Thursday | April 16, 2026 |

ಸಿಗರೇಟು ವಿತರಕರಿಂದ ಲಂಚ; ಮೂವರು ಅಧಿಕಾರಿಗಳು ನಾಪತ್ತೆ?

ಬೆಂಗಳೂರು; ಸಿಗರೇಟ್‌ ವಿತರಕರು ಹಾಗೂ ನಕಲಿ ಮಾಸ್ಕ್‌ ತಯಾರಿಕಾ ಕಂಪನಿಗಳಿಂದ ಲಂಚ ಪಡೆದ ಆರೋಪಕ್ಕೆ ಗುರಿಯಾಗಿರುವ ಸಿಸಿಬಿ ಎಸಿಪಿ ಪ್ರಭುಶಂಕರ್‌, ಇನ್‌ಸ್ಪೆಕ್ಟರ್‌ ಅಜಯ್‌ ಹಾಗೂ ನಿರಂಜನಕುಮಾರ್‌ ಅವರು ತಲೆಮರೆಸಿಕೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟೀಸ್‌ ಜಾರಿ ಮಾಡಿದೆ.

ಆರೋಪಿತ ಅಧಿಕಾರಿಗಳ ಕುಟುಂಬ ಸದಸ್ಯರು ನೋಟೀಸ್‌ ಸ್ವೀಕರಿಸಿದ್ದಾರೆ. ಮೂವರು ಅಧಿಕಾರಿಗಳ ಮನೆ ಮೇಲೆ ಕಳೆದ ದಾಳಿ ನಡೆಸಿದ್ದ ಎಸಿಬಿ, ಕಳೆದ ಗುರುವಾರ ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆ (ಪಿ.ಸಿ. ಆ್ಯಕ್ಟ್‌) ಅಡಿ ಸೆಕ್ಷನ್‌ 17(ಎ) ಅನ್ವಯ ಸಕ್ಷಮ ಪ್ರಾಧಿಕಾರದ ಒಪ್ಪಿಗೆ ಪಡೆದು ಎಫ್‌ಐಆರ್‌ ದಾಖಲಿಸಿತ್ತು. ಈ ಪ್ರಕರಣದ ತನಿಖೆ ನಡೆಸುವಂತೆ ಡಿಜಿ ಮತ್ತು ಐಜಿ ಪ್ರವೀಣ್‌ ಸೂದ್‌ ಎಸಿಬಿಗೆ ಆದೇಶ ನೀಡಿದ್ದರು. ಅದರಂತೆ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆದು ಎಸಿಬಿ ತನಿಖೆ ಕೈಗೊಂಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್‌ಪೇಟೆಯಲ್ಲಿ ಮೂವರು ಅಧಿಕಾರಿಗಳ ವಿರುದ್ಧ ಸುಲಿಗೆ ಪ್ರಕರಣವೂ ದಾಖಲಾಗಿದೆ. ಎಸಿಪಿ ಪ್ರಭುಶಂಕರ್‌ ಅವರಿಗೆ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ದೊರೆತಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ದಾಖಲಿಸಿರುವ ಪ್ರಕರಣದಲ್ಲೂ ಆರೋಪಿ ಅಧಿಕಾರಿಗಳು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ಇನ್ನಷ್ಟೇ ನಡೆಯಬೇಕಿದೆ.

ಕೋವಿಡ್‌-19ರ ಹಿನ್ನೆಲೆಯಲ್ಲಿ ಜಾರಿಗೊಂಡಿದ್ದ ಲಾಕ್‌ ಡೌನ್‌ ವೇಳೆ ಸಿಗರೇಟ್‌ ಮತ್ತು ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಆದರೆ ಸಿಗರೇಟ್‌ ವಿತರಕರಿಂದ ಲಂಚ ಪಡೆದ ಮೂವರು ಅಧಿಕಾರಿಗಳು ದುಬಾರಿ ಬೆಲೆಗೆ ಸಿಗರೇಟು ಮಾರಾಟ ಮಾಡಲು ಅನುವು ಮಾಡಿಕೊಟ್ಟ ಆರೋಪ ಎದುರಿಸುತ್ತಿದ್ದಾರೆ.

ಕೆ ಆರ್‌ ಪುರಂನ ಎಂ ಡಿ ಆ್ಯಂಡ್‌ ಸನ್ಸ್‌ ಸೇರಿದಂತೆ ಕೆಲವು ಸಿಗರೇಟು ವಿತರಕರಿಂದ 70 ಲಕ್ಷ ರು. ಲಂಚ ಪಡೆದಿದ್ದಾರೆ ಎಂದು ಡಿಸಿಪಿ ರವಿಕುಮಾರ್‌ ನಡೆಸಿದ ವಿಚಾರಣೆಯಿಂದ ಬಹಿರಂಗಗೊಂಡಿತ್ತು. ಇದಲ್ಲದೆ ಹನುಮಂತನಗರದ ಮಹಾವೀರ್‌ ಟ್ರೇಡರ್ಸ್‌ನ ಸಿಗರೇಟು ವಿತರಕರಿಂದ 15 ಲಕ್ಷ ರು.ಗಳನ್ನು ಪ್ರತ್ಯೇಕವಾಗಿ ಲಂಚದ ರೂಪದಲ್ಲಿ ಪಡೆಯಲಾಗಿತ್ತು.

ಈ ಪ್ರಕರಣದಲ್ಲಿ ಭೂಷಣ್‌, ಬಾಬುರಾಜೇಂದ್ರಪ್ರಸಾದ್‌ ಎಂಬುವರು ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸಿದ್ದರು. ವಿಚಾರಣೆ ವೇಳೆ ತಮ್ಮ ಮೂಲಕ ಹಣದ ವಹಿವಾಟು ನಡೆದಿದ್ದಾಗಿ ಅವರು ಒಪ್ಪಿಕೊಂಡಿದ್ದರು.

ಇದಲ್ಲದೆ ಎಚ್‌ಆರ್‌ಬಿಆರ್‌ ಲೇ ಔಟ್‌ನ ಕಲ್ಯಾಣ ನಗರದಲ್ಲಿ ಎನ್‌ 95 ನಕಲಿ ಮಾಸ್ಕ್‌ ತಯಾರಿಸಿ ಸಿಕ್ಕಿಬಿದ್ದಿದ್ದ ಉದ್ಯಮಿಯೊಬ್ಬರಿಗೆ ರಕ್ಷಣೆ ನೀಡಲು ಸಿಸಿಬಿ ಅಧಿಕಾರಿಗಳು 15 ಲಕ್ಷ ರು. ಲಂಚ ಪಡೆದಿದ್ದರು. ಈ ಪ್ರಕರಣ ಕುರಿತು ಸಿಸಿಬಿ ಡಿಸಿಪಿ ಕುಲದೀಪ್‌ಕುಮಾರ್‌ ಜೈನ್‌ ವಿಚಾರಣೆ ನಡೆಸಿದ್ದರು.

ಈ ವಿಚಾರಣೆ ಬಳಿಕ ಪ್ರಭುಶಂಕರ್‌, ಅಜಯ್‌ ಮತ್ತು ನಿರಂಜನ್‌ ಅವರನ್ನು ಅಮಾನತುಪಡಿಸಲಾಗಿತ್ತು. ಬಳಿಕ ಈ ಐವರ ಮನೆಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ದಾಳಿ ಮಾಡಿದ್ದರು. ವಿತರಕರು ಹಾಗೂ ಸಿಸಿಬಿ ಅಧಿಕಾರಿಗಳ ನಡುವೆ ಮಧ್ಯವರ್ತಿಗಳಾಗಿ ಕೆಲಸ ಮಾಡಿದ್ದರು ಎನ್ನಲಾಗಿರುವ ಭೂಷಣ್‌ ಮತ್ತು ಯಲಹಂಕದ ಬಾಬು ಎಂಬುವರ ಮನೆಗಳ ಮೇಲೂ ದಾಳಿ ಮಾಡಿ, ಶೋಧ ನಡೆಸಲಾಗಿತ್ತು.

Hot this week

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

Topics

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

Related Articles

Popular Categories

error: Content is protected !!