Friday | July 3, 2026 |

ನಿರ್ಭಯಾ ಅನುದಾನದ ಸಿಸಿಟಿವಿ; ಸಚಿವ ಸಂಪುಟ ಬದಿಗಿರಿಸಿ 667 ಕೋಟಿ ಮರು ಟೆಂಡರ್‌?

ಬೆಂಗಳೂರು; ನಿರ್ಭಯ ಅನುದಾನದಡಿಯಲ್ಲಿ ಬೆಂಗಳೂರು ನಗರದಲ್ಲಿ ಸಿಸಿಟಿವಿ ಅಳವಡಿಸಲು ಮುಂದಾಗಿರುವ ಪೊಲೀಸ್‌ ಇಲಾಖೆ, 667 ಕೋಟಿ ರು. ಮೊತ್ತದ ಟೆಂಡರ್‌ ಪ್ರಕ್ರಿಯೆಯನ್ನು ಸಚಿವ ಸಂಪುಟಕ್ಕೆ ಮಂಡಿಸದೆಯೇ ಹಿರಿಯ ಐಪಿಎಸ್‌ ಅಧಿಕಾರಿಗಳ ಹಂತದಲ್ಲೇ ನಡೆಸಲು ಪೂರ್ಣಗೊಳಿಸಲು ಮುಂದಾಗಿದೆ.

ಈ ಹಿಂದೆ ಇದೇ ಯೋಜನೆಗೆ ಕರೆದಿದ್ದ ಟೆಂಡರ್‌ ಪ್ರಕ್ರಿಯೆಯಲ್ಲಿನ ಲೋಪಗಳ ಕುರಿತು ಪ್ರಧಾನಿಗೆ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ನೀಡಿದ್ದರಿಂದ ಮರು ಟೆಂಡರ್‌ ಪ್ರಕ್ರಿಯೆ ನಡೆದಿದೆ. ಯೋಜನೆ ಮೊತ್ತ 10 ಕೋಟಿ ರು. ಮೀರಿರುವುದರಿಂದ ಸಚಿವ ಸಂಪುಟಕ್ಕೆ ಟೆಂಡರ್‌ ಪ್ರಕ್ರಿಯೆಗಳನ್ನು ಮಂಡಿಸಬೇಕು. ಈ ಕುರಿತು ರಾಜ್ಯ ಸರ್ಕಾರವು ಈ ಹಿಂದೆ ಆದೇಶ ಹೊರಡಿಸಿತ್ತು.

ಆದರೆ ಟೆಂಡರ್‌ ಆಹ್ವಾನ ಸಮಿತಿಯ ಅಧ್ಯಕ್ಷ ಹೆಚ್ಚುವರಿ ಪೊಲೀಸ್‌ ಆಯುಕ್ತ ಹೇಮಂತ್‌ ನಿಂಬಾಳ್ಕರ್‌ ಅವರು ಸಚಿವ ಸಂಪುಟಕ್ಕೆ ಮಂಡಿಸದೆಯೇ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದಾರೆ. ಅಲ್ಲದೆ ಐಎಂಎ ವಂಚನೆ ಪ್ರಕರಣದಲ್ಲಿ ಗುರುತರ ಆರೋಪ ಮತ್ತು ಸಿಬಿಐ ವಿಚಾರಣೆಗೊಳಪಟ್ಟಿರುವ ಹೇಮಂತ್‌ ನಿಂಬಾಳ್ಕರ್‌ ಅವರನ್ನೇ ಟೆಂಡರ್‌ ಆಹ್ವಾನ ಮತ್ತು ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ಮುಂದುವರೆಸಿರುವುದಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳ ವಲಯದಲ್ಲಿಯೂ ಅಸಮಾಧಾನಕ್ಕೆ ಕಾರಣವಾಗಿದೆ.

ಮರು ಟೆಂಡರ್‌ ನಡೆಸುವ ಸಂಬಂಧದ ಕಡತವನ್ನು ಟೆಂಡರ್‌ ಅಂಗೀಕಾರ ಸಮಿತಿಯ ಅಧ್ಯಕ್ಷರೂ ಆಗಿರುವ ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌ ಅವರಿಗೆ ಸಲ್ಲಿಕೆಯಾಗಿದೆ ಎಂದು ಗೊತ್ತಾಗಿದೆ.

ಏನದು ಯೋಜನೆ?

ಬೆಂಗಳೂರು ನಗರದಲ್ಲಿ ನಿರ್ಭಯ ಯೋಜನೆಯಡಿ ಸೇಫ್‌ ಸಿಟಿ ಪ್ರಾಜೆಕ್ಟ್‌ನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರವು 667.00 ಕೋಟಿ ರು.ಗೆ ಮಂಜೂರಾತಿ ನೀಡಿತ್ತು. ಇದರಲ್ಲಿ ಕೇಂದ್ರದ ಪಾಲಿನ 167.26 ಕೋಟಿ ಹಾಗೂ ರಾಜ್ಯ ಸರ್ಕಾರದಿಂದ 111.56 ಕೋಟಿ ಒಟ್ಟು 278.76 ಕೋಟಿ ರು. ಅನುದಾಕ್ಕೆ ಮಂಜೂರಾತಿ ದೊರೆತಿದೆ.

ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಾಜ್ಯ ಉನ್ನತ ಮಟ್ಟದ ಸಭೆ ನಡೆದಿತ್ತು. ಟೆಂಡರ್‌ ಪ್ರಕ್ರಿಯೆ ಕೈಗೊಳ್ಳಲು 2019ರ ಸೆಪ್ಟಂಬರ್‌ 7ರಂದು ಟೆಂಡರ್‌ ಆಹ್ವಾನ ಸಮಿತಿ, ಟೆಂಡರ್‌ ಪರಿಶೀಲನಾ ಸಮಿತಿ ಮತ್ತು ಅಂಗೀಕಾರ ಸಮಿತಿಯನ್ನು ಸರ್ಕಾರ ರಚಿಸಿತ್ತು. ಈ ಪೈಕಿ ಟೆಂಡರ್‌ ಆಹ್ವಾನ ಮತ್ತು ಪರಿಶೀಲನಾ ಸಮಿತಿಗೆ ಹೆಚ್ಚುವರಿ ಪೊಲೀಸ್‌ ಆಯುಕ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು ಎಂಬುದು ತಿಳಿದು ಬಂದಿದೆ.

ಪ್ರಧಾನಿ ಕಚೇರಿ ಮೆಟ್ಟಿಲೇರಿತ್ತು ಟೆಂಡರ್‌ ಪ್ರಕರಣ

ಈ ಯೋಜನೆಗೆ ಆರಂಭದಲ್ಲಿ ಪೊಲೀಸ್‌ ಇಲಾಖೆ ಕರೆದಿದ್ದ ಟೆಂಡರ್‌ ಪ್ರಕ್ರಿಯೆ ಮತ್ತು ಕಂಪನಿಯನ್ನು ಅಯ್ಕೆ ಮಾಡಿದ್ದ ಪ್ರಕ್ರಿಯೆಯಲ್ಲಿ ಲೋಪಗಳಾಗಿವೆ ಎಂದು ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಪ್ರಧಾನಿ ಕಚೇರಿಗೆ 2020ರ ಜೂನ್‌ 29ರಂದು ದೂರು ಸಲ್ಲಿಸಿತ್ತು. ಟೆಂಡರ್‌ನಲ್ಲಿ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌, ಲಾರ್ಸನ್‌ ಅಂಡ್‌ ಟೋಬ್ರೋ (ಎಲ್‌ ಅಂಡ್‌ ಟಿ), ಮಾಟ್ರಿಕ್ಸ್‌ ಸೆಕ್ಯುರಿಟಿ ಅಂಡ್‌ ಸರ್ವೇಲೆಯನ್ಸ್‌ ಪ್ರೈವೈಟ್‌ ಲಿಮಿಟೆಡ್‌, ಎನ್‌ಸಿಸಿ ಲಿಮಿಟೆಡ್‌ ಭಾಗವಹಿಸಿದ್ದವು.

ಹಿತಾಸಕ್ತಿ ಸಂಘರ್ಷ ಆರೋಪ

ಟೆಂಡರ್‌ನಲ್ಲಿ ಭಾಗವಹಿಸಿದ್ದ ಮ್ಯಾಟ್ರಿಕ್ಸ್‌ ಮತ್ತು ಎನ್‌ಸಿಸಿ ನಿರ್ದೇಶಕರೊಬ್ಬರು ಎರಡೂ ಕಂಪನಿಯಲ್ಲಿ ಶೇ.5ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಷೇರು ಹೊಂದಿದ್ದರು. ಹೀಗಾಗಿ ಎರಡೂ ಕಂಪನಿಗಳಿಗೆ ಅವಕಾಶಕೊಟ್ಟಲ್ಲಿ ಇದು ಹಿತಾಸಕ್ತಿ ಸಂಘರ್ಷವಾಗಲಿದೆ. ಹಾಗೆಯೇ ಆರ್‌ಎಫ್‌ಪಿ ಷರತ್ತುಗಳನ್ನು ನೇರವಾಗಿ ಉಲ್ಲಂಘಿಸಿದೆ ಎಂದು ಬಿಇಎಲ್‌ ಕಂಪನಿ ಪ್ರಧಾನಿಗೆ ಸಲ್ಲಿಸಿದ್ದ ದೂರಿನಲ್ಲಿ ವಿವರಿಸಿತ್ತು ಎಂಬುದು ತಿಳಿದು ಬಂದಿದೆ.

ಅನರ್ಹಗೊಂಡಿದ್ದ ಎನ್‌ಸಿಸಿ

ಆರ್‌ಎಫ್‌ಪಿ ಪ್ರಕಾರ ದಾಖಲೆಗಳನ್ನು ನೀಡದ ಕಾರಣ ಟೆಂಡರ್‌ ಸಮಿತಿಯು ಎನ್‌ಸಿಸಿ ಲಿಮಿಟೆಡ್‌ನ್ನು ಅನರ್ಹಗೊಳಿಸಿತ್ತು. ಹೀಗಾಗಿ ಮ್ಯಾಟ್ರಿಕ್ಸ್‌ ಕಂಪನಿಯನ್ನು ಟೆಂಡರ್‌ನಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು ಎಂಬುದು ದೂರಿನಿಂದ ಗೊತ್ತಾಗಿದೆ.

ಚೀನಾ ಉತ್ಪನ್ನ ನಮೂದಿಸಿದ್ದ ಮ್ಯಾಟ್ರಿಕ್ಸ್‌

ಟೆಂಡರ್‌ನಲ್ಲಿ ಭಾಗವಹಿಸಲು ಅವಕಾಶ ಪಡೆದುಕೊಂಡಿದ್ದ ಮ್ಯಾಟ್ರಿಕ್ಸ್‌ ಕಂಪನಿಯು ಚೀನಾ ತಯಾರಿಸಿರುವ ಕ್ಯಾಮರಾ, ಸರ್ವರ್‌, ಸಂಗ್ರಹಣಾ ಕೋಶ ಉಪಕರಣಗಳ ಸೇರಿದಂತೆ ಇನ್ನಿತರೆ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ನಮೂದಿಸಿತ್ತು. ಟೆಂಡರ್‌ ಮೌಲ್ಯಮಾಪನ ಸಮಿತಿ ಮುಂದೆ ಇದೇ ಉಪಕರಣಗಳ ಮಾದರಿಯನ್ನು ಪ್ರದರ್ಶಿಸಿತ್ತು.

ಚೀನಾ ತಯಾರಿಸಿರುವ ಸಿಸಿಟಿವಿ ಕ್ಯಾಮರಾಗಳನ್ನು ಬಳಸಿದಲ್ಲಿ ಸಾರ್ವಜನಿಕ ಭದ್ರತೆ, ಸುರಕ್ಷತೆಗೆ ಧಕ್ಕೆ ಆಗಲಿದೆ ಎಂದು ದೂರಿದ್ದ ಬಿಇಎಲ್‌, ನಿವಾಸಿಗಳ ದತ್ತಾಂಶವೂ ಸೋರಿಕೆಯಾಗಲಿದೆ. ಹಾಗೆಯೇ ಖಾಸಗಿತನದ ಮಹತ್ವ ಕಳೆದುಕೊಳ್ಳಲಿದೆ. ಹೀಗಾಗಿ ಟೆಂಡರ್‌ ಪ್ರಕ್ರಿಯೆಯಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸುವ ಮೂಲಕ ಟೆಂಡರ್‌ ಪ್ರಾಧಿಕಾರವು ಮ್ಯಾಟ್ರಿಕ್ಸ್‌ ಕಂಪನಿಯನ್ನು ಅನರ್ಹಗೊಳಿಸಲು ಟೆಂಡರ್‌ ಪ್ರಾಧಿಕಾರಕ್ಕೆ ನಿರ್ದೇಶಿಸಬೇಕು ಎಂದು ದೂರಿನಲ್ಲಿ ಕೋರಿತ್ತು.

Hot this week

ಸಿಎಂ, ಡಿಸಿಎಂ ಸೇರಿ ಐವರು ಸಚಿವರ ವಸತಿಗೃಹ ನವೀಕರಣ, ದುರಸ್ತಿ, ಪೀಠೋಪಕರಣ, ಗೃಹಪಯೋಗಿ ವಸ್ತುಗಳ ಖರೀದಿ; 3 ವರ್ಷದಲ್ಲಿ 19.01 ಕೋಟಿ ರು ವೆಚ್ಚ

ಬೆಂಗಳೂರು; ಸರ್ಕಾರಿ ಶಾಲೆ, ಸರ್ಕಾರಿ ವಿದ್ಯಾರ್ಥಿ ನಿಲಯಗಳ ನಿರ್ಮಾಣ, ಇರುವ ಕೊಠಡಿಗಳ...

ಶಾಲಾ ಶಿಕ್ಷಣಕ್ಕಾಗಿ ಹಣಕಾಸು ಪೂರೈಕೆ; ವೆಚ್ಚ ಸಾಲದು, ಹೆಚ್ಚಿದ ಸಂಪನ್ಮೂಲ ಅಂತರ, ಬಜೆಟ್‌ನಲ್ಲಿ ಕುಸಿತ, ಖಾಸಗೀಕರಣಕ್ಕೆ ದಾರಿಯಾಗಲಿದೆಯೇ?

ಬೆಂಗಳೂರು; ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವು ವೇಗವಾಗಿ ಹೆಚ್ಚುತ್ತಿದ್ದರೂ ಸಹ ಶಿಕ್ಷಣದ ಮೇಲಿನ...
Please Scan to make Your Contribution

Topics

ಶಾಲಾ ಶಿಕ್ಷಣಕ್ಕಾಗಿ ಹಣಕಾಸು ಪೂರೈಕೆ; ವೆಚ್ಚ ಸಾಲದು, ಹೆಚ್ಚಿದ ಸಂಪನ್ಮೂಲ ಅಂತರ, ಬಜೆಟ್‌ನಲ್ಲಿ ಕುಸಿತ, ಖಾಸಗೀಕರಣಕ್ಕೆ ದಾರಿಯಾಗಲಿದೆಯೇ?

ಬೆಂಗಳೂರು; ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವು ವೇಗವಾಗಿ ಹೆಚ್ಚುತ್ತಿದ್ದರೂ ಸಹ ಶಿಕ್ಷಣದ ಮೇಲಿನ...

ರಾಷ್ಟ್ರೀಯ ಪರೀಕ್ಷೆಗಳಿಂದಾಗಿ ಎಸ್‌ ಸಿ, ಎಸ್‌ ಟಿ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕುಸಿತ, ನಗರ ವಿಶ್ವವಿದ್ಯಾಲಯಗಳೊಂದಿಗೆ ಗ್ರಾಮೀಣ ಕಾಲೇಜುಗಳ ವಿಲೀನಕ್ಕೆ ಆಯೋಗ ಅಸಮ್ಮತಿ

ಬೆಂಗಳೂರು;  ಸಾಮಾನ್ಯ ಶಿಕ್ಷಣ ಕೋರ್ಸ್‌ಗಳಲ್ಲಿ ರಾಷ್ಟ್ರೀಯ ಪ್ರವೇಶಗಳ ಪರೀಕ್ಷೆಗಳನ್ನು ಪರಿಚಯಿಸಿದ್ದರಿಂದಾಗಿ ಪರಿಶಿಷ್ಟ...

ವಿಟಿಯು ಕುಲಪತಿ ವಿರುದ್ಧದ ಎರಡು ರಿಟ್ ಅರ್ಜಿ; ವಿಚಾರಣೆಯಿಂದಲೇ ಹಿಂದೆ ಸರಿದ ನ್ಯಾಯಮೂರ್ತಿ, ಚರ್ಚೆಗೆ ಗ್ರಾಸವಾದ ನಡೆ

ಬೆಂಗಳೂರು;   ವಿಟಿಯು ಹಾಲಿ ಕುಲಪತಿ ಡಾ ಎಸ್‌ ವಿದ್ಯಾಶಂಕರ್ ಅವರ ನೇಮಕಾತಿಯನ್ನು...

Related Articles

Popular Categories

error: Content is protected !!