Tuesday | May 5, 2026 |

ಪ.ಜಾತಿ ಕಾಲೋನಿ ಸೌಕರ್ಯ ಕಲ್ಪಿಸಲು ಮಂಜೂರಾಗಿದ್ದ ಸಿಎಂ ವಿಶೇಷ ಅನುದಾನ ರದ್ದು; ಸ್ಪೀಕರ್ ಪತ್ರಕ್ಕೆ ಮಾನ್ಯತೆ

ಬೆಂಗಳೂರು; ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಮಂಗಳೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ನೀಡಿದ್ದ ಮಂಜೂರಾತಿ ಆದೇಶವನ್ನು ಸರ್ಕಾರವು ರದ್ದುಪಡಿಸಿದೆ. ಅಲ್ಲದೇ ಈಗಾಗಲೇ ಅನುದಾನ ಬಿಡುಗಡೆ ಮಾಡಿದ್ದರೇ ಅದನ್ನು ಕೂಡಲೇ ಹಿಂಪಡೆಯಬೇಕು ಎಂದೂ ಸೂಚಿಸಿದೆ.

 

ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್‍‌ ಅವರ ಕೋರಿಕೆ ಮೇರೆಗೆ ಈ ಮಂಜೂರಾತಿ ಆದೇಶವನ್ನು ರದ್ದುಪಡಿಸಿದೆ. ಈ ಸಂಬಂಧ 2024ರ ಡಿಸೆಂಬರ್‍‌ 3ರಂದೇ ಆದೇಶ ಹೊರಡಿಸಿದೆ. ಈ ಆದೇಶದ (ಸಕಇ 250 ಪಕವಿ 2024 ) ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಮಂಗಳೂರು ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ 2024ರ ಆಗಸ್ಟ್‌ 8ರಂದು 1 ಕೋಟಿ ರು. ಅನುದಾನ ಮಂಜೂರಾಗಿತ್ತು. ಈ ಬಗ್ಗೆ ಸರ್ಕಾರದ ಆದೇಶವನ್ನೂ ಹೊರಡಿಸಲಾಗಿತ್ತು.

 

ಈ ಆದೇಶದಂತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯು 2024ರ ನವೆಂಬರ್‍‌ 11ರಂದು ಸೂಚಿಸಿದ್ದರು.

 

 

ಈ ಮಧ್ಯೆ ಈ ಅನುದಾನವನ್ನು ವಿವಿಧ ಇಲಾಖೆಗಳಿಗೆ ಮರು ಹಂಚಿಕೆಮಾಡಬೇಕು ಎಂದು ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್‍‌ ಅವರು ಕೋರಿದ್ದರು. ಅಲ್ಲದೇ ಸಮಾಜ ಕಲ್ಯಾಣ ಇಲಾಖೆಗೆ ಮಂಜೂರಾಗಿದ್ದ ಮೊತ್ತವನ್ನು ಕಡಿತ ಮಾಡುವಂತೆ ತಿಳಿಸಿದ್ದರು ಎಂಬುದು ಆದೇಶದ ಪ್ರತಿಯಿಂದ ಗೊತ್ತಾಗಿದೆ.

 

 

‘ಈ ಹಿನ್ನೆಲೆಯಲ್ಲಿ ಮಂಗಳೂರು ವಿಧಾನಸಭೆ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಸಮಾಜ ಕಲ್ಯಾಣ ಇಲಾಖೆಗೆ ಮಂಜೂರಾದ 1.00 ಕೋಟಿ ಮೊತ್ತಕ್ಕೆ ಕಾಮಗಾರಿ ಕೈಗೆತ್ತಿಕೊಳ್ಳಲು ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿದಲ್ಲಿ ಈ ಆದೇಶವನ್ನು ಹಿಂಪಡೆಯಬೇಕು. ಹಿಂಪಡೆಯಲಾದ ಮಾಹಿತಿಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಬೇಕು,’ ಎಂದೂ ಆದೇಶದಲ್ಲಿ ಹೇಳಲಾಗಿದೆ.

 

ಪಕ್ಷದ ಸದಸ್ಯರಿಗೆ ತಲಾ 25 ಕೋಟಿ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದರು. ಈ ಅನುದಾನ ಪಡೆಯಲು ಕಾಂಗ್ರೆಸ್‌ ಶಾಸಕರು ಪೈಪೋಟಿಗಿಳಿದಿದ್ದರು. ಕಾಮಗಾರಿಗಳ ಪಟ್ಟಿ, ಅದಕ್ಕೆ ತಗಲುವ ಅಂದಾಜು ಮೊತ್ತ ಮತ್ತು ಅನುಷ್ಠಾನಗೊಳಿಸಬೇಕಾದ ಏಜೆನ್ಸಿಯ ವಿವರಗಳನ್ನು ಮುಖ್ಯಮಂತ್ರಿಗಳಿಗೆ ಶಾಸಕರು ಪ್ರಸ್ತಾವ ಸಲ್ಲಿಸಿದ್ದರು.

Hot this week

ಒಂದೇ ಜಾಗದಲ್ಲಿ ಎರಡು ಫ್ಲೈ ಓವರ್, ಶೇ.50ರಷ್ಟು ಕಾಮಗಾರಿಯಾಗಿದ್ದರೂ ಪೂರ್ಣ ಪಾವತಿ; ಬ್ಯಾಂಕ್‌ ಗ್ಯಾರಂಟಿ ಮುಟ್ಟುಗೋಲಿಲ್ಲ, ಗುತ್ತಿಗೆದಾರರಿಗೆ ಲಾಭ, ಬಿಬಿಎಂಪಿ ನಿಧಿಗೆ ನಷ್ಟ

ಬೆಂಗಳೂರು;  ಈಜಿಪುರ ಮೇಲ್ಸೇತುವೆ ಎಲಿವೇಟೆಡ್‌ ಕಾರಿಡಾರ್  ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ  ಪೂರ್ಣಗೊಳಿಸದ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...
Please Scan to make Your Contribution

Topics

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

Related Articles

Popular Categories

error: Content is protected !!