Monday | September 7, 2026 |

ಮಾಧ್ಯಮ ಸಲಹೆಗಾರರಿಂದ ಬಿಜೆಪಿ ಕಾರ್ಯಕರ್ತನ ನಾಮನಿರ್ದೇಶನಕ್ಕೆ ಮುಖ್ಯಮಂತ್ರಿಗೆ ಶಿಫಾರಸ್ಸು

ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್‌ ಅವರು ಪಂಚಾಯ್ತಿ ಕ್ಷೇತ್ರವೊಂದರ ಮೀಸಲಾತಿ ಬದಲಾವಣೆ, ರಾಜ್ಯೋತ್ಸವ ಪ್ರಶಸ್ತಿಗೆ ಶಿಫಾರಸ್ಸು, ವ್ಯಾಜ್ಯದಲ್ಲಿರುವ ನಿವೇಶನ ಪ್ರಕರಣದಲ್ಲಿ ಬಿಎಂಟಿಎಫ್‌ ಅಧೀಕ್ಷಕರಿಗೆ ಬರೆದಿದ್ದ ಪತ್ರವನ್ನು ಹೊರಗೆಡವಿದ್ದ ‘ದಿ ಫೈಲ್‌’ ವಿದ್ಯುತ್‌ ನಿಗಮಕ್ಕೆ ಬಿಜೆಪಿ ಕಾರ್ಯಕರ್ತರೊಬ್ಬರನ್ನು ನಾಮನಿರ್ದೇಶನ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬರೆದಿದ್ದ ಪತ್ರವನ್ನು ಮುನ್ನೆಲೆಗೆ ತಂದಿದೆ.

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತ ಡಿ ಎಂ ಸತೀಶ್‌ ಎಂಬುವರನ್ನು ಕರ್ನಾಟಕ ಪವರ್‌ ಕಾರ್ಪೋರೇಷನ್‌ ಲಿಮಿಟೆಡ್‌ಗೆ (ಕೆಪಿಸಿಎಲ್‌) ನಾಮನಿರ್ದೇಶನ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶಿಫಾರಸ್ಸು ಮಾಡಿರುವುದು ಚರ್ಚೆಗೆ ಕಾರಣವಾಗಿದೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಮುಖ್ಯಮಂತ್ರಿಗೆ ಬರೆದಿರುವ ಪತ್ರದಲ್ಲೇನಿದೆ?

‘ತುಮಕೂರು ತಾಲೂಕು ದೇವರಾಯಪಟ್ಟಣದ ಡಿ ಎಂ ಸತೀಶ್‌ ಅವರು ನನಗೆ ಚಿರಪರಿಚಿತರಾಗಿರುತ್ತಾರೆ. ಇವರು ಸುಮಾರು 27 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸಮಾಜ ಸೇವೆಯನ್ನು ಸಲ್ಲಿಸಿರುತ್ತಾರೆ. ಇವರ ಸೇವೆಯನ್ನು ಪರಿಗಣಿಸಿ ಕರ್ನಾಟಕ ಪವರ್‌ ಕಾರ್ಪೋರೇಷನ್‌ ನಿಯಮಿತಕ್ಕೆ ನಾಮನಿರ್ದೇಶಿತ ಸದಸ್ಯ/ನಿರ್ದೇಶಕರಾಗಿ ನೇಮಕ ಮಾಡಬೇಕು,’ ಎಂದು ಪತ್ರ ಮುಖೇನ 2019ರ ಡಿಸೆಂಬರ್‌ 20ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶಿಫಾರಸ್ಸು ಮಾಡಿದ್ದರು.

ಕೆಪಿಸಿಎಲ್‌ಗೆ ಮುಖ್ಯಮಂತ್ರಿ ಅಧ್ಯಕ್ಷರು. ಉಳಿದಂತೆ ಹಿರಿಯ ಐಎಎಸ್‌ ಅಧಿಕಾರಿಗಳು ನಿರ್ದೇಶಕರಾಗಿದ್ದಾರೆ. ನಾಮನಿರ್ದೇಶನ ಮಾಡುವ ಪರಮಾಧಿಕಾರ ಮುಖ್ಯಮಂತ್ರಿಗಿದೆ. ನಿಗಮಕ್ಕೆ 5 ಮಂದಿಯನ್ನು ನಾಮನಿರ್ದೇಶನ ಮಾಡಲು ಅವಕಾಶವಿದೆ ಎಂದು ತಿಳಿದು ಬಂದಿದೆ.

ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಮುಖ್ಯಮಂತ್ರಿಗಳು ತಮ್ಮ ಹೆಸರನ್ನು ಪರಿಗಣಿಸಿದ್ದಾರೆಂದು ತಿಳಿದು ಬಂದಿದೆ. ಆದರೆ ನಾನು ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಮಾಧ್ಯಮ ಸಲಹೆಗಾರ ಆಗಿರುವುದರಿಂದ ಈ ಪ್ರಶಸ್ತಿ ಸ್ವೀಕರಿಸುವುದು ನೈತಿಕವಾಗಿ ಸರಿಯಲ್ಲ ಎಂಬುದು ನನ್ನ ಭಾವನೆ ಎಂದು ನೈತಿಕ ವಿಚಾರವನ್ನು ಮುಂದಿಟ್ಟು ಪಟ್ಟಿ ಅಂತಿಮಗೊಳ್ಳುವ ಮುನ್ನವೇ ಪ್ರಶಸ್ತಿಯನ್ನು ಮಹಾದೇವ ಪ್ರಕಾಶ್‌ ಅವರು ತಿರಸ್ಕರಿಸಿದ್ದರು.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಐನೂರು ಹೊಸಹಳ್ಳಿ ಗ್ರಾಮ ಪಂಚಾಯ್ತಿಯ ಕಾರಮಂಗಲ ಕ್ಷೇತ್ರದ ಮೀಸಲಾತಿ ಬದಲಾಯಿಸಲು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು. ನೈತಿಕತೆ ಮತ್ತು ಹಿತಾಸಕ್ತಿ ಸಂಘರ್ಷದ ಬಗ್ಗೆ ಬರೆದುಕೊಂಡಿದ್ದ ಅವರು 2019ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ತಮ್ಮ ಸಂಪಾದಕತ್ವದಲ್ಲಿ ಪ್ರಕಟಗೊಳ್ಳುತ್ತಿರುವ ಮಾಸಿಕವೊಂದರ ಅಂಕಣಕಾರೊಬ್ಬರನ್ನು ಸೇರಿದಂತೆ 50 ಮಂದಿಗೆ ಶಿಫಾರಸ್ಸು ಮಾಡಿದ್ದರು. ವ್ಯಾಜ್ಯದಲ್ಲಿರುವ ನಿವೇಶನ ಪ್ರಕರಣದಲ್ಲಿ ಬಿಎಂಟಿಎಫ್‌ ಅಧೀಕ್ಷಕರಿಗೆ ಪತ್ರ ಬರೆದು ಕೈಗೊಂಡ ಕ್ರಮದ ವರದಿಯನ್ನು ಕಚೇರಿಗೆ ರವಾನಿಸಬೇಕು ಎಂದು ಹೇಳಿದ್ದನ್ನು ಸ್ಮರಿಸಬಹುದು.

Hot this week

ಲೀಡ್‌ ಮೆಂಬರ್‍‌ನದ್ದು ಶೂನ್ಯ ವಹಿವಾಟು; ಆದರೂ ಟೆಂಡರ್ ಪ್ಯಾಕೇಜ್‌ನ 7 ಮತ್ತು 9ರಲ್ಲಿ ಎಲ್ 1 ಆಗಿದ್ಹೇಗೆ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ, ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಾಗಾಣಿಕೆಗೆ ಸಂಬಂಧಿಸಿದಂತೆ...

ಪ್ರಜಾಸೇವೆ ಅಭಿಯಾನ ಚಾಲನೆ ಕಾರ್ಯಕ್ರಮಕ್ಕೆ 2.86 ಕೋಟಿ ವೆಚ್ಚ ; ಬರದಿಂದ ತತ್ತರಿಸಿದ್ದರೂ ದುಂದುವೆಚ್ಚಗಳಿಗೆ ಬಿದ್ದಿಲ್ಲ ಕಡಿವಾಣ

ಬೆಂಗಳೂರು;  ಬರದಿಂದ ತತ್ತರಿಸಿ ಹೋಗಿರುವ ರಾಜ್ಯದ 101 ತಾಲೂಕುಗಳಿಗೆ ನಷ್ಟದ ಪರಿಹಾರ...

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಬುಕ್ ಬ್ರಹ್ಮ ಸಾಹಿತ್ಯ ಉತ್ಸವಕ್ಕೆ 5 ಲಕ್ಷ ರು ಅನುದಾನ; ನೋಂದಣಿಯಾಗಿ 3 ವ‍ರ್ಷ ಪೂರೈಸದ ಬುಕ್‌ ಬ್ರಹ್ಮ ಫೌಂಡೇಷನ್‌ಗೆ ಒಂದು ಬಾರಿ ವಿನಾಯಿತಿ

ಬೆಂಗಳೂರು;  ಅನುದಾನ ಪಡೆಯುವ ಸಂಘ, ಸಂಸ್ಥೆಗಳು ನೋಂದಣಿಯಾಗಿ  3 ವರ್ಷಗಳನ್ನು ಪೂರೈಸಿರಬೇಕು...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...
Please Scan to make Your Contribution

Topics

ಲೀಡ್‌ ಮೆಂಬರ್‍‌ನದ್ದು ಶೂನ್ಯ ವಹಿವಾಟು; ಆದರೂ ಟೆಂಡರ್ ಪ್ಯಾಕೇಜ್‌ನ 7 ಮತ್ತು 9ರಲ್ಲಿ ಎಲ್ 1 ಆಗಿದ್ಹೇಗೆ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ, ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಾಗಾಣಿಕೆಗೆ ಸಂಬಂಧಿಸಿದಂತೆ...

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...

Related Articles

Popular Categories

error: Content is protected !!