Monday | April 13, 2026 |

ಕೋವಿಡ್‌ ; ಐಎಎಸ್‌ ಅಧಿಕಾರಿಗಳ ಬೆವರಿಳಿಸಿದ ಸಾರ್ವಜನಿಕ ಲೆಕ್ಕಪತ್ರ ಸಮಿತಿ

ಬೆಂಗಳೂರು; ಪಿಪಿಇ ಕಿಟ್‌, ಸ್ಯಾನಿಟೈಸರ್‌, ವೆಂಟಿಲೇಟರ್‌ ಸೇರಿದಂತೆ ಇನ್ನಿತರೆ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರ ಪ್ರಕರಣಗಳಿಗೆ ಕಾರಣರಾದ ಮತ್ತು ಕೋವಿಡ್‌ ಸೋಂಕಿತರನ್ನು ಅಮಾನುಷ ಮತ್ತು ಅಮಾನವೀಯವಾಗಿ ನಡೆಸಿಕೊಂಡಿರುವ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಐಎಎಸ್‌ ಅಧಿಕಾರಿಗಳನ್ನು ಎಚ್‌ ಕೆ ಪಾಟೀಲ್‌ ಅಧ್ಯಕ್ಷತೆಯಲ್ಲಿರುವ ಸಾರ್ವಜನಿಕ ಲೆಕ್ಕಪತ್ರ ಸಮಿತಿ, ಬೆವರಿಳಿಸಿದೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಅಧಿಕಾರಿಗಳನ್ನು ಪಕ್ಷಬೇಧ ಮರೆತು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಸಮಿತಿ ಸದಸ್ಯರು ಕೋವಿಡ್‌ ಸೋಂಕಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ ಎಂದು ನಿರ್ದೇಶಿಸಿದರು ಎಂದು ವಿಶ್ವಸನೀಯ ಮೂಲಗಳು ‘ದಿ ಫೈಲ್‌’ಗೆ ತಿಳಿಸಿವೆ.

ಸಭೆಯಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ತಡವರಿಸಿದ ಜಾವೇದ್‌ ಅಖ್ತರ್‌, ಪಂಕಜಕುಮಾರ್‌ ಪಾಂಡೆ, ಮಂಜುಶ್ರೀ ಮತ್ತು ರಾಜೆಂದ್ರಕುಮಾರ್ ಕಟಾರಿಯಾ ಸೇರಿದಂತೆ ಇನ್ನಿತರೆ ಅಧಿಕಾರಿಗಳನ್ನು ಸದಸ್ಯರು ತರಾಟೆಗೆ ತೆಗೆದುಕೊಂಡರು ಎಂದು ತಿಳಿದು ಬಂದಿದ್ದು, ಗುಣಮಟ್ಟದ ಸೇವೆ ಮತ್ತು ಉತ್ತಮ ಚಿಕಿತ್ಸೆ ನೀಡುವಲ್ಲಿ ಆರೋಗ್ಯ ಇಲಾಖೆ ವಿಫಲವಾಗಿರುವುದನ್ನು ನಿರ್ದಶನಗಳ ಸಮೇತ ಎತ್ತಿ ತೋರಿಸಿದರು ಎಂದು ಗೊತ್ತಾಗಿದೆ.

‘ರಾಜ್ಯದಲ್ಲಿ ಕೊರೊನಾ ಪೀಡಿತ ರೋಗಿಗಳನ್ನು ಆರೋಗ್ಯ ಇಲಾಖೆಯು ಜಾನುವಾರುಗಳ ತರಹ ನೋಡುತ್ತಿದೆ. ಈ ಪ್ರವೃತ್ತಿಯನ್ನು ಬದಲಿಸಿಕೊಳ್ಳಬೇಕು. ಗುಣಮಟ್ಟದ ಸೇವೆ ಮತ್ತು ಉತ್ತಮ ಚಿಕಿತ್ಸಾ ವೆಚ್ಚ ಒದಗಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಸಮಿತಿ ಎಚ್‌ ಕೆ ಪಾಟೀಲ್‌ ಅವರು ನಿರ್ದೇಶಿಸಿದರು ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳು ಹೊಂದಿರುವ ಅಂದಾಜು 20,000 ಹಾಸಿಗೆಗಳನ್ನು ಉಪಯೋಗಿಸಿಕೊಳ್ಳಲು ತಕ್ಷಣ ಸುಗ್ರೀವಾಜ್ಞೆ ಹೊರಡಿಸಿ ಎಂದು ಎಚ್‌ ಕೆ ಪಾಟೀಲ್‌ ಅವರು ನಿರ್ದೇಶಿಸಿದರು ಎಂದು ಗೊತ್ತಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ, ಬೆಸ್ಕಾಂ ಸೇರಿದಂತೆ ಸರ್ಕಾರದ ಹಲವು ಇಲಾಖೆಗಳು ವಿನಾಯಿತಿ ಮತ್ತು ರಿಯಾಯಿತಿ ನೀಡಿವೆ. ಹೀಗಾಗಿ ಇಂತಹ ತುರ್ತು ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳ ಸೇವೆ ಬಳಸಿಕೊಳ್ಳಬೇಕು ಎಂದು ಸಮಿತಿ ಸದಸ್ಯರು ಒಕ್ಕೊರಲಿನಿಂದ ಸೂಚಿಸಿದರು ಎಂದು ತಿಳಿದು ಬಂದಿದೆ.

‘ಇಂತಹ ತುರ್ತು ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳು ಸರ್ಕಾರದೊಂದಿಗೆ ಅಸಹಕಾರ ಯಾಕೆ ತೋರಿಸುತ್ತಿವೆ. ಇಂತಹ ಖಾಸಗಿ ಆಸ್ಪತ್ರೆಗಳಿಗೆ ತಕ್ಷಣವೇ ಆಡಳಿತಾಧಿಕಾರಿಗಳನ್ನು ನೇಮಿಸಬೇಕಲ್ಲದೆ ಅವುಗಳನ್ನು ವಶಕ್ಕೆ ತೆಗೆದುಕೊಳ್ಳಲಿ ಎಂದೂ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಗೊತ್ತಾಗಿದೆ.

ಹಜ್‌ ಭವನದಲ್ಲಿ 10 ರೋಗಿಗಳಗಷ್ಟೆ ಅವಕಾಶ ಇದೆ. ಕೋವಿಡ್‌ ನಿಯಂತ್ರಿಸುವ ಸಂಬಂಧ ಸರ್ಕಾರ ಹೊರಡಿಸಿರುವ ಗುಣಮಟ್ಟದ ಕಾರ್ಯಾಚರಣೆ ಪ್ರಕಾರ (ಎಸ್‌ಒಪಿ) 10 ರೋಗಿಗಳಿಗೆ ಒಂದೇ ಶೌಚಾಲಯ, ಸ್ನಾನಗೃಹವಿದೆ ಎಂದು ಅಧಿಕಾರಿಗಳು ನೀಡಿದ ಉತ್ತರದಿಂದ ಕೆಲ ಸದಸ್ಯರು ಕೆರಳಿದರಲ್ಲದೆ, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿರುವಾಗ ಇಂತಹ ಅವ್ಯವಸ್ಥೆಗಳೇಕೆ ಎಂದು ಜಾಡಿಸಿದರು ಎಂದು ತಿಳಿದು ಬಂದಿದೆ.

ಆಂಬುಲೆನ್ಸ್‌ಗಳ ಸಂಖ್ಯೆ ಕಡಿಮೆ ಇವೆ. ಇರುವ ಅಂಬುಲೆನ್ಸ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಸಮಿತಿ ಸದಸ್ಯ ಹಾಗೂ ಮಾಜಿ ಆರೋಗ್ಯ ಸಚಿವ ಕೆ ಅರ್‌ ರಮೇಶ್‌ಕುಮಾರ್‌ ಸಭೆಯಲ್ಲಿ ಪ್ರಸ್ತಾಪಿಸಿದರು ಎಂದು ಗೊತ್ತಾಗಿದೆ.

Hot this week

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ದಾಖಲಾಗದ ಎಫ್‌ಐಆರ್, ವರದಿ ಸಲ್ಲಿಸಲು ಸೂಚನೆ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ...

Topics

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

Related Articles

Popular Categories

error: Content is protected !!