರಿಗೆ ಈ-ಮೈಲ್‌ನಲ್ಲಿ ಪ್ರಶ್ನಾವಳಿ ಪಟ್ಟಿಯನ್ನು ಕಳಿಸಿತ್ತು.

 

ದಿ ಫೈಲ್‌ ಕೇಳಿದ್ದ ಪ್ರಶ್ನೆಗಳಿವು

 

ಕರ್ನಾಟಕ ಸರ್ಕಾರವು 2022-23ನೇ ನೇ ಹಣಕಾಸಿನ ವರ್ಷದಲ್ಲಿ ರಾಜ್ಯ ಸಂಚಿತ ನಿಧಿಗೆ ಸೇರಬೇಕಾದ ಸಹಸ್ರಾರು ಕೋಟ ರುಪಾಯಿಗಳನ್ನು (ಬಳಕೆಯಾಗದ ಅನುದಾನ) ಸಂಚಿತ ನಿಧಿಗೆ ಸೇರಿಸದೇ ಸಂವಿಧಾನದ ವಿಧಿ 202 ಹಾಗೂ 206ರಲ್ಲಿ ಪ್ರದತ್ತವಾದ ಅಂಶಗಳಿಗೆ ವಿರುದ್ಧವಾಗಿ ಬಳಕೆ ಮಾಡಿಕೊಂಡಿರುವುದು ನಿಜವೇ?
ರಾಜ್ಯ ಖಜಾನೆ ಇಲಾಖೆಯ ಪತ್ರ ಸಂಖ್ಯೆ ಅ.ನಿ/ರಾಸೈಬ?fಯಾ.ಪ್ರ/ಲೆಕ್ಕ-09/2023-24 ದಿನಾಂಕ 20.04.2024ರಲ್ಲಿ 2022-23ನೇ ಸಾಲಿನ (ಆರ್ಥಿಕ) ಬಳಕೆಯಾಗದ ಅನುದಾನ ಎಂದು ಮುಖ್ಯಮಂತ್ರಿಗಳು ತಿಳಿಸಿದ ತಾಲೂಕು ಪಂಚಾಯ್ತಿ ನಿಧಿ IIರ ಮೊತ್ತ 1,494 ಕೋಟಿ ರು.ಗಳು ಖಜಾನೆಯಲ್ಲಿ ಸ್ವೀಕೃತವಾಗಿರುವುದಿಲ್ಲ.  ಆಂದರೆ ಬಳಕೆಯಾಗದ ಅನುದಾನ 1,494.00 ಕೋಟಿ ರು  ರಾಜ್ಯದ ಸಂಚಿತ ನಿಧಿಗೆ ಜಮೆಯಾಗಿರುವುದಿಲ್ಲ  ಎಂದು ನಾವು ಭಾವಿಸಬಹುದೇ?

ಈ ಪ್ರಶ್ನಾವಳಿ ತಲುಪಿ 30 ದಿವಸಗಳಾದರೂ ಇದುವರೆಗೂ ಯಾವುದೇ ಪ್ರತಿಕ್ರಿಯೆಯಾಗಲೀ, ಉತ್ತರವನ್ನಾಗಲೀ ಆರ್ಥಿಕ ಇಲಾಖೆಯು ಒದಗಿಸಿಲ್ಲ. ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ,  ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪ್ರತ್ಯೇಕವಾಗಿ ಈ ಮೇಲ್‌ ಮಾಡಲಾಗಿತ್ತು. ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ಕಚೇರಿಯು ಈ ಮೇಲ್‌ನ್ನು ಬಹು ದಿನಗಳವರೆಗೆ ತನ್ನ ಬಳಿಯೇ ಇಟ್ಟುಕೊಂಡಿತ್ತು. ನಂತರ ಅದನ್ನು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಚೇರಿಗೆ ರವಾನಿಸಿತ್ತು.

 

ಇಲ್ಲಿಯೂ ಸಹ ಈ ಮೇಲ್‌ನ್ನು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಚೇರಿಯು ಈಗಲೂ  ತನ್ನ ಬಳಿಯೇ ಇಟ್ಟುಕೊಂಡಿದೆ. ಈ ಬಗ್ಗೆ ‘ದಿ ಫೈಲ್‌’ ಪ್ರತಿನಿಧಿ ಪ್ರಶ್ನಿಸಿದ ನಂತರ ಈ ಮೈಲ್‌ನಲ್ಲಿ ಕೇಳಿದ್ದ ಪ್ರಶ್ನಾವಳಿ ಪಟ್ಟಿಯನ್ನು ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿ ನಿತೀಶ್‌ ಕೆ ಅವರಿಗೆ (ಕಂಪ್ಯೂಟರ್‍‌ ನಂಬರ್‍‌; 7887643) ವರ್ಗಾಯಿಸಿದೆ. ನಿತೀಶ್‌ ಅವರನ್ನೂ ಸಹ ‘ದಿ ಫೈಲ್‌’ ಪ್ರತಿನಿಧಿ ಸಂಪರ್ಕಿಸಿದ್ದರು.

 

ಅದಕ್ಕವರು ‘ನೋಡುತ್ತೇನೆ,’ ಎಂದಷ್ಟೇ ಪ್ರತಿಕ್ರಿಯಿಸಿದರು. ಇದಾದ ನಂತರವೂ ಯಾವುದೇ ಉತ್ತರ ಇದುವರೆಗೂ ನೀಡಿಲ್ಲ. ಸರ್ಕಾರದ ಈ ನಡೆಯು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಂತಾಗಿದೆ.

 

ರಾಜ್ಯದ ತಾಲೂಕು ಪಂಚಾಯ್ತಿಗಳಲ್ಲಿ 2022-23ನೇ ಸಾಲಿನಲ್ಲಿ ಖರ್ಚಾಗದೇ ಉಳಿಕೆಯಾಗಿದ್ದ 1,494 ಕೋಟಿ ರು ಮೊತ್ತವು ರಾಜ್ಯ ಖಜಾನೆಯಲ್ಲಿ ಸ್ವೀಕೃತವಾಗಿಲ್ಲ. ಸಂಚಿತ ನಿಧಿಗೆ ಸೇರಬೇಕಿದ್ದ ಈ ಮೊತ್ತವನ್ನು Recovery of overpayment ಎಂದು ಹೊಸದಾಗಿ ವ್ಯಾಖ್ಯಾನಿಸಿದೆ.

 

ಈ ಮೊತ್ತಗಳನ್ನು ಸಂಚಿತ ನಿಧಿಯಿಂದ ಹೊರಗೆ ಇರಿಸಿ ವ್ಯವಹರಿಸಿದೆಯೇ ಎಂಬ ಅನುಮಾನವೂ ಇದೆ.  ಸರ್ಕಾರವು ಈ ರೀತಿ  ಸಾವಿರಾರು ಕೋಟಿ ರುಪಾಯಿಗಳನ್ನು ಸಂಚಿತ ನಿಧಿಯಿಂದ ಹೊರಗೆ ಇರಿಸಿ ವ್ಯವಹರಿಸಿರುವುದು ಸಂಚಿತ ನಿಧಿಯ ಕಳ್ಳತನ ಮಾಡಿದಷ್ಟೇ ಗಂಭೀರ ಅಪರಾಧಿಕ ಕೃತ್ಯ ಎಂಬ ಆರೋಪವೂ ಕೇಳಿ ಬಂದಿದೆ.

 

ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದಲ್ಲಿದ್ದ ಕೋಟ್ಯಂತರ ರುಪಾಯಿ ಮೊತ್ತವು ಅನಧಿಕೃತ ಖಾತೆಗಳಿಗೆ ವರ್ಗಾವಣೆ ಆಗಿರುವ ಪ್ರಕರಣದ ಕುರಿತು ಪ್ರತಿಪಕ್ಷಗಳು ರಾಜ್ಯ ಕಾಂಗ್ರೆಸ್‌ ಸರ್ಕಾರದ ಮೇಲೆ ಮುಗಿಬಿದ್ದಿವೆ. ಇದರ ಬೆನ್ನಲ್ಲೇ ಇದೀಗ 1,494 ಕೋಟಿ ರುಪಾಯಿ ರಾಜ್ಯ ಖಜಾನೆಯಲ್ಲಿ ಸ್ವೀಕೃತವಾಗಿಲ್ಲ ಎಂಬ ಮಾಹಿತಿಯು ಸರ್ಕಾರವನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ.

 

ರಾಜ್ಯ ಖಜಾನೆಗೆ ಸ್ವೀಕೃತವಾಗದ 1,494 ಕೋಟಿ; ಸಂಚಿತ ನಿಧಿಯಿಂದ ಹೊರಗಿರಿಸಿ ವ್ಯವಹರಿಸಿದೆಯೇ ಸರ್ಕಾರ?

ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳ Fund II ನಲ್ಲಿ ಖರ್ಚಾಗದೇ ಉಳಿಕೆ ಇರುವ ಮೊತ್ತವು ಸಂಚಿತ ನಿಧಿಗೆ ಜಮೆಯಾಗಿದೆಯೇ ಇಲ್ಲವೇ ಎಂಬ ಕುರಿತು ಶಿವಮೊಗ್ಗ ಮೂಲದ ವಕೀಲ ಹಾಗೂ ಖಜಾನೆ ಇಲಾಖೆಯ ನಿವೃತ್ತ ಅಧಿಕಾರಿ ಪ್ರಾಣೇಶ್‌ ಎ ಎನ್‌ ಎಂಬುವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕಾನೂನು ಸೂಚನಾ ಪತ್ರ ನೀಡಿದ್ದರು. ಇದರ ಬೆನ್ನಲ್ಲೇ  ರಾಜ್ಯ ಖಜಾನೆ ಇಲಾಖೆಯು ನೀಡಿರುವ  ಮಾಹಿತಿಗೆ ಮಹತ್ವ ಬಂದಿತ್ತು

1,494 ಕೋಟಿ ರು ಜಮೆ; ಸಿಎಂ ಸಹಿಯೊಂದಿಗೆ ಉತ್ತರಿಸಿದ್ದ ಕಡತ ತೆರೆದಿಲ್ಲವೆಂದು ಸುಳ್ಳು ಹೇಳಿದ ಸರ್ಕಾರ

 

‘Redumption in Expenditure ಯಾವತ್ತೂ ಸಹ ರಾಜ್ಯದ ರೆವಿನ್ಯೂ ಆಗಿರುವುದಿಲ್ಲ. ಇದು ಸಂಚಿತ ನಿಧಿಗೆ ಸೇರಬೇಕಾದ ಹಣ ಆಗಿರುತ್ತದೆ. ಆದರೆ ಸರ್ಕಾರವು ಇದೇ ಮೊತ್ತಗಳನ್ನು Recovery of overpayment ಎಂದು ಹೊಸದಾಗಿ ವ್ಯಾಖ್ಯಾನಿಸಿದೆ. ಈ ಮೊತ್ತಗಳನ್ನು ಸಂಚಿತ ನಿಧಿಯಿಂದ ಹೊರಗೆ ಇರಿಸಿ ವ್ಯವಹರಿಸುತ್ತಿದೆ. ಇದುಸಂವಿಧಾನ ಬಾಹಿರ ಕೃತ್ಯವಾಗಿರುತ್ತದೆ. ಇದು ಒಂದು ರೀತಿಯಲ್ಲಿ ನಿಧಿಯನ್ನು ಮಾರ್ಗಪಲ್ಲಟ ಮಾಡಿದಂತಾಗುತ್ತದೆ. ವಿಧಾನಮಂಡಲದ ಗಮನಕ್ಕೆ ತಾರದೇ ಸರ್ಕಾರವು ತಾನೇ ಹಣಕಾಸನ್ನು ಬಳಸಿದಂತಾಗಿರುತ್ತದೆ,’ ಎಂದು ಖಜಾನೆ ಇಲಾಖೆಯ ನಿವೃತ್ತ ಅಧಿಕಾರಿ ಹಾಗೂ ವಕೀಲ  ಪ್ರಾಣೇಶ್‌ ಅವರು ಅನುಮಾನಿಸಿದ್ದನ್ನು ಸ್ಮರಿಸಬಹುದು.

Hot this week

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...

ಘನತ್ಯಾಜ್ಯ ವಿಲೇವಾರಿ; 39,437 ಕೋಟಿ ರು ಮೌಲ್ಯದ ಟೆಂಡರ್ ಪರಿಶೀಲನೆಗೆ ಕೇವಲ 7 ದಿನ ಗಡುವು, ಸಿದ್ದು ಅವಧಿಯಲ್ಲಿ ರಚಿಸಿದ್ದ ತಂಡಕ್ಕೆ ಕೊಕ್‌ ಕೊಟ್ಟು ಹೊಸ ತಂಡ ರಚಿಸಿದ್ದೇಕೆ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ...

ಎಂಎಸ್‌ಐಎಲ್‌ನಲ್ಲಿ ಅಕ್ರಮ; ನಿವೃತ್ತ ಐಎಎಸ್‌ ಜಿ ಸಿ ಪ್ರಕಾಶ್‌ ಸೇರಿ 7 ಮಂದಿ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಮೈಸೂರು ಸೇಲ್ಸ್‌ ಇಂಟರ್ ನ್ಯಾ‍ಷನಲ್‌ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾದ ವಿವಿಧ...

ಮತದಾರರ ಪಟ್ಟಿ ಪರಿಷ್ಕರಣೆ; ಹಲವು ಜಿಲ್ಲೆಗಳಲ್ಲಿ ವರ್ಷವಾದರೂ ನೇಮಕವಾಗದ ಬಿಎಲ್‌ಒ, ಕಾಲಕಸವಾಯಿತೇ ಆಯೋಗದ ಪತ್ರ?

ಬೆಂಗಳೂರು; ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮತ್ತು ವಿಶೇಷ ಸಂಕ್ಷಿಪ್ತ...

Related Articles

Popular Categories

error: Content is protected !!