Saturday | May 2, 2026 |

ವಸೂಲು ಮಾಡದೇ 66 ಕೋಟಿ ಬಾಕಿ ಉಳಿಸಿಕೊಂಡ ಬೆಂಗಳೂರು ವಿ ವಿ.; ಸಿಎಜಿ ಅಕ್ಷೇಪಣೆ

ಬೆಂಗಳೂರು; ವಿಶ್ವವಿದ್ಯಾಲಯಗಳಿಗೆ ಹಂಚಿಕೆಯಾಗುವ ಅನುದಾನ ಮತ್ತು ಬಳಕೆ ಮಾಡಿರುವ ವಿಧಾನದಲ್ಲಿ ಲೋಪಗಳಿಂದ ಉಂಟಾಗಿರುವ ನಷ್ಟ ಮತ್ತು ಹಣವನ್ನು ವಸೂಲು ಮಾಡುವ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯವು ಕಳೆದ 20-25 ವರ್ಷಗಳಿಂದಲೂ ಕೋಟ್ಯಂತರ ರುಪಾಯಿ ಬಾಕಿ ಉಳಿಸಿಕೊಳ್ಳುತ್ತಲೇ ಬಂದಿರುವುದು ಇದೀಗ ಬಹಿರಂಗವಾಗಿದೆ.

1990-91ರಿಂದ 2014-19ರವರೆಗೆ ಒಟ್ಟು 66,35,07,140 ಕೋಟಿ ರು.ಗಳನ್ನು ವಸೂಲು ಮಾಡಲು ಸಿಎಜಿ ವರದಿ ಸೂಚಿಸಿತ್ತು. ಅಲ್ಲದೆ 36,66,78,695 ರು.ಮೊತ್ತವನ್ನು ಆಕ್ಷೇಪಣೆಯಲ್ಲಿಟ್ಟಿದೆ.  ಬೆಂಗಳೂರು ವಿಶ್ವವಿದ್ಯಾಲಯವು  ವಸೂಲು ಮಾಡುವ ಗೋಜಿಗೆ ಹೋಗಿಲ್ಲ. ಈ ಕುರಿತು ವಿಶ್ವವಿದ್ಯಾಲಯದ ಕುಲಸಚಿವರು 2020ರ ಸೆ.9ರಂದು ಉನ್ನತ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಸಿಎಜಿ ವರದಿಯಲ್ಲಿ ಆಕ್ಷೇಪಣೆ ಕಂಡಿಕೆಗಳಿಗೆ ಉತ್ತರಿಸುವುದು ಮತ್ತು ಸೂಚಿಸಿರುವ ಹಣವನ್ನು ಕಾಲಮಿತಿಯೊಳಗೆ ವಸೂಲು ಮಾಡಬೇಕು. ಆದರೆ ಬೆಂಗಳೂರು ವಿಶ್ವವಿದ್ಯಾಲಯವೂ ಸೇರಿದಂತೆ ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಹತ್ತು ಹಲವು ವರ್ಷಗಳಿಂದಲೂ ಬಾಕಿ ಉಳಿಸಿಕೊಳ್ಳುತ್ತಲೇ ಬಂದಿವೆ. ಮಹಾಲೇಖಪಾಲರು ಈ ಕುರಿತು ವಿಶ್ವವಿದ್ಯಾಲಯಗಳಿಗೆ ಬರೆಯುವ ನೆನಪೋಲೆ ಪತ್ರಗಳಿಗೆ ವಿಶ್ವವಿದ್ಯಾಲಯದ ಅಧಿಕಾರಿಗಳು ಉತ್ತರಿಸುತ್ತಲೂ ಇಲ್ಲ, ಕ್ರಮ ಕೈಗೊಳ್ಳುತ್ತಿಲ್ಲ. ಅಧಿಕಾರಿಗಳ ಕರ್ತವ್ಯಲೋಪದಿಂದ ನಷ್ಟವಾಗಿರುವ ಕೋಟ್ಯಂತರ ರುಪಾಯಿ ವಿಶ್ವವಿದ್ಯಾಲಯದ ಬೊಕ್ಕಸಕ್ಕೆ ಜಮೆಯಾಗುತ್ತಿಲ್ಲ.

ಈ ಕುರಿತು ಉನ್ನತ ಶಿಕ್ಷಣದ ಹಾಲಿ ಸಚಿವ ಡಾ ಸಿ ಎನ್‌ ಅಶ್ವಥ್‌ ನಾರಾಯಣ್‌ ಮತ್ತು ಹಿಂದಿನ ಸಚಿವರು, ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದ ಪ್ರಧಾನ ಕಾರ್ಯದರ್ಶಿಗಳು, ಕುಲಪತಿಗಳು, ಕುಲಸಚಿವರು ಬಿಗಿಯಾದ ಕ್ರಮ ಕೈಗೊಳ್ಳದ ಕಾರಣದಿಂದಾಗಿಯೇ ಕೋಟ್ಯಂತರ ರುಪಾಯಿ ಬಾಕಿ ಉಳಿದುಕೊಂಡಿದೆ ಎನ್ನಲಾಗಿದೆ.

 

ಈ ಪೈಕಿ ಬೆಂಗಳೂರು ವಿಶ್ವವಿದ್ಯಾಲಯವು ಕೇವಲ 49ಕಂಡಿಕೆಗಳಿಗೆ ಕಂಡಿಕೆವಾರು ಪರಿಷ್ಕೃತ ಉತ್ತರಗಳನ್ನು 2020ರ ಆಗಸ್ಟ್‌ 18ರಂದು ಸಲ್ಲಿಸಿದೆ. 13 ಕಂಡಿಕೆಗಳಿಗೆ ವಜಾಪಟ್ಟು (Write Off) ಪ್ರಸ್ತಾವನೆಯನ್ನು ಸಲ್ಲಿಸಿರುವುದು ಪತ್ರದಿಂದ ತಿಳಿದು ಬಂದಿದೆ. ‘1990-91ರಿಂದ 2013-14ರವರೆಗಿನ ಇನ್ನೂ ಬಾಕಿಯಿರುವ 20-25 ವರ್ಷಗಳ ತುಂಬಾ ಹಳೆಯ 48 ಕಂಡಿಕೆಗಳಿಗೆ ಸಂಬಂಧಪಟ್ಟ ವಿಭಾಗಗಳಿಂದ ಕಂಡಿಕೆವಾರು ಉತ್ತರಗಳನ್ನು ಪಡೆದು ಮಹಾಲೇಖಪಾಲರಿಗೆ ಸಲ್ಲಿಸುವ ಕ್ರಮ ವಹಿಸಲಾಗುವುದು,’ ಎಂದು ಕುಲಸಚಿವರು ಪತ್ರದಲ್ಲಿ ಇಲಾಖೆ ಮುಖ್ಯಸ್ಥರಿಗೆ ತಿಳಿಸಿದ್ದಾರೆ.

ವಸೂಲು ಆಗಬೇಕಿರುವುದೆಷ್ಟು?

1990-91ರಿಂದ 1993-94ರವರೆಗೆ 1,19,954 ರು., 1994-95ರಲ್ಲಿ 63,28,545 ರು., 1995-98ರಲ್ಲಿ 1,83,5,642 ರು., 1998-2002ರಲ್ಲಿ 10,82,31,655 ರು., 2002-08ರಲ್ಲಿ 3,47,20,071 ರು., 2008-09ರಿಂದ 2012-13ರಲ್ಲಿ 15,38,86,097 ರು., 2013-14ರಲ್ಲಿ 21,30,39,000 ರು., 2014-15ರಿಂದ 2018-19ರವರೆಗೆ 14,53,46,176 ರು. ಸೇರಿದಂತೆ ಒಟ್ಟು 66,35,07,140 ರು.ಗಳು ವಸೂಲಾಗಬೇಕಿತ್ತು.

ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಮಹಾಲೇಖಪಾಲರು 2020ರ ಮೇ 6ರಂದು ಪತ್ರ ಬರೆದಿದ್ದರು. 2014-15ರಿಮದ 2018-19ರವರೆಗಿನ ಲೆಕ್ಕಪತ್ರ ತಪಾಸಣೆ ಪರವಿವೀಕ್ಷಣ ವರದಿ ಸಲ್ಲಿಸಲು ಸೂಚಿಸಿದ್ದರಲ್ಲದೆ ವರದಿ ತಲುಪಿದ ಒಂದು ತಿಂಗಳೊಳಗಾಗಿ ಅನುಸರಣಾ ವರದಿ ಸಲ್ಲಿಸಲು ನಿರ್ದೇಶಿಸಿತ್ತು. ಅಲ್ಲದೆ 1990-91ರಿಂದ 2013-14ನೇ ಸಾಲಿನವರೆಗೂ ತೀರುವಳಿಯಾಗದೇ ಬಾಕಿ ಉಳಿದಿರುವ 110 ಕಂಡಿಕೆಗಳಿಗೆ ಉತ್ತರವನ್ನು ಸಲ್ಲಿಸಲು ಸೂಚಿಸಿತ್ತು.

Hot this week

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

Topics

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

Related Articles

Popular Categories

error: Content is protected !!