Sunday | September 6, 2026 |

ಐಎಂಎ; ಚಾರ್ಜ್‌ಶೀಟ್‌ ಸಲ್ಲಿಕೆ ಬೆನ್ನಲ್ಲೇ ಹೊರಬಿತ್ತು ಅಧಿಕಾರಿ ಎಲ್‌ ಸಿ ನಾಗರಾಜು ಬಡ್ತಿ ಪ್ರಕರಣ

ಬೆಂಗಳೂರು: ಅಂದಾಜು ಒಂದು ಲಕ್ಷ ಠೇವಣಿದಾರರಿಗೆ 2,000 ಕೋಟಿ ರು. ವಂಚನೆ ಮಾಡಿರುವ ಐಎಂಎ ಪ್ರಕರಣದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಕೆ ಅನುಮತಿ ನೀಡಲು ರಾಜ್ಯ ಸರ್ಕಾರದ  ವಿಳಂಬವನ್ನೇ ಮುಂದಿಟ್ಟುಕೊಂಡು ಆರೋಪಿ ಕೆಎಎಸ್‌ ಅಧಿಕಾರಿ ಎಲ್‌ ಸಿ ನಾಗರಾಜ್‌ ಅವರು ಕೆಎಎಸ್‌ ಕಿರಿಯ ಶ್ರೇಣಿಯಿಂದ ಹಿರಿಯ ಶ್ರೇಣಿ ವೃಂದಕ್ಕೆ ಬಡ್ತಿ ಪಡೆಯಲು ಸಚಿವಾಲಯದಲ್ಲಿ ಪ್ರಯತ್ನ ನಡೆಸಿದ್ದರು ಎಂಬುದನ್ನು ‘ದಿ ಫೈಲ್‌’ ಇದೀಗ ಹೊರಗೆಡವುತ್ತಿದೆ.

ಎಲ್‌ ಸಿ ನಾಗರಾಜ್‌ ವಿರುದ್ಧ ಸಿಬಿಐ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾದ ಬೆನ್ನಲ್ಲೇ ಬಡ್ತಿ ಪಡೆಯಲು ನಡೆಸಿದ್ದ ಪ್ರಯತ್ನಗಳು ಮುನ್ನೆಲೆಗೆ ಬಂದಿವೆ. ಸೇವಾ ಜೇಷ್ಠತೆಯಲ್ಲಿ ತಮಗಿಂತ ಕಿರಿಯ ಅಧಿಕಾರಿಗೆ ಬಡ್ತಿ ನೀಡುವುದನ್ನು ವಿರೋಧಿಸಿದ್ದ ಎಲ್‌ ಸಿ ನಾಗರಾಜ್‌ ಅವರು ಇದಕ್ಕಾಗಿ ತಮ್ಮ ವಿರುದ್ಧ ಸಿಬಿಐ ದೋಷಾರೋಪಣೆ ಪಟ್ಟಿ ಜಾರಿಯಾಗಿಲ್ಲ ಎಂಬುದು ಸೇರಿದಂತೆ ಹಲವು ಅಂಶಗಳನ್ನಿಡಿದು ವಾದವನ್ನು ಮುಂದೊಡ್ಡಿದ್ದರು ಎಂಬುದು ಬಹಿರಂಗವಾಗಿದೆ. ಇದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ಗೆ ಟಿಪ್ಪಣಿ ಹಾಳೆಯೊಂದು ಲಭ್ಯವಾಗಿದೆ.

ಸಿಬಿಐ ದೋಷಾರೋಪಣೆ ಪಟ್ಟಿ ಸಲ್ಲಿಕೆ ಮಾಡುವ 2 ತಿಂಗಳ ಮೊದಲೇ ಎಲ್‌ ಸಿ ನಾಗರಾಜು ಅವರ ಅಮಾನತು ಆದೇಶವನ್ನು 2020ರ ಜುಲೈ 9ರಂದು ತೆರವುಗೊಳಿಸಿದ್ದ ಸರ್ಕಾರ, ಇವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಶಾಖೆಯ ಉಪ ನಿರ್ದೇಶಕರಾಗಿ ನೇಮಿಸಿತ್ತು. ಈ ಹುದ್ದೆಯಲ್ಲಿ 2 ತಿಂಗಳ ಅವಧಿ ಪೂರ್ಣಗೊಳ್ಳುವ ಮೊದಲೇ ಸಿಬಿಐ ಚಾರ್ಜ್‌ಶೀಟ್‌ ಕೂಡ ದಾಖಲಿಸಿ ಕೆಎಎಸ್‌ ಹಿರಿಯ ಶ್ರೇಣಿ ವೃಂದದ ಬಡ್ತಿಗೆ ತಡೆಯೊಡ್ಡಿದೆ.

ವಿಶೇಷವೆಂದರೆ ಎಲ್‌ ಸಿ ನಾಗರಾಜು ಅವರ ಬಡ್ತಿಗೆ ಸಂಬಂಧಿಸಿದಂತೆ ಆರೋಗ್ಯ, ಕುಟುಂಬ ಕಲ್ಯಾಣ ಸಚಿವ ಬಿ ಶ್ರೀರಾಮುಲು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯದರ್ಶಿ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಟಿಪ್ಪಣಿ ಹೊರಡಿಸಿದ್ದರು. ಸದ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಶಾಖೆಯಲ್ಲಿ ಉಪ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಎಲ್‌ ಸಿ ನಾಗರಾಜು ಜೇಷ್ಠತೆ ಪಟ್ಟಿಗೆ ಸಂಬಂಧಿಸಿದಂತೆ ತಕರಾರು ಎತ್ತಿದ್ದರು ಎಂಬುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

ಎಲ್‌ ಸಿ ನಾಗರಾಜು ಮಂಡಿಸಿದ್ದ ವಾದದಲ್ಲೇನಿತ್ತು?

ಐಎಂಎ ಪ್ರಕರಣದಲ್ಲಿ ಸಿಬಿಐ ದೋಷಾರೋಪಣೆ ಪಟ್ಟಿ ಸಲ್ಲಿಕೆಯಲ್ಲಿ ಆಗಿದ್ದ ವಿಳಂಬವನ್ನು ಎಲ್‌ ಸಿ ನಾಗರಾಜು ಅವರಿಗೆ ಅನುಕೂಲಕರವಾಗಿತ್ತು ಎಂದು ಹೇಳಲಾಗಿದೆ. ಜೇಷ್ಠತಾ ಪಟ್ಟಿಯಲ್ಲಿ ತಮಗಿಂತ ಕಿರಿಯರಾಗಿದ್ದ ಬಿ ಆರ್‌ ರೂಪ ಅವರಿಗೆ ಬಡ್ತಿ ನೀಡಲು ಹೊರಟಿದ್ದ ವೇಳೆಯಲ್ಲಿ ತಕರಾರು ಎತ್ತಿದ್ದರು.

‘2020ರ ಜುಲೈ 9ರಂದು ನನ್ನ ವಿರುದ್ಧ ಅಮಾನತು ಆದೇಶವನ್ನು ತೆರವುಗೊಳಿಸಿ ನನಗೆ ಉಪ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಶಾಖೆಗೆ ನೇಮಿಸಲಾಗಿದೆ. ನನ್ನ ವಿರುದ್ಧ ಪ್ರಸ್ತುತ ಚಾರ್ಜ್‌ ಲಿಸ್ಟ್‌ ಆಗಲಿ, ದೋಷಾರೋಪಣೆ ಪಟ್ಟಿಯಾಗಲಿ, ಜಾರಿಯಾಗಿರುವುದಿಲ್ಲ. ಇಲಾಖೆ ವಿಚಾರಣೆ ಇರುವುದಿಲ್ಲ. ಕ್ರಿಮಿನಲ್‌ ಮೊಕದ್ದಮೆ ಇರುವುದಿಲ್ಲ,’ ಎಂದು ಬಿ ಆರ್‌ ರೂಪ ಅವರಿಗೆ ನೀಡಿದ್ದ ಪದನ್ನೋತಿಗೆ ತಕರಾರು ಎತ್ತಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

ಬಡ್ತಿ ಪ್ರಕರಣದ ಹಿನ್ನೆಲೆ

ಕೆಎಎಸ್‌ ಕಿರಿಯ ಶ್ರೇಣಿ ವೃಂದದ ಅಧಿಕಾರಿಗಳ ಬಡ್ತಿಗೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು 2019ರ ಆಗಸ್ಟ್‌ 31ರಂದು ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿತ್ತು. ಜೇಷ್ಠತಾ ಪಟ್ಟಿಯ ಕ್ರಮ ಸಂಖ್ಯೆ 934ರಲ್ಲಿ (ಜೇಷ್ಠತಾ ಕ್ರಮ ಸಂಖ್ಯೆ 1412) ಎಲ್‌ ಸಿ ನಾಗರಾಜು ಅವರ ಹೆಸರು ನಮೂದಾಗಿತ್ತು.

2019ರ ಸೆಪ್ಟಂಬರ್‌ 20ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಕೆಎಎಸ್‌ (ಕಿ ಶ್ರೇ) ಅಧಿಕಾರಿಗಳನ್ನು ವೇತನ ಶ್ರೇಣಿ 74,000-1,09,600 ವೇತನ ಶ್ರೇಣಿಯ ಕೆಎಎಸ್‌(ಹಿ ಶ್ರೇ) ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡಲಾಗಿದೆ. ಇದರ ಪ್ರಕಾರ ಕ್ರಮ ಸಂಖ್ಯೆ 53ರಲ್ಲಿ ರೂಪ ಬಿ ಆರ್‌ (ಜೇಷ್ಠತಾ ಕ್ರಮ ಸಂಖ್ಯೆ 1413) ಮತ್ತು 55ರಲ್ಲಿ ಶಾರದಾ ಸಿ ಕೋಲಕರ(ಜೇಷ್ಠತಾ ಕ್ರಮ ಸಂಖ್ಯೆ 1417) ಅವರಿಗೆ ಕೆಎಎಸ್‌ ಹಿರಿಯ ಶ್ರೇಣಿ ಹುದ್ದೆಗೆ ಪದನ್ನೋತಿ ನೀಡಲಾಗಿತ್ತು.
ಐಎಂಎ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿ ಅಮಾನತುಗೊಂಡಿದ್ದರಿಂದ ಎಲ್‌ ಸಿ ನಾಗರಾಜು ಅವರನ್ನು ಈ ಪ್ರಕ್ರಿಯೆಗಳಲ್ಲಿ ಹೊರಗಿಡಲಾಗಿತ್ತು. 2019ರ ಜುಲೈ 6ರಿಂದ ಅಮಾನತಿನಲ್ಲಿದ್ದರಿಂದ ಎಲ್‌ ಸಿ ನಾಗರಾಜು ಅವರನ್ನು ಬಡ್ತಿಗೆ ಪರಿಗಣಿಸಿರಲಿಲ್ಲ ಎಂಬುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

ಉಪ ವಿಭಾಗಾಧಿಕಾರಿಯಾಗಿದ್ದ ಎಲ್‌ ಸಿ ನಾಗರಾಜ್‌ ಅವರು ಐಎಂಎ ನಿರ್ದೇಶಕ ಮೊಹಮ್ಮದ್‌ ಮನ್ಸೂರ್‌ ರಿಂದ 4.5 ಕೋಟಿ ಪಡೆದಿದ್ದರು ಎಂಬ ಆರೋಪ ಕೇಳಿ ಬಂದಿತ್ತು. 10 ಲಕ್ಷ ರು.ಪಡೆದಿದ್ದ ಗ್ರಾಮ ಲೆಕ್ಕಿಗ ಮಂಜುನಾಥ್‌, ನಾಗರಾಜ್‌ ಮತ್ತು ಮನ್ಸೂರ್‌ಖಾನ್‌ ಮಧ್ಯೆ ಸಭೆ ಏರ್ಪಡಿಸಿದ್ದ ಎಂದು ದೋಷಾರೋಪಣೆ ಪಟ್ಟಿಯಲ್ಲಿ ವಿವರಿಸಲಾಗಿದೆ ಎಂದು ಗೊತ್ತಾಗಿದೆ.

ಇದೇ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯಶಂಕರ್, ಎಲ್‌ ಸಿ ನಾಗರಾಜ್‌ ಮತ್ತು ಮಂಜುನಾಥ್‌ ಅವರು ಐಎಂಎ ಕಂಪನಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಸುಳ್ಳು ವರದಿ ನೀಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಸಿಬಿಐ ತನಿಖೆ ನಡೆಸುತ್ತಿದ್ದ ಅವಧಿಯಲ್ಲೇ ವಿಜಯಶಂಕರ್‌ ಅವರು ಜೂನ್‌ 24ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಐಎಂಎ ವಂಚನೆ ಪ್ರಕರಣ 2019ರ ಜೂನ್‌ನಲ್ಲಿ ಬಹಿರಂಗವಾಗಿತ್ತು. ಪ್ರಕರಣ ಬಯಲಾಗುತ್ತಿದ್ದಂತೆ ಮನ್ಸೂರ್‌ಖಾನ್‌ ದುಬೈಗೆ ಪರಾರಿಯಾಗಿದ್ದನಲ್ಲದೆ ಈ ಪ್ರಕರಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು ಎಂದು ವಿಡಿಯೋ ಮೂಲಕ ಆರೋಪಿಸಿದ್ದ. ಈತ ಜುಲೈ 19ರಂದು ಬಂಧನಕ್ಕೊಳಗಾಗಿದ್ದ.
ಈ ಪ್ರಕರಣದಲ್ಲಿ ಮನ್ಸೂರ್‌ಖಾನ್‌ ಸೇರಿದಂತೆ ಒಟ್ಟು 25 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಅಲ್ಲದೆ 12 ನಿರ್ದೇಶಕರೂ ಇದ್ದಾರೆ. ಜತೆಗೆ ಕೆಲ ಫಲಾನುಭವಿಗಳೂ ಇದರಲ್ಲಿ ಸೇರಿದ್ದಾರೆ ಎಂದು ಹೇಳಲಾಗಿದೆ.

Hot this week

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಬುಕ್ ಬ್ರಹ್ಮ ಸಾಹಿತ್ಯ ಉತ್ಸವಕ್ಕೆ 5 ಲಕ್ಷ ರು ಅನುದಾನ; ನೋಂದಣಿಯಾಗಿ 3 ವ‍ರ್ಷ ಪೂರೈಸದ ಬುಕ್‌ ಬ್ರಹ್ಮ ಫೌಂಡೇಷನ್‌ಗೆ ಒಂದು ಬಾರಿ ವಿನಾಯಿತಿ

ಬೆಂಗಳೂರು;  ಅನುದಾನ ಪಡೆಯುವ ಸಂಘ, ಸಂಸ್ಥೆಗಳು ನೋಂದಣಿಯಾಗಿ  3 ವರ್ಷಗಳನ್ನು ಪೂರೈಸಿರಬೇಕು...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...
Please Scan to make Your Contribution

Topics

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...

Related Articles

Popular Categories

error: Content is protected !!