Sunday | July 26, 2026 |

‘ದಿ ಫೈಲ್‌’ಗೆ ಸಮನ್ಸ್‌; ಕೋವಿಡ್‌ ಅಕ್ರಮಗಳ ಕುರಿತು ಪ್ರಕಟಿಸಿದ ವರದಿ ಸಲ್ಲಿಕೆ, ಆಯೋಗದ ಮುಂದೆ ಹೇಳಿಕೆ ದಾಖಲು

ಬೆಂಗಳೂರು; ಕೋವಿಡ್‌ ಕಾಲದಲ್ಲಿ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ ನಿಯಮಗಳ ಉಲ್ಲಂಘನೆ, ಅವ್ಯವಹಾರ ಸೇರಿದಂತೆ ವಿವಿಧ ರೀತಿಯ ಅಕ್ರಮಗಳ ಕುರಿತು ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ ಮೈಕಲ್‌ ಡಿ ಕುನ್ಹಾ ಅವರ ನೇತೃತ್ವದ ಆಯೋಗವು ‘ದಿ ಫೈಲ್‌’ಗೆ ಸಮನ್ಸ್‌ ಜಾರಿ ಮಾಡಿದೆ.

 

ಈ ವರದಿಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ದಾಖಲೆಗಳನ್ನು ಸಲ್ಲಿಸಬೇಕು ಎಂದು ಕುನ್ಹಾ ಅವರ ನೇತೃತ್ವದ ವಿಚಾರಣೆ ಆಯೋಗವು ಖುದ್ದು ಹಾಜರಾತಿಗೆ ಸಮನ್ಸ್‌ ಜಾರಿಗೊಳಿಸಿತ್ತು.

 

 

ಆಯೋಗದ ಸೂಚನೆಯಂತೆ ‘ದಿ ಫೈಲ್‌’ 2024ರ ಅಕ್ಟೋಬರ್‍‌ 24ರಂದು ಆಯೋಗದ ಮುಂದೆ ಹಾಜರಾಗಿತ್ತು.

 

 

ಸರಣಿ ರೂಪದಲ್ಲಿ ಪ್ರಕಟಿಸಿದ್ದ ವರದಿಗಳ ಪಿಡಿಎಫ್‌ ಪ್ರತಿಗಳನ್ನು ಪೆನ್‌ಡ್ರೈವ್‌ನಲ್ಲಿ ಅಡಕಗೊಳಿಸಿ ಸಲ್ಲಿಸಿದೆ.

 

 

ಅಲ್ಲದೇ ವಿಚಾರಣೆ ಆಯೋಗವು ಕೇಳಿದ್ದ ಪ್ರಶ್ನೆಗಳಿಗೂ ‘ದಿ ಫೈಲ್‌’ ಉತ್ತರ ಒದಗಿಸಿದೆ.

 

 

ಎನ್‌-95 ಮಾಸ್ಕ್‌, ಪಲ್ಸ್‌ ಆಕ್ಸಿಮೀಟರ್‍‌, ಪ್ಯಾರಾಮೀಟರ್‍‌, ರ್‍ಯಾಟ್‌ ಕಿಟ್‌, ವೆಂಟಿಲೇಟರ್ಸ್‌, ಸ್ಯಾನಿಟೈಜರ್ಸ್‌ ಸೇರಿದಂತೆ ಇನ್ನಿತರೆ ವೈದ್ಯಕೀಯ ಸಲಕರಣೆಗಳ ಖರೀದಿ ಸಂಬಂಧ ಪ್ರಾಥಮಿಕ ದಾಖಲೆಗಳನ್ನಾಧರಿಸಿ ‘ದಿ ಫೈಲ್‌’ 2020ರಿಂದಲೇ ವರದಿಗಳನ್ನು ಪ್ರಕಟಿಸಿತ್ತು.

 

‘ದಿ ಫೈಲ್‌’ ಹೊರಗೆಡವಿದ ಕೋವಿಡ್‌ ಭ್ರಷ್ಟಾಚಾರದ 50 ಮುಖಗಳು

 

ಅಲ್ಲದೇ ಕುನ್ಹಾ ಅವರ ನೇತೃತ್ವದ ವಿಚಾರಣೆ ಆಯೋಗವು ಸರ್ಕಾರಕ್ಕೆ ಸಲ್ಲಿಸಿದ್ದ ಮಧ್ಯಂತರ ವರದಿ ಆಧರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಚಿವ ಸಂಪುಟಕ್ಕೆ ಸಲ್ಲಿಸಿದ್ದ ಮುಖ್ಯಾಂಶಗಳನ್ನು ಆಧರಿಸಿ ‘ದಿ ಫೈಲ್‌’ ವರದಿಗಳನ್ನು ಪ್ರಕಟಿಸಿತ್ತು.

 

ಅಂದು ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಸದನದಲ್ಲಿ ‘ದಿ ಫೈಲ್‌’ ವರದಿಗಳನ್ನು ಉಲ್ಲೇಖಿಸಿ ಹಿಂದಿನ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದನ್ನು ಸ್ಮರಿಸಬಹುದು.

 

ದಾಖಲೆಗಳು ಇಲ್ಲದೆಯೇ ‘ದಿ ಫೈಲ್‌’ ವರದಿಗಳನ್ನು ಪ್ರಕಟಿಸಿಲ್ಲ. ಕೋವಿಡ್‌ ಅವಧಿಯಲ್ಲಿ ವೈದ್ಯಕೀಯ ಸಲಕರಣೆಗಳ ಖರೀದಿಗೆ ಸಂಬಂಧಿಸಿದಂತೆಯೂ ಅಂದು  ಲಭ್ಯವಿದ್ದ ಪ್ರಾಥಮಿಕ ದಾಖಲೆಗಳನ್ನು ಆಧರಿಸಿ ವರದಿಗಳನ್ನು  ಪ್ರಕಟಿಸಿತ್ತು. ಪ್ರಕಟವಾಗಿದ್ದ ವರದಿಗಳಲ್ಲಿಯೇ ದಾಖಲೆಗಳನ್ನು ಅಡಕಗೊಳಿಸಿತ್ತು. ಹಾಗಾಗಿಯೇ ವಿಚಾರಣೆ ಆಯೋಗದ ಮುಂದೆ ‘ದಿ ಫೈಲ್‌’ ತನ್ನ ಹೇಳಿಕೆಯನ್ನು ದಾಖಲು ಮಾಡಿದೆ. ಅಲ್ಲದೇ ಇದು ಪತ್ರಿಕೋದ್ಯಮದ ಸರಿಯಾದ ಮಾದರಿ ಎಂದು ನಾವು ತಿಳಿದಿದ್ದೇವೆ.

Hot this week

ದೇಶದಲ್ಲಿ 5.64 ಕೋಟಿ, ರಾಜ್ಯದಲ್ಲಿ 23.21 ಲಕ್ಷ ಪ್ರಕರಣಗಳು ವಿಚಾರಣೆಗೆ ಬಾಕಿ; ನ್ಯಾಯಾಲಯಗಳಲ್ಲಿ ಕೆಲಸದ ಒತ್ತಡ, ನ್ಯಾಯದಾನವೂ ವಿಳಂಬ

ಬೆಂಗಳೂರು: ದೇಶದ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 5.64 ಕೋಟಿಗೂ ಅಧಿಕ ಪ್ರಕರಣಗಳು...

15ನೇ ಹಣಕಾಸು ಆಯೋಗ; ಗುಜರಾತ್‌ಗೆ ಅತೀ ಕಡಿಮೆ, ಕರ್ನಾಟಕಕ್ಕೆ ಅತೀ ಹೆಚ್ಚು ಮೊತ್ತ ಬಿಡುಗಡೆಗೆ ಬಾಕಿ

ಬೆಂಗಳೂರು; ಕರ್ನಾಟಕ ರಾಜ್ಯವೂ ಸೇರಿದಂತೆ ದೇಶದ 28 ರಾಜ್ಯಗಳಲ್ಲಿರುವ ಗ್ರಾಮ ಪಂಚಾಯ್ತಿಗಳಿಗೆ...

ಪೋಕ್ಸೋ; ಕರ್ನಾಟಕದಲ್ಲಿ 21,436 ಪ್ರಕರಣಗಳು ವಿಚಾರಣೆಗೆ ಬಾಕಿ, ದೇಶದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಶೇ.48ರಷ್ಟು ಹೆಚ್ಚಳ

ಬೆಂಗಳೂರು:  ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ...

ಮುದ್ರಾ ಯೋಜನೆ ಸಾಲದ ಖಾತೆ ತೆರೆಯುವಲ್ಲಿ ಹಿಂದುಳಿದ 8 ಜಿಲ್ಲೆ; ಸಾಲ ನೀಡುವಲ್ಲಿ ಖಾಸಗಿ ಬ್ಯಾಂಕ್‌ಗಳದ್ದೇ ಮೇಲುಗೈ

ಬೆಂಗಳೂರು; ಮುದ್ರಾ ಸಾಲ ಸಹಿತ ವಿವಿಧ ಸ್ವಯಂ ಉದ್ಯಮ ಯೋಜನೆಗಳಡಿ ಕರ್ನಾಟಕ...
Please Scan to make Your Contribution

Topics

15ನೇ ಹಣಕಾಸು ಆಯೋಗ; ಗುಜರಾತ್‌ಗೆ ಅತೀ ಕಡಿಮೆ, ಕರ್ನಾಟಕಕ್ಕೆ ಅತೀ ಹೆಚ್ಚು ಮೊತ್ತ ಬಿಡುಗಡೆಗೆ ಬಾಕಿ

ಬೆಂಗಳೂರು; ಕರ್ನಾಟಕ ರಾಜ್ಯವೂ ಸೇರಿದಂತೆ ದೇಶದ 28 ರಾಜ್ಯಗಳಲ್ಲಿರುವ ಗ್ರಾಮ ಪಂಚಾಯ್ತಿಗಳಿಗೆ...

ಪೋಕ್ಸೋ; ಕರ್ನಾಟಕದಲ್ಲಿ 21,436 ಪ್ರಕರಣಗಳು ವಿಚಾರಣೆಗೆ ಬಾಕಿ, ದೇಶದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಶೇ.48ರಷ್ಟು ಹೆಚ್ಚಳ

ಬೆಂಗಳೂರು:  ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ...

ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮ ವ್ಯವಸ್ಥಾಪಕ ನಿರ್ದೇಶಕರ ಬದಲಾವಣೆಗೆ ಸಚಿವರ ಪಟ್ಟು; ಐಎಎಸ್‌, ಕೆಎಎಸ್‌ಯೇತರ ಅಧಿಕಾರಿ ನೇಮಕಕ್ಕೆ ಮುಂದಾಗಿರುವುದೇಕೆ?

ಬೆಂಗಳೂರು; ತಮಿಳುನಾಡು ಮಾದರಿಯಲ್ಲಿ ಕರ್ನಾಟಕದ ವೈದ್ಯಕೀಯ ಸರಬರಾಜು ನಿಗಮವನ್ನು ಸ್ಥಾಪಿಸಿರುವ ರಾಜ್ಯ...

ರೈಲ್ವೇ ಯೋಜನೆಗಳಿಗೆ ಗ್ರಹಣ; 7,748 ಕೋಟಿ ರು ಅನುದಾನವಿದ್ದರೂ ಬಿರುಸುಗೊಳ್ಳದ ಭೂಸ್ವಾಧೀನ ಪ್ರಕ್ರಿಯೆ, ರಾಜ್ಯದತ್ತಲೇ ಬೊಟ್ಟು ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು; ಕರ್ನಾಟಕದಲ್ಲಿ  ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರವು  2026-27ನೇ ಸಾಲಿನಲ್ಲಿ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರದ ಭದ್ರಾ ಮೇಲ್ದಂಡೆ ಯೋಜನೆ; ಸಹಾಯಧನ ಬಿಡುಗಡೆ ವಿಳಂಬಕ್ಕೆ ನೆಪವೊಡ್ಡಿದ ಕೇಂದ್ರ

ಬೆಂಗಳೂರು; ರಾಜ್ಯದ ಮಹತ್ವಾಕಾಂಕ್ಷೆ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು...

Related Articles

Popular Categories

error: Content is protected !!