Friday | April 17, 2026 |

ಬಿಡುಗಡೆಯಾಗದ ಹಣ; ತೊಗರಿ, ಕಡಲೆಕಾಳು ಖರೀದಿಗೆ ಹಿನ್ನಡೆ

ಬೆಂಗಳೂರು; ಬಡತನ ರೇಖೆಗಿಂತ ಕೆಳಗಿರುವವರು ಹೊಂದಿರುವ ಪ್ರತಿ ಕಾರ್ಡ್‌ಗೆ 1 ಕೆ ಜಿ ತೊಗರಿಬೇಳೆ ವಿತರಣೆಗೆ ಕೇಂದ್ರ ಸರ್ಕಾರ ಆದೇಶಿಸಿದ್ದರೆ, ಇತ್ತ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮತ್ತು ಬೆಲೆ ಸ್ಥಿರೀಕರಣ ಯೋಜನೆಯಡಿಯಲ್ಲಿ ತೊಗರಿ ಮತ್ತು ಕಡಲೆಕಾಳು ಖರೀದಿಯಲ್ಲಿ ರಾಜ್ಯ ಹಿಂದೆ ಬಿದ್ದಿದೆ. ತೊಗರಿ ಖರೀದಿ ಸಂಬಂಧ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡದೇ ಇರುವುದೇ ಹಿನ್ನಡೆಗೆ ಮೂಲ ಕಾರಣ.
ಬೆಂಬಲ ಬೆಲೆ ಮತ್ತು ಬೆಲೆ ಸ್ಥಿರೀಕರಣ ಯೋಜನೆಯಡಿಯಲ್ಲಿ ತೊಗರಿ ಮತ್ತು ಕಡಲೆಕಾಳು ನಿರೀಕ್ಷಿತ ಪ್ರಮಾಣದಲ್ಲಿ ಖರೀದಿಯಾಗದೇ ಇರುವುದನ್ನು ಗಂಭೀರವಾಗಿ ಪರಿಗಣಿಸದ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡುವ ಬಗ್ಗೆ ಕ್ರಮ ಕೈಗೊಂಡಿಲ್ಲ.
ಈವರೆವಿಗೆ ಅತ್ಯಂತ ಕಡಿಮೆ ಪ್ರಮಾಣದಲ್ಲಿ ತೊಗರಿ ಖರೀದಿಸಿದೆ. ತೊಗರಿ ಖರೀದಿಗೆ ಹಿನ್ನಡೆಯಾಗಿದೆ. ಕೋವಿಡ್‌-19ರ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ನಿಂದಾಗಿ ಖರೀದಿ ಪ್ರಕ್ರಿಯೆಯಲ್ಲಿ ನಿಗದಿತ ಗುರಿ ತಲುಪಿಲ್ಲ.
ತೊಗರಿ ಕಾಪು ದಾಸ್ತಾನಿನ ಪ್ರಮಾಣವನ್ನು ಸ್ಥಿರವಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳ ಸಚಿವಾಲಯ, ಬೆಲೆ ಸ್ಥಿರೀಕರಣ ಯೋಜನೆಯನ್ವಯ 2020ರ ಏಪ್ರಿಲ್‌ 12 ಮತ್ತು 21ರಂದು ಒಟ್ಟು 2 ಲಕ್ಷ ಮೆಟ್ರಿಕ್‌ ಟನ್‌ ತೊಗರಿ ಖರೀದಿಗೆ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿತ್ತು.
ಅದರಂತೆ ರಾಜ್ಯ ಸರ್ಕಾರ ಖರೀದಿಸಬೇಕಿದ್ದ ಒಟ್ಟು 2 ಲಕ್ಷ ಮೆಟ್ರಿಕ್‌ ಟನ್‌ ಪೈಕಿ ಈವರೆವಿಗೆ ಕೇವಲ 30,688 ಮೆಟ್ರಿಕ್‌ ಟನ್‌ನಷ್ಟು ತೊಗರಿ ಖರೀದಿಸಿರುವುದು ಗೊತ್ತಾಗಿದೆ. ಇದಷ್ಟೇ ಅಲ್ಲ, ಕಡಲೆಕಾಳು ಖರೀದಿಯಲ್ಲಿಯೂ ರಾಜ್ಯ ಸರ್ಕಾರ ಹಿಂದೆ ಬಿದ್ದಿದೆ.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ತೊಗರಿ ಅಭಿವೃದ್ಧಿ ಮಂಡಳಿಗಳು ಜಿಲ್ಲೆಗಳಲ್ಲಿ ತೊಗರಿ ಖರೀದಿಸುತ್ತಿದ್ದರೂ 2020ರ ಮಾರ್ಚ್‌ 13ರವರೆಗೆ ಬೆಂಬಲ ಬೆಲೆ ಯೋಜನೆಯಡಿ 2,27,500 ಮೆಟ್ರಿಕ್‌ ಟನ್‌ ಪ್ರಮಾಣದಲ್ಲಿ ತೊಗರಿ ಖರೀದಿಸಿದೆ. ಅದೇ ರೀತಿ 2020ರ ಏಪ್ರಿಲ್‌ 30ರ ಅಂತ್ಯಕ್ಕೆ 6.87 ಲಕ್ಷ ಕ್ವಿಂಟಾಲ್‌ ಕಡಲೆಕಾಳು ಖರೀದಿಸಿದೆ.
2020ರ ಮಾರ್ಚ್‌ 12 ಮತ್ತು ಏಪ್ರಿಲ್‌ 21 ರಂದು 2 ಲಕ್ಷ ಮೆಟ್ರಿಕ್‌ ಟನ್‌ ಪ್ರಮಾಣದಲ್ಲಿ ತೊಗರಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಅಲ್ಲದೆ, ಏಪ್ರಿಲ್‌ 25ರಂದು ಪುನಃ 2.5 ಲಕ್ಷ ಮೆಟ್ರಿಕ್‌ ಟನ್‌ ತೊಗರಿ ಖರೀದಿಸಲು ಅನುಮತಿ ನೀಡಿತ್ತು ಎಂದು ಗೊತ್ತಾಗಿದೆ.
ಕೇಂದ್ರ ಸರ್ಕಾರದ ಅನುಮತಿಯಂತೆ ರಾಜ್ಯ ಸರ್ಕಾರ ಪ್ರತಿ ಎಕರೆಗೆ 7 ಕ್ವಿಂಟಾಲ್‌ ಹಾಗೂ ಪ್ರತಿ ರೈತರಿಂದ 20 ಕ್ವಿಂಟಾಲ್‌ ತೊಗರಿ ಖರೀದಿಸಲು 2020ರ ಏಪ್ರಿಲ್‌ 29 ಮತ್ತು 30ರಂದು ಆದೇಶ ನೀಡಿತ್ತು. ಇದರ ಜತೆಗೆ ಪ್ರತಿ ಎಕರೆಗೆ 5 ಕ್ವಿಂಟಾಲ್‌ ಮತ್ತು ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್‌ ಕಡಲೆಕಾಳು ಖರೀದಿಗೆ ಅನುಮತಿ ನೀಡಿದೆ ಎಂದು ತಿಳಿದು ಬಂದಿದೆ.

Hot this week

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

Topics

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

Related Articles

Popular Categories

error: Content is protected !!