Tuesday | July 28, 2026 |

ಕೆಎಸ್‌ಆರ್‌ಪಿಯಲ್ಲಿ 1.25 ಕೋಟಿ ರು.ದುರುಪಯೋಗ; ವಿಶೇಷ ಲೆಕ್ಕ ಪರಿಶೋಧನೆಯಿಂದ ಸಾಬೀತು

ಬೆಂಗಳೂರು; ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಪೇದೆಗಳ ವೇತನ ಮತ್ತು ಭತ್ಯೆಗೆಂದು ಹಂಚಿಕೆಯಾಗಿದ್ದ ಕೋಟಿ ರು.ಅಧಿಕ ಮೊತ್ತ ದುರುಪಯೋಗ ಆಗಿರುವ ಪ್ರಕರಣ ಇದೀಗ ಹೊರಬಿದ್ದಿದೆ. ಕೆಎಸ್‌ಆರ್‌ಪಿಯ ಹಾಸನದ 11ನೇ ಪಡೆಯಲ್ಲಿ ಹಣ ದುರುಪಯೋಗವಾಗಿರುವುದನ್ನು ವಿಶೇಷ ಲೆಕ್ಕ ಪರಿಶೋಧನೆ ವರದಿ ದೃಢಪಡಿಸಿದೆ.

ಈ ವರದಿ ಆಧರಿಸಿ ಕೆಎಸ್‌ಆರ್‌ಪಿ ಎಡಿಜಿಪಿ ಕಚೇರಿಯ ಸಹಾಯಕ ಆಡಳಿತಾಧಿಕಾರಿ ಸುಮಾ ಜೆ ಆರ್‌ ಅವರು ಹಾಸನದ ಶಾಂತಿಗ್ರಾಮ ಪೊಲೀಸ್‌ ಠಾಣೆಯಲ್ಲಿ 2020ರ ಮೇ 21ರಂದು ದೂರು ದಾಖಲಿಸಿದ್ದಾರೆ. ಈ ದೂರಿನ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.
ಹಾಸನದ 11ನೇ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಮಾಡೆಂಟ್‌ ಕೃಷ್ಫಪ್ಪ, ನಿವೃತ್ತ ಸಹಾಯಕ ಆಡಳಿತಾಧಿಕಾರಿ ಮಾದೇಗೌಡ, ದ್ವಿತೀಯ ದರ್ಜೆ ಸಹಾಯಕ ವೈ ಕೆ ಯೋಗೇಶ, ಲತಾಮಣಿ, ವೈಎಚ್‌ ಮನು, ಸತ್ಯಪ್ರಕಾಶ್‌ ಅವರ ವಿರುದ್ಧ ಐಪಿಸಿ 403, 406,409, 465, 468 ಅನ್ವಯ ಮೊಕದ್ದಮೆ ದಾಖಲಾಗಿರುವುದು ತಿಳಿದು ಬಂದಿದೆ.

ಪ್ರಕರಣ ವಿವರ

ಕೆಎಸ್‌ಆರ್‌ಪಿಯ ಹಾಸನದ 11ನೇ ಘಟಕದ ವೇತನ ಶಾಖೆಯಲ್ಲಿ 2015ರ ಜನವರಿ 1ರಿಂದ 2016ರವರೆಗಿನ ಅವಧಿಯಲ್ಲಿ ಕಮಾಡೆಂಟ್‌, ವಿಷಯ ನಿರ್ವಾಹಕರು ಸೇರಿದಂತೆ ಆಡಳಿತ ಕಚೇರಿಯ ಸಿಬ್ಬಂದಿ 1.25 ಕೋಟಿ ರು. ಗಳನ್ನು ದುರುಪಯೋಗಪಡಿಸಿಕೊಂಡು ಮೋಸ ಮಾಡಿರುವ ಪ್ರಕರಣ ಇದಾಗಿದೆ.

ಈ ಹಣ ಕರ್ನಾಟಕ ರಾಜ್ಯ ಮೀಸಲು ಪಡೆಯ ಪೇದೆ ಮತ್ತು ಸಿಬ್ಬಂದಿಯ ವೇತನ ಹಾಗೂ ಭತ್ಯೆಗಳಿಗೆ ಸಂಬಂಧಿಸಿತ್ತು ಎಂಬ ವಿಚಾರ ಗೊತ್ತಾಗಿದೆ. ವೇತನ ಮತ್ತು ಭತ್ಯೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಹಂಚಿಕೆಯಾಗಿದ್ದ ಅನುದಾನ ಬಳಕೆ ಕುರಿತು 2020ರ ಮಾರ್ಚ್‌ 2ರಿಂದ 31ರವರೆಗೆ ವಿಶೇಷ ಲೆಕ್ಕ ಪರಿಶೋಧನೆ ನಡೆಸಲಾಗಿತ್ತು.

ವೇತನ ಮತ್ತು ಭತ್ಯೆ ನಿಧಿಗೆ ಕನ್ನ ಹಾಕಿದ್ದ ಕಮಾಡೆಂಟ್‌ ಕೃಷ್ಣಪ್ಪ ಸೇರಿದಂತೆ ಇನ್ನಿತರೆ ಸಿಬ್ಬಂದಿ ಕೈ ಚಳಕ ವಿಶೇಷ ಲೆಕ್ಕಪರಿಶೋಧಕರ ತನಿಖೆಯಿಂದ ಬೆಳಕಿಗೆ ಬಂದಿತ್ತು. ಗಣಕ ಯಂತ್ರಗಳ ನಿರ್ವಾಹಕ (ಸಿಸ್ಟಂ ಅನಾಲಿಸ್ಟ್‌) ವೈ ಎಚ್‌ ಮನು ಎಂಬುವರ ಕೈ ಚಳಕವನ್ನೂ ವಿಶೇಷ ಲೆಕ್ಕಪರಿಶೋಧಕರು ಬಹಿರಂಗಗೊಳಿಸಿದ್ದಾರೆ.

Hot this week

ಪ್ರವಾಸೋದ್ಯಮ ಆದಾಯ; ಲಕ್ಷಾಂತರ ರುಪಾಯಿ ಜಿಎಸ್‌ಟಿ ಕಟಾಯಿಸದ ಭದ್ರಾ ಹುಲಿ ಸಂರಕ್ಷಣಾ ಪ್ರತಿಷ್ಠಾನ, ಸಾರ್ವಜನಿಕವಾಗಿ ನಿಧಿ ಬಹಿರಂಗವಾಗಿಲ್ಲವೇಕೆ?

ಬೆಂಗಳೂರು; ಭದ್ರಾ ಹುಲಿ ಸಂರಕ್ಷಣಾ ಪ್ರತಿಷ್ಠಾನ ನಿಧಿಗೆ 2018-19ನೇ ಸಾಲಿನಲ್ಲಿ ಪ್ರವಾಸೋದ್ಯಮದಿಂದ...

ತಮಿಳುನಾಡಿಗೆ ಕಾವೇರಿ; ನಿಗದಿಗಿಂತ ಅರ್ಧ ಟಿಎಂಸಿ ಹೆಚ್ಚು ನೀರು ಹರಿಸಿದ ಕರ್ನಾಟಕ , ಸಂಸತ್‌ನಲ್ಲಿ ಕೇಂದ್ರದ ಮಾಹಿತಿ

ಬೆಂಗಳೂರು;   ಕಾವೇರಿ ನದಿ ನೀರು ಹಂಚಿಕೆ ಮತ್ತು ಬಿಡುಗಡೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಎನ್‌ಇಪಿ ಅಭ್ಯರ್ಥಿಗಳಿಗೆ ಆಘಾತ, ಉರ್ದು, ಚಿತ್ರಕಲಾ ಶಿಕ್ಷಕರ ಹುದ್ದೆ ಕೈಬಿಟ್ಟಿತೇಕೆ?; ಕರಡು ನಿಯಮಗಳಿಗೆ ಆಕ್ಷೇಪಣೆಗಳ ಸುರಿಮಳೆ

ಬೆಂಗಳೂರು; ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ...
Please Scan to make Your Contribution

Topics

ತಮಿಳುನಾಡಿಗೆ ಕಾವೇರಿ; ನಿಗದಿಗಿಂತ ಅರ್ಧ ಟಿಎಂಸಿ ಹೆಚ್ಚು ನೀರು ಹರಿಸಿದ ಕರ್ನಾಟಕ , ಸಂಸತ್‌ನಲ್ಲಿ ಕೇಂದ್ರದ ಮಾಹಿತಿ

ಬೆಂಗಳೂರು;   ಕಾವೇರಿ ನದಿ ನೀರು ಹಂಚಿಕೆ ಮತ್ತು ಬಿಡುಗಡೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಎನ್‌ಇಪಿ ಅಭ್ಯರ್ಥಿಗಳಿಗೆ ಆಘಾತ, ಉರ್ದು, ಚಿತ್ರಕಲಾ ಶಿಕ್ಷಕರ ಹುದ್ದೆ ಕೈಬಿಟ್ಟಿತೇಕೆ?; ಕರಡು ನಿಯಮಗಳಿಗೆ ಆಕ್ಷೇಪಣೆಗಳ ಸುರಿಮಳೆ

ಬೆಂಗಳೂರು; ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ...

15ನೇ ಹಣಕಾಸು ಆಯೋಗ; ಗುಜರಾತ್‌ಗೆ ಅತೀ ಕಡಿಮೆ, ಕರ್ನಾಟಕಕ್ಕೆ ಅತೀ ಹೆಚ್ಚು ಮೊತ್ತ ಬಿಡುಗಡೆಗೆ ಬಾಕಿ

ಬೆಂಗಳೂರು; ಕರ್ನಾಟಕ ರಾಜ್ಯವೂ ಸೇರಿದಂತೆ ದೇಶದ 28 ರಾಜ್ಯಗಳಲ್ಲಿರುವ ಗ್ರಾಮ ಪಂಚಾಯ್ತಿಗಳಿಗೆ...

ಪೋಕ್ಸೋ; ಕರ್ನಾಟಕದಲ್ಲಿ 21,436 ಪ್ರಕರಣಗಳು ವಿಚಾರಣೆಗೆ ಬಾಕಿ, ದೇಶದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಶೇ.48ರಷ್ಟು ಹೆಚ್ಚಳ

ಬೆಂಗಳೂರು:  ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ...

Related Articles

Popular Categories

error: Content is protected !!