Wednesday | April 15, 2026 |

ಬ್ರಿಮ್ಸ್‌ನಲ್ಲಿ 18.00 ಕೋಟಿ ರು.ಅವ್ಯವಹಾರ; ನಿರ್ದೇಶಕ ಸೇರಿ 10 ಮಂದಿ ವಿಚಾರಣೆಗೆ ಅನುಮತಿ

ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖರೀದಿ, ಸಿಬ್ಬಂದಿ ನೇಮಕ ಮತ್ತು ಇತರೆ ಕಾಮಗಾರಿಗಳಲ್ಲಿ ನಡೆದಿದ್ದ ಒಟ್ಟು 18.00 ಕೋಟಿ ರು. ಮೊತ್ತದ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಬ್ರಿಮ್ಸ್‌ ಹಿಂದಿನ ನಿರ್ದೇಶಕ ಡಾ ಚನ್ನಣ್ಣ ಸಿ ಸೇರಿದಂತೆ ಒಟ್ಟು 10 ಮಂದಿ ಅಧಿಕಾರಿ ಸಿಬ್ಬಂದಿ ವಿರುದ್ಧ ವಿಚಾರಣೆಗೆ ಮಂಜೂರಾತಿ ದೊರೆತಿದೆ.

ಬ್ರಿಮ್ಸ್‌ನಲ್ಲಿ ನಡೆದಿದ್ದ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ದಾಖಲಾಗಿದ್ದ ದೂರನ್ನಾಧರಿಸಿ ತನಿಖೆ ನಡೆಸಿದ್ದ ಭ್ರಷ್ಟಾಚಾರ ನಿಗ್ರಹ ದಳ, ಅವ್ಯವಹಾರ ನಡೆದಿದೆ ಎಂದು ತನಿಖೆ ವೇಳೆಯಲ್ಲಿ ಸಾಬೀತುಪಡಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲು ಅಭಿಯೋಜನಾ ಮಂಜೂರಾತಿ ಪಡೆದಿರುವ ಎಸಿಬಿ ತನಿಖೆಯನ್ನು ಚುರುಕುಗೊಳಿಸಿದೆ. 

ಬೀದರ್‌ ವೈದ್ಯಕೀಯ ಕಾಲೇಜಿನಲ್ಲಿ ನಡೆದಿರುವ ಹಲವು ಅಕ್ರಮಗಳ ಕುರಿತು ತನಿಖೆ ನಡೆದು ಹಲವು  ತಿಂಗಳಾಗಿದ್ದರೂ ಅಭಿಯೋಜನಾ ಮಂಜೂರಾತಿ ನೀಡಿರಲಿಲ್ಲ. ಆದರೆ ಡಾ ಕೆ ಸುಧಾಕರ್‌ ವೈದ್ಯಕೀಯ ಶಿಕ್ಷಣರಾಗುತ್ತಿದ್ದಂತೆ ಆರೋಪಿಗಳ ವಿರುದ್ಧ ವಿಚಾರಣೆಗೆ ಅನುಮತಿ ದೊರೆತಿದೆ ಎಂದು ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಬ್ರಿಮ್ಸ್‌ನ ಹಿಂದಿನ ವೈದ್ಯಕೀಯ ಅಧೀಕ್ಷಕ ಡಾ ಶಿವಕುಮಾರ್ ಶೆಟಕಾರ, ಹಿಂದಿನ ಸಿಇಓ ಆನಂದಸಾಗರ ರೆಡ್ಡಿ, ಸಹಾಯಕ ಆಡಳಿತಾಧಿಕಾರಿ ಅನುಸೂಯ, ಕಚೇರಿ ಅಧೀಕ್ಷಕ ಬಾಬು ಕೋಟೆ, ಪ್ರಕಾಶ ಶರಣಪ್ಪ ಮಡಿವಾಳ, ಪ್ರಥಮ ದರ್ಜೆ ಸಹಾಯಕ ಪ್ರಕಾಶ ಮಾಳಗೆ, ವರ್ಷ, ಮಾಚೆ ಕಲ್ಲಪ್ಪ, ಮತ್ತು ದ್ವಿತೀಯ ದರ್ಜೆ ಸಹಾಯಕ ಶಿವಾಜಿ ಅವರು ಇದೀಗ ವಿಚಾರಣೆ ಎದುರಿಸಬೇಕಾಗಿದೆ. ಈ ಆರೋಪಿಗಳ ವಿರುದ್ಧ ಈಗಾಗಲೇ ದೋಷಾರೋಪಣಾ ಪಟ್ಟಿ ಜಾರಿಗೊಳಿಸಿರುವುದು ದಾಖಲೆಯಿಂದ ತಿಳಿದು ಬಂದಿದೆ.

ಆದರೆ ಆರೋಪಿಗಳು ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಸಮಜಾಯಿಷಿ ನೀಡಿದ್ದಾರೆ. ಇದನ್ನು ಪರಿಶೀಲಿಸುತ್ತಿರುವ ಎಸಿಬಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಯನ್ನು ಹೊರತುಪಡಿಸಿ ಇತರೆ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಇಲಾಖೆ ವಿಚಾರಣೆ ನಡೆಸಲು ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ, ಯೋಜನಾ ಇಲಾಖೆಗೆ ಸಹಮತಿ ಕೋರಿ ಪತ್ರ ಬರೆದಿದೆ. ಆದರೆ ಈವರೆವಿಗೂ ಈ ಇಲಾಖೆಗಳಿಂದ ಸಹಮತಿ ಪತ್ರ ಎಸಿಬಿಗೆ ದೊರೆತಿಲ್ಲ ಎಂಬುದು ಗೊತ್ತಾಗಿದೆ. 

Hot this week

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

Topics

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

Related Articles

Popular Categories

error: Content is protected !!