Tuesday | August 25, 2026 |

ಹೈಟೆಕ್‌ ಆಂಬುಲೆನ್ಸ್‌, ಇಸಿಜಿ ಯಂತ್ರ ಖರೀದಿಯಲ್ಲಿ ಅಕ್ರಮ; ಇಎಸ್‌ಐ ಆಸ್ಪತ್ರೆಗಳಲ್ಲಿ 16.32 ಕೋಟಿ ಅವ್ಯವಹಾರ?

ಬೆಂಗಳೂರು; ರಾಜ್ಯದ ಇಎಸ್‌ಐ ಆಸ್ಪತ್ರೆಗಳಿಗೆ 2023-24ನೇ ಸಾಲಿನಲ್ಲಿ 16.32 ಕೋಟಿ ರು. ವೆಚ್ಚದಲ್ಲಿ ಹೈಟೆಕ್‌ ಆಂಬ್ಯುಲೆನ್ಸ್‌, ಇಸಿಜಿ ಯಂತ್ರ ಸೇರಿದಂತೆ ವೈದ್ಯಕೀಯ ಸಲಕರಣೆ ಮತ್ತು ಔಷಧಗಳ ಖರೀದಿಯಲ್ಲಿ ಅಕ್ರಮದ ವಾಸನೆ ಬಡಿದಿದೆ.

 

ಹಾಗೆಯೇ ಸೂಕ್ತ ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿ ಆಗದೇ ಇದ್ದರೂ ಸಹ ವೈದ್ಯಕೀಯ ಸಲಕರಣೆಗಳನ್ನು ಖರೀದಿ ಮಾಡಿದೆ.  ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳು ಮತ್ತು ಔಷಧಾಲಯಗಳಿಗೆ ಖರೀದಿಯಾಗಿರುವ ಬಹುತೇಕ ವೈದ್ಯಕೀಯ ಸಲಕರಣೆಗಳು ಮತ್ತು ಪೀಠೋಪಕರಣಗಳು ಕಳಪೆಯಿಂದ ಕೂಡಿವೆ. ಈ ಕುರಿತು ಇಎಸ್‌ಐನ ವಿಚಕ್ಷಣಾ ದಳದ ತಪಾಸಣೆಯು ಬಹಿರಂಗಗೊಳಿಸಿದೆ.

 

ಅಲ್ಲದೇ ಈ ಕುರಿತು ರಾಜ್ಯ ಇಎಸ್‌ಐನ ನಿರ್ದೇಶಕರಿಗೂ 2024ರ ಜುಲೈ 8ರಂದು ಪತ್ರ ಬರೆದಿದೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಈ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರಿಗೂ ಪತ್ರ ಬರೆದಿದೆ ಎಂದು ತಿಳಿದು ಬಂದಿದೆ.

 

ಪತ್ರದಲ್ಲೇನಿದೆ?

 

ಕಾರ್ಮಿಕ ವಿಮಾ ಆಸ್ಪತ್ರೆಗಳಿಗೆ 5.99 ಕೋಟಿ ರು. ವೆಚ್ಚದಲ್ಲಿ 8 ಹೈಟೆಕ್‌ (ಸಿ ಮಾದರಿ) ಆಂಬ್ಯುಲೆನ್ಸ್‌ ಗಳನ್ನು ಖರೀದಿ ಮಾಡಲಾಗಿದೆ. ಆದರೆ ಅದನ್ನು ಬಳಕೆ ಮಾಡಿಲ್ಲ. ಚಾಲಕರು ಮತ್ತು ಪ್ಯಾರಾ ಮೆಡಿಕಲ್‌ ಸಿಬ್ಬಂದಿ ನೇಮಕವಾಗಿರದ ಕಾರಣ ಈ ಆಂಬ್ಯಲೆನ್ಸ್‌ಗಳು ಬಳಕೆ ಮಾಡಿಲ್ಲ ಎಂದು ಪತ್ರದಲ್ಲಿ ತಿಳಿಸಿರುವುದು ಗೊತ್ತಾಗಿದೆ.

 

ಇಸಿಜಿ ಯಂತ್ರಗಳು, ವಾಟರ್‍‌ ಕೂಲರ್ಸ್‌, ರೆಫ್ರಿರಿಜೇಟರ್‍‌ಗಳನ್ನು ಖರೀದಿ ಮಾಡಲಾಗಿದೆ. ಆದರೆ ಬಹುತೇಕ ಔಷಧಾಲಯಗಳಲ್ಲಿ ಧೂಳು ಹಿಡಿದು ಕೂತಿದೆ ಎಂಬುದು ಪತ್ರದಿಂದ ತಿಳಿದು ಬಂದಿದೆ.

 

ಔಷಧಾಲಯಗಳಿಗೆ 10.33 ಕೋಟಿ ರು ವೆಚ್ಚದಲ್ಲಿ ಖರೀದಿ ಮಾಡಲಾಗಿರುವ ಪೀಠೋಪಕರಣಗಳು ಕಳಪೆಯಾಗಿವೆ. ಹಲವು ಉಪಕರಣಗಳನ್ನು ಇನ್ನೂ ಅಳವಡಿಸಿಲ್ಲ. ಈ ಎಲ್ಲವನ್ನೂ ಪರಿಶೀಲಿಸಿ ಅಂಶವಾರು ಈ ಕಚೇರಿಗೆ ವಾಸ್ತವ ವರದಿಯನ್ನು ನೀಡಬೇಕು ಎಂದು 2024ರ ಜುಲೈ 8ರಂದು ಇಎಸ್‌ಐನ ಉಪ ನಿರ್ದೇಶಕರು (ವಿಚಕ್ಷಣಾ) ವಿನಯ್‌ ಕುಮಾರ್ ಶರ್ಮಾ ಅವರು ಕಾರ್ಮಿಕ ವಿಮಾ ಆಸ್ಪತ್ರೆಗಳ ರಾಜ್ಯ ನಿರ್ದೇಶಕರಿಗೆ ಸೂಚಿಸಿರುವುದು ಗೊತ್ತಾಗಿದೆ.

 

ಈ ಪತ್ರದ ಕುರಿತು ಮಾಹಿತಿ ಮತ್ತು ಸ್ಪಷ್ಟನೆ ಕೋರಿ ‘ದಿ ಫೈಲ್‌’, ರಾಜ್ಯದ ಇಎಸ್‌ಐ ನ ನಿರ್ದೇಶಕರಿಗೆ ವಾಟ್ಸಾಪ್‌ ಮೂಲಕ ಕೋರಿದೆ. ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಪ್ರತಿಕ್ರಿಯೆ ಮತ್ತು ಮಾಹಿತಿ ಬಂದಲ್ಲಿ ಈ ವರದಿಯನ್ನು ನವೀಕರಿಸಲಾಗುವುದು.

 

ರಾಜ್ಯದ ಹಲವು ಜಿಲ್ಲೆಗಳಲ್ಲಿರುವ ಕಾರ್ಮಿಕರ ರಾಜ್ಯ ವಿಮಾ ನಿಗಮದ ಆಸ್ಪತ್ರೆಗಳು ಪಾಳು ಬಿದ್ದಿವೆ. ಅನೇಕ ಆಸ್ಪತ್ರೆಗಳಲ್ಲಿ ಆಧುನಿಕ ವೈದ್ಯಕೀಯ ಸಲಕರಣೆ, ಉಪಕರಣಗಳ ಬಳಕೆ ಆಗುತ್ತಿಲ್ಲ. ಬೇಡಿಕೆ ಇರದೇ ಇದ್ದರೂ ಸಹ ಖರೀದಿ ಮಾಡಲಾಗಿದೆ ಎಂಬ ಆರೋಪಗಳೂ ಇವೆ.

 

ಕೋವಿಡ್‌ ಸಂದರ್ಭದಲ್ಲೇ ಹಿಂದಿನ ಸರ್ಕಾರವು ಕಾರ್ಮಿಕ ರಾಜ್ಯ ವಿಮಾ ನಿಗಮದ ಆಸ್ಪತ್ರೆಗಳ ಪುನರುಜ್ಜೀವನ ಮತ್ತು ನವೀಕರಣಕ್ಕೆ ಬಹುಕೋಟಿಗಳಷ್ಟು ಅನುದಾನ ನೀಡಿತ್ತು. ಆದರೆ ಹಲವು ಆಸ್ಪತ್ರೆಗಳಲ್ಲಿ ಸುಣ್ಣ ಬಣ್ಣ ಬಳಿದಿದ್ದು ಬಿಟ್ಟರೇ ಬೇರೆ ಯಾವುದೇ ಕಾಮಗಾರಿಯೂ ನಡೆದಿಲ್ಲ ಎಂಬ ಆಪಾದನೆಗಳಿವೆ.

 

ಅಗತ್ಯ ವೈದ್ಯಕೀಯ ಸಲಕರಣೆಗಳು ಇನ್ನೂ ಪೂರೈಕೆಯಾಗಿಲ್ಲ. ಅದೇ ರೀತಿ ಸರಬರಾಜು ಆಗಿರುವ ವೈದ್ಯಕೀಯ ಸಲಕರಣೆಗಳು ಕಳಪೆಯಿಂದ ಕೂಡಿವೆ. ಗುಣಮಟ್ಟದಿಂದ ಕೂಡಿರುವ ಸಲಕರಣೆಗಳಿದ್ದರೂ ಸಹ ಅದನ್ನು ಬಳಕೆ ಮಾಡದೇ ಹಾಳುಗೆಡವಲಾಗಿದೆ ಎಂಬ ಅನೇಕ ದೂರುಗಳು ದಾಖಲಾಗಿರುವುದು ಗೊತ್ತಾಗಿದೆ.

Hot this week

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

Related Articles

Popular Categories

error: Content is protected !!