Thursday | August 20, 2026 |

ನೀರು ಹರಿದಿಲ್ಲ, ಕಾಮಗಾರಿಯೂ ಪೂರ್ಣಗೊಂಡಿಲ್ಲ ಆದರೂ 45 ಕೋಟಿ ಬಿಡುಗಡೆ

ಬೆಂಗಳೂರು; ಕುಡಿಯುವ ನೀರು ಒದಗಿಸುವ ಯೋಜನೆಗೆ ಸಂಬಂಧಿಸಿದಂತೆ ಕೈಗೆತ್ತಿಕೊಂಡಿರುವ ಕಾಮಗಾರಿಗಳು ಪೂರ್ಣಗೊಳ್ಳದಿದ್ದರೂ ಕೋಟ್ಯಂತರ ರುಪಾಯಿ ಮೊತ್ತದ ಅನುದಾನ ಬಿಡುಗಡೆ ಮಾಡಿರುವ ಪ್ರಕರಣ ಇದೀಗ ಹೊರಬಿದ್ದಿದೆ. ಈ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿರುವ ಕಾರಣ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರುಪಾಯಿ ನಷ್ಟವಾಗಿದೆ.

ಕೊಪ್ಪಳ ಜಿಲ್ಲೆಯ ಮುಂಡರಗಿ ಸೇರಿದಂತೆ ಒಟ್ಟು 83 ಗ್ರಾಮಗಳಲ್ಲಿ ಕುಡಿಯುವ ನೀರು ಯೋಜನೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಒಂದೇ ಒಂದು ಗ್ರಾಮಕ್ಕೆ ಕುಡಿಯುವ ನೀರು ಒದಗಿಸಿಲ್ಲ ಮತ್ತು ಕಾಮಗಾರಿಗಳೂ ಪೂರ್ಣಗೊಂಡಿಲ್ಲ. ಆದರೂ 45 ಕೋಟಿ ರು.ಮೊತ್ತದ ಅನುದಾನ ಬಿಡುಗಡೆಯಾಗಿದೆ. ಕಾಮಗಾರಿ ಪೂರ್ಣಗೊಳ್ಳದಿದ್ದರೂ 45 ಕೋಟಿ ರು. ಅನುದಾನ ಬಿಡುಗಡೆ ಮಾಡಿಸಿಕೊಂಡಿರುವ ಅಧಿಕಾರಿಗಳ ವಿರುದ್ಧ ಈವರೆವಿಗೂ ಒಂದೇ ಒಂದು ಕ್ರಮ ಜರುಗಿಸಿಲ್ಲ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಲೆಕ್ಕಶೀರ್ಷಿಕೆ 3054ರಲ್ಲಿ 79 ಕೋಟಿ ರು.ಬಿಡುಗಡೆಯಲ್ಲಿ ಆಗಿರುವ ಅಕ್ರಮಗಳು ಹೊರಬಿದ್ದ ಬೆನ್ನಲ್ಲೇ ಕೊಪ್ಪಳ ಜಿಲ್ಲೆಯಲ್ಲಿ ಕಾಮಗಾರಿ ಪೂರ್ಣಗೊಳ್ಳದಿದ್ದರೂ 45 ಕೋಟಿ ರು.ಬಿಡುಗಡೆಯಾಗಿರುವ ಪ್ರಕರಣ ಮುನ್ನೆಲೆಗೆ ಬಂದಿದೆ.

ಕೊಪ್ಪಳ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ 2020ರ ನವೆಂಬರ್‌ 20ರಂದು ನಡೆದ ಕೆಡಿಪಿ ಸಭೆಯಲ್ಲಿ ಈ ಪ್ರಕರಣ ಕುರಿತು ಚರ್ಚೆಯಾಗಿದೆ. ಸಭೆ ಅಧ್ಯಕ್ಷತೆ ವಹಿಸಿದ್ದ ಕೃಷಿ ಸಚಿವ ಬಿ ಸಿ ಪಾಟೀಲ್‌ ಅವರು ಪ್ರಕರಣವನ್ನು ಲೋಕಾಯುಕ್ತಕ್ಕೆ ವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಯೋಜನೆಯ ಪ್ರಾಯೋಗಿಕ ಹಂತದಲ್ಲಿ ಜಿ.ಆರ್.ಪಿ ಪೈಪುಗಳು ಒಡೆದು ಹೋಗಿವೆ. ಕಾಮಗಾರಿ ನಿಷ್ಕ್ರೀಯಗೊಂಡಿದೆ. ಹೀಗಾಗಿ ಕಾಮಗಾರಿಯೂ ಪೂರ್ಣಗೊಂಡಿಲ್ಲ. ಆದರೂ 45 ಕೋಟಿ ರು.ಮೊತ್ತದ ಅನುದಾನ ಬಿಡುಗಡೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಕಾಮಗಾರಿ ಪೂರ್ಣಗೊಂಡಿದೆಯೆ ಅಥವಾ ಇಲ್ಲವೇ ಎಂಬ ಬಗ್ಗೆ ಸ್ಥಳ ಪರಿಶೀಲನೆ ನಡೆಸಬೇಕಿದ್ದ ಸ್ಥಳೀಯ ಅಧಿಕಾರಿಗಳು, ಕಮಿಷನ್‌ ಆಸೆಗಾಗಿ ಅಪೂರ್ಣ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿಸಿಕೊಂಡು ಜೇಬು ತುಂಬಿಸಿಕೊಂಡಿದ್ದಾರೆ ಎಂಬ ಬಲವಾದ ಆರೋಪಗಳು ಕೇಳಿ ಬಂದಿವೆ.

‘ಪೂರ್ಣಗೊಂಡಿರುವ ಕಾಮಗಾರಿಗಳ ಪ್ರಮಾಣ, ಬಿಡುಗಡೆಯಾದ ಹಣ ಮತ್ತು ಪ್ರಕರಣದಲ್ಲಿ ಭಾಗಿಯಾದ ಅಧಿಕಾರಿಗಳ ಬಗ್ಗೆ ವಿವರವಾರದ ವರದಿಯನ್ನು ಒಂದು ವಾರದೊಳಗೆ ಸಲ್ಲಿಸಬೇಕು. ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು. ಹಾಗೆಯೇ ಸಂಬಂಧಿಸಿದ ಏಜೆನ್ಸಿ ವಿರುದ್ಧ ಕ್ರಮ ವಹಿಸುವ ಮೂಲಕ ಇಡೀ ಪ್ರಕರಣವನ್ನು ಲೋಕಾಯುಕ್ತಕ್ಕೆ ವಹಿಸುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು,’ ಎಂದು ಸಚಿವ ಬಿ ಸಿ ಪಾಟೀಲ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ವ್ಯಾಪ್ತಿಯಲ್ಲಿ ಇಂತಹ ಹಲವು ಪ್ರಕರಣಗಳು ನಡೆಯುತ್ತಿದ್ದರೂ ಈ ಕುರಿತು ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಕೊಪ್ಪಳ ಸೇರಿದಂತೆ ರಾಜ್ಯದ ಹಲವೆಡೆಯೂ ಇಂತಹ ಪ್ರಕರಣಗಳು ನಡೆದಿವೆ. ಅರೆಬರೆ ಕಾಮಗಾರಿ ನಡೆಸಿರುವ ಗುತ್ತಿಗೆದಾರರಿಗೆ ಕೋಟ್ಯಂತರ ರುಪಾಯಿ ಮೊತ್ತದ ಬಿಲ್‌ಗಳನ್ನು ಪಾವತಿಸಲಾಗುತ್ತಿದೆ. ಇಲಾಖೆ ಕೈಗೆತ್ತಿಕೊಂಡಿರುವ ಕುಡಿಯುವ ನೀರು ಯೋಜನೆ ಕಾಮಗಾರಿಗಳ ಪರಿಶೀಲನೆ ಮತ್ತು ಇದರ ಆಡಿಟ್‌ ಕೂಡ ನಡೆದಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.

Hot this week

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಹಿಂದುಳಿದ ಸಮುದಾಯ ಅಭಿವೃದ್ಧಿ ನಿಗಮಗಳಿಗೆ 473.41 ಕೋಟಿ ಅನುದಾನ ಹಂಚಿಕೆ; ನಾಲ್ಕೂವರೆ ತಿಂಗಳಾದರೂ ನಯಾಪೈಸೆಯೂ ಬಿಡುಗಡೆಯಾಗಿಲ್ಲ

ಬೆಂಗಳೂರು; ಆರ್ಥಿಕ ವರ್ಷ ಆರಂಭವಾಗಿ ನಾಲ್ಕೂವರೆ ತಿಂಗಳಾದರೂ ಸಹ ಹಿಂದುಳಿದ ವರ್ಗಗಳ...
Please Scan to make Your Contribution

Topics

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಫ್ರೀಡಂ ಹಬ್ಬಕ್ಕೆ 6 ಕೋಟಿ ವೆಚ್ಚ!; ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಕೆಲಸ ಆರಂಭಿಸಿದ ಕಂಪನಿ

ಬೆಂಗಳೂರು; ಹೊಸದಾಗಿ ವಿದ್ಯಾರ್ಥಿ ನಿಲಯಗಳ ಆರಂಭ, ಅನುಮೋದಿತ ಕಾಮಗಾರಿಗಳ ಕಾರ್ಯಭಾರಕ್ಕೆ ನಲುಗಿ...

3,206 ಪಂಚಾಯ್ತಿಗಳಲ್ಲಿ ಶಾಸನಬದ್ಧ ತೆರಿಗೆ ವಸೂಲು; ಸರ್ಕಾರಕ್ಕೆ ಪಾವತಿಯಾಗದ 17.28 ಕೋಟಿ ಎಲ್ಲಿದೆ?

ಬೆಂಗಳೂರು; ರಾಜ್ಯದ 27 ಜಿಲ್ಲೆಗಳ 3,206 ಪಂಚಾಯ್ತಿಗಳು ಸರಕು ಸೇವಾ ತೆರಿಗೆ,...

Related Articles

Popular Categories

error: Content is protected !!