Sunday | August 23, 2026 |

ಬಿಜೆಪಿ ಸರ್ಕಾರದ ಅವಧಿಯಲ್ಲೇ 908 ರೈತರ ಆತ್ಮಹತ್ಯೆ ಪ್ರಕರಣಗಳು ದಾಖಲು

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2019-20 ಸಾಲಿನಲ್ಲಿ ಒಟ್ಟು 908 ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ ಎಂದು ತಿಳಿದು ಬಂದಿದೆ. 2018-19ರಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆಯಲ್ಲಿ ತುಸು ಇಳಿಕೆ ಕಂಡಿತ್ತಾದರೂ 2019-20ನೇ ಸಾಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಂಡಿರುವುದು ಆತಂಕ ಮೂಡಿಸಿದೆ.

ಸಾಲ ಮತ್ತಿತರ ಕಾರಣಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು’ ಎಂದು ಮಡಿಕೇರಿಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿಕೆ ನೀಡಿದ್ದರ ಬೆನ್ನಲ್ಲೇ ಬಿಜೆಪಿ ಸರ್ಕಾರದ ಅವಧಿಯಲ್ಲೇ 908 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಅಂಕಿ ಅಂಶಗಳು ಮುನ್ನೆಲೆಗೆ ಬಂದಿವೆ.

ಆತ್ಮಹತ್ಯೆ ಮಾಡಿಕೊಂಡ 908 ರೈತರ ಪೈಕಿ 122 ಪ್ರಕರಣಗಳನ್ನು ವೈಯಕ್ತಿಕ ಕಾರಣಗಳಿಗಾಗಿನ ಆತ್ಮಹತ್ಯೆ ಎಂದು ತಿರಸ್ಕರಿಸಲಾಗಿದೆ. ಸುಮಾರು 660 ಆತ್ಮಹತ್ಯೆ ಪ್ರಕರಣಗಳನ್ನು ಅರ್ಹ ಪ್ರಕರಣ ಎಂದು ಇದುವರೆಗೆ ದೃಢೀಕರಿಸಲಾಗಿದೆ. ಇನ್ನೂ 127 ರೈತರ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ಕೃಷಿ ಇಲಾಖೆ ಪರಿಶೀಲನೆ ನಡೆಸುತ್ತಿದೆ.42 ರೈತರ ಆತ್ಮಹತ್ಯೆ ಪ್ರಕರಣಗಳನ್ನು ಎಫ್ಎಸ್ಎಲ್ ಪರೀಕ್ಷೆಗಾಗಿ ಕಳಿಸಿದೆ ಎಂದು ತಿಳಿದು ಬಂದಿದೆ.

2016-17ರಲ್ಲಿ ರಾಜ್ಯದಲ್ಲಿ 925 ರೈತರು ಆತ್ಮಹತ್ಯೆಗೆ ಶರಣಾಗಿದ್ದರೆ ಇನ್ನು 2017-18ರಲ್ಲಿ ರೈತರ ಆತ್ಮಹತ್ಯೆ ಪ್ರಮಾಣ 1, 050ಗೆ ಏರಿಕೆಯಾಗಿತ್ತು. 2018-19ರಲ್ಲಿ ರೈತರ ಆತ್ಮಹತ್ಯೆ ಪ್ರಕರಣ 700ಕ್ಕೆ ಇಳಿದಿತ್ತು. ಇದಾಗಿ ಒಂದೇ ವರ್ಷದ ಅಂತರದಲ್ಲಿ 2019-20ರಲ್ಲಿ ಮತ್ತೆ ರೈತರ ಆತ್ಮಹತ್ಯೆ ಪ್ರಕರಣ ಸಂಖ್ಯೆ ಹೆಚ್ಚಳವಾಗಿದೆ. ಆತ್ಮಹತ್ಯೆ ಎಂದು ಈಗಾಗಲೇ ದೃಢೀಕರಿಸುವ ಮತ್ತು ತೀರ್ಮಾನಿಸಲು ಬಾಕಿ ಇರುವ ಪ್ರಕರಣಗಳು ಸೇರಿ ಒಟ್ಟು 787 ಆತ್ಮಹತ್ಯೆ ಪ್ರಕರಣಗಳಿವೆ ಎಂದು ಗೊತ್ತಾಗಿದೆ.

ಬೆಳಗಾವಿಯಲ್ಲಿ 94, ವಿಜಯಪುರ- 43, ಬಾಗಲಕೋಟೆ- 28, ಹಾವೇರಿ- 76, ಧಾರವಾಡ- 60, ಗದಗ- 25 ರೈತರು ಸೇರಿದಂತೆ ಮುಂಬೈ-ಕರ್ನಾಟಕ ಭಾಗದಲ್ಲಿ ಒಟ್ಟು 326 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.

ಹಾಗೆಯೇ ಬೀದರ್‌ನಲ್ಲಿ 46, ಕಲಬುರ್ಗಿಯಲ್ಲಿ 58, ರಾಯಚೂರಿನಲ್ಲಿ 22, ಬಳ್ಳಾರಿಯಲ್ಲಿ 35, ಕೊಪ್ಪಳದಲ್ಲಿ 23, ಯಾದಗಿರಿಯಲ್ಲಿ 20 ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಟ್ಟು 204 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಂಡ್ಯದಲ್ಲಿ 63, ಮೈಸೂರು- 60, ಹಾಸನ-33, ಚಾಮರಾಜನಗರ-1, ರಾಮನಗರ-5, ಕೊಡಗು ಜಿಲ್ಲೆಯಲ್ಲಿ 9 ರೈತರು ಸೇರಿದಂತೆ ಕಾವೇರಿ ನದಿ ಪಾತ್ರದಲ್ಲಿ ಒಟ್ಟು 171 ರೈತರು ನೇಣಿಗೆ ಕೊರಳೊಡ್ಡಿದ್ದಾರೆ.

ಶಿವಮೊಗ್ಗದಲ್ಲಿ 42, ಚಿಕ್ಕಮಗಳೂರು-41, ಚಿತ್ರದುರ್ಗ-40, ದಾವಣಗೆರೆ-36, ತುಮಕೂರು ಜಿಲ್ಲೆಯಲ್ಲಿ 31 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಅತಿವೃಷ್ಠಿ, ಅನಾವೃಷ್ಟಿ ಸೇರಿದಂತೆ ಇನ್ನಿತರೆ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ರೈತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ದ್ವಿಗುಣಗೊಳ್ಳುತ್ತಲೇ ಇದೆ. ಬೆಳೆ ವಿಮೆ, ಪ್ರಧಾನ್‌ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಸೇರಿದಂತೆ ಹಲವು ಯೋಜನೆಗಳು ಜಾರಿಯಾಗಿದ್ದರೂ ರೈತರ ಆತ್ಮಹತ್ಯೆ ಪ್ರಕರಣಗಳಿಗೆ ರಾಜ್ಯದಲ್ಲಿಯೂ ಕಡಿವಾಣ ಬಿದ್ದಿಲ್ಲ.

ಸಾಲ ಮತ್ತಿತರ ಕಾರಣಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು. ಕೃಷಿ ಮಾಡಿಯೂ ಉತ್ತಮ ಬದುಕು ಕಟ್ಟಿಕೊಂಡವರು ಇದ್ದಾರೆ. ಆದರೆ, ಹೇಡಿಗಳು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಹೆಂಡತಿ ಹಾಗೂ ಮಕ್ಕಳನ್ನು ನೋಡಿಕೊಳ್ಳದ ರೈತ ಹೇಡಿ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದ್ದನ್ನು ಸ್ಮರಿಸಬಹುದು.

Hot this week

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...
Please Scan to make Your Contribution

Topics

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

Related Articles

Popular Categories

error: Content is protected !!