Saturday | May 9, 2026 |

ವಸೂಲಾಗದ ಸಾಲ 610 ಕೋಟಿ; ಅಪೆಕ್ಸ್‌ ಬ್ಯಾಂಕ್‌ನಲ್ಲಿ ಎನ್‍ಪಿಎ ಕರಾಮತ್ತು

ಬೆಂಗಳೂರು; ಜಲ ಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯಲಕ್ಷ್ಮಿ ಶುಗರ್ಸ್‌ ಲಿಮಿಟೆಡ್‌ ಸೇರಿದಂತೆ ಹಲವು ಪ್ರಭಾವಿ ರಾಜಕೀಯ ಮುಖಂಡರ ಒಡೆತನದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ ನೀಡಿದ್ದ ಒಟ್ಟು 1,022.55 ಕೋಟಿ ರು.ಗಳ ಸಾಲ ಮೊತ್ತದ ಪೈಕಿ ಒಟ್ಟಾರೆ  610 ಕೋಟಿಯಷ್ಟು  ಅನುತ್ಪಾದಕ ಆಸ್ತಿ (ಎನ್ಪಿಎ) ಇರುವುದು ಬಹಿರಂಗವಾಗಿದೆ. 

ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರದ  ಅವಧಿಯಲ್ಲೇ ಪ್ರಭಾವಿ ರಾಜಕೀಯ ಮುಖಂಡರ ಒಡೆತನದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ಕೋಟ್ಯಂತರ ರು.ಮೊತ್ತದ ಸಾಲ ಮಂಜೂರಾಗಿದೆ. 

ಅಷ್ಟೇ ಅಲ್ಲ, ಒಟ್ಟು 27 ಸಕ್ಕರೆ ಕಾರ್ಖಾನೆಗಳಿಗೆ 2019ರ ಮಾರ್ಚ್‌ 31ರ ಅಂತ್ಯಕ್ಕೆ 47 ಪ್ರಕರಣಗಳಲ್ಲಿ ಒಟ್ಟು 1,603.36 ಕೋಟಿ ರು.ಸಾಲದ ಹೊರಬಾಕಿ ಇದೆ. ಅದೇ ರೀತಿ 391.15 ಕೋಟಿ ರು.ಸಾಲ ಸುಸ್ತಿಯಾಗಿರುವ ಪೈಕಿ 305.73 ಕೋಟಿ ರು. ಎನ್‌ಪಿಎ(ಕೆಟ್ಟ ಸಾಲ) ಇದೆ ಎಂದು ಸಹಕಾರ ಸಂಘಗಳ ಜಂಟಿ ನಿಬಂಧಕ ಎಂ ಡಿ ನರಸಿಂಹಮೂರ್ತಿ ನೇತೃತ್ವದ ತನಿಖಾ ವರದಿ ಹೊರಗೆಡವಿದೆ.

ಅಪೆಕ್ಸ್‌ ಬ್ಯಾಂಕ್‌ನಲ್ಲಿ ಈವರೆವಿಗೂ ನಡೆದಿರುವ ಹಲವು ಅಕ್ರಮಗಳು ಮತ್ತು ನೇಮಕಾತಿಯಲ್ಲಿನ ನಿಯಮಬಾಹಿರ ಚಟುವಟಿಕೆಗಳ ಕುರಿತು ಸಹಕಾರ ಸಂಘಗಳ ಜಂಟಿ ನಿಬಂಧಕರು ತನಿಖಾ ವರದಿಯನ್ನು 2020ರ ಮಾರ್ಚ್‌ 10ರಂದು ಸರ್ಕಾರಕ್ಕೆ  ಸಲ್ಲಿಸಿದ್ದಾರೆ. ಈ ವರದಿಯ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ. 

27 ಸಹಕಾರಿ ಮತ್ತು ಸಹಕಾರೇತರ ಸಕ್ಕರೆ ಕಾರ್ಖಾನೆಗಳಿಗೆ ವಿವಿಧ ರೀತಿಯ ಅಂದರೆ ದುಡಿಯುವ ಬಂಡವಾಳ, ಅವಧಿ ಸಾಲ, ಬ್ರಿಡ್ಜ್‌ ಲೋನ್‌, ಸಾಫ್ಟ್‌ ಲೋನ್‌ ಹೆಸರಿನಲ್ಲಿ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌  ಒಟ್ಟು 1,022.55 ಕೋಟಿ ರು.ಗಳ ಸಾಲ ನೀಡಿದೆ. ಈ ಪೈಕಿ  860.48 ಕೋಟಿ ರು.ಸಾಲ ವಸೂಲಾಗಿಲ್ಲ ಎಂಬುದು ತನಿಖಾ ವರದಿಯಿಂದ ಗೊತ್ತಾಗಿದೆ. 

10 ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ 517.80 ಕೋಟಿ ರು.ಸಾಲ ಮಂಜೂರಾಗಿದ್ದು, ಈ ಪೈಕಿ 2019ರ ಮಾರ್ಚ್‌ 31ರ ಅಂತ್ಯಕ್ಕೆ 454.89 ಕೋಟಿ ರು. ಹೊರಬಾಕಿ ಇದೆ. ಇದರಲ್ಲಿ 2019ರ ಮಾರ್ಚ್‌ ಅಂತ್ಯಕ್ಕೆ 70.57 ಕೋಟಿ ರು. ಅಸಲು ಮತ್ತು 83.43 ಕೋಟಿ ರು.ಬಡ್ಡಿ ಸೇರಿ ಒಟ್ಟು 154.00 ಕೋಟಿ ಸುಸ್ತಿಯಾಗಿದೆಯಲ್ಲದೆ ಸಾಲ ವಸೂಲಾತಿಗೆ ಬಾಕಿ ಇದೆ. ಈ 10 ಸಕ್ಕರೆ ಕಾರ್ಖಾನೆಗಳಿಗೆ ನೀಡಲಾದ ಸಾಲಗಳಲ್ಲಿ 95.27 ಕೋಟಿ ರು. ಎನ್‌ಪಿಎ ಆಗಿರುವುದು ವರದಿಯಿಂದ ತಿಳಿದು ಬಂದಿದೆ. 

ಹಾಗೆಯೇ 1,262.00 ಕೋಟಿ ರು. ಸಾಲ ಪಡೆದಿರುವ 17 ಖಾಸಗಿ ಸಕ್ಕರೆ ಕಾರ್ಖಾನೆಗಳು 1,148 ಕೋಟಿ ರು.ಹೊರಬಾಕಿ ಉಳಿಸಿಕೊಂಡಿವೆ. ಈ ಪೈಕಿ 136.00 ಕೋಟಿ  ರು. ಅಸಲು ಮತ್ತು 101.00 ಕೋಟಿ ರು.ಬಡ್ಡಿ ಸೇರಿ ಒಟ್ಟು 237.00 ಕೋಟಿ ಸುಸ್ತಿ ಸಾಲ ವಸೂಲಾತಿಗೆ ಬಾಕಿ ಇದೆ.  ಇದರಲ್ಲಿ 210.00 ಕೋಟಿ ರು. ಎನ್‌ಪಿಎ ಆಗಿದೆ ಎಂದು ತನಿಖಾ ವರದಿ ಹೊರಗೆಡವಿದೆ. 

ಒಟ್ಟಾರೆ 27 ಸಕ್ಕರೆ ಕಾರ್ಖಾನೆಗಳ 47 ಪ್ರಕರಣಗಳಲ್ಲಿ ದುಡಿಯುವ ಬಂಡವಾಳ ಸಾಲವಾಗಿ 1,176  ಕೋಟಿ ಹಾಗೂ 29 ಪ್ರಕರಣಗಳಲ್ಲಿ ಅವಧಿ ಸಾಲವಾಗಿ 427.24 ಕೋಟಿ ರು.  ಹೊರಬಾಕಿ ಇದೆ. ಇದೂ ಸೇರಿದಂತೆ ಒಟ್ಟಾರೆಯಾಗಿ 1,603.36 ಕೋಟಿ ಸಾಲ ಹೊರಬಾಕಿ ಇದೆ. ಈ ಪೈಕಿ 206.32  ಕೋಟಿ ಅಸಲು ಮತ್ತು 184.83 ಕೋಟಿ ಬಡ್ಡಿ ಸೇರಿ ಒಟ್ಟು 391.15 ಕೋಟಿ ರು.ಸಾಲ ಸುಸ್ತಿಯಾಗಿ ಮುಂದುವರೆಯುತ್ತಿದೆ.  ಇದರಲ್ಲಿಯೂ 305.73 ಕೋಟಿ ರು.  ಎನ್‌ಪಿಎ ಆಗಿರುವುದು ವರದಿಯಿಂದ ಗೊತ್ತಾಗಿದೆ. 

ಪ್ರಭಾವಿ ರಾಜಕೀಯ ಮುಖಂಡರ ಒಡೆತನದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ಸಾಲ ನೀಡಿರುವ ಅಪೆಕ್ಸ್‌ ಬ್ಯಾಂಕ್‌, ಕಾರ್ಖಾನೆಗಳಿಂದ ಅಡಮಾನ ಮಾಡಿಕೊಂಡಿರುವ ಸ್ಥಿರಾಸ್ತಿಯ ಮೌಲ್ಯವು ನೀಡಿರುವ ಸಾಲದ ಮೊತ್ತಕ್ಕಿಂತ ಕಡಿಮೆಯಾಗಿದೆ. ಕೆಲ ಸಕ್ಕರೆ ಕಾರ್ಖಾನೆಗಳಿಂದ  ಸಕ್ಕರೆ ದಾಸ್ತಾನು ಇರುವ ಬಗ್ಗೆ ಖಾತರಿಪಡಿಸಿಕೊಂಡಿರುವ ಸಂಬಂಧ ಬ್ಯಾಂಕ್‌ನಲ್ಲಿ ಯಾವುದೇ ದಾಖಲೆಗಳು ಲಭ್ಯ ಇಲ್ಲ. ಹಾಗೇ ಬ್ಯಾಂಕ್‌ ಅಧಿಕಾರಿಗಳು ತನಿಖಾ ತಂಡಕ್ಕೆ ಒದಗಿಸಿದ್ದ ದಾಖಲೆಗಳಲ್ಲಿಯೂ ಸಕ್ಕರೆ ದಾಸ್ತಾನು ಇರಲಿಲ್ಲ ಎಂದು ವರದಿಯಲ್ಲಿ ವಿವರಿಸಲಾಗಿದೆ. 

ಹಲವು ಸಕ್ಕರೆ ಕಾರ್ಖಾನೆಗಳಿಗೆ ಹೊಸದಾಗಿ ಸಾಲ ಮಂಜೂರು ಮಾಡಿ ಈ ಸಾಲವನ್ನು ಕಾರ್ಖಾನೆಗಳು ಪಡೆದ ಹಿಂದಿನ ಸಾಲಗಳು ಎನ್‌ಪಿಎ ಆಗಿದ್ದವು. ಹೀಗಾಗಿ ಸಾಲವನ್ನು ಮರುಪಾವತಿಸುವ ಉದ್ದೇಶದ ಹೆಸರಿನಲ್ಲಿ ಅಪೆಕ್ಸ್‌ ಬ್ಯಾಂಕ್‌, ಹೊಸದಾಗಿ ಸಾಲ ಮಂಜೂರು ಮಾಡಿತ್ತು ಎಂಬ ಅಂಶ ತನಿಖಾ ವರದಿಯಿಂದ ತಿಳಿದು ಬಂದಿದೆ. 

‘ಕಾರ್ಖಾನೆಗಳಿಗೆ ಬಿಡುಗಡೆಯಾದ ಸಾಲಗಳು ಕಾರ್ಖಾನೆಯ ಯಂತ್ರೋಪಕರಣ, ಕಾರ್ಖಾನೆ ವಿಸ್ತರಣೆ, ಹೆಚ್ಚಿನ ವಿದ್ಯುತ್‌ ಸಂಪರ್ಕ ಪಡೆದಿದ್ದು, ಈ ಉದ್ದೇಶಕ್ಕಾಗಿ ಪಡೆದ ಸಾಲಗಳು ಸದುಪಯೋಗಪಡಿಸಿಕೊಂಡಿರುವ ಬಗ್ಗೆ ಬ್ಯಾಂಕ್‌ ಖಾತರಿಪಡಿಸಿಕೊಂಡಿರಲಿಲ್ಲ,’ ಎಂದು ತನಿಖಾಧಿಕಾರಿಗಳು ವರದಿಯಲ್ಲಿ ಅಭಿಪ್ರಾಯಪಟ್ಟಿದ್ದಾರೆ. 

ದುಡಿಯುವ ಬಂಡವಾಳ ಸಾಲವನ್ನು ಪ್ರೀ-ಆಪರೇಟೀವ್‌ ಲೋನ್‌ ರೂಪದಲ್ಲಿ ಒಟ್ಟು 20 ಸಹಕಾರಿ ಮತ್ತು ಸಹಕಾರೇತರ ಕಾರ್ಖಾನೆಗಳಿಗೆ ಒಟ್ಟಾರೆ 898.15 ಕೋಟಿ ರು. ಮಂಜೂರಾಗಿತ್ತು. ಆದರೆ ಈ ಕಾರ್ಖಾನೆಗಳಲ್ಲಿ ಸಕ್ಕರೆ ದಾಸ್ತಾನು ಹೊಂದಿರುವ ಬಗ್ಗೆ ದೃಢೀಕರಣವನ್ನು ಪಡೆಯದೇ ಅಪೆಕ್ಸ್‌ ಬ್ಯಾಂಕ್‌ ಸಾಲ ನೀಡಿತ್ತು ಎಂದು ವರದಿಯಲ್ಲಿ ವಿವರಿಸಲಾಗಿದೆ.

ಸಚಿವ ರಮೇಶ್‌ ಜಾರಕಿಹೊಳಿ ಸೇರಿದಂತೆ ರಾಜಕೀಯ ಪ್ರಭಾವಿ ಮುಖಂಡರ ಒಡೆತನದ ಸಕ್ಕರೆ ಕಾರ್ಖಾನೆಗಳಿಗೆ  ಸಾಲ ಮಂಜೂರು ಮಾಡಿದ್ದ ಅವಧಿಯಲ್ಲಿ ಮಾಜಿ  ಶಾಸಕ  ಕೆ  ಎನ್‌ ರಾಜಣ್ಣ ಅವರು ಬ್ಯಾಂಕ್‌ಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಬ್ಯಾಂಕ್‌ನಲ್ಲಿ ನಡೆದ ದುರಾಡಳಿತಕ್ಕೆ ಸಂಬಂಧಿಸಿದಂತೆ  ಇವರ ವಿರುದ್ಧ ಸರ್ಕಾರ ಮತ್ತು  ನಬಾರ್ಡ್‌ಗೆ ಹಲವು ದೂರುಗಳು ಸಲ್ಲಿಕೆಯಾಗಿದ್ದವು. ಇದೇ ಅವಧಿಯಲ್ಲಿ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದ ಡಾ ಜಿ ಪರಮೇಶ್ವರ್‌ ಅವರ ವಿರುದ್ಧ ತಿರುಗಿಬಿದ್ದಿದ್ದನ್ನು ಸ್ಮರಿಸಿಕೊಳ್ಳಬಹುದು. 

Hot this week

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...
Please Scan to make Your Contribution

Topics

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

Related Articles

Popular Categories

error: Content is protected !!