Monday | May 4, 2026 |

ಕನಿಷ್ಠ ಬೆಂಬಲ ಬೆಲೆ ಯೋಜನೆ; ಏಜೆನ್ಸಿ ಅಧಿಕಾರಿಗಳ ಲೋಪಕ್ಕೆ 63 ಕೋಟಿ ನಷ್ಟ

ಬೆಂಗಳೂರು; ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಮೆಕ್ಕೆಜೋಳ, ಭತ್ತ, ರಾಗಿ ಮತ್ತು ಜೋಳ ಖರೀದಿಸಿದ್ದ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಸೇರಿದಂತೆ ಒಟ್ಟು 3 ಖರೀದಿ ಏಜೆನ್ಸಿಗಳ ಅಧಿಕಾರಿ, ನೌಕರರ ಲೋಪದಿಂದಾಗಿ 63 ಕೋಟಿ ರು. ನಷ್ಟ ಸಂಭವಿಸಿರುವುದು ಬಹಿರಂಗವಾಗಿದೆ.

ಈ ಕುರಿತು ಕರ್ನಾಟಕ ರಾಜ್ಯ ಉಗ್ರಾಣ ನಿಗಮವು ಸಹಕಾರ ಇಲಾಖೆಯ ಇತ್ತೀಚೆಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರದಲ್ಲಿ ವಿವರಿಸಿದೆ. ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

2004-05ನೇ ಸಾಲಿನಿಂದ 2015-16ನೇ ಸಾಲಿನವರೆಗೆ ಭತ್ತ ಸರಕನ್ನು ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸಿದ ಸಂಗ್ರಹಣಾ ನಷ್ಟಕ್ಕೆ ಕಾರಣರಾದ ಅಧಿಕಾರಿ, ನೌಕರರ ವಿರುದ್ಧ ಕಠಿಣ ಕ್ರಮ ಕೈಗೊಂಡಿಲ್ಲ ಎಂಬುದು ಪತ್ರದಿಂದ ತಿಳಿದು ಬಂದಿದೆ. ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌ ಅವರು ಸಹ ಈ ಪ್ರಕರಣದ ಬಗ್ಗೆ ಆಸಕ್ತಿ ವಹಿಸಿಲ್ಲ ಎಂದು ಗೊತ್ತಾಗಿದೆ.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ 2004-05ನೇ ಸಾಲಿನಿಂದ 2015-16ನೇ ಸಾಲಿನವರೆಗೆ ಕರ್ನಾಟಕ ರಾಜ್ಯ ಉಗ್ರಾಣ ನಿಗಮವು ಖರೀದಿಸಿ ದಾಸ್ತಾನು ಮಾಡಲಾದ, ಬಿಡುಗಡೆ ಮಾಡಲಾದ ಸರಕಿನಲ್ಲಿ ಕೇಂದ್ರ ಸರ್ಕಾರವು ನಿಗದಿಪಡಿಸಿದ್ದ ಡ್ರೈಯೇಜ್‌ ಪ್ರಮಾಣಕ್ಕಿಂತ ಹೆಚ್ಚಿನ ಸರಕಿನ ನಷ್ಟ ಸಂಭವಿಸಿದೆ. ಇದು 17,09,58,530 ರು. ಎಂದು ಉಗ್ರಾಣ ನಿಗಮ ಅಂದಾಜಿಸಿದೆ.

ಅದೇ ರೀತಿ 2004-05ನೇ ಸಾಲಿನಿಂದ 2014-15ನೇ ಸಾಲಿನವರೆಗೆ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಹೊರತುಪಡಿಸಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ನಾಫೆಡ್‌ರವರು ಖರೀದಿಸಿ ರಾಜ್ಯ ಉಗ್ರಾಣಗಳಲ್ಲಿ ದಾಸ್ತಾನು ಮಾಡಲಾದ, ಬಿಡುಗಡೆ ಮಾಡಲಾದ ಸರಕಿನಲ್ಲಿಯೂ ಒಟ್ಟು 4,35,37,295 ರು.ನಷ್ಟ ಸಂಭವಿಸಿರುವುದು ಪತ್ರದಿಂದ ಗೊತ್ತಾಗಿದೆ.

ಹಾಗೆಯೇ 2004-05ನೇ ಸಾಲಿನಿಂದ 2009-10ರವರೆಗೆ ಕೇಂದ್ರ ಸರ್ಕಾರ ಅಂತಿಮ ಪಟ್ಟಿ ದರ ನೀಡಿದ್ದು, ಅದರ ಪ್ರಕಾರ ಕ್ಲೈಂ ಮಾಡಲಾದ ವಾಸ್ತವಿಕ ವೆಚ್ಚ ಮತ್ತು ಅಂತಿಮ ಕಾಸ್ಟಿಂಗ್‌ ಶೀಟ್‌ ಪ್ರಕಾರ ದರಗಳ ಪ್ರಕಾರ ಡ್ರೈಯೇಜ್‌ ನಷ್ಟ ಹೊರತುಪಡಿಸಿ ಒಟ್ಟು 42,04,55,186 ರು. ವ್ಯತ್ಯಾಸ ಕಂಡು ಬಂದಿದೆ. 2013-14ರಿಂದ 2015-16ನೇ ಸಾಲಿನ ಅಂತಿಮ ಕಾಸ್ಟಿಂಗ್‌ ಶೀಟ್‌ ಇನ್ನು ಹೊರಡಿಸದಿರುವುದು ತಿಳಿದು ಬಂದಿದೆ.

ಶಿವಮೊಗ್ಗ, ದಾವಣಗೆರೆ, ಹಾವೇರಿ, ಧಾರವಾಡ, ಕೊಪ್ಪಳ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮೆಕ್ಕಜೋಳ, ಭತ್ತ,ರಾಗಿ, ಜೋಳವನ್ನು ಮೂರು ನಿಗಮಗಳು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಖರೀದಿಸಿದ್ದವು.

2016-17ನೇ ಸಾಲಿನಲ್ಲಿ ಯಾವುದೇ ಖರೀದಿ ಪ್ರಕ್ರಿಯೆ ನಡೆದಿಲ್ಲ. 2017-18ನೇ ಸಾಲಿನಲ್ಲಿ ಕೇವಲ ರಾಗಿ ಖರೀದಿ ಪ್ರಕ್ರಿಯೆ ನಡೆದಿದೆ. 2018-19 ಮತ್ತು 2019-20ನೇ ಸಾಲಿನಲ್ಲಿ ಭತ್ತವನ್ನು ಮಿಲ್‌ ಪಾಯಿಂಟ್‌ ಖರೀದಿ ಪ್ರಕ್ರಿಯೆಯಡಿ ಅಕ್ಕಿ ಗಿರಣಿ ಮಾಲೀಕರ ಸುಪರ್ದಿಯಲ್ಲಿ ನಿರ್ವಹಿಸಿರುವುದು ಪತ್ರದಿಂದ ಗೊತ್ತಾಗಿದೆ.

Hot this week

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...
Please Scan to make Your Contribution

Topics

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

Related Articles

Popular Categories

error: Content is protected !!