Tuesday | August 25, 2026 |

‘ದಿ ಫೈಲ್‌’ ವರದಿ ಪರಿಣಾಮ; ಕೊರೋನಾ ವಿರುದ್ಧ ಹೋರಾಟಕ್ಕೆ ಶಾಸಕರ ನಿಧಿ ಬಳಕೆ

ಬೆಂಗಳೂರು; ಕೊರೊನಾ ವೈರಸ್‌ ಸೋಂಕಿನ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಲು ನಾಗರಿಕರು ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ ಗೆ ಉದಾರವಾಗಿ ದೇಣಿಗೆ ನೀಡಬೇಕು ಎಂದು ಜೋಳಿಗೆ ಹಿಡಿದಿದ್ದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಇದೀಗ ಆರಂಭಿಕ ಹಂತದಲ್ಲಿ ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನವನ್ನು ಬಳಕೆ ಮಾಡಿಕೊಳ್ಳಲು ಅನುಮತಿ ನೀಡಿದ್ದಾರೆ. 

ಈ  ಸಂಬಂಧ 2020ರ ಏಪ್ರಿಲ್‌ 1ರಂದು ಆದೇಶ ಹೊರಡಿಸಿರುವ ಯೋಜನೆ, ಸಾಂಖ್ಯಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್‌ ಅವರು, ಜಿಲ್ಲಾಧಿಕಾರಿಗಳು ತಕ್ಷಣವೇ ಆಯಾ ಜಿಲ್ಲೆಯ ಶಾಸಕರನ್ನು ಸಂಪರ್ಕಿಸಿ ಅವರಿಂದ ಪ್ರಸ್ತಾವನೆಯನ್ನು ಸ್ವೀಕರಿಸಲು ಸೂಚಿಸಿದ್ದಾರೆ.

ಈ ಕುರಿತು ‘ದಿ ಫೈಲ್‌’ 2020ರ ಮಾರ್ಚ್ 28ರಂದು ವರದಿ ಪ್ರಕಟಿಸುವ ಮೂಲಕ ಸರ್ಕಾರದ ಗಮನ ಸೆಳೆದಿತ್ತು. ಈ ವರದಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಚರ್ಚೆಗೊಳಗಾಗಿತ್ತು. ವರದಿ ಪ್ರಕಟಿಸಿದ 4 ದಿನದ ಅಂತರದಲ್ಲಿ ಸರ್ಕಾರದಿಂದ ಈ ಆದೇಶ ಹೊರಬಿದ್ದಿದೆ. 

‘ಕರ್ನಾಟಕ ಶಾಸಕರ  ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಪರಿಷ್ಕೃತ ಮಾರ್ಗಸೂಚಿ 2014ರ ಕಂಡಿಕೆ 2.13ರಲ್ಲಿ ಪ್ರಕೃತಿ ವಿಪತ್ತು ಮತ್ತು ವಿಕೋಪದಡಿಯಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನವನ್ನು ಬಳಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿರುವುದರಿಂದ ಕೊರೊನಾ ವೈರಸ್‌ನ್ನು ನಿಯಂತ್ರಿಸಲು ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ  ನಿಧಿಯನ್ನು 2020-21ನೇ ಸಾಲಿನಲ್ಲಿ ಮಾತ್ರ ಬಳಕೆ ಮಾಡಲು ಅನುಮತಿಸಲಾಗಿದೆ. ಹಾಗೂ ಮಾನ್ಯ ಶಾಸಕರುಗಳು ಇಚ್ಛಿಸಿದಲ್ಲಿ ಸದರಿ ನಿಧಿಯನ್ನು ಮುಖ್ಯಮಂತ್ರಿಯವರ ‘ಸಿಎಂ  ಕೋವಿಡ್‌ 19 ಪರಿಹಾರ ನಿಧಿಗೆ ದೇಣಿಗೆ ನೀಡಲು ಸಹ ಅನುಮತಿಸಲಾಗಿದೆ,’ ಎಂದು ಆದೇಶಿಸಲಾಗಿದೆ. 

ಎಲ್ಲಾ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಜಿಲ್ಲೆಗಳ  ಶಾಸಕರನ್ನು ಸಂಪರ್ಕಿಸಿ ಅವರ ಪ್ರಸ್ತಾವನೆಯನ್ನು ತುರ್ತಾಗಿ  ಲಭ್ಯವಿರುವ ಪಿ ಡಿ ಖಾತೆಯ ಅನುದಾನದಿಂದ ತಲಾ 2.00 ಕೋಟಿ ರು.ಗಳಿಗೆ ಸೀಮಿತಗೊಳಿಸಿ  ಕ್ರಮ ವಹಿಸತಕ್ಕದ್ದು ಎಂದೂ ಆದೇಶದಲ್ಲಿ ಸೂಚಿಸಲಾಗಿದೆ.   

2018-19ನೇ ಸಾಲಿನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಎಲ್ಲಾ ಸದಸ್ಯರುಗಳಿಗೆ ಒಟ್ಟು 481.69 ಕೋಟಿ ರು. ಬಿಡುಗಡೆಯಾಗಿದೆ. 2019-20ನೇ ಸಾಲಿನಲ್ಲಿ 299.67 ಕೋಟಿ ರು ಇದೆ. ಅದೇ ರೀತಿ 2019ರ ಏಪ್ರಿಲ್‌ 1ರ ಅಂತ್ಯಕ್ಕೆ ರಾಜ್ಯದ ಜಿಲ್ಲಾಧಿಕಾರಿಗಳ ಪಿ ಡಿ ಖಾತೆಗಳಲ್ಲಿ 948.97 ಕೋಟಿ ರು. ಇದೆ.  

ಹಾಗೆಯೇ 2020ರ ಜನವರಿ ಅಂತ್ಯಕ್ಕೆ ಜಿಲ್ಲಾಧಿಕಾರಿಗಳ ಉಳಿತಾಯ ಖಾತೆಯಲ್ಲಿ 648.70 ಕೋಟಿ ರು. ಉಳಿದಿದೆ. ಅದೇ ರೀತಿ 2019-20ನೇ ಸಾಲಿನಲ್ಲಿ ಇದೇ ಯೋಜನೆಯಡಿ 2020ರ ಮಾರ್ಚ್‌ 17ರ ಅಂತ್ಯಕ್ಕೆ 188.67 ಕೋಟಿ ರು  ಸೇರಿದಂತೆ ಒಟ್ಟು 837.67 ಕೋಟಿ ರು. ಲಭ್ಯವಿರುವುದು ತಿಳಿದು ಬಂದಿದೆ. 

ಬಹುತೇಕ ಶಾಸಕರು ತಮ್ಮ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನವನ್ನು ಬಳಕೆ  ಮಾಡಿಕೊಳ್ಳದ ಕಾರಣ ಜಿಲ್ಲಾಧಿಕಾರಿಗಳ ಪಿ ಡಿ ಖಾತೆಯಲ್ಲಿ ಉಳಿದಿತ್ತು. 

Hot this week

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

Related Articles

Popular Categories

error: Content is protected !!