Wednesday | May 13, 2026 |

ನರೇಗಾ; ಮುಂಗಡ ಪಾವತಿಸುವ ಮಾತಿರಲಿ ಕೂಲಿ ಹಳೇ ಬಾಕಿ 1 ಸಾವಿರ ಕೋಟಿಯನ್ನೇ ಕೊಟ್ಟಿಲ್ಲ

ಬೆಂಗಳೂರು; ಕೊರೋನಾ ವೈರಸ್‌ನ್ನು ಎದುರಿಸುವ  ನಿಟ್ಟಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಮುಂದಿನ 2 ತಿಂಗಳ  ಅವಧಿಗೆ  ಮುಂಗಡವಾಗಿ ಕೂಲಿ ಹಣವನ್ನು ಪಾವತಿ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ ಅವರು  ಎರಡು  ದಿನದ ಹಿಂದೆಯಷ್ಟೇ  ಹೇಳಿಕೆ ನೀಡಿದ್ದರು. ಹೇಳಿಕೆ ನೀಡಿದ ಎರಡು ದಿನದ  ಅಂತರದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕರ್ನಾಟಕಕಕ್ಕೆ ಬರಬೇಕಿದ್ದ 1,744.33 ಕೋಟಿ ರು.ಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ ಎಂಬ  ಮಾಹಿತಿ ಹೊರಬಿದ್ದಿದೆ.  

1 ಸಾವಿರ  ಕೋಟಿ ಗೂ ಅಧಿಕ  ಮೊತ್ತವನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದ್ದರೆ, ರಾಜ್ಯ ಸರ್ಕಾರವು ಕೂಡ ಕೂಲಿ ಹಣದ ಪೈಕಿ ಒಟ್ಟು 755.39 ಕೋಟಿ ರು.ಗಳನ್ನು ಬಾಕಿ ಉಳಿಸಿಕೊಂಡಿದೆ. ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 2000 ಕೋಟಿ ರೂ.ಗಳನ್ನು ವಿತರಿಸಲು ಕೇರಳ ಸರ್ಕಾರ ತೀರ್ಮಾನಿಸಿದ್ದರೆ, ಕರ್ನಾಟಕ ಸರ್ಕಾರ ಈವರೆವಿಗೂ ತನ್ನ ನಿರ್ಧಾರವನ್ನು ಪ್ರಕಟಿಸಿಲ್ಲ. 

ಉದ್ಯೋಗ ಖಾತ್ರಿ ಯೋಜನೆಯ ಹಣದ ಪೈಕಿ 1,744.33 ಕೋಟಿ ರು.ಗಳನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ಖುದ್ದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ಸಚಿವ ಕೆ ಎಸ್ ಈಶ್ವರಪ್ಪ ಅವರು ಒಪ್ಪಿಕೊಂಡಿದ್ದಾರೆ. 

2020ರ ಮಾರ್ಚ್ 18ರಂದು ನಡೆದ ಅಧಿವೇಶನದಲ್ಲಿ ಸಿ ಎನ್ ಬಾಲಕೃಷ್ಣ ಅವರು ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಈಶ್ವರಪ್ಪ ಅವರು ಬಾಕಿ ಉಳಿಸಿಕೊಂಡಿರುವ ಹಣವನ್ನು ಬಿಡುಗಡೆಗೊಳಿಸಬೇಕು ಎಂದು 2020ರ ಮಾರ್ಚ್ 6ರಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.

ಇದಲ್ಲದೆ ರಾಜ್ಯ ಸರ್ಕಾರವೂ 755.39 ಕೋಟಿ ರು. ಮೊತ್ತದಲ್ಲಿ ಕೂಲಿ ಪಾವತಿಸದೇ ಬಾಕಿ ಉಳಿಸಿಕೊಂಡಿದೆ. 2018-19ರಲ್ಲಿ ಕೂಲಿ ಪಾವತಿಸಲು 32.81 ಕೋಟಿ ರು., 2019-20ರಲ್ಲಿ 53.60 ಕೋಟಿ ರು., ಬಾಕಿ ಇದೆಯಲ್ಲದೆ, ಸಾಮಗ್ರಿ ಮೊತ್ತ ಪೈಕಿ 2018-19ರಲ್ಲಿ 119.17 ಕೋಟಿ ರು., 2019-20ರಲ್ಲಿ 549.81 ಕೋಟಿ ರು. ಬಾಕಿ ಉಳಿಸಿಕೊಂಡಿರುವುದು ದಾಖಲೆಯಿಂದ ತಿಳಿದು ಬಂದಿದೆ. 

ಕೊರೋನಾ ವೈರಸ್‌ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಮತ್ತು ಗುಂಪುಗೂಡುವುದನ್ನು ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳು ಸದ್ಯಕ್ಕೆ ಸ್ಥಗಿತಗೊಂಡಂತಾಗಿದೆ.  ಯೋಜನೆಯಡಿಯಲ್ಲಿ ನೀಡುವ ಕೂಲಿ ಹಣವನ್ನೇ ನೆಚ್ಚಿಕೊಂಡಿರುವ ಗ್ರಾಮೀಣ ನಿರುದ್ಯೋಗಿಗಳು, ಹಳೆಯ ಕೂಲಿಯನ್ನೇ ನೀಡದ  ಸರ್ಕಾರ ಮುಂಗಡವಾಗಿ ಹಣ ನೀಡುವುದೇ ಎಂದು ಪ್ರಶ್ನಿಸಲಾರಂಭಿಸಿದ್ದಾರೆ.

ರಾಜ್ಯ ಸರ್ಕಾರವು ಈಗಾಗಲೇ ಕೇಂದ್ರ ಸರ್ಕಾರದ ಪರವಾಗಿ 2015-16ರಿಂದ 2019-20ವರೆಗೆ  ಒಟ್ಟು 351332.095 ಲಕ್ಷ ರು.ಗಳನ್ನು ಪಾವತಿಸಿದೆ. ಇದರಲ್ಲಿ 41612.00 ಲಕ್ಷ ರು.ಗಳು ಇನ್ನೂ ಬಾಕಿ ಇದೆ ಎಂಬ ಅಂಶ ದಾಖಲೆಯಿಂದ ತಿಳಿದು ಬಂದಿದೆ. 

ಹಾಸನ ಜಿಲ್ಲಾ ಪಂಚಾಯ್ತಿಯೊಂದಕ್ಕೆ 81.00 ಕೋಟಿ ರು. ಹಣ ಪಾವತಿ ಆಗಬೇಕಿದೆ. ಈ ಪೈಕಿ 2020ರ ಫೆ.19ರ ಅಂತ್ಯಕ್ಕೆ 50.70 ಕೋಟಿ ರು. ಬಾಕಿ ಉಳಿಸಿಕೊಂಡಿರುವುದು ಈಶ್ವರಪ್ಪ ಅವರು ನೀಡಿರುವ ಲಿಖಿತ ಉತ್ತರದಿಂದ ತಿಳಿದು ಬಂದಿದೆ. ಬಾಕಿ ಮೊತ್ತಕ್ಕೆ ಸಂಬಂಧಿಸಿದಂತೆ ಕೂಲಿ ಮತ್ತು ಸಾಮಗ್ರಿ ವೆಚ್ಚದ ಅನುಪಾತವು ಮಾರ್ಗಸೂಚಿಗಳನ್ವಯ ಶೇ.60;40ರ ಮಿತಿಯಲ್ಲಿರಬೇಕಾಗುತ್ತದೆ. 

ಹಾಸನ ಜಿಲ್ಲೆಯಲ್ಲಿ ಸಾಮಗ್ರಿ ವೆಚ್ಚದ ಅನುಪಾತವು ಶೇ.46:89 ಇದೆ. ಸಾಮಗ್ರಿ ವೆಚ್ಚವು ಶೇ.40ಕ್ಕಿಂತ ಹೆಚ್ಚಿರುವುದರಿಂದ ನರೇಗಾ  ತಂತ್ರಾಂಶದಲ್ಲಿ ಹಣ ವರ್ಗಾವಣೆ ಆದೇಶ ಸೃಜಿಸಲು ಸಾಧ್ಯವಾಗಿಲ್ಲ. ಈ ಕಾರಣಕ್ಕಾಗಿ ಬಾಕಿ ಉಳಿದಿದೆ,’ ಎಂದು ಈಶ್ವರಪ್ಪ ಅವರು ಸಮಜಾಯಿಷಿ ನೀಡಿದ್ದಾರೆ.

ಕಾರ್ಮಿಕರಿಂದ ಕೆಲಸ ತೆಗೆದುಕೊಂಡ ಹದಿನೈದು ದಿನದೊಳಗೆ ಕೂಲಿ ನೀಡಬೇಕು ಎಂದು ನಿಯಮ ಕೇಂದ್ರ  ಮತ್ತು ರಾಜ್ಯ ಸರ್ಕಾರದಿಂದ ನಿಯಮಿತವಾಗಿ ಪಾಲನೆ ಆಗುತ್ತಿಲ್ಲ. ಇದು ಕೆಲಸ ಮಾಡಿದ ಕೂಲಿ ಕಾರ್ಮಿಕರ ಗೋಳಾದರೆ ಕಾಮಗಾರಿಗಳಿಗೆ ಬಳಸಿದ ಸಾಮಾಗ್ರಿಗಳ ಬಿಲ್‌ ಕೂಡ ಹಲವು ಜಿಲ್ಲೆಗಳಲ್ಲಿ ಪಾವತಿಯಾಗದಿರುವುದು ಸಚಿವ ಈಶ್ವರಪ್ಪ ಅವರು ನೀಡಿರುವ ಉತ್ತರದಿಂದ  ಗೊತ್ತಾಗಿದೆ. 

Hot this week

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...
Please Scan to make Your Contribution

Topics

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

Related Articles

Popular Categories

error: Content is protected !!