Friday | April 3, 2026 |

ಸಾಲಗಳಿಗೆ ಬಡ್ಡಿ ಸಹಾಯಧನಕ್ಕೆ ನಕಾರ; 44 ಕೋಟಿ ಹೊರೆ ಎಂದ ಸಹಕಾರ ಇಲಾಖೆ

ಬೆಂಗಳೂರು; ಮಧ್ಯಮಾವಧಿ ದೀರ್ಘಾವಧಿ ಕೃಷಿ ಸಾಲ ನೀಡುವ ಯೋಜನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿನ ಎಲ್ಲಾ ಬಗೆಯ ಕೃಷಿ ಚಟುವಟಿಕೆಗಳಿಗೆ ಸಾಲ ಪಡೆಯಲು ಅವಕಾಶ ಇರುವುದರಿಂದ ಆಸಾಮಿ ಸಾಲಗಳಿಗೆ ಬಡ್ಡಿ ಸಹಾಯ ಧನ ನೀಡಲು ಪ್ರತ್ಯೇಕ ಯೋಜನೆ ಬೇಡಿಕೆಯನ್ನು ಸಹಕಾರ ಇಲಾಖೆ ತಿರಸ್ಕರಿಸಿದೆ.

ತೋಟಗಾರಿಕೆ ಉದ್ದೇಶಗಳ ಬಗ್ಗೆ ಕೃಷಿ ಪತ್ತಿನ ಸಹಕಾರ ಸಂಘಗಳು ಕೃಷಿಕರಿಗೆ ನೀಡುತ್ತಿರುವ ಆಸಾಮಿ ಸಾಲ/ಬಳಕೆ ಸಾಲ/ಕೃಷಿ ಅಲ್ಪಾವಧಿ ಸಾಲ ಮತ್ತಿತಿರೆ ಸಾಲಗಳನ್ನು ಕೃಷಿ ಸಾಲಗಳೆಂದು ಪರಿಗಣಿಸುವ ಬಗ್ಗೆ ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಈ ಕುರಿತು 2020ರ ಸೆ.14ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

‘ಸರ್ಕಾರದ ಶೇ.3ರ ಬಡ್ಡಿ ದರದಲ್ಲಿ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಸಾಲ ನೀಡುವ ಯೋಜನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿನ ಎಲ್ಲಾ ಬಗೆಯ ಕೃಷಿ ಚಟುವಟಿಕೆಗಳಿಗೆ ಸಾಲ ಪಡೆಯಲು ಅವಕಾಶವಿದೆ. ಹೀಗಾಗಿ ಆಸಾಮಿ ಸಾಲಗಳಿಗೆ ಬಡ್ಡಿ ಸಹಾಯ ಧನ ನೀಡಲು ಪ್ರತ್ಯೇಕ ಯೋಜನೆ ಜಾರಿಗೆ ಅವಶ್ಯಕತೆ ಇಲ್ಲ,’ ಎಂದು ಹೇಳಿರುವುದು ಪತ್ರದಿಂದ ತಿಳಿದು ಬಂದಿದೆ.

ಒಂದು ವೇಳೆ ಈ ಸಾಲಗಳಿಗೆ ಬಡ್ಡಿ ಸಹಾಯ ಧನ ನೀಡಿದ್ದಲ್ಲಿ ಪ್ರತಿ ವರ್ಷ 447 ಕೋಟಿ ರು. ಮೇಲೆ 44 ಕೋಟಿ (ಶೇ.10ರ ಬಡ್ಡಿ ದರ) ಬಡ್ಡಿ ಸಹಾಯಧನದ ಹೆಚ್ಚಿನ ಹೊರೆ ಬೀಳುತ್ತದೆ. ಹಾಗೆಯೇ ಇಂತಹ ಸಾಲಗಳನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಬಡ್ಡಿ ಮನ್ನಾ ಮಾಡಿದಲ್ಲಿ ಈ ಪ್ಯಾಕ್ಸ್‌ಗಳಲ್ಲಿ 20 ಕೋಟಿ ಸುಸ್ತಿಯಾಗಿದ್ದು, ಅಂದಾಜು 20 ಕೋಟಿ ರು.ಗಳ ಬಡ್ಡಿ ಹೊರೆ ಬೀಳುತ್ತದೆ ಎಂದೂ ಪತ್ರದಲ್ಲಿ ವಿವರಿಸಿದ್ದಾರೆ.

ಡಿಸಿಸಿ ಬ್ಯಾಂಕ್‌ನ ನೇತೃತ್ವದ ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿಇಯಲ್ಲಿ ಮತ್ತು ನಬಾರ್ಡ್‌ ಯುನಿಟ್‌ ಕಾಸ್ಟ್‌ ಪ್ರಕಾರ ಡಿಸಿಸಿ ಬ್ಯಾಂಕ್‌ ಅಲ್ಪಾವಧಿ ಮತ್ತು ಮಧ್ಯಮಾವಧಿ ಕೃಷಿ ಸಾಲ ನೀಡುತ್ತಿವೆ. ಈ ಸಾಲದ ನಿಯಮಾವಳಿಗಳ ಪ್ರಕಾರ ರೈತರಿಗೆ ಹೆಚ್ಚಿನ ಸಾಲ ನೀಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಆಸಾಮಿ ಸಾಲದ ರೂಪದಲ್ಲಿ ಪ್ಯಾಕ್ಸ್‌ಗಳು ತಮ್ಮ ಸ್ವಂತ ಬಂಡವಾಳದಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಸಾಲ ನೀಡುತ್ತಿದೆ. ಈ ಸಾಲಗಳನ್ನು ಕೃಷಿ ಸಾಲಗಳೆಂದು ಪರಿಗಣಿಸಿದಲ್ಲಿ ಬಡ್ಡಿ ಸಹಾಯಧನ, ಬಡ್ಡಿ ಮನ್ನಾ, ಸಾಲ ಮನ್ನಾ ಯೋಜನೆಗಳು ಅನ್ವಯವಾಗುವುದರಿಂದ ಈ ಬೇಡಿಕೆ ಇರುತ್ತದೆ ಎಂದು ಸರ್ಕಾರದ ಗಮನಕ್ಕೆ ತಂದಿದ್ದಾರೆ.

ಆಸಾಮಿ ಸಾಲದ ವಿಷಯವು ಡಿಸಿಸಿ ಬ್ಯಾಂಕ್‌, ಪ್ಯಾಕ್ಸ್‌, ನಬಾರ್ಡ್ ಮತ್ತು ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿಯಲ್ಲಿ ಇತ್ಯರ್ಥವಾಗಬೇಕಿದೆ. ಹೀಗಾಗಿ ಸರ್ಕಾರದ ಮಟ್ಟದಲ್ಲಿ ಜಿಲ್ಲಾ ಲೀಡ್‌ ಬ್ಯಾಂಕ್‌, ಕೃಷಿ ಇಲಾಖೆ, ಡಿಸಿಸಿ ಬ್ಯಾಂಕ್‌, ಪ್ಯಾಕ್ಸ್‌ಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಬೇಕು ಎಂದೂ ನಿಬಂಧಕರು ಹೇಳಿದ್ದಾರೆ.

2020-21ನೇ ಸಾಲಿನಲ್ಲಿ ಮಾರುಕಟ್ಟೆ ಸಹಕಾರ ಸಂಘಗಳೂ ಸಹ ರೈತರಿಗೆ 2 ಲಕ್ಷದವರೆಗಿನ ದೀರ್ಘಾವಧಿ ಕೃಷಿ ಸಾಲವನ್ನು ಶೇ.5ರ ಬಡ್ಡಿ ಸಹಾಯಧನದೊಂದಿಗೆ ನೀಡಲಾಗುವುದು ಎಂದು ಆಯವ್ಯಯದಲ್ಲಿ ಹೇಳಲಾಗಿದೆ. ಈ ಕುರಿತು ಸರ್ಕಾರಿ ಆದೇಶ ಹೊರಡಿಸಲು ಪ್ರಸ್ತಾವನೆ ಸಲ್ಲಿಸಿರುವುದು ಪತ್ರದಿಂದ ಗೊತ್ತಾಗಿದೆ.

Hot this week

ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ನ 850 ಕೋಟಿ ಬಾಕಿ ಪ್ರಕರಣ; ಕೇಂದ್ರ, ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಲಿಮಿಟೆಡ್‌ಗೆ ನಿಯಮಬಾಹಿರವಾಗಿ ಲೆಟರ್ ಆಫ್‌...

ಪ್ರಧಾನಮಂತ್ರಿ ಜೀವನ ಜ್ಯೋತಿ, ಸುರಕ್ಷಾ ವಿಮೆ ಯೋಜನೆ; ಕಲ್ಬುರ್ಗಿ ಸೇರಿ 12 ಜಿಲ್ಲೆಗಳಲ್ಲಿ ಕಳಪೆ ಪ್ರದರ್ಶನ

ಬೆಂಗಳೂರು; ಜೀವ ವಿಮೆ ರಕ್ಷಣೆ ನೀಡುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ...

ಕೆಎಎಸ್ 2011ರ ನೇಮಕಾತಿ ಅಕ್ರಮದ ತನಿಖಾ ವರದಿಗೆ ಕೊನೆ ಮೊಳೆ; ವಿಚಾರಣೆಯಿಲ್ಲದೇ ಪ್ರಕರಣ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು; 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ...

ಗಂಗಾ ಕಲ್ಯಾಣ ಯೋಜನೆ ವಿದ್ಯುದ್ದೀಕರಣ; ವಾಸ್ತವಿಕ ವೆಚ್ಚದಲ್ಲಿ ಏರಿಕೆ, ಎಸ್ಕಾಂಗಳಿಗೆ ಆರ್ಥಿಕ ಸಂಕಷ್ಟ

ಬೆಂಗಳೂರು; ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣ ವಿದ್ಯುತ್ ಸರಬರಾಜು...

ಅಂಬೇಡ್ಕರ್, ಜಗಜೀವನ್ ರಾಂ ಪ್ರಶಸ್ತಿಗೆ ಲಾಬಿ!; ಸರಜೂ ಕಾಟ್ಕರ್ ಸೇರಿ ಹಲವರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯು ಪ್ರತೀ ಏಪ್ರಿಲ್ ತಿಂಗಳಲ್ಲಿ ನೀಡುವ ಡಾ...

Topics

ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ನ 850 ಕೋಟಿ ಬಾಕಿ ಪ್ರಕರಣ; ಕೇಂದ್ರ, ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಲಿಮಿಟೆಡ್‌ಗೆ ನಿಯಮಬಾಹಿರವಾಗಿ ಲೆಟರ್ ಆಫ್‌...

ಕೆಎಎಸ್ 2011ರ ನೇಮಕಾತಿ ಅಕ್ರಮದ ತನಿಖಾ ವರದಿಗೆ ಕೊನೆ ಮೊಳೆ; ವಿಚಾರಣೆಯಿಲ್ಲದೇ ಪ್ರಕರಣ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು; 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ...

ಗಂಗಾ ಕಲ್ಯಾಣ ಯೋಜನೆ ವಿದ್ಯುದ್ದೀಕರಣ; ವಾಸ್ತವಿಕ ವೆಚ್ಚದಲ್ಲಿ ಏರಿಕೆ, ಎಸ್ಕಾಂಗಳಿಗೆ ಆರ್ಥಿಕ ಸಂಕಷ್ಟ

ಬೆಂಗಳೂರು; ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣ ವಿದ್ಯುತ್ ಸರಬರಾಜು...

ಅಂಬೇಡ್ಕರ್, ಜಗಜೀವನ್ ರಾಂ ಪ್ರಶಸ್ತಿಗೆ ಲಾಬಿ!; ಸರಜೂ ಕಾಟ್ಕರ್ ಸೇರಿ ಹಲವರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯು ಪ್ರತೀ ಏಪ್ರಿಲ್ ತಿಂಗಳಲ್ಲಿ ನೀಡುವ ಡಾ...

ಗ್ಯಾರಂಟಿಗಳಿಂದ ಹೆಚ್ಚಿದ ಹಣಕಾಸಿನ ಒತ್ತಡ, ಶಾಸಕಾಂಗದ ಅನುಮೋದನೆಯಿಲ್ಲದೇ 10,035 ಕೋಟಿ ವೆಚ್ಚಕ್ಕೆ ಆದೇಶ

ಬೆಂಗಳೂರು; ರಾಜ್ಯ ಶಾಸಕಾಂಗದ ಅನುಮೋದನೆಗೆ ಮುಂಚಿತವಾಗಿಯೇ 10,035.13 ಕೋಟಿ ರು ವೆಚ್ಚಕ್ಕೆ...

ಗೋವಾ ತಮ್ನಾರ್; ಭೂಮಿಯ ಗಡಿ ಗುರುತು, ಮರಗಳ ಗಣತಿ ಅಪೂರ್ಣ, ಆದರೂ ನಿರ್ವಹಣಾ ಯೋಜನೆ ಸಲ್ಲಿಕೆ

ಬೆಂಗಳೂರು; ಪಶ್ಚಿಮ ಘಟ್ಟದ ಕಾಳಿ ಹುಲಿ ಸಂರಕ್ಷಿತಾರಣ್ಯ ಸೇರಿ ಬರೋಬ್ಬರಿ 174...

Related Articles

Popular Categories

error: Content is protected !!