Thursday | April 16, 2026 |

ಜಿಎಸ್‌ಟಿಯಲ್ಲಿ ಕರ್ನಾಟಕಕ್ಕೆ ದೊರೆಯದ ಪಾಲು; ಬಜೆಟ್‌ ಭಾಷಣದಲ್ಲಿ ಒಪ್ಪಿಕೊಂಡ ಯಡಿಯೂರಪ್ಪ

ಕೇಂದ್ರದಿಂದ ಬರಬೇಕಿದ್ದ ಸುಮಾರು ₹11 ಸಾವಿರ ಕೋಟಿ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಪಾಲು ರಾಜ್ಯಕ್ಕೆ ದೊರೆಯದ ಕಾರಣ ಈ ಬಾರಿಯ ಅನುದಾನದಲ್ಲಿ ಅಂದಾಜು 8 ಸಾವಿರ ಕೋಟಿ ರು. ಕಡಿಮೆಯಾಗಿದೆ.
ಬಜೆಟ್‌ ಭಾಷಣದಲ್ಲಿ ಕೇಂದ್ರದಿಂದ ಬರಬೇಕಿದ್ದ ತೆರಿಗೆ ಪಾಲು ಮತ್ತು ಅನುದಾನದ ಬಗ್ಗೆ ಪ್ರಸ್ತಾಪಿಸಿರುವ ಯಡಿಯೂರಪ್ಪ ಅವರು ಜಿಎಸ್‌ಟಿಯಲ್ಲಿನ ಕರ್ನಾಟಕದ ನ್ಯಾಯಬದ್ಧ ಪಾಲು ದೊರೆತಿಲ್ಲ ಎಂಬ ಆರೋಪಗಳಿಗೆ ಪುಷ್ಠಿ ಒದಗಿಸಿದ್ದಾರೆ.
ಸರಕು ಮತ್ತು ಸೇವಾ ತೆರಿಗೆ ರೂಪದಲ್ಲಿ ಕರ್ನಾಟಕದ ಪಾಲು ದೊರೆಯದಿರುವ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್‌ ಕೂಡ ಸದನದಲ್ಲಿ ದನಿ ಎತ್ತಿತ್ತು. ‘ತೆರಿಗೆ ಮತ್ತು ಮಾಹಿತಿ ತಂತ್ರಜ್ಞಾನ ಆಧರಿತ ಉತ್ಪನ್ನಗಳ ಮೂಲಕ ಕರ್ನಾಟಕ ರಾಜ್ಯವು ದೇಶಕ್ಕೆ ಆದಾಯ ತಂದುಕೊಡುತ್ತಿದೆ. ಆದರೆ ರಾಜ್ಯ ಸರ್ಕಾರಕ್ಕೆ ಹೆಚ್ಚು ಆದಾಯ ಬರುತ್ತಿಲ್ಲ’ ಎಂದು ಬಜೆಟ್‌ ಭಾಷಣದಲ್ಲಿ ಹೇಳಿದ್ದಾರೆ.
2019–20ರಲ್ಲಿ ಕೇಂದ್ರ ತೆರಿಗೆಯಲ್ಲಿ ರಾಜ್ಯದ ಪಾಲು ₹1,993 ಕೋಟಿಯಷ್ಟು ಕಡಿತವಾಗಿದೆ. ರಾಜಸ್ವ ಸಂಪನ್ಮೂಲ ಇಳಿಕೆಯಾಗಿದೆ. ಜಿಎಸ್‌ಟಿ ಉಪಕರದ ನಿರೀಕ್ಷಿತ ಸಂಗ್ರಹ ಖೋತಾ ಕಾರಣ ಸುಮಾರು ₹3000 ಕೋಟಿ ರೂಪಾಯಿ ರಾಜ್ಯದ ಪಾಲು ಕಡಿಮೆಯಾಗಿದೆ. ಹೀಗಾಗಿ ಅನಿವಾರ್ಯವಾಗಿ ಕೆಲ ಇಲಾಖೆಗಳ ವೆಚ್ಚ ಕಡಿಮೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.
ಪ್ರಾದೇಶಿಕ ಅಸಮತೋಲನ ನಿವಾರಣೆ, ಕೃಷಿ, ಕೈಗಾರಿಕೆ, ಪ್ರವಾಸೋದ್ಯಮಕ್ಕೆ ನಮ್ಮ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ. ಕೌಶಲ ಅಭಿವೃದ್ಧಿ ಮೂಲಕ ನಿರುದ್ಯೋಗ ನಿವಾರಣೆಗೆ ಗಮನ ಹರಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.
ನೆರೆ ಪರಿಹಾರಕ್ಕೆ ಆದ್ಯತೆ: ಪ್ರಕೃತಿಯ ಮುನಿಸು, ನೈಸರ್ಗಿಕ ವಿಕೋಪ ಪರಿಹಾರಕ್ಕೆ ಆದ್ಯತೆ ನೀಡಿದ್ದೇವೆ. ಒಂದೆಡೆ ನೆರೆ, ಮತ್ತೊಂದೆಡೆ ಬರವನ್ನು ರಾಜ್ಯ ಏಕಕಾಲಕ್ಕೆ ಎದುರಿಸಿತು. 7 ಲಕ್ಷ ಜನರ ಬದುಕಿಗೆ ತೊಂದರೆಯಾಯಿತು. 4.69 ಲಕ್ಷ ಹೆಕ್ಟೇರ್ ಕೃಷಿ ಭೂಮಿ ಹಾನಿಗೀಡಾಯಿತು. ರಸ್ತೆ, ಸೇತುವೆ, ಶಾಲೆ, ಅಂಗನವಾಡಿಗಳಿಗೆ ಹಾನಿಯಾಯಿತು. ₹35,160 ಕೋಟಿ ನಷ್ಟವಾಗಿದೆ. ಕೇಂದ್ರ ಸರ್ಕಾರ ₹1869 ಕೋಟಿ ನೀಡಿದೆ ಎಂದು ಮುಖ್ಯಮಂತ್ರಿ ಮಾಹಿತಿ ಒದಗಿಸಿದರು.

Hot this week

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

Topics

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

Related Articles

Popular Categories

error: Content is protected !!