Friday | April 3, 2026 |

ಕೋವಿಡ್‌-19; ಆರೋಗ್ಯ ಇಲಾಖೆಗೆ ಬಿಡುಗಡೆಯಾದ ಅನುದಾನ ಖರ್ಚಿನ ಲೆಕ್ಕ ಕೇಳಿದ ಅಂದಾಜು ಸಮಿತಿ

ಬೆಂಗಳೂರು; ಕೋವಿಡ್‌-19ರ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒದಗಿಸಲಾದ ವಿಶೇಷ ಅನುದಾನದಲ್ಲಿ ಖರ್ಚು ಮಾಡಿರುವುದು ಮತ್ತು ಉಳಿಕೆ ಅನುದಾನದ ಬಗ್ಗೆ ಮಾಹಿತಿ ಒದಗಿಸಬೇಕು ಎಂದು ವಿಧಾನಸಭೆಯ ಸದಸ್ಯ ಸಿ ಎಂ ಉದಾಸಿ ಅವರ ಅಧ್ಯಕ್ಷತೆಯಲ್ಲಿರುವ ಅಂದಾಜು ಸಮಿತಿ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಅವರಿಗೆ  ಸೂಚಿಸಿದೆ.

ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಆಗಿದೆ ಎನ್ನಲಾಗಿರುವ ಗಂಭೀರ ಸ್ವರೂಪದ ಅಕ್ರಮಗಳ ಕುರಿತು ಸಾರ್ವಜನಿಕ ಲೆಕ್ಕಪತ್ರ ಸಮಿತಿ ವಿಶೇಷ ಲೆಕ್ಕಪರಿಶೋಧನೆ ನಡೆಸಬೇಕು ಎಂದು ಸಿಎಜಿಗೆ ಪತ್ರ ಬರೆದಿರುವ ಬೆನ್ನಲ್ಲೇ ಇದೀಗ ಅಂದಾಜು ಸಮಿತಿ ಕೂಡ ಕೋವಿಡ್‌-19ರ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಖರ್ಚು ಮಾಡಿರುವ ಹಣದ ಲೆಕ್ಕ ಕೇಳಲಾರಂಭಿಸಿದೆ.

ಈ ಕುರಿತು ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಅವರಿಗೆ 2020ರ ಆಗಸ್ಟ್‌ 12ರಂದು ಪತ್ರ ಬರೆದಿದ್ದಾರೆ. ಈ ಕುರಿತು 15 ಪ್ರಶ್ನಾವಳಿಗಳನ್ನು ನೀಡಿರುವ ಅವರು ಇದೇ 19ರಂದು ನಡೆಯಲಿರುವ ಸಭೆಗೆ ಮಾಹಿತಿ ಒದಗಿಸಬೇಕು ಎಂದು ನಿರ್ದೇಶಿಸಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

‘ಕೋವಿಡ್‌-19ರ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹೆಚ್ಚಿನ ಉತ್ತೇಜನ ನೀಡಲು ಒದಗಿಸಲಾದ ವಿಶೇಷ ಅನುದಾನದಡಿ ಖರ್ಚಾದ ಹಾಗೂ ಬಾಕಿ ಉಳಿದಿರುವ ಅನುದಾನದ ಇತ್ತೀಚಿನ ಪೂರ್ಣ ಮಾಹಿತಿ ಒದಗಿಸಬೇಕು,’ ಎಂದು ಕಾರ್ಯದರ್ಶಿ ಪತ್ರದಲ್ಲಿ ನಿರ್ದೇಶಿಸಿದ್ದಾರೆ.

ಕಳೆದ 3 ವರ್ಷಗಳಲ್ಲಿ ಮೂಲ ಆಯವ್ಯಯ ಅನುದಾನವನ್ನು ಮತ್ತು ಪೂರಕ ಅನುದಾನವನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಸಲ್ಲಿಸಿರುವ ಬೇಡಿಕೆ ಎಷ್ಟು, ಅನುದಾನ ಬೇಡಿಕೆಯ ಪ್ರಸ್ತಾವನೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ನೀಡಿದ ಸಮರ್ಥನೆಗಳ ವಿವರಗಳು, ಇದೇ ಅವಧಿಯಲ್ಲಿ ಮೂಲ ಅನುದಾನ, ಪೂರಕ ಅನುದಾನ ಬಿಡುಗಡೆ, ವೆಚ್ಚ, ಹೆಚ್ಚುವರಿ ವೆಚ್ಚ , ಉಳಿತಾಯಗಳಿಗೆ ಕಾರಣಗಳು, ಕೇಂದ್ರದ ಅನುದಾನದ ಲೆಕ್ಕ ಶೀರ್ಷಿಕೆವಾರು ಯೋಜನೆವಾರು ವಿವರಗಳನ್ನು ಒದಗಿಸಬೇಕು ಎಂದು ಕಾರ್ಯದರ್ಶಿ ಸೂಚಿಸಿರುವುದು ಪತ್ರದಿಂದ ಗೊತ್ತಾಗಿದೆ.

ಹಾಗೆಯೇ ಇಲಾಖೆಯ ಆಯವ್ಯಯದಲ್ಲಿ ಒದಗಿಸಲಾದ ಅನುದಾನದ ಸದ್ಬಳಕೆ, ಮಿತವ್ಯಯ, ಆರ್ಥಿಕ ಶಿಸ್ತು, ಯೋಜನೆಗಳ ಪರಿಣಾಮಕಾರಿ ಅನುಷ್ಠಾನ, ಆಡಳಿತದಲ್ಲಿ ದಕ್ಷತೆ, ಸುಧಾರಣೆ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದಂತೆ ಪೂರ್ಣ ವಿವರವನ್ನೂ ಒದಗಿಸಲು ನಿರ್ದೇಶಿಸಿರುವುದು ತಿಳಿದು ಬಂದಿದೆ.

ಇಲಾಖೆಯಲ್ಲಿರುವ ಸ್ವಂತ ವಾಹನಗಳ ಸಂಖ್ಯೆ, ಇಂಧನ ನಿರ್ವಹಣೆ, ದುರಸ್ತಿಗೆ ವಾರ್ಷಿಕ ವೆಚ್ಚದ ಮೊತ್ತ, ಬಾಡಿಗೆ ಆಧಾರದ ಮೇಲೆ ತೆಗೆದುಕೊಂಡಿರುವ ವಾಹನಗಳು ಮತ್ತು ನೀಡುತ್ತಿರುವ ಬಾಡಿಗೆ ಮೊತ್ತದ (ಕಳೆದ 3 ವರ್ಷಗಳ ಮಾಹಿತಿ) ವಿವರ ಒದಗಿಸಲು ಸೂಚಿಸಿದ್ದಾರೆ.

ಅಂದಾಜು ಸಮಿತಿಯಲ್ಲಿ ಸತೀಶ್‌ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಅಮರೇಗೌಡ ಬಯ್ಯಾಪುರ, ಕೆ ಎಂ ಶಿವಲಿಂಗೇಗೌಡ, ಸಿ ಎನ್‌ ಬಾಲಕೃಷ್ಣ, ಸೋಮಶೇಖರರೆಡ್ಡಿ, ಸಿ ಎಸ್‌ ನಿರಂಜನಕುಮಾರ್‌, ಮಹೇಶ್‌ ಕುಮಠಳ್ಳಿ, ವೀರಣ್ಣ ಚರಂತಿಮಠ್‌, ಶರಣಬಸಪ್ಪ ದರ್ಶಾನಪುರ ಸೇರಿದಂತೆ ಒಟ್ಟು 18 ಮಂದಿ ಸದಸ್ಯರಿದ್ದಾರೆ.

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯು ವೈದ್ಯಕೀಯ ಸಲಕರಣೆ ವೆಚ್ಚ/ವೈದ್ಯಕೀಯ ಸಾಮಗ್ರಿಗಳಿಗೆ ಸಂಬಂಧಿಸಿದಂತೆ ಒಟ್ಟು 316.43 ಕೋಟಿ ರು ಖರ್ಚು ಮಾಡಿದೆ. ಇದರಲ್ಲಿ ರಾಷ್ಟ್ರೀಯ ಅರೋಗ್ಯ ಅಭಿಯಾನದಡಿ 103.27 ಕೋಟಿ, ಎಸ್‌ಡಿಆರ್‌ಎಫ್‌ ಅಡಿ 50.00 ಕೋಟಿ, ವೈದ್ಯಕೀಯ ಸೇವೆ, ಟೆಲಿ ಮೆಡಿಸಿನ್‌ಗಾಗಿ ಎಸ್‌ಡಿಆರ್‌ಎಫ್‌ ಅಡಿ 20.00 ಕೋಟಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಯಡಿ 109.10 ಕೋಟಿ, ಕೆಡಿಎಲ್‌ಡಬ್ಲ್ಯಎಸ್‌ ಅಡಿ 104.33 ಕೋಟಿಯೂ ಒಳಗೊಂಡಿದೆ.

ಕೋವಿಡ್‌-19ರ ನಿರ್ವಹಣೆಗಾಗಿ ಆರೋಗ್ಯ ಇಲಾಖೆಯು ಕರ್ನಾಟಕ ಸ್ಟೇಟ್‌ ಡ್ರಗ್‌ ಲಾಜಿಸ್ಟಿಕ್‌ ವೇರ್‌ ಹೌಸಿಂಗ್‌ ಸೊಸೈಟಿ ಮೂಲಕ ದುಬಾರಿ ದರದಲ್ಲಿ ಪಿಪಿಇ ಕಿಟ್‌, ಸ್ಯಾನಿಟೈಸರ್‌, ವೆಂಟಿಲೇಟರ್ಸ್‌, ಗ್ಲೋವ್ಸ್‌, ಆರ್‌ಟಿಪಿಸಿಆರ್‌ ಸೇರಿದಂತೆ ಇನ್ನಿತರೆ ವೈದ್ಯಕೀಯ ಸಲಕರಣೆಗಳನ್ನು ಖರೀದಿಸಿದೆ ಎಂಬ ಬಲವಾದ ಆರೋಪಕ್ಕೆ ಗುರಿಯಾಗಿದೆ. ವೈದ್ಯಕೀಯ ಪರಿಕರಗಳ ಖರೀದಿಯಲ್ಲಾಗಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಷ್ಟ್ರಸಮಿತಿಯು ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ದೂರು ಸಲ್ಲಿಸಿದ್ದನ್ನು ಸ್ಮರಿಸಬಹುದು.

Hot this week

ಕೆಎಎಸ್ 2011ರ ನೇಮಕಾತಿ ಅಕ್ರಮದ ತನಿಖಾ ವರದಿಗೆ ಕೊನೆ ಮೊಳೆ; ವಿಚಾರಣೆಯಿಲ್ಲದೇ ಪ್ರಕರಣ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು; 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ...

ಗಂಗಾ ಕಲ್ಯಾಣ ಯೋಜನೆ ವಿದ್ಯುದ್ದೀಕರಣ; ವಾಸ್ತವಿಕ ವೆಚ್ಚದಲ್ಲಿ ಏರಿಕೆ, ಎಸ್ಕಾಂಗಳಿಗೆ ಆರ್ಥಿಕ ಸಂಕಷ್ಟ

ಬೆಂಗಳೂರು; ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣ ವಿದ್ಯುತ್ ಸರಬರಾಜು...

ಅಂಬೇಡ್ಕರ್, ಜಗಜೀವನ್ ರಾಂ ಪ್ರಶಸ್ತಿಗೆ ಲಾಬಿ!; ಸರಜೂ ಕಾಟ್ಕರ್ ಸೇರಿ ಹಲವರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯು ಪ್ರತೀ ಏಪ್ರಿಲ್ ತಿಂಗಳಲ್ಲಿ ನೀಡುವ ಡಾ...

ಗ್ಯಾರಂಟಿಗಳಿಂದ ಹೆಚ್ಚಿದ ಹಣಕಾಸಿನ ಒತ್ತಡ, ಶಾಸಕಾಂಗದ ಅನುಮೋದನೆಯಿಲ್ಲದೇ 10,035 ಕೋಟಿ ವೆಚ್ಚಕ್ಕೆ ಆದೇಶ

ಬೆಂಗಳೂರು; ರಾಜ್ಯ ಶಾಸಕಾಂಗದ ಅನುಮೋದನೆಗೆ ಮುಂಚಿತವಾಗಿಯೇ 10,035.13 ಕೋಟಿ ರು ವೆಚ್ಚಕ್ಕೆ...

ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ; ವರ್ಷವಾದರೂ ಇಲಾಖೆಗಳಿಂದ ಬಾರದ ಮಾಹಿತಿ, ಅಧಿಸೂಚನೆಗೂ ಕಿಮ್ಮತ್ತಿಲ್ಲ, ನೆನಪೋಲೆಯ ಕಾಲಹರಣ

ಬೆಂಗಳೂರು; ರಾಜ್ಯ ಸರ್ಕಾರದ ವಿರುದ್ಧ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು...

Topics

ಕೆಎಎಸ್ 2011ರ ನೇಮಕಾತಿ ಅಕ್ರಮದ ತನಿಖಾ ವರದಿಗೆ ಕೊನೆ ಮೊಳೆ; ವಿಚಾರಣೆಯಿಲ್ಲದೇ ಪ್ರಕರಣ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು; 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ...

ಗಂಗಾ ಕಲ್ಯಾಣ ಯೋಜನೆ ವಿದ್ಯುದ್ದೀಕರಣ; ವಾಸ್ತವಿಕ ವೆಚ್ಚದಲ್ಲಿ ಏರಿಕೆ, ಎಸ್ಕಾಂಗಳಿಗೆ ಆರ್ಥಿಕ ಸಂಕಷ್ಟ

ಬೆಂಗಳೂರು; ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣ ವಿದ್ಯುತ್ ಸರಬರಾಜು...

ಅಂಬೇಡ್ಕರ್, ಜಗಜೀವನ್ ರಾಂ ಪ್ರಶಸ್ತಿಗೆ ಲಾಬಿ!; ಸರಜೂ ಕಾಟ್ಕರ್ ಸೇರಿ ಹಲವರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯು ಪ್ರತೀ ಏಪ್ರಿಲ್ ತಿಂಗಳಲ್ಲಿ ನೀಡುವ ಡಾ...

ಗ್ಯಾರಂಟಿಗಳಿಂದ ಹೆಚ್ಚಿದ ಹಣಕಾಸಿನ ಒತ್ತಡ, ಶಾಸಕಾಂಗದ ಅನುಮೋದನೆಯಿಲ್ಲದೇ 10,035 ಕೋಟಿ ವೆಚ್ಚಕ್ಕೆ ಆದೇಶ

ಬೆಂಗಳೂರು; ರಾಜ್ಯ ಶಾಸಕಾಂಗದ ಅನುಮೋದನೆಗೆ ಮುಂಚಿತವಾಗಿಯೇ 10,035.13 ಕೋಟಿ ರು ವೆಚ್ಚಕ್ಕೆ...

ಗೋವಾ ತಮ್ನಾರ್; ಭೂಮಿಯ ಗಡಿ ಗುರುತು, ಮರಗಳ ಗಣತಿ ಅಪೂರ್ಣ, ಆದರೂ ನಿರ್ವಹಣಾ ಯೋಜನೆ ಸಲ್ಲಿಕೆ

ಬೆಂಗಳೂರು; ಪಶ್ಚಿಮ ಘಟ್ಟದ ಕಾಳಿ ಹುಲಿ ಸಂರಕ್ಷಿತಾರಣ್ಯ ಸೇರಿ ಬರೋಬ್ಬರಿ 174...

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ...

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

Related Articles

Popular Categories

error: Content is protected !!