Thursday | July 16, 2026 |

ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಮೇಲೆ ಮುಗಿಬಿದ್ದ ಸಂಘ ಪರಿವಾರ!

ಬೆಂಗಳೂರು; ಬೆಂಗಳೂರಿನ ಇಸ್ಲಾಮಿಕ್‌ ಮಿಷನ್‌ ಆಫ್‌ ಇಂಡಿಯಾ ಸೇರಿದಂತೆ ಮುಸ್ಲಿಂ ಸಮುದಾಯದ ಹಲವು ಶಿಕ್ಷಣ ಸಂಸ್ಥೆಗಳ ಮೇಲೆ ಸಂಘ ಪರಿವಾರದ ಹಿನ್ನೆಲೆ ಹೊಂದಿರುವ ವಿಧಾನಪರಿಷತ್‌ ಸದಸ್ಯರು ಮುಗಿ ಬೀಳಲಾರಂಭಿಸಿದ್ದಾರೆ.

ಬೆಂಗಳೂರು ನಗರ ಮತ್ತಿತರ ಭಾಗಗಳಲ್ಲಿ ಭೂಮಿ ಖರೀದಿಸಿ ತಾಂತ್ರಿಕ ಸೇರಿದಂತೆ ಉನ್ನತ ಶಿಕ್ಷಣ ನೀಡುತ್ತಿರುವ ಮುಸ್ಲಿಂ ಶಿಕ್ಷಣ ಸಂಸ್ಥೆಗಳು ಖರೀದಿಸಿರುವ ಭೂಮಿ ಈಗಾಗಲೇ ಒತ್ತುವರಿ ಆರೋಪದಿಂದ ಮುಕ್ತವಾಗಿದ್ದರೂ ಧಾರ್ಮಿಕ ಕಾರಣಕ್ಕೆ ಮರು ತನಿಖೆ ನಡೆಸಲು ಉನ್ನತ ಶಿಕ್ಷಣ ಇಲಾಖೆ ಮೇಲೆ ಒತ್ತಡ ಹೇರಲಾಗುತ್ತಿದೆ.

ಮುಸ್ಲಿಂ ಶಿಕ್ಷಣ ಸಂಸ್ಥೆಗಳ ವಶದಲ್ಲಿರುವ ಭೂಮಿಗೆ ಸಂಬಂಧಿಸಿದಂತೆ ಸ್ಥಳ ಮತ್ತು ದಾಖಲೆಗಳ ಪರಿಶೀಲನೆ ನಡೆಸಿದ್ದ ತನಿಖಾ ತಂಡಗಳು ಆ ಎಲ್ಲಾ ಆರೋಪಗಳನ್ನು ನಿರಾಕರಿಸಿವೆ. ಅಷ್ಟೇ ಅಲ್ಲ, ಭೂಮಿ ಒತ್ತುವರಿ ಮಾಡಿರುವ ಬಗ್ಗೆ ಯಾವ ಮಾಹಿತಿಯೂ ಇಲ್ಲ ಎಂದು ಸರ್ಕಾರಕ್ಕೆ ಹಲವು ವರ್ಷಗಳ ಹಿಂದೆಯೇ ವರದಿ ಸಲ್ಲಿಸಿವೆ.

ಬೆಂಗಳೂರಿನ ಇಸ್ಲಾಮಿಯಾ ಇನ್ಸಿಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಭೂ ಒತ್ತುವರಿ ಆರೋಪದಿಂದ 16 ವರ್ಷದ ಹಿಂದೆಯೇ ಮುಕ್ತವಾಗಿದ್ದರೂ ವಿಧಾನಪರಿಷತ್‌ ಸದಸ್ಯ ಎನ್‌ ರವಿಕುಮಾರ್‌ ಅದೇ ಪ್ರಕರಣವನ್ನು ಮತ್ತೊಮ್ಮೆ ಕೆದಕಿರುವುದು, ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಮೇಲೆ ಸಂಘ ಪರಿವಾರದ ಹಿನ್ನೆಲೆ ಹೊಂದಿರುವ ವಿಧಾನಪರಿಷತ್‌ ಸದಸ್ಯರು ಮುಗಿಬಿದ್ದಿದ್ದಾರೆ ಎಂಬುದಕ್ಕೆ ನಿದರ್ಶನ ಒದಗಿಸಿದಂತಾಗಿದೆ.

ವಿಧಾನಪರಿಷತ್‌ನಲ್ಲಿ 2020ರ ಮಾರ್ಚ್‌ 2ರಂದು ನಡೆದ ಅಧಿವೇಶನದಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ತಾಂತ್ರಿಕ ಶಿಕ್ಷಣ ಇಲಾಖೆ ಒದಗಿಸಿರುವ ಮಾಹಿತಿ ಆಧರಿಸಿ ಉತ್ತರಿಸಿರುವ ಉಪ ಮುಖ್ಯಮಂತ್ರಿ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌ ಅವರು ಇಸ್ಲಾಮಿಕ್‌ ಮಿಷನ್‌ ಆಫ್‌ ಇಂಡಿಯಾ ಯಾವುದೇ ಭೂಮಿ ಒತ್ತುವರಿ ಮಾಡಿಲ್ಲ ಎಂದು ಹೇಳಿದ್ದಾರಾದರೂ ಈ ಪ್ರಕರಣಕ್ಕೆ ಮರು ಜೀವ ಕೊಡುವ ಸುಳಿವನ್ನೂ ಅದೇ ಉತ್ತರದಲ್ಲಿ ನೀಡಿದ್ದಾರೆ.

ಈಗಾಗಲೇ ಮುಕ್ತಾಯಗೊಂಡಿರುವ ಈ ಪ್ರಕರಣವನ್ನು ‘ಈ ಸಂಸ್ಥೆಯು ಒತ್ತುವರಿ ಮಾಡಿರುವ ಜಾಗದಲ್ಲಿ ಕಾಲೇಜನ್ನು ಆರಂಭಿಸಿರುವ ಬಗ್ಗೆ ನಿಯಮಾನುಸಾರ ಸೂಕ್ತ ದಾಖಲೆಗಳೊಂದಿಗೆ ದೂರು ಸ್ವೀಕೃತವಾದಲ್ಲಿ ಸರ್ಕಾರವು ಅನುಮತಿ ಹಿಂಪಡೆಯಲು ಕ್ರಮ ವಹಿಸಲಾಗುವುದು,’ ಎಂದು ಡಾ ಸಿ ಅಶ್ವಥ್‌ನಾರಾಯಣ್‌ ಅವರು ನೀಡಿರುವ ಉತ್ತರ, ಮತ್ತೊಮ್ಮೆ ದೂರು ನೀಡಲು ಪ್ರೇರೇಪಿಸುವಂತಿದೆ.

ಪ್ರಕರಣದ ವಿವರ

ಬೆಂಗಳೂರಿನ ಇಸ್ಲಾಮಿಕ್‌ ಮಿಷನ್‌ ಆಫ್‌ ಇಂಡಿಯಾ 2004-05ರಲ್ಲಿ ಬೆಂಗಳೂರು ದಕ್ಷಿಣ ತಾಲೂಕಿನ ಬೇಗೂರು ಹೋಬಳಿ ಹುಳಿಮಾವು ಗ್ರಾಮದ ಸರ್ವೆ ನಂಬರ್‌ 63ರಲ್ಲಿನ 5 ಎಕರೆ ವಿಸ್ತೀರ್ಣದ ಜಾಗದಲ್ಲಿ ಆರಂಭಿಸಲು ಉದ್ದೇಶಿಸಿದ್ದ ಇಂಜಿನಿಯರಿಂಗ್‌ ಕಾಲೇಜಿಗೆ ಸಂಯೋಜನೆ ನೀಡುವ ಸಲುವಾಗಿ ಸ್ಥಳ ಪರಿಶೀಲನೆ ನಡೆಸಿದ್ದ ಪ್ರೊ. ಕೆ ಬಸವರಾಜು ನೇತೃತ್ವದ ತನಿಖಾ ತಂಡ, ಈ ಸಂಸ್ಥೆ ಯಾವುದೇ ಭೂ ಒತ್ತುವರಿ ಮಾಡಿರುವ ಮಾಹಿತಿ ಇರುವುದಿಲ್ಲ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ಇದಲ್ಲದೆ ಬೆಳಗಾವಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವೂ ಸ್ಥಳ ಮತ್ತು ದಾಖಲೆಗಳ ಪರಿಶೀಲನೆ ನಡೆಸಿತ್ತಲ್ಲದೆ, ಅದರಲ್ಲಿಯೂ ಭೂಮಿ ಒತ್ತುವರಿಯಾಗಿರುವ ಬಗ್ಗೆ ಯಾವುದೇ ಮಾಹಿತಿ ಇರುವುದಿಲ್ಲ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು ಎಂಬುದು ಅಶ್ವಥ್‌ನಾರಾಯಣ್‌ ಅವರು ನೀಡಿರುವ ಉತ್ತರದಿಂದ ತಿಳಿದು ಬಂದಿದೆ.

ಭೂ ಒತ್ತುವರಿ ಕುರಿತು ತನಿಖಾ ತಂಡ ಸ್ಪಷ್ಟವಾಗಿ 16 ವರ್ಷಗಳ ಹಿಂದೆಯೇ ವರದಿ ಸಲ್ಲಿಸಿದ್ದರೂ ವಿಧಾನಪರಿಷತ್‌ ಸದಸ್ಯ ಎನ್‌ ರವಿಕುಮಾರ್‌ ಅವರು ‘ಸುಳ್ಳು ದಾಖಲೆ ಹಾಗೂ ತಪ್ಪು ಮಾಹಿತಿ ನೀಡಿ ಪ್ರಾರಂಭಿಸಲಾದ ಕಾಲೇಜಿನ ಅನುಮತಿ ಹಿಂಪಡೆಯಲು ಸರ್ಕಾರ ಯಾವ ಕ್ರಮ ಕೈಗೊಂಡಿದೆ,’ ಎಂದು ಪ್ರಶ್ನಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

Hot this week

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!