Thursday | June 11, 2026 |

ಆಟೋ ಚಾಲಕರಿಗೆ ಪರಿಹಾರ; 387 ಕೋಟಿಯಲ್ಲಿ ಬಿಡುಗಡೆಯಾಗಿದ್ದು 60 ಕೋಟಿಯಷ್ಟೇ

ಬೆಂಗಳೂರು; ಲಾಕ್ ಡೌನ್ ಹಿನ್ನಲೆಯಲ್ಲಿ ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿದ್ದ ಆಟೋ ಚಾಲಕರಿಗೆ ಪರಿಹಾರ ಮೊತ್ತ ಘೋಷಣೆ ಮಾಡಿ 2 ತಿಂಗಳು ಕಳೆದಿದ್ದರೂ ಬಹುತೇಕ ಆಟೋ ಚಾಲಕರಿಗೆ ಪರಿಹಾರದ ಹಣ ದೊರೆತಿಲ್ಲ.

ಆಟೋ ಚಾಲಕರಿಗೆ ತಲಾ ತಲಾ 5,000 ರು.ನಂತೆ ಧನ ಸಹಾಯ ನೀಡುವ ಉದ್ದೇಶಕ್ಕೆ 387.50 ಕೋಟಿ ರು.ಅನುದಾನ ಒದಗಿಸಲು ಆರ್ಥಿಕ ಇಲಾಖೆ ಸಹಮತಿ ನೀಡಿದೆ. ಈ ಪೈಕಿ 2020ರ ಜೂನ್‌ 25ರ ಅಂತ್ಯಕ್ಕೆ ಕೇವಲ 60.00 ಕೋಟಿ ರು. ಮಾತ್ರ ಬಿಡುಗಡೆ ಮಾಡಿದೆ. ಇದರಲ್ಲಿ ಎಷ್ಟು ಮಂದಿ ಆಟೋ ಚಾಲಕರಿಗೆ ಪರಿಹಾರ ಧನ ದೊರೆತಿದೆ ಎಂಬ ಬಗ್ಗೆ ಸಾರಿಗೆ ಇಲಾಖೆ ಮಾಹಿತಿ ಒದಗಿಸಿಲ್ಲ.

ಲಾಕ್‌ಡೌನ್‌ ಪರಿಣಾಮದಿಂದ ಸಂಕಷ್ಟ ಅನುಭವಿಸುತ್ತಿರುವ ಆಟೋ ಚಾಲಕರಿಗೆ ಮತ್ತು ಕೆಎಸ್‌ಆರ್‌ಟಿಸಿ ಸೇರಿದಂತೆ 4 ಸಾರಿಗೆ ಸಂಸ್ಥೆಗಳ ಅಧಿಕಾರಿ, ಸಿಬ್ಬಂದಿಗೆ ಎಷ್ಟು ಪ್ರಮಾಣದಲ್ಲಿ ಪರಿಹಾರ ಧನ ವಿತರಿಸಲಾಗಿದೆ ಎಂದು ಆರ್ಥಿಕ ಇಲಾಖೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅಪೂರ್ಣ ಮಾಹಿತಿ ಒದಗಿಸಿದೆ. ಇದರ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಆಟೋ ಚಾಲಕರಿಗೆ ಮತ್ತು ಸಾರಿಗೆ ಸಂಸ್ಥೆಯ ಅಧಿಕಾರಿ, ಸಿಬ್ಬಂದಿಯ ಪರಿಹಾರ ಧನಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರಿಗೆ ಆರ್ಥಿಕ ಇಲಾಖೆ ಮಾಹಿತಿ ಒದಗಿಸಿದೆಯಾದರೂ ಖರ್ಚು ಮಾಡಿರುವ ಬಗ್ಗೆ ಸಾರಿಗೆ ಮತ್ತು ಒಳಾಡಳಿತ ಇಲಾಖೆ ಈವರೆವಿಗೂ ಒಂದೇ ಒಂದು ಮಾಹಿತಿಯನ್ನು ನೀಡಿಲ್ಲ ಎಂದು ಗೊತ್ತಾಗಿದೆ.

ಪರಿಹಾರ ಪಡೆಯಲು ಸರ್ಕಾರದ ಸೇವಾ ಸಿಂಧು ಆ್ಯಪ್ ಮೂಲಕ ಆಟೋ ಹಾಗೂ ಕ್ಯಾಬ್ ಚಾಲಕರು ಅರ್ಜಿ ಸಲ್ಲಿಸಿದ್ದಾರಾದರೂ ವಾಸ್ತವದಲ್ಲಿ ಸೇವಾ ಸಿಂಧು ಆ್ಯಪ್ ನಲ್ಲಿನ ಅರ್ಜಿಗಳ ಪರಿಶೀಲನೆಗೆ ಅನುಕೂಲವಾಗುವಂತಹ ಸಾಫ್ಟ್‌ವೇರ್‌ ಅಭಿವೃದ್ಧಿಪಡಿಸಿಲ್ಲ ಎನ್ನಲಾಗಿದೆ. ಹೀಗಾಗಿ ಆಟೋ ಚಾಲಕರಿಗೆ ಪರಿಹಾರ ಧನ ವಿತರಣೆಯಲ್ಲಿ ವಿಳಂಬವಾಗಿದೆ ಎಂದು ತಿಳಿದು ಬಂದಿದೆ.

ನೇರ ನಗದು ಮೂಲಕ ನೆರವು ವರ್ಗಾವಣೆಯನ್ನು ಖಚಿತಪಡಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್ ಮತ್ತು ಸಾರಿಗೆ ಮತ್ತು ಹಣಕಾಸು ಇಲಾಖೆಗಳ ನಡುವೆ ದತ್ತಾಂಶವೂ ಪರಿಣಾಮಕಾರಿಯಾಗಿ ಸಂಯೋಜಿತಗೊಂಡಿಲ್ಲ.ತಾಂತ್ರಿಕ ಅಡಚಣೆಗಳನ್ನು ಮುಂದಿಟ್ಟುಕೊಂಡು ಸಾರಿಗೆ ಇಲಾಖೆ ಪರಿಹಾರ ಧನ ವಿತರಣೆಯಲ್ಲಿ ಮಾಡಿರುವ ವಿಳಂಬಕ್ಕೆ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಆಟೋ ಮತ್ತು ಕ್ಯಾಬ್ ಚಾಲಕರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಈಗಲೂ ಒದ್ದಾಡುತ್ತಿದ್ದಾರೆ. ಲಭ್ಯವಿರುವ ಮಾಹಿತಿಯಂತೆ 1.30 ಲಕ್ಷ ಅರ್ಜಿಗಳಷ್ಟೇ ಇಲಾಖೆಗೆ ಸ್ವೀಕೃತವಾಗಿದೆ. ಆದರೆ ರಾಜ್ಯದಲ್ಲಿ ಅಂದಾಜು 7.75 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಆಟೋ ಮತ್ತು ಕ್ಯಾಬ್ ಚಾಲಕರಿದ್ದಾರೆ.

ಚಾಸಿ ನಂಬರ್ ಮತ್ತು ಇತರೆ ವಿವರಗಳನ್ನು ಆನ್‌ಲೈನ್‌ ಮೂಲಕ ಒದಗಿಸಿದರೂ ತಂತ್ರಾಂಶ ಸ್ವೀಕರಿಸುತ್ತಿಲ್ಲ.ಹಲವು ಸಂದರ್ಭಗಳಲ್ಲಿ, ತಾಂತ್ರಿಕ ತೊಂದರೆಗಳಿಂದಾಗಿ ಚಾಲಕರ ಚಾಲನಾ ಪರವಾನಗಿ ಮತ್ತು ಆಧಾರ್‌ ಸಂಖ್ಯೆಯೂ ಸ್ವೀಕೃತಗೊಳ್ಳುತ್ತಿಲ್ಲ ಎನ್ನಲಾಗಿದೆ.

ಬಹುತೇಕ ಆಟೋ ಅಥವಾ ಟ್ಯಾಕ್ಸಿಗಳು ಚಾಲಕರ ಹೆಸರಿನಲ್ಲಿಲ್ಲ. ವಾಹನಕ್ಕೆ ಸಂಬಂಧಿಸಿದ ಬಹುತೇಕ ದಾಖಲೆಗಳು ಮಾಲೀಕರ ಬಳಿ ಇರುತ್ತವೆ. ಆದರೆ ಅರ್ಜಿಯಲ್ಲಿ ಸಮಸ್ತ ದಾಖಲೆಗಳನ್ನು ಲಗತ್ತಿಸಬೇಕು. ಡ್ರೈವಿಂಗ್ ಲೈಸೆನ್ಸ್‌ ಹಾಗೂ ಆಧಾರ್‌ ಕಾರ್ಡ್‌ನಲ್ಲಿ ಹೆಸರು ತಪ್ಪಾಗಿ ಉಲ್ಲೇಖವಾದರೂ ಅರ್ಜಿ ಸ್ವೀಕೃತವಾಗುವುದಿಲ್ಲ ಎಂದು ಬಹುತೇಕ ಆಟೋ ಚಾಲಕರು ಆರೋಪಿಸುತ್ತಾರೆ.

ಕೆಎಸ್‌ಆರ್‌ಟಿಸಿ, ಈಶಾನ್ಯ, ವಾಯುವ್ಯ ಸಾರಿಗೆ ಸಂಸ್ಥೆ ಮತ್ತು ಬಿಎಂಟಿಸಿಯ ಅಧಿಕಾರಿ, ಸಿಬ್ಬಂದಿಗೆ 2020ರ ಏಪ್ರಿಲ್‌ ಮತ್ತು ಮೇ ತಿಂಗಳ ವೇತನ ಭರಿಸಲು ತಿಂಗಳಿಗೆ 325.00 ಕೋಟಿ ರು. ನಂತೆ ಒಟ್ಟು 650.00 ಕೋಟಿ ರು. ಬಿಡುಗಡೆ ಮಾಡಿರುವುದು ಆರ್ಥಿಕ ಇಲಾಖೆಯ ಪತ್ರದಿಂದ ತಿಳಿದು ಬಂದಿದೆ.

Hot this week

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

Related Articles

Popular Categories

error: Content is protected !!