Wednesday | August 26, 2026 |

ಉಲ್ಲಂಘನೆ; ವನ್ಯಜೀವಿ ಮಂಡಳಿಯಲ್ಲಿ ಪರಿಶಿಷ್ಟ ವರ್ಗಕ್ಕೆ ಸಿಗದ ಪ್ರಾತಿನಿಧ್ಯ

ಬೆಂಗಳೂರು; ರಾಜ್ಯ ವನ್ಯಜೀವಿ ಮಂಡಳಿಗೆ ಅಧಿಕಾರೇತರ ಸದಸ್ಯರನ್ನು ಪ್ರಸಕ್ತ ಅವಧಿಗೆ ನಾಮನಿರ್ದೇಶನ ಮಾಡಿರುವ ಬಿಜೆಪಿ ಸರ್ಕಾರ, ಪರಿಶಿಷ್ಟ ಬುಡಕಟ್ಟು ವರ್ಗಕ್ಕೆ ಪ್ರಾತಿನಿಧ್ಯವನ್ನೇ ನೀಡದೇ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿರುವ ಆರೋಪಕ್ಕೆ ಗುರಿಯಾಗಿದೆ.

ಬಿಜೆಪಿಯೊಂದಿಗೆ ನೇರವಾಗಿ ಗುರುತಿಸಿಕೊಂಡರವರಿಗೆ ಮತ್ತು ಸಚಿವರ ಶಿಫಾರಸ್ಸಿಗೆ ಮನ್ನಣೆ ನೀಡಿರುವ ಬೆನ್ನಲ್ಲೇ ಪರಿಶಿಷ್ಟ ಬುಡಕಟ್ಟು ವರ್ಗಕ್ಕೆ ಪ್ರಾತಿನಿಧ್ಯವನ್ನೇ ನೀಡದಿರುವ ವಿಚಾರ ಇದೀಗ ಮುನ್ನೆಲೆಗೆ ಬಂದಿದೆ. ಹಾಗೆಯೇ ನಿರ್ದಿಷ್ಟ ಸಮುದಾಯಕ್ಕೆ ಸೇರಿದವರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಸೆಕ್ಷನ್‌ 6(1)ರ ಪ್ರಕಾರ ವನ್ಯಜೀವಿ ಮಂಡಳಿಯಲ್ಲಿ ಪರಿಶಿಷ್ಟ ಬುಡಕಟ್ಟು ವರ್ಗಕ್ಕೆ ಸೇರಿದವರಿರಬೇಕು. ಅದರಂತೆ ಈ ಹಿಂದಿನ ಕಾಂಗ್ರೆಸ್‌ ಸರ್ಕಾರವು ಅವಧಿಯಲ್ಲಿ 10 ಮಂದಿಯಲ್ಲಿ ಪರಿಶಿಷ್ಟ ಬುಡಕಟ್ಟು ವರ್ಗಕ್ಕೆ ಸೇರಿದ್ದ ವಿರಾಜಪೇಟೆ ತಾಲೂಕಿನ ಜಂಗಲ್‌ ಹಾಡಿಯ ಪಿ ಎಂ ಸುಬ್ರು ಎಂಬುವರನ್ನು ಮಂಡಳಿಗೆ ನಾಮನಿರ್ದೇಶನ ಮಾಡಿ ಪ್ರಾತಿನಿಧ್ಯ ನೀಡಲಾಗಿತ್ತು. ಆದರೆ ಬಿಜೆಪಿ ಸರ್ಕಾರವು ಬುಡಕಟ್ಟು ವರ್ಗಕ್ಕೆ ಪ್ರಾತಿನಿಧ್ಯ ನೀಡದೇ ವಂಚಿಸಿದೆ ಎಂಬ ಬಲವಾದ ಆರೋಪವೂ ಕೇಳಿ ಬಂದಿದೆ.

ಮಂಡಳಿಗೆ ವಿಧಾನಸಭೆ ಸದಸ್ಯರಾದ ರವಿಸುಬ್ರಹ್ಮಣ್ಯ ಮತ್ತು ಪೂರ್ಣಿಮಾ ಶ್ರೀನಿವಾಸ್‌ ಅವರನ್ನು ಹಾಗೂ ವಿಧಾನಪರಿಷತ್‌ ಸದಸ್ಯ ಶಾಂತರಾಮ ಸಿದ್ದಿ ಅವರನ್ನು ನಾಮನಿರ್ದೆಶನ ಮಾಡಲಾಗಿದೆ. ಈ ಪೈಕಿ ಶಾಂತರಾಮ ಸಿದ್ದಿ ಅವರನ್ನು ವಿಧಾನಮಂಡಲದ ಕೋಟಾದಡಿಯಲ್ಲಿ ನಾಮನಿರ್ದೇಶನ ಮಾಡಲಾಗಿದೆಯೇ ಹೊರತು ಪರಿಶಿಷ್ಟ ಬುಡಕಟ್ಟು ವರ್ಗದಡಿಯಲ್ಲಿ ನಾಮನಿರ್ದೇಶನ ಮಾಡಿಲ್ಲ ಎಂದು ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ತಿಳಿಸಿದ್ದಾರೆ.

ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಹೊರತುಪಡಿಸಿದಂತೆ ಮಂಡಳಿಗೆ ನಾಮನಿರ್ದೇಶನಗೊಂಡಿರುವವರ ಪೈಕಿ ಚೇತನ್‌ ಬಿ ದೊಡ್ಡಬಳ್ಳಾಪುರ, ಅಲೋಕ್‌ ವಿಶ್ವನಾಥ್‌, ದಿನೇಶ್‌ ಸಿಂಗಿ ಅವರನ್ನು ಬಿಜೆಪಿ ಸಚಿವರು ಶಿಫಾರಸ್ಸು ಮಾಡಿದ್ದಾರೆ. ಉಳಿದಂತೆ ರವಿಸುಬ್ರಹ್ಮಣ್ಯ, ಪೂರ್ಣಿಮಾ ಶ್ರೀನಿವಾಸ್‌ ಬಿಜೆಪಿ ಶಾಸಕರು.

ಬೇಲೇಕೇರಿ ಅದಿರು ರಫ್ತು ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿರುವ ಭಾರತ್‌ ಮೈನ್ಸ್‌ ಅಂಡ್‌ ಮಿನರಲ್ಸ್‌ ಮತ್ತು ಬಿಎಂಎಂ ಇಸ್ಪಾತ್‌ ಲಿಮಿಟೆಡ್‌ನ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ದಿನೇಶ್‌ ಸಿಂಗಿ ಅವರನ್ನು ವನ್ಯಜೀವಿ ಮಂಡಳಿಗೆ ನಾಮನಿರ್ದೇಶನ ಮಾಡಲು ಉಪ ಮುಖ್ಯಮಂತ್ರಿ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌ ಅವರು ಮಾಡಿದ್ದ ಶಿಫಾರಸ್ಸು ವಿವಾದಕ್ಕೆ ದಾರಿಮಾಡಿಕೊಟ್ಟಿತ್ತು.

Hot this week

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

Related Articles

Popular Categories

error: Content is protected !!