Sunday | September 20, 2026 |

ವಿಜಯೇಂದ್ರ ವಿರುದ್ಧ ಡಿಜಿಐಜಿಗೆ ಜನಾಧಿಕಾರ ಸಂಘರ್ಷ ಪರಿಷತ್‌ ದೂರು;ಠಾಣೆ ಮೆಟ್ಟಿಲೇರಿದ ಸುಲಿಗೆ ಪ್ರಕರಣ

ಬೆಂಗಳೂರು; ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬಹುಮಹಡಿ ಸಮುಚ್ಛಯ ನಿರ್ಮಾಣ ಕಂಪನಿಯಿಂದ 7.40 ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜನಾಧಿಕಾರ ಸಂಘರ್ಷ ಪರಿಷತ್‌, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿಯ ರಾಜ್ಯ ಘಟಕದ ಉಪಾಧ್ಯಕ್ಷರೂ ಆಗಿರುವ ಬಿ ವೈ ವಿಜಯೇಂದ್ರ, ಶಶಿಧರ್‌ ಮರಡಿ ಸೇರಿದಂತೆ ಇತರ ಸಹಚರರ ವಿರುದ್ಧ ಸುಲಿಗೆ ಮತ್ತು ಕ್ರಿಮಿನಲ್‌ ಸಂಚು ಆರೋಪದಡಿಯಲ್ಲಿ ಇದೀಗ ರಾಜ್ಯ ಪೊಲೀಸ್‌ ಮಹಾನಿರ್ದೇಶಕ, ಬೆಂಗಳೂರು ಪೊಲೀಸ್‌ ಕಮಿಷನರ್‌ ಹಾಗೂ ಶೇಷಾದ್ರಿಪುರಂ ಠಾಣಾಧಿಕಾರಿಗೆ ಲಿಖಿತ ದೂರು ಸಲ್ಲಿಸಿದೆ.

ಬಿ ವೈ ವಿಜಯೇಂದ್ರ ಅವರ ವಿರುದ್ಧ ಕೇಳಿ ಬಂದಿರುವ ಈ ಆರೋಪವು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿರುವ ಬೆನ್ನಲ್ಲೇ ಜನಾಧಿಕಾರ ಸಂಘರ್ಷ ಪರಿಷತ್‌ ಪ್ರಕರಣವನ್ನು ಪೊಲೀಸ್‌ ಇಲಾಖೆ ಮೆಟ್ಟಿಲೇರಿಸಿದೆ.

ವಸತಿ ಸಮುಚ್ಛಯ ನಿರ್ಮಾಣದ ರಾಮಲಿಂಗಂ ಕನ್ಸ್‌ಟ್ರಕ್ಷನ್ಸ್‌ ಕಂಪನಿಯಿಂದ ನಗದು ಮತ್ತು ಆರ್‌ಟಿಜಿಎಸ್‌ ಮೂಲಕ ಸುಮಾರು 20 ಕೋಟಿ ರು.ಗಳನ್ನು ಸುಲಿಗೆ ಮಾಡಿದ್ದಾರೆ ಎಂದು ಜನಾಧಿಕಾರ ಸಂಘರ್ಷ ಪರಿಷತ್‌ ದೂರಿನಲ್ಲಿ ವಿವರಿಸಿದೆ. ಈ ದೂರಿನ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಬಿ ವೈ ವಿಜಯೇಂದ್ರ ಮತ್ತು ಶಶಿಧರ್‌ ಮರಡಿ ಎಂಬುವರ ಮೇಲೆ ಐಪಿಸಿ 384, ಸೆಕ್ಷನ್‌ 34 ಮತ್ತು 120(ಬಿ) ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಜನಾಧಿಕಾರ ಸಂಘರ್ಷ ಪರಿಷತ್‌ ಆಗ್ರಹಿಸಿದೆ. ಖಾಸಗಿ ಮಾಧ್ಯಮವೊಂದು ಇತ್ತೀಚೆಗೆ ಮಾಡಿದ್ದ ವರದಿ ಆಧರಿಸಿ ಈ ದೂರನ್ನು ಸಲ್ಲಿಸಿದೆ.
ಶಶಿಧರ್‌ ಮರಡಿ ಅವರು ಹೊಂದಿರುವ ಬ್ಯಾಂಕ್‌ ಖಾತೆಗೆ 7.4 ಕೋಟಿ ರು.ಗಳನ್ನು ನಿರ್ಮಾಣ ಕಂಪನಿ ಆರ್‌ಟಿಜಿಎಸ್‌ ಮೂಲಕ ಸಂದಾಯ ಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದೆ.

ಅದೇ ರೀತಿ ವಾಟ್ಸಾಪ್‌ ಸಂಭಾಷಣೆಯಲ್ಲಿ ನಮೂದಿಸಿದ್ದ ಎಚ್‌ಡಿಎಫ್‌ಸಿ ಬ್ಯಾಂಕ್‌ನ ಶೇ‍ಷಾದ್ರಿಪುರಂ ಶಾಖೆಯಲ್ಲಿ ಶಶಿಧರ್‌ ಮರಡಿ ಹೊಂದಿರುವ ಉಳಿತಾಯ ಖಾತೆಗೆ ಜನಾಧಿಕಾರ ಸಂಘರ್ಷ ಪರಿಷತ್‌ ನ ಪ್ರಕಾಶ್‌ ಬಾಬು ಎಂಬುವರು 100 ರು. ನಗದನ್ನು ಪಾವತಿಸಿ ಖಾತೆಯನ್ನು ಖಚಿತಪಡಿಸಿಕೊಂಡಿರುವುದನ್ನೂ ದೂರಿನಲ್ಲಿ ಉಲ್ಲೇಖಿಸಿರುವುದು ವಿಶೇಷ.

ಅಧಿಕಾರಿಯೊಬ್ಬರು ಮುಖ್ಯಮಂತ್ರಿ ಹೆಸರು ಬಳಸಿಕೊಂಡು ನಿರ್ಮಾಣ ಕಂಪನಿಯಿಂದ ಲಂಚ ಪಡೆದಿರುವುದು ತಿಳಿದಿದ್ದರೂ ಸಹ ಆ ಅಧಿಕಾರಿ ಮೇಲೆ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸದಿರುವುದು ಬಿ ವೈ ವಿಜಯೇಂದ್ರ ಅವರ ಮೇಲೆ ಅನುಮಾನಕ್ಕೆ ಕಾರಣವಾಗಿದೆ. ಈ ಅನುಮಾನದ ಹಿನ್ನೆಲೆಯಲ್ಲಿ ನಿರ್ಮಾಣ ಕಂಪನಿಗೆ ಬೆದರಿಕೆ ಹಾಕಿ ಹಣ ನೀಡಲು ಒತ್ತಡ ಹೇರಿ ನಿರ್ಮಾಣ ಕಾರ್ಯಕ್ಕೆ ತಡೆ ಹಾಕಿರುವುದು ಸುಲಿಗೆ ಪ್ರಕರಣಕ್ಕೆ ಬಲವಾದ ಸಾಕ್ಷಿಯಾಗಿದೆ ಎಂದು ದೂರಿನಲ್ಲಿ ಪರಿಷತ್‌ ವಿವರಿಸಿದೆ.

ವಾಟ್ಸಾಪ್‌ ಚಾಟ್‌ಗಳಲ್ಲಿ ಶಶಿಧರ್‌ ಮರಡಿ ಎಂಬುವರು ಹಣಕ್ಕಾಗಿ ಬೇಡಿಕೆ ಇಟ್ಟಿರುವುದು ನಂತರ ಹಣ ಪಡೆದಿರುವುದು, ನಗದು ಹಾಗೂ ಆರ್‌ಟಿಜಿಎಸ್‌ ಮೂಲಕ ತಮ್ಮ ಖಾತೆಗೆ ಹಣ ವರ್ಗಾವಣೆ ಆಗಿರುವುದು ಮತ್ತು ತಮ್ಮ ಸಹಚರರ ಮೂಲಕ ಸಮನ್ವಯ ಮಾಡಲು ತಿಳಿಸಿರುವುದು ಹಾಗೂ ಹಣ ಪಡೆದಿರುವ ಬಗ್ಗೆಯೂ ಖಚಿತಪಡಿಸಿರುವುದು ಈ ಪ್ರಕರಣಕ್ಕೆ ಹೆಚ್ಚಿನ ಪುಷ್ಠಿ ನೀಡುತ್ತದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಣ ಕಂಪನಿ ರಾಮಲಿಂಗಂ ಕನ್ಸ್‌ಟ್ರಕ್ಷನ್ಸ್‌ ಮತ್ತು ಖಾಸಗಿ ಮಾಧ್ಯಮದ ಮುಖ್ಯಸ್ಥ ರಾಕೇಶ್‌ ಶೆಟ್ಟಿ ಅವರನ್ನು ಸಾಕ್ಷಿಗಳನ್ನಾಗಿ ಪರಿಗಣಿಸಬೇಕು ಎಂದು ದೂರಿನಲ್ಲಿ ಜನಾಧಿಕಾರ ಸಂಘರ್ಷ ಪರಿಷತ್‌ ಕೋರಿದೆ.

Hot this week

ಖರ್ಗೆ ಕುಟುಂಬ ಸದಸ್ಯರ ಸಿದ್ದಾರ್ಥ ವಿಹಾರ ಟ್ರಸ್ಟ್‌; ಪ್ರಕರಣ ಮುಂದುವರಿಕೆ, ಲೋಕಾಯುಕ್ತ ಎಸ್‌ಪಿ ಗೆ ನೋಟೀಸ್‌ ನೀಡಿದ ನ್ಯಾಯಾಲಯ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ,...

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...
Please Scan to make Your Contribution

Topics

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ...

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

Related Articles

Popular Categories

error: Content is protected !!