Friday | June 12, 2026 |

ಜಿಎಸ್‌ಟಿಯಲ್ಲಿ ಕರ್ನಾಟಕಕ್ಕೆ ದೊರೆಯದ ಪಾಲು; ಬಜೆಟ್‌ ಭಾಷಣದಲ್ಲಿ ಒಪ್ಪಿಕೊಂಡ ಯಡಿಯೂರಪ್ಪ

ಕೇಂದ್ರದಿಂದ ಬರಬೇಕಿದ್ದ ಸುಮಾರು ₹11 ಸಾವಿರ ಕೋಟಿ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಪಾಲು ರಾಜ್ಯಕ್ಕೆ ದೊರೆಯದ ಕಾರಣ ಈ ಬಾರಿಯ ಅನುದಾನದಲ್ಲಿ ಅಂದಾಜು 8 ಸಾವಿರ ಕೋಟಿ ರು. ಕಡಿಮೆಯಾಗಿದೆ.
ಬಜೆಟ್‌ ಭಾಷಣದಲ್ಲಿ ಕೇಂದ್ರದಿಂದ ಬರಬೇಕಿದ್ದ ತೆರಿಗೆ ಪಾಲು ಮತ್ತು ಅನುದಾನದ ಬಗ್ಗೆ ಪ್ರಸ್ತಾಪಿಸಿರುವ ಯಡಿಯೂರಪ್ಪ ಅವರು ಜಿಎಸ್‌ಟಿಯಲ್ಲಿನ ಕರ್ನಾಟಕದ ನ್ಯಾಯಬದ್ಧ ಪಾಲು ದೊರೆತಿಲ್ಲ ಎಂಬ ಆರೋಪಗಳಿಗೆ ಪುಷ್ಠಿ ಒದಗಿಸಿದ್ದಾರೆ.
ಸರಕು ಮತ್ತು ಸೇವಾ ತೆರಿಗೆ ರೂಪದಲ್ಲಿ ಕರ್ನಾಟಕದ ಪಾಲು ದೊರೆಯದಿರುವ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್‌ ಕೂಡ ಸದನದಲ್ಲಿ ದನಿ ಎತ್ತಿತ್ತು. ‘ತೆರಿಗೆ ಮತ್ತು ಮಾಹಿತಿ ತಂತ್ರಜ್ಞಾನ ಆಧರಿತ ಉತ್ಪನ್ನಗಳ ಮೂಲಕ ಕರ್ನಾಟಕ ರಾಜ್ಯವು ದೇಶಕ್ಕೆ ಆದಾಯ ತಂದುಕೊಡುತ್ತಿದೆ. ಆದರೆ ರಾಜ್ಯ ಸರ್ಕಾರಕ್ಕೆ ಹೆಚ್ಚು ಆದಾಯ ಬರುತ್ತಿಲ್ಲ’ ಎಂದು ಬಜೆಟ್‌ ಭಾಷಣದಲ್ಲಿ ಹೇಳಿದ್ದಾರೆ.
2019–20ರಲ್ಲಿ ಕೇಂದ್ರ ತೆರಿಗೆಯಲ್ಲಿ ರಾಜ್ಯದ ಪಾಲು ₹1,993 ಕೋಟಿಯಷ್ಟು ಕಡಿತವಾಗಿದೆ. ರಾಜಸ್ವ ಸಂಪನ್ಮೂಲ ಇಳಿಕೆಯಾಗಿದೆ. ಜಿಎಸ್‌ಟಿ ಉಪಕರದ ನಿರೀಕ್ಷಿತ ಸಂಗ್ರಹ ಖೋತಾ ಕಾರಣ ಸುಮಾರು ₹3000 ಕೋಟಿ ರೂಪಾಯಿ ರಾಜ್ಯದ ಪಾಲು ಕಡಿಮೆಯಾಗಿದೆ. ಹೀಗಾಗಿ ಅನಿವಾರ್ಯವಾಗಿ ಕೆಲ ಇಲಾಖೆಗಳ ವೆಚ್ಚ ಕಡಿಮೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.
ಪ್ರಾದೇಶಿಕ ಅಸಮತೋಲನ ನಿವಾರಣೆ, ಕೃಷಿ, ಕೈಗಾರಿಕೆ, ಪ್ರವಾಸೋದ್ಯಮಕ್ಕೆ ನಮ್ಮ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ. ಕೌಶಲ ಅಭಿವೃದ್ಧಿ ಮೂಲಕ ನಿರುದ್ಯೋಗ ನಿವಾರಣೆಗೆ ಗಮನ ಹರಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.
ನೆರೆ ಪರಿಹಾರಕ್ಕೆ ಆದ್ಯತೆ: ಪ್ರಕೃತಿಯ ಮುನಿಸು, ನೈಸರ್ಗಿಕ ವಿಕೋಪ ಪರಿಹಾರಕ್ಕೆ ಆದ್ಯತೆ ನೀಡಿದ್ದೇವೆ. ಒಂದೆಡೆ ನೆರೆ, ಮತ್ತೊಂದೆಡೆ ಬರವನ್ನು ರಾಜ್ಯ ಏಕಕಾಲಕ್ಕೆ ಎದುರಿಸಿತು. 7 ಲಕ್ಷ ಜನರ ಬದುಕಿಗೆ ತೊಂದರೆಯಾಯಿತು. 4.69 ಲಕ್ಷ ಹೆಕ್ಟೇರ್ ಕೃಷಿ ಭೂಮಿ ಹಾನಿಗೀಡಾಯಿತು. ರಸ್ತೆ, ಸೇತುವೆ, ಶಾಲೆ, ಅಂಗನವಾಡಿಗಳಿಗೆ ಹಾನಿಯಾಯಿತು. ₹35,160 ಕೋಟಿ ನಷ್ಟವಾಗಿದೆ. ಕೇಂದ್ರ ಸರ್ಕಾರ ₹1869 ಕೋಟಿ ನೀಡಿದೆ ಎಂದು ಮುಖ್ಯಮಂತ್ರಿ ಮಾಹಿತಿ ಒದಗಿಸಿದರು.

Hot this week

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

Related Articles

Popular Categories

error: Content is protected !!