Wednesday | July 22, 2026 |

ಕೋವಿಡ್‌-19; ಆರೋಗ್ಯ ಇಲಾಖೆಗೆ ಬಿಡುಗಡೆಯಾದ ಅನುದಾನ ಖರ್ಚಿನ ಲೆಕ್ಕ ಕೇಳಿದ ಅಂದಾಜು ಸಮಿತಿ

ಬೆಂಗಳೂರು; ಕೋವಿಡ್‌-19ರ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒದಗಿಸಲಾದ ವಿಶೇಷ ಅನುದಾನದಲ್ಲಿ ಖರ್ಚು ಮಾಡಿರುವುದು ಮತ್ತು ಉಳಿಕೆ ಅನುದಾನದ ಬಗ್ಗೆ ಮಾಹಿತಿ ಒದಗಿಸಬೇಕು ಎಂದು ವಿಧಾನಸಭೆಯ ಸದಸ್ಯ ಸಿ ಎಂ ಉದಾಸಿ ಅವರ ಅಧ್ಯಕ್ಷತೆಯಲ್ಲಿರುವ ಅಂದಾಜು ಸಮಿತಿ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಅವರಿಗೆ  ಸೂಚಿಸಿದೆ.

ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಆಗಿದೆ ಎನ್ನಲಾಗಿರುವ ಗಂಭೀರ ಸ್ವರೂಪದ ಅಕ್ರಮಗಳ ಕುರಿತು ಸಾರ್ವಜನಿಕ ಲೆಕ್ಕಪತ್ರ ಸಮಿತಿ ವಿಶೇಷ ಲೆಕ್ಕಪರಿಶೋಧನೆ ನಡೆಸಬೇಕು ಎಂದು ಸಿಎಜಿಗೆ ಪತ್ರ ಬರೆದಿರುವ ಬೆನ್ನಲ್ಲೇ ಇದೀಗ ಅಂದಾಜು ಸಮಿತಿ ಕೂಡ ಕೋವಿಡ್‌-19ರ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಖರ್ಚು ಮಾಡಿರುವ ಹಣದ ಲೆಕ್ಕ ಕೇಳಲಾರಂಭಿಸಿದೆ.

ಈ ಕುರಿತು ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಅವರಿಗೆ 2020ರ ಆಗಸ್ಟ್‌ 12ರಂದು ಪತ್ರ ಬರೆದಿದ್ದಾರೆ. ಈ ಕುರಿತು 15 ಪ್ರಶ್ನಾವಳಿಗಳನ್ನು ನೀಡಿರುವ ಅವರು ಇದೇ 19ರಂದು ನಡೆಯಲಿರುವ ಸಭೆಗೆ ಮಾಹಿತಿ ಒದಗಿಸಬೇಕು ಎಂದು ನಿರ್ದೇಶಿಸಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

‘ಕೋವಿಡ್‌-19ರ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹೆಚ್ಚಿನ ಉತ್ತೇಜನ ನೀಡಲು ಒದಗಿಸಲಾದ ವಿಶೇಷ ಅನುದಾನದಡಿ ಖರ್ಚಾದ ಹಾಗೂ ಬಾಕಿ ಉಳಿದಿರುವ ಅನುದಾನದ ಇತ್ತೀಚಿನ ಪೂರ್ಣ ಮಾಹಿತಿ ಒದಗಿಸಬೇಕು,’ ಎಂದು ಕಾರ್ಯದರ್ಶಿ ಪತ್ರದಲ್ಲಿ ನಿರ್ದೇಶಿಸಿದ್ದಾರೆ.

ಕಳೆದ 3 ವರ್ಷಗಳಲ್ಲಿ ಮೂಲ ಆಯವ್ಯಯ ಅನುದಾನವನ್ನು ಮತ್ತು ಪೂರಕ ಅನುದಾನವನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಸಲ್ಲಿಸಿರುವ ಬೇಡಿಕೆ ಎಷ್ಟು, ಅನುದಾನ ಬೇಡಿಕೆಯ ಪ್ರಸ್ತಾವನೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ನೀಡಿದ ಸಮರ್ಥನೆಗಳ ವಿವರಗಳು, ಇದೇ ಅವಧಿಯಲ್ಲಿ ಮೂಲ ಅನುದಾನ, ಪೂರಕ ಅನುದಾನ ಬಿಡುಗಡೆ, ವೆಚ್ಚ, ಹೆಚ್ಚುವರಿ ವೆಚ್ಚ , ಉಳಿತಾಯಗಳಿಗೆ ಕಾರಣಗಳು, ಕೇಂದ್ರದ ಅನುದಾನದ ಲೆಕ್ಕ ಶೀರ್ಷಿಕೆವಾರು ಯೋಜನೆವಾರು ವಿವರಗಳನ್ನು ಒದಗಿಸಬೇಕು ಎಂದು ಕಾರ್ಯದರ್ಶಿ ಸೂಚಿಸಿರುವುದು ಪತ್ರದಿಂದ ಗೊತ್ತಾಗಿದೆ.

ಹಾಗೆಯೇ ಇಲಾಖೆಯ ಆಯವ್ಯಯದಲ್ಲಿ ಒದಗಿಸಲಾದ ಅನುದಾನದ ಸದ್ಬಳಕೆ, ಮಿತವ್ಯಯ, ಆರ್ಥಿಕ ಶಿಸ್ತು, ಯೋಜನೆಗಳ ಪರಿಣಾಮಕಾರಿ ಅನುಷ್ಠಾನ, ಆಡಳಿತದಲ್ಲಿ ದಕ್ಷತೆ, ಸುಧಾರಣೆ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದಂತೆ ಪೂರ್ಣ ವಿವರವನ್ನೂ ಒದಗಿಸಲು ನಿರ್ದೇಶಿಸಿರುವುದು ತಿಳಿದು ಬಂದಿದೆ.

ಇಲಾಖೆಯಲ್ಲಿರುವ ಸ್ವಂತ ವಾಹನಗಳ ಸಂಖ್ಯೆ, ಇಂಧನ ನಿರ್ವಹಣೆ, ದುರಸ್ತಿಗೆ ವಾರ್ಷಿಕ ವೆಚ್ಚದ ಮೊತ್ತ, ಬಾಡಿಗೆ ಆಧಾರದ ಮೇಲೆ ತೆಗೆದುಕೊಂಡಿರುವ ವಾಹನಗಳು ಮತ್ತು ನೀಡುತ್ತಿರುವ ಬಾಡಿಗೆ ಮೊತ್ತದ (ಕಳೆದ 3 ವರ್ಷಗಳ ಮಾಹಿತಿ) ವಿವರ ಒದಗಿಸಲು ಸೂಚಿಸಿದ್ದಾರೆ.

ಅಂದಾಜು ಸಮಿತಿಯಲ್ಲಿ ಸತೀಶ್‌ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಅಮರೇಗೌಡ ಬಯ್ಯಾಪುರ, ಕೆ ಎಂ ಶಿವಲಿಂಗೇಗೌಡ, ಸಿ ಎನ್‌ ಬಾಲಕೃಷ್ಣ, ಸೋಮಶೇಖರರೆಡ್ಡಿ, ಸಿ ಎಸ್‌ ನಿರಂಜನಕುಮಾರ್‌, ಮಹೇಶ್‌ ಕುಮಠಳ್ಳಿ, ವೀರಣ್ಣ ಚರಂತಿಮಠ್‌, ಶರಣಬಸಪ್ಪ ದರ್ಶಾನಪುರ ಸೇರಿದಂತೆ ಒಟ್ಟು 18 ಮಂದಿ ಸದಸ್ಯರಿದ್ದಾರೆ.

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯು ವೈದ್ಯಕೀಯ ಸಲಕರಣೆ ವೆಚ್ಚ/ವೈದ್ಯಕೀಯ ಸಾಮಗ್ರಿಗಳಿಗೆ ಸಂಬಂಧಿಸಿದಂತೆ ಒಟ್ಟು 316.43 ಕೋಟಿ ರು ಖರ್ಚು ಮಾಡಿದೆ. ಇದರಲ್ಲಿ ರಾಷ್ಟ್ರೀಯ ಅರೋಗ್ಯ ಅಭಿಯಾನದಡಿ 103.27 ಕೋಟಿ, ಎಸ್‌ಡಿಆರ್‌ಎಫ್‌ ಅಡಿ 50.00 ಕೋಟಿ, ವೈದ್ಯಕೀಯ ಸೇವೆ, ಟೆಲಿ ಮೆಡಿಸಿನ್‌ಗಾಗಿ ಎಸ್‌ಡಿಆರ್‌ಎಫ್‌ ಅಡಿ 20.00 ಕೋಟಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಯಡಿ 109.10 ಕೋಟಿ, ಕೆಡಿಎಲ್‌ಡಬ್ಲ್ಯಎಸ್‌ ಅಡಿ 104.33 ಕೋಟಿಯೂ ಒಳಗೊಂಡಿದೆ.

ಕೋವಿಡ್‌-19ರ ನಿರ್ವಹಣೆಗಾಗಿ ಆರೋಗ್ಯ ಇಲಾಖೆಯು ಕರ್ನಾಟಕ ಸ್ಟೇಟ್‌ ಡ್ರಗ್‌ ಲಾಜಿಸ್ಟಿಕ್‌ ವೇರ್‌ ಹೌಸಿಂಗ್‌ ಸೊಸೈಟಿ ಮೂಲಕ ದುಬಾರಿ ದರದಲ್ಲಿ ಪಿಪಿಇ ಕಿಟ್‌, ಸ್ಯಾನಿಟೈಸರ್‌, ವೆಂಟಿಲೇಟರ್ಸ್‌, ಗ್ಲೋವ್ಸ್‌, ಆರ್‌ಟಿಪಿಸಿಆರ್‌ ಸೇರಿದಂತೆ ಇನ್ನಿತರೆ ವೈದ್ಯಕೀಯ ಸಲಕರಣೆಗಳನ್ನು ಖರೀದಿಸಿದೆ ಎಂಬ ಬಲವಾದ ಆರೋಪಕ್ಕೆ ಗುರಿಯಾಗಿದೆ. ವೈದ್ಯಕೀಯ ಪರಿಕರಗಳ ಖರೀದಿಯಲ್ಲಾಗಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಷ್ಟ್ರಸಮಿತಿಯು ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ದೂರು ಸಲ್ಲಿಸಿದ್ದನ್ನು ಸ್ಮರಿಸಬಹುದು.

Hot this week

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ವಸತಿ ಬಡಾವಣೆ ನಿರ್ಮಾಣ, ಅಭಿವೃದ್ಧಿ ಕಾಮಗಾರಿ, ಬಡ್ಡಿ ಪಾವತಿ; ಲೆಕ್ಕಪತ್ರವನ್ನೇ ನಿರ್ವಹಿಸಿಲ್ಲ, ದಾಖಲೆಗಳನ್ನೂ ಒದಗಿಸಿಲ್ಲ, ಮುಡಾ ದುರಾಡಳಿತ

ಮಂಗಳೂರು: ಕುಂಜತ್‌ ಬೈಲ್ ಸೇರಿದಂತೆ ಹಲವೆಡೆ ವಸತಿ ಬಡಾವಣೆಗಳನ್ನು ರಚಿಸುವ ಉದ್ದೇಶದಿಂದ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...
Please Scan to make Your Contribution

Topics

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...

Related Articles

Popular Categories

error: Content is protected !!