Monday | May 4, 2026 |

ಸರ್ಕಾರಿ ಜಾಗಗಳಲ್ಲಿ ವಸತಿ ಯೋಜನೆ; ಬೋಸ್ಟನ್‌ನೊಂದಿಗೆ ಆಂತರಿಕ ಸಭೆ, ಖಾಸಗಿ ಬಿಲ್ಡರ್ಸ್‌, ಡೆವಲಪರ್ಸ್‌ಗಳಿಗೆ ಮಣೆ

ಬೆಂಗಳೂರು: ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಸರ್ಕಾರಿ ಜಾಗಗಳಲ್ಲಿ ವಸತಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಖಾಸಗಿ ಡೆವಲಪರ್ಸ್‌, ಬಿಲ್ಡರ್ಸ್‌ಗಳಿಗೆ ರತ್ನಗಂಬಳಿ ಹಾಸಲಿದೆ!

 

ಈ ಮೂಲಕ ಕರ್ನಾಟಕ ಗೃಹ ಮಂಡಳಿ, ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದಂತಹ ಸಂಸ್ಥೆಗಳನ್ನು ವಸತಿ ಯೋಜನೆಗಳಿಂದಲೇ ದೂರವಿಡುವುದು ಮತ್ತು ಇಂತಹ ಯೋಜನೆಗಳಿಗಾಗಿ ಕೇಂದ್ರ ಸರ್ಕಾರವು ನೀಡುತ್ತಿದ್ದ ಸಬ್ಸಿಡಿಗಳನ್ನೂ ಖಾಸಗಿ ವಸತಿ ಕಂಪನಿಗಳಿಗೆ, ದೊಡ್ಡ ದೊಡ್ಡ ಬಿಲ್ಡರ್‍‌ಗಳಿಗೆ ನೇರಾನೇರ ವರ್ಗಾಯಿಸುವ ಹುನ್ನಾರವನ್ನು ನಡೆಸಿದೆಯೇ ಎಂಬ ಮಾತುಗಳು ಕೇಳಿ ಬಂದಿದೆ.

 

ವಿಶೇಷವೆಂದರೇ ಇಂತಹದೊಂದು ಯೋಜನಾ ಮಾದರಿಗಳನ್ನು ಸರ್ಕಾರದ ಮುಂದಿಟ್ಟಿರುವುದು ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್‌ (ಬಿಸಿಜಿ) .  ಸರ್ಕಾರಿ ಜಾಗಗಳಲ್ಲಿ ವಸತಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಂಬಂಧ ವಸತಿ ಇಲಾಖೆಯ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್,  ಆರ್ಥಿಕ ಇಲಾಖೆಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್‌ ಅವರು ವಸತಿ ಇಲಾಖೆ ಮತ್ತು ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್‌ (ಬಿಸಿಜಿ) ನೊಂದಿಗೆ ಆಂತರಿಕವಾಗಿ ಸಮಾಲೋಚನೆ ನಡೆಸಿದ್ದರು.

 

2024ರ ಡಿಸೆಂಬರ್‍‌ 2ರಮದೇ ವಿಧಾನಸೌಧದ ಕೊಠಡಿ ಸಂಖ್ಯೆ 251ರಲ್ಲಿ ಸಭೆಯನ್ನೂ ನಡೆಸಿದ್ದರು. ಈ ಸಭೆಯ ನಡವಳಿಗಳು ‘ದಿ ಫೈಲ್’ಗೆ ಲಭ್ಯವಾಗಿವೆ.

 

ಆದಾಯ ಹೆಚ್ಚಿಸಲು ಖಾಸಗಿ ಕನ್ಸಲ್ಟಿಂಗ್ ಸಂಸ್ಥೆಯಾದ ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್​ನ್ನು ಆರು ತಿಂಗಳ ಕಾಲ 9.5 ಕೋಟಿ ರೂ.ಗೆ ನೇಮಿಸಿ ವಿವಾದಕ್ಕೆ ದಾರಿಮಾಡಿಕೊಟ್ಟಿತ್ತು. ಇದರ ಬೆನ್ನಲ್ಲೇ ಇದೇ ಬಿಸಿಜಿ ಗ್ರೂಪ್‌, ಸರ್ಕಾರದ ಮುಂದಿಟ್ಟಿರುವ ಪಿಪಿಪಿ ಮಾದರಿಯ ವಸತಿ ಯೋಜನೆಯು ಹೊಸತೊಂದು ವಿವಾದಕ್ಕೆ ದಾರಿ ಮಾಡಿಕೊಡಲಿದೆ.

 

ಇಲ್ಲಿಯವರೆಗೆ ಕರ್ನಾಟಕ ಗೃಹ ಮಂಡಳಿಯು ವಸತಿ ಉದ್ದೇಶಕ್ಕಾಗಿ ಜಮೀನು ಸ್ವಾಧೀನಪಡಿಸಿಕೊಂಡು ವಸತಿ ನಿರ್ಮಾಣ ಮಾಡುತ್ತಿತ್ತು. ಇದಕ್ಕಾಗಿ ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಆವಾಸ್ ಯೋಜನಾ ಅಡಿ ಸಬ್ಸಿಡಿ ಸಹ ದೊರೆಯುತ್ತಿತ್ತು. ಆದರೀಗ ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್ ನೀಡಿರುವ ಮಾದರಿ ಪ್ರಕಾರ ಇನ್ನುಮುಂದೆ ಖಾಸಗಿಯವರು ಸಹ ಸರ್ಕಾರದ ಸ್ಥಳದಲ್ಲಿ ಪಿಪಿಪಿ ಮಾದರಿಯಲ್ಲಿ ವಸತಿ ನಿರ್ಮಾಣ ಮಾಡಲು ವೇದಿಕೆ ಸಿದ್ಧಪಡಿಸುತ್ತಿದೆ.

 

ಒಂದೊಮ್ಮೆ ಈ ಮಾದರಿಯನ್ನು ಸರ್ಕಾರವು ಒಪ್ಪಿಕೊಂಡಿದ್ದೇ ಆದಲ್ಲಿ ಖಾಸಗಿ ಬಿಲ್ಡರ್ಸ್‌, ಖಾಸಗಿ ಕಟ್ಟಡ ನಿರ್ಮಾಣ ಕಂಪನಿಗಳಿಗೆ ಕೇಂದ್ರ ಸರ್ಕಾರದ ಸಬ್ಸಿಡಿಯೂ ದೊರಕಲಿದೆ. ಅಥವಾ ಸರ್ಕಾರದ ಸ್ಥಳ ಇಲ್ಲದಿದ್ದಲ್ಲಿ ಖಾಸಗಿ ಸ್ವತ್ತಿನಲ್ಲಿಯೂ ಯೋಜನೆಯನ್ನು ಅನುಷ್ಠಾನಗೊಳಿಸಬಹುದು. ಅಂದರೆ ಖಾಸಗಿ ಸ್ವತ್ತಿನಲ್ಲಿ ಖಾಸಗಿ ಡೆವಲಪರ್ಸ್‌ ನಿರ್ಮಿಸುವ ವಸತಿಗಳಿಗೆ ಕೇಂದ್ರ ಸರ್ಕಾರದ ಸಬ್ಸಿಡಿ ಕೂಡ ಸಿಗುವುದರಿಂದ ಒಂದು ರೀತಿಯಲ್ಲಿ ಉಂಡು ಹೋದ, ಕೊಂಡೂ ಹೋದ ಎಂಬಂತಾಗಲಿದೆ.

 

ಸರ್ಕಾರದ ಮುಂದೆ ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಮೂರು ಮಾದರಿಗಳನ್ನು ಪ್ರಸ್ತುತಪಡಿಸಿದೆ. ಅದರಲ್ಲಿ ಖಾಸಗಿ ಜಾಗಗಳಲ್ಲೇ ಮನೆಗಳ ನಿರ್ಮಾಣವನ್ನು ಕಡ್ಡಾಯಗೊಳಿಸುವುದು, ಎರಡನೆಯದು ಸಬ್ಸಿಡಿಯನ್ನು ಫಲಾನುಭವಿಗಳಿಗೆ ನೀಡುವುದು, ಮೂರನೆಯದು ಪಿಪಿಪಿ ಮಾದರಿಯಲ್ಲಿ ಸರ್ಕಾರಿ ಜಾಗಗಳಲ್ಲಿ ಜಂಟಿ ಅಭಿವೃದ್ಧಿ ಮಾಡಬಹುದು ಎಂಬ ಮೂರು ಮಾದರಿಗಳನ್ನು ಸರ್ಕಾರದ ಮುಂದಿರಿಸಿರುವುದು ನಡವಳಿಯಿಂದ ಗೊತ್ತಾಗಿದೆ.

 

 

ಈ ಮೂರೂ ಮಾದರಿಗಳ ಕುರಿತು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌ ಕೆ ಅತೀಕ್, ವಸತಿ ಸಚಿವ ಬಿ ಝಡ್‌ ಜಮೀರ್‍‌ ಅಹ್ಮದ್‌ ಖಾನ್‌, ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಚರ್ಚೆಯಾಗಿದೆ ಎಂದು ತಿಳಿದು ಬಂದಿದೆ.

 

ಖಾಸಗಿ ಡೆವಲಪರ್ಸ್‌ಗಳಿಗೆ ಕಡ್ಡಾಯಗೊಳಿಸಬಹುದಾದರ ಕುರಿತು ನೀತಿ ರೂಪಿಸುವುದು ಮತ್ತು ಅಂತಿಮಗೊಳಿಸುವುದರ ಕುರಿತು ಕ್ರೆಡೈ ನೊಂದಿಗೆ ಸಮಾಲೋಚಿಸಬೇಕು. ಇದಕ್ಕಾಗಿ ವಸತಿ ಇಲಾಖೆಯು ಕೆಟಿಪಿಸಿ ಕಾಯ್ದೆ ತಿದ್ದುಪಡಿ ಮತ್ತು ಅನುಷ್ಠಾನದ ಕುರಿತು ವಿಧಿ ಲೀಗಲ್‌ ಸಂಸ್ಥೆಯಿಂದ ಕಾನೂನು ತಜ್ಞರ ನೆರವು ಪಡೆಯಬೇಕು ಎಂದು ಸಭೆಯು ಶಿಫಾರಸ್ಸು ಮಾಡಿರುವುದು ಗೊತ್ತಾಗಿದೆ.

 

ವಸತಿ ಇಲಾಖೆಯು ಪ್ರಧಾನ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಬೇಕು. ಈ ಸಮಿತಿಯಲ್ಲಿ ನಗರಾಭಿವೃದ್ಧಿ ಮತ್ತು ಆರ್ಥಿಕ ಇಲಾಖೆಯ ಅಧಿಕಾರಿಗಳಿರಬೇಕು. ಈ ಸಮಿತಿಯು ಪೈಲಟ್‌ ಯೋಜನೆಗಳ ಅನುಷ್ಠಾನ ಮತ್ತು ಮೇಲ್ವಿಚಾರಣೆ ನಡೆಸಬೇಕು. ಪ್ರಾಧಿಕಾರವು ಯಾವುದೇ ಸೂಕ್ತವಾದ ಸರ್ಕಾರಿ ಭೂಮಿಯನ್ನು ಗುರುತಿಸದಿದ್ದರೆ ಖಾಸಗಿ ಭೂಮಿಯನ್ನು ಬಳಸಿಕೊಳ್ಳಲಾಗುವುದು ಎಂದು ಈ ಸಮಿತಿಯು ನಿರ್ದಿಷ್ಟಪಡಿಸಬೇಕು ಎಂದು ಶಿಫಾರಸ್ಸು ಮಾಡಿದೆ.

 

 

ಬಡ್ಡಿ ಸಬ್ಸಿಡಿ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಪಡೆದುಕೊಳ್ಳಬೇಕು. ಕೇಂದ್ರ ಸರ್ಕಾರದ ಸಬ್ಸಿಡಿಗಳನ್ನು ಬಳಸಿಕೊಳ್ಳುವ ವಿಧಾನಳು ಮತ್ತು ಸರ್ಕಾರಿ ಭೂಮಿಯಲ್ಲಿ ವಸತಿ ಯೋಜನೆಯನ್ನು ಪಿಪಿಪಿ ಆಧಾರಿತ ಜಂಟಿ ಅಭಿವೃದ್ಧಿ ಮಾದರಿಯ ಕುರಿತು ಹೆಚ್ಚಿನ ಸಮಾಲೋಚನೆಗಳನ್ನು ನಡೆಸಬೇಕು ಎಂದು ಸೂಚಿಸಿರುವುದು ತಿಳಿದು ಬಂದಿದೆ.

 

ರಾಜ್ಯದ ಖರ್ಚು ವೆಚ್ಚಗಳನ್ನು ಕಡಿಮೆಗೊಳಿಸಿ ಹೆಚ್ಚುವರಿ ಆದಾಯ ತರುವ ಸಲುವಾಗಿ ಸಲಹೆ ನೀಡಲು ಬಾಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಎಂಬ ವಿದೇಶಿ ಸಂಸ್ಥೆಯನ್ನು ಸರ್ಕಾರ ನೇಮಿಸಿದೆ. ಈ ಸಂಸ್ಥೆಗೆ ಆರು ತಿಂಗಳಿಗೆ 9.5 ಕೋಟಿ ರೂ. ಸಂಭಾವನೆಯನ್ನು ನಿಗದಿಪಡಿಸಿತ್ತು. ಇದಕ್ಕೆ ಪ್ರತಿಪಕ್ಷ ಬಿಜೆಪಿಯು ವಿರೋಧ ವ್ಯಕ್ತಪಡಿಸಿದ್ದನ್ನು ಸ್ಮರಿಸಬಹುದು.

Hot this week

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...
Please Scan to make Your Contribution

Topics

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

Related Articles

Popular Categories

error: Content is protected !!