Monday | September 21, 2026 |

ರಾಜೀವ್‌ ಆರೋಗ್ಯ ವಿ ವಿ; ಹೊರಗುತ್ತಿಗೆಯಲ್ಲಿ ಮೀಸಲಾತಿಯೇ ಇಲ್ಲ, ನಿಯಮೋಲ್ಲಂಘನೆಯೇ ಎಲ್ಲ

ಬೆಂಗಳೂರು; ಸರ್ಕಾರಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನಡೆಯುತ್ತಿರುವ ನೇಮಕಾತಿ ಪ್ರಕ್ರಿಯೆಗಳಲ್ಲಿ ಮೀಸಲಾತಿ ನೀತಿ ಅನುಸರಿಸುತ್ತಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಅಷ್ಟೇ ಏಕೆ ಯಾವ ವಿದ್ಯಾರ್ಹತೆಯನ್ನೂ ಪರಿಗಣಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯೇ ಒಪ್ಪಿಕೊಂಡಿದ್ದಾರೆ. 

ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ದಿನಗೂಲಿ ನೌಕರರ ಖಾಯಂಗೊಳಿಸುವ ಕುರಿತು ಇತ್ತೀಚೆಗೆ ನಡೆದಿರುವ ಕರ್ನಾಟಕ ವಿಧಾನಪರಿಷತ್‌ನ ಅರ್ಜಿಗಳ ಸಮಿತಿ ಸಭೆ ಹೊರಗುತ್ತಿಗೆ ಪದ್ಧತಿಯ ಇನ್ನೊಂದು ಮುಖವನ್ನು ಪರಿಚಯಿಸಿದೆ. ಸಭೆಯ ನಡವಳಿಗಳು ‘ದಿ ಫೈಲ್‌’ಗೆ ಲಭ್ಯವಾಗಿದೆ.

‘ಹೊರಗುತ್ತಿಗೆ ಮೇಲೆ ಯಾರು ಕೆಲಸ ಮಾಡುತ್ತಿದ್ದಾರೋ ಅವರು ವೈದ್ಯಕೀಯ ಶಿಕ್ಷಣ ಇಲಾಖೆಯ ನೌಕರರೊಂದಿಗೆ ಯಾವುದೇ ರೀತಿಯ ಒಪ್ಪಂದ ಮಾಡಿಕೊಂಡಿಲ್ಲ. ಟೆಂಡರ್‌ ಮೂಲಕ ಒಪ್ಪಂದ ಮಾಡಿಕೊಂಡು ಕೆಲಸ ಕೊಡುತ್ತೇವೆ.  ನಾವು ಮಾಡಿಕೊಂಡಿರುವ ಒಪ್ಪಂದ ಅವರ ಜತೆಗಿರುತ್ತದೆಯೇ  ಹೊರತು ನಮ್ಮ ನೌಕರರ ಜತೆ ಇರುವುದಿಲ್ಲ. ಆದ್ದರಿಂದ ನಾವು  ಯಾವುದೇ ರೋಸ್ಟರ್‌ನ್ನು  ಫಾಲೋ ಮಾಡಿರುವುದಿಲ್ಲ,’ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಒಪ್ಪಿಕೊಂಡಿದ್ದಾರೆ.

ಬೇರೆ ಬೇರೆ ಇಲಾಖೆಯಲ್ಲಿಯೂ  ಗುತ್ತಿಗೆ  ಆಧಾರದ ಮೇಲೆ ನೇಮಕ ಪ್ರಕ್ರಿಯೆ ನಡೆದಿದೆ. ಆದರೆ ಎಲ್ಲಿಯೂ ಜಾಹೀರಾತು ನೀಡಿಲ್ಲ.  ರೋಸ್ಟರ್‌  ಕೂಡ ಅನುಸರಿಸಿಲ್ಲ ಎಂಬ ಮಾಹಿತಿ ನಡವಳಿಯಿಂದ ತಿಳಿದು ಬಂದಿದೆ. 

‘ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವುದು ಒಂದು ದೊಡ್ಡ ಹಗರಣವಾಗಿದೆ. ಗುತ್ತಿಗೆ ಆಧಾರದ ನೇಮಕಾತಿ ಯಾವ ಇಲಾಖೆಯಲ್ಲಿಯೂ ಶೇ.90ರಷ್ಟು ಸರಿಯಾಗಿಲ್ಲ,’  ಸಭೆಯಲ್ಲಿ ಸಮಿತಿ ಸದಸ್ಯ ಶಾಸಕ ಆರ್‌ ಚೌಡರೆಡ್ಡಿ  ತೂಪಲ್ಲಿ ಅವರು ಹೊರಗುತ್ತಿಗೆಯ ಇನ್ನೊಂದು ಮುಖವನ್ನು ತೆರೆದಿಟ್ಟಿರುವುದು ಗೊತ್ತಾಗಿದೆ. 

ವಿಶ್ವವಿದ್ಯಾಲಯಗಳಿಗೆ ನೇಮಕವಾಗುವ ಕುಲಪತಿಗಳು ತಮ್ಮ ಅವಧಿಯಲ್ಲಿ ತಮಗೆ  ಇಷ್ಟಬಂದಂತೆ ಸುಮಾರು  50-60 ಜನರಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ನಡೆಸುತ್ತಿರುವ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿರುವ ಸದಸ್ಯ ಮರಿತಿಬ್ಬೇಗೌಡ ಅವರು ನಿಯಮಗಳಲ್ಲಿ ಅವಕಾಶವಿಲ್ಲದಿದ್ದರೂ ಮನಸೋ ಇಚ್ಛೆ ಹೊರಗುತ್ತಿಗೆ ಅಡಿ ನೇಮಕ ಪ್ರಕ್ರಿಯೆ ನಡೆಯುತ್ತಿದೆ ಎಂಬುದನ್ನು ಬಹಿರಂಗಗೊಳಿಸಿದ್ದಾರೆ. 

ಇನ್ನು, ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ  ವಿಶ್ವವಿದ್ಯಾಲಯ ಹಳೆಯ ವಿಶ್ವವಿದ್ಯಾಲಯವಾದರೂ ಈವರೆವಿಗೂ ವೃಂದ  ಮತ್ತು ನೇಮಕಾತಿ ನಿಯಮಗಳನ್ನೇ ರಚಿಸಿಕೊಂಡಿಲ್ಲ. ಆದರೆ  ಈ ವಿಚಾರ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಗೇ ಗೊತ್ತಿಲ್ಲ  ಎಂಬ  ಮಾಹಿತಿಯೂ ನಡವಳಿಯಿಂದ  ತಿಳಿದು ಬಂದಿದೆ.

ಅದೆ ರೀತಿ ಹೊರಗುತ್ತಿಗೆ ಆಧಾರದ ಮೇಲೆ ಮಾಡಿಕೊಳ್ಳುತ್ತಿರುವ ನೇಮಕಾತಿಯಲ್ಲಿ ಮೀಸಲಾತಿ ಪಾಲಿಸದಿರುವ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ  ಸಂಸ್ಥೆಯೂ ಸೇರಿದೆ. 

‘ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನೇಮಕ ಮಾಡುವಾಗ ಜಾಹೀರಾತು  ನೀಡಿಲ್ಲ ಮತ್ತು ರೋಸ್ಟರ್‌ ಕೂಡ ಫಾಲೋ ಮಾಡಿಲ್ಲ,’ ಎಂದು ಒಪ್ಪಿಕೊಂಡಿರುವ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಈ ವಿಚಾರದಲ್ಲಿ ನಾವು ಹಾಗೆ ಮಾಡಬಾರದಿತ್ತು ಎಂದೂ  ಸಮಿತಿ ಮುಂದೆ  ತಪ್ಪೊಪ್ಪಿಕೊಂಡಿರುವುದು ನಡವಳಿಯಿಂದ ಗೊತ್ತಾಗಿದೆ. 

Hot this week

ಖರ್ಗೆ ಕುಟುಂಬ ಸದಸ್ಯರ ಸಿದ್ದಾರ್ಥ ವಿಹಾರ ಟ್ರಸ್ಟ್‌; ಪ್ರಕರಣ ಮುಂದುವರಿಕೆ, ಲೋಕಾಯುಕ್ತ ಎಸ್‌ಪಿ ಗೆ ನೋಟೀಸ್‌ ನೀಡಿದ ನ್ಯಾಯಾಲಯ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ,...

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...
Please Scan to make Your Contribution

Topics

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ...

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

Related Articles

Popular Categories

error: Content is protected !!