Thursday | June 11, 2026 |

ಸಿಗರೇಟು ವಿತರಕರಿಂದ ಲಂಚ; ಮೂವರು ಅಧಿಕಾರಿಗಳು ನಾಪತ್ತೆ?

ಬೆಂಗಳೂರು; ಸಿಗರೇಟ್‌ ವಿತರಕರು ಹಾಗೂ ನಕಲಿ ಮಾಸ್ಕ್‌ ತಯಾರಿಕಾ ಕಂಪನಿಗಳಿಂದ ಲಂಚ ಪಡೆದ ಆರೋಪಕ್ಕೆ ಗುರಿಯಾಗಿರುವ ಸಿಸಿಬಿ ಎಸಿಪಿ ಪ್ರಭುಶಂಕರ್‌, ಇನ್‌ಸ್ಪೆಕ್ಟರ್‌ ಅಜಯ್‌ ಹಾಗೂ ನಿರಂಜನಕುಮಾರ್‌ ಅವರು ತಲೆಮರೆಸಿಕೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟೀಸ್‌ ಜಾರಿ ಮಾಡಿದೆ.

ಆರೋಪಿತ ಅಧಿಕಾರಿಗಳ ಕುಟುಂಬ ಸದಸ್ಯರು ನೋಟೀಸ್‌ ಸ್ವೀಕರಿಸಿದ್ದಾರೆ. ಮೂವರು ಅಧಿಕಾರಿಗಳ ಮನೆ ಮೇಲೆ ಕಳೆದ ದಾಳಿ ನಡೆಸಿದ್ದ ಎಸಿಬಿ, ಕಳೆದ ಗುರುವಾರ ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆ (ಪಿ.ಸಿ. ಆ್ಯಕ್ಟ್‌) ಅಡಿ ಸೆಕ್ಷನ್‌ 17(ಎ) ಅನ್ವಯ ಸಕ್ಷಮ ಪ್ರಾಧಿಕಾರದ ಒಪ್ಪಿಗೆ ಪಡೆದು ಎಫ್‌ಐಆರ್‌ ದಾಖಲಿಸಿತ್ತು. ಈ ಪ್ರಕರಣದ ತನಿಖೆ ನಡೆಸುವಂತೆ ಡಿಜಿ ಮತ್ತು ಐಜಿ ಪ್ರವೀಣ್‌ ಸೂದ್‌ ಎಸಿಬಿಗೆ ಆದೇಶ ನೀಡಿದ್ದರು. ಅದರಂತೆ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆದು ಎಸಿಬಿ ತನಿಖೆ ಕೈಗೊಂಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್‌ಪೇಟೆಯಲ್ಲಿ ಮೂವರು ಅಧಿಕಾರಿಗಳ ವಿರುದ್ಧ ಸುಲಿಗೆ ಪ್ರಕರಣವೂ ದಾಖಲಾಗಿದೆ. ಎಸಿಪಿ ಪ್ರಭುಶಂಕರ್‌ ಅವರಿಗೆ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ದೊರೆತಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ದಾಖಲಿಸಿರುವ ಪ್ರಕರಣದಲ್ಲೂ ಆರೋಪಿ ಅಧಿಕಾರಿಗಳು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ಇನ್ನಷ್ಟೇ ನಡೆಯಬೇಕಿದೆ.

ಕೋವಿಡ್‌-19ರ ಹಿನ್ನೆಲೆಯಲ್ಲಿ ಜಾರಿಗೊಂಡಿದ್ದ ಲಾಕ್‌ ಡೌನ್‌ ವೇಳೆ ಸಿಗರೇಟ್‌ ಮತ್ತು ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಆದರೆ ಸಿಗರೇಟ್‌ ವಿತರಕರಿಂದ ಲಂಚ ಪಡೆದ ಮೂವರು ಅಧಿಕಾರಿಗಳು ದುಬಾರಿ ಬೆಲೆಗೆ ಸಿಗರೇಟು ಮಾರಾಟ ಮಾಡಲು ಅನುವು ಮಾಡಿಕೊಟ್ಟ ಆರೋಪ ಎದುರಿಸುತ್ತಿದ್ದಾರೆ.

ಕೆ ಆರ್‌ ಪುರಂನ ಎಂ ಡಿ ಆ್ಯಂಡ್‌ ಸನ್ಸ್‌ ಸೇರಿದಂತೆ ಕೆಲವು ಸಿಗರೇಟು ವಿತರಕರಿಂದ 70 ಲಕ್ಷ ರು. ಲಂಚ ಪಡೆದಿದ್ದಾರೆ ಎಂದು ಡಿಸಿಪಿ ರವಿಕುಮಾರ್‌ ನಡೆಸಿದ ವಿಚಾರಣೆಯಿಂದ ಬಹಿರಂಗಗೊಂಡಿತ್ತು. ಇದಲ್ಲದೆ ಹನುಮಂತನಗರದ ಮಹಾವೀರ್‌ ಟ್ರೇಡರ್ಸ್‌ನ ಸಿಗರೇಟು ವಿತರಕರಿಂದ 15 ಲಕ್ಷ ರು.ಗಳನ್ನು ಪ್ರತ್ಯೇಕವಾಗಿ ಲಂಚದ ರೂಪದಲ್ಲಿ ಪಡೆಯಲಾಗಿತ್ತು.

ಈ ಪ್ರಕರಣದಲ್ಲಿ ಭೂಷಣ್‌, ಬಾಬುರಾಜೇಂದ್ರಪ್ರಸಾದ್‌ ಎಂಬುವರು ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸಿದ್ದರು. ವಿಚಾರಣೆ ವೇಳೆ ತಮ್ಮ ಮೂಲಕ ಹಣದ ವಹಿವಾಟು ನಡೆದಿದ್ದಾಗಿ ಅವರು ಒಪ್ಪಿಕೊಂಡಿದ್ದರು.

ಇದಲ್ಲದೆ ಎಚ್‌ಆರ್‌ಬಿಆರ್‌ ಲೇ ಔಟ್‌ನ ಕಲ್ಯಾಣ ನಗರದಲ್ಲಿ ಎನ್‌ 95 ನಕಲಿ ಮಾಸ್ಕ್‌ ತಯಾರಿಸಿ ಸಿಕ್ಕಿಬಿದ್ದಿದ್ದ ಉದ್ಯಮಿಯೊಬ್ಬರಿಗೆ ರಕ್ಷಣೆ ನೀಡಲು ಸಿಸಿಬಿ ಅಧಿಕಾರಿಗಳು 15 ಲಕ್ಷ ರು. ಲಂಚ ಪಡೆದಿದ್ದರು. ಈ ಪ್ರಕರಣ ಕುರಿತು ಸಿಸಿಬಿ ಡಿಸಿಪಿ ಕುಲದೀಪ್‌ಕುಮಾರ್‌ ಜೈನ್‌ ವಿಚಾರಣೆ ನಡೆಸಿದ್ದರು.

ಈ ವಿಚಾರಣೆ ಬಳಿಕ ಪ್ರಭುಶಂಕರ್‌, ಅಜಯ್‌ ಮತ್ತು ನಿರಂಜನ್‌ ಅವರನ್ನು ಅಮಾನತುಪಡಿಸಲಾಗಿತ್ತು. ಬಳಿಕ ಈ ಐವರ ಮನೆಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ದಾಳಿ ಮಾಡಿದ್ದರು. ವಿತರಕರು ಹಾಗೂ ಸಿಸಿಬಿ ಅಧಿಕಾರಿಗಳ ನಡುವೆ ಮಧ್ಯವರ್ತಿಗಳಾಗಿ ಕೆಲಸ ಮಾಡಿದ್ದರು ಎನ್ನಲಾಗಿರುವ ಭೂಷಣ್‌ ಮತ್ತು ಯಲಹಂಕದ ಬಾಬು ಎಂಬುವರ ಮನೆಗಳ ಮೇಲೂ ದಾಳಿ ಮಾಡಿ, ಶೋಧ ನಡೆಸಲಾಗಿತ್ತು.

Hot this week

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

Related Articles

Popular Categories

error: Content is protected !!