Sunday | August 30, 2026 |

ಕೊರೊನಾ ನಂತರ ತುಮಕೂರು ಜಿಲ್ಲೆ ನಿದ್ದೆಗೆಡಿಸಿವೆ 250 ಚಿರತೆಗಳು

ತುಮಕೂರು; ಕೊರೊನಾ ವೈರಸ್‌ ಭೀತಿಯಿಂದ ಸದ್ಯಕ್ಕೆ ಪಾರಾಗಿರುವ ತುಮಕೂರು ಜಿಲ್ಲೆಯಲ್ಲೀಗ ಚಿರತೆ ಭೀತಿ ಕಾಡತೊಡಗಿದೆ. ಜಿಲ್ಲೆಯಲ್ಲಿ ಎಲ್ಲಿ ಕೇಳಿದರೂ ಚಿರತೆಗಳದ್ದೇ ಸದ್ದು. ನರಹಂತಕ ಚಿರತೆಗಳನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಅದಷ್ಟೇ ಯತ್ನಿಸಿದರೂ ಸಫಲವಾಗುತ್ತಿಲ್ಲ. 

ತುಮಕೂರು ತಾಲೂಕು, ಗುಬ್ಬಿ, ಕುಣಿಗಲ್ ಮತ್ತು ತುರುವೇಕೆರೆ ತಾಲೂಕು ವ್ಯಾಪ್ತಿಯ ಹಳ್ಳಿಗಳಲ್ಲಿ ಕೇವಲ 10 ಚಿರತೆಗಳಷ್ಟೇ ಅರಣ್ಯಾಧಿಕಾರಿಗಳ ಸೆರೆಗೆ ಸಿಕ್ಕಿವೆ. ಇನ್ನುಳಿದ 250 ಚಿರತೆಗಳು ತುಮಕೂರು ಜಿಲ್ಲೆಯಾದ್ಯಂತ ಈಗಲೂ ಓಡಾಡಿಕೊಂಡಿರುವುದು ಈ ಭಾಗದ ಜನರಲ್ಲಿ ಆತಂಕ ಮೂಡಿಸಿದೆ. 

ತುಮಕೂರು ಜಿಲ್ಲೆಯಾದ್ಯಂತ ಇರುವ ಚಿರತೆಗಳ ಬಗ್ಗೆ ತುರುವೇಕೆರೆ ಶಾಸಕ ಮಸಾಲ ಜಯರಾಮ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸಚಿವ ಆನಂದ್‍ಸಿಂಗ್ ಅವರು ತುಮಕೂರು ಜಿಲ್ಲೆಯಾದ್ಯಂತ ಈಗಲೂ 250 ಚಿರತೆಗಳಿವೆ ಎಂದು ಮಾಹಿತಿ ಒದಗಿಸಿದ್ದಾರೆ.

ತುಮಕೂರು ತಾಲೂಕಿನಲ್ಲಿ ಚಿರತೆ ಹಾವಳಿ ಪ್ರಕರಣಗಳು 2016-17ರಿಂದ 2018-19ರವರೆಗೆ ಹೆಚ್ಚಿವೆ. 2016-17ರಲ್ಲಿ 20 ಪ್ರಕರಣಗಳು, 2017-18ರಲ್ಲಿ 29, 2018-19ರಲ್ಲಿ 43, 2019-20ರಲ್ಲಿ 19 ಪ್ರಕರಣಗಳು ವರದಿಯಾಗಿರುವುದು ಆನಂದ್ ಸಿಂಗ್ ಅವರು ನೀಡಿರುವ ಉತ್ತರದಿಂದ ತಿಳಿದು ಬಂದಿದೆ.

ತುಮಕೂರು ತಾಲೂಕಿನಲ್ಲಿ ಸಾಕು ಪ್ರಾಣಿ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ 2016-17ರಲ್ಲಿ 1,98,000 ರು., 2017-18ರಲ್ಲಿ 2,33,798 ರು., 2018-19ರಲ್ಲಿ 3,29,000 ರು.ಗಳನ್ನು ಪರಿಹಾರ ನೀಡಲಾಗಿದೆ. ಗುಬ್ಬಿ ತಾಲೂಕಿನಲ್ಲಿ ಈ ಮೂರು ವರ್ಷಗಳಲ್ಲಿ 9,27,182 ರು, ಕುಣಿಗಲ್‍ನಲ್ಲಿ 31,29,498 ರು., ತುರುವೇಕೆರೆಯಲ್ಲಿ 2,91,833 ರು.ಗಳನ್ನು ಪರಿಹಾರ ವಿತರಿಸಿದೆ.

ಚಿರತೆ ದಾಳಿಯಿಂದ 2016-17ರಿಂದ 2018-19ರಲ್ಲಿ ಯಾವುದೇ ಮಾನವ, ಪ್ರಾಣ ಹಾನಿ ಆಗಿಲ್ಲ. 2019-20ರಲ್ಲಿ ಒಟ್ಟು 3 ಪ್ರಕರಣಗಳು ವರದಿಯಾಗಿವೆ. ತುಮಕೂರು, ಗುಬ್ಬಿ, ಕುಣಿಗಲ್ ವ್ಯಾಪ್ತಿಯಲ್ಲಿ ಆಗಿರುವ ಮಾನವ,ಪ್ರಾಣ ಹಾನಿಗೆ ಸಂಬಂಧಿಸಿದಂತೆ ಒಟ್ಟು 17 ಲಕ್ಷ ರು.ಗಳನ್ನು ಪರಿಹಾರ ರೂಪದಲ್ಲಿ ವಿತರಿಸಿದೆ ಎಂದು ಆನಂದ್‍ಸಿಂಗ್ ಅವರು ಉತ್ತರ ನೀಡಿದ್ದಾರೆ. 

Hot this week

ಬೇನಾಮಿ ಆಸ್ತಿ ಹೊಂದಿದ ಆರೋಪ; ವಿಟಿಯು ಕುಲಪತಿ ವಿದ್ಯಾಶಂಕರ್ ಗೆ ಆದಾಯ ತೆರಿಗೆ ಇಲಾಖೆ ನೋಟೀಸ್‌

ಬೆಂಗಳೂರು;  ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕುರಿತು ಆದಾಯ...

‘ಅದಾನಿ ಕಂಪನಿಯಿಂದಲೇ ವಿವಾದ, 850 ಕೋಟಿ ರು ಪಾವತಿಸುವ ಲಕ್ಷಣಗಳೂ ಗೋಚರಿಸುತ್ತಿಲ್ಲ, ಅಧಿಕಾರಿಗಳ ಕೈ ಕಟ್ಟಿ ಹಾಕಿದೆ’; ಸರ್ಕಾರದ ಅಸಹಾಯಕತೆ ಬಹಿರಂಗ

ಬೆಂಗಳೂರು;  'ಕಲ್ಬುರ್ಗಿಯ ವಾಡಿಯಲ್ಲಿ  ಸುಣ್ಣದ ಕಲ್ಲು ಗಣಿ ಗುತ್ತಿಗೆ ಪ್ರದೇಶದಲ್ಲಿ ಗಣಿಗಾರಿಕೆ...

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ...
Please Scan to make Your Contribution

Topics

ಬೇನಾಮಿ ಆಸ್ತಿ ಹೊಂದಿದ ಆರೋಪ; ವಿಟಿಯು ಕುಲಪತಿ ವಿದ್ಯಾಶಂಕರ್ ಗೆ ಆದಾಯ ತೆರಿಗೆ ಇಲಾಖೆ ನೋಟೀಸ್‌

ಬೆಂಗಳೂರು;  ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕುರಿತು ಆದಾಯ...

‘ಅದಾನಿ ಕಂಪನಿಯಿಂದಲೇ ವಿವಾದ, 850 ಕೋಟಿ ರು ಪಾವತಿಸುವ ಲಕ್ಷಣಗಳೂ ಗೋಚರಿಸುತ್ತಿಲ್ಲ, ಅಧಿಕಾರಿಗಳ ಕೈ ಕಟ್ಟಿ ಹಾಕಿದೆ’; ಸರ್ಕಾರದ ಅಸಹಾಯಕತೆ ಬಹಿರಂಗ

ಬೆಂಗಳೂರು;  'ಕಲ್ಬುರ್ಗಿಯ ವಾಡಿಯಲ್ಲಿ  ಸುಣ್ಣದ ಕಲ್ಲು ಗಣಿ ಗುತ್ತಿಗೆ ಪ್ರದೇಶದಲ್ಲಿ ಗಣಿಗಾರಿಕೆ...

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ...

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

Related Articles

Popular Categories

error: Content is protected !!