Friday | March 13, 2026 |

ಬಯೋ ಮೆಡಿಕಲ್‌ ಉಪಕರಣದ ಆಸ್ತಿ ಮೌಲ್ಯದಲ್ಲೂ ಹೆಚ್ಚಳ; ಟಿವಿಎಸ್‌ ಕಂಪನಿಗೆ ಮತ್ತಷ್ಟು ಲಾಭ?

Support THE-FILE

spot_img

ಬೆಂಗಳೂರು; ಬಯೋ ಮೆಡಿಕಲ್‌ ಉಪಕರಣಗಳ ನಿರ್ವಹಣೆಯಲ್ಲಿ ಖಾಸಗಿ ಕಂಪನಿಗೆ ಅಕ್ರಮವಾಗಿ ಲಾಭ ಮಾಡಿಕೊಟ್ಟಿದ್ದ ಅಧಿಕಾರಿಗಳು ಉಪಕರಣಗಳ ಆಸ್ತಿ ಮೌಲ್ಯವನ್ನು ಉದ್ದೇಶಪೂರ್ವಕವಾಗಿ ಹೆಚ್ಚಳ ಮಾಡಿದ್ದರು. ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜಕುಮಾರ್‌ ಪಾಂಡೆ ಅವರು ಇದನ್ನು ಪರಿಶೀಲಿಸುವ ಗೋಜಿಗೆ ಹೋಗದೇ ಇದ್ದದ್ದು ಹಲವು ಸಂಶಯಗಳಿಗೆ ಕಾರಣವಾಗಿದೆ.

ಉಪಕರಣಗಳ ನಿರ್ವಹಣೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದ್ದ ಮೊತ್ತ ಮತ್ತು ಕರಾರಿಗೆ ಸಹಿ ಹಾಕುವಾಗ 47.7 ಕೋಟಿ ಹೆಚ್ಚಳ ಮಾಡಿದ್ದ ಅಧಿಕಾರಿಗಳು ಉಪಕರಣಗಳ ಆಸ್ತಿ ಮೌಲ್ಯದಲ್ಲಿಯೂ ಹೆಚ್ಚಳ ಮಾಡಿ ಕಂಪನಿಗೆ ಮತ್ತಷ್ಟು ಲಾಭ ಮಾಡಿಕೊಟ್ಟಿರುವುದು ಇದೀಗ ಮುನ್ನೆಲೆಗೆ ಬಂದಿದೆ.

ಉಪಕರಣಗಳ 3 ವರ್ಷಗಳ ಉಪಕರಣಗಳ ಆಸ್ತಿ ಮೌಲ್ಯ ನಿರ್ಣಯಿಸುವುದು ಮತ್ತು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿದ್ದ ಬಯೋ ಮೆಡಿಕಲ್‌ ಉಪಕರಣಗಳ ಕರಾರುವಕ್ಕಾದ ಪಟ್ಟಿ ಕ್ರೋಢೀಕರಿಸಿ ಅವುಗಳ ಆಸ್ತಿ ಮೌಲ್ಯ ನಿರ್ಣಯಿಸಿ ಟೆಂಡರ್‌ನಲ್ಲಿ ಬಿಡ್‌ ಮೌಲ್ಯ ನಿಗದಿಪಡಿಸಬೇಕಿದ್ದದ್ದು ನೋಡಲ್‌ ಅಧಿಕಾರಿಯೂ ಆಗಿದ್ದ ಉಪ ನಿರ್ದೇಶಕ ಸ್ವತಂತ್ರ ಬಣಕರ್‌ ಅವರ ಕರ್ತವ್ಯವಾಗಿತ್ತು. ಆದರೆ ಈ ಕರ್ತವ್ಯ ಲೋಪದಿಂದಾಗಿ ಸರ್ಕಾರಕ್ಕೆ 47.7 ಕೋಟಿ ನಷ್ಟ ಮತ್ತು ಅನರ್ಹ ಕಂಪನಿ ಆಯ್ಕೆಗೂ ದಾರಿ ಮಾಡಿಕೊಟ್ಟಿದೆ ಎಂದು ಗೊತ್ತಾಗಿದೆ.

ಆರ್‌ಎಫ್‌ಪಿ ತಯಾರಿ, ಅದರ ದೃಢೀಕರಣ, ಟೆಂಡರ್‌ ಪ್ರೊಕ್ಯೂರ್‌ಮೆಂಟ್‌ ಸಮಿತಿ, ಟೆಂಡರ್‌ ಪರಿಶೀಲನಾ ಮತ್ತು ಟೆಂಡರ್‌ ಅಂಗೀಕಾರ ಸಮಿತಿಯಲ್ಲಿ ಯಾವುದೇ ಟೆಂಡರ್‌ಗೆ ಸಂಬಂಧಿಸಿದಂತೆ ಯಾವುದೇ ಗೊಂದಲ, ಅನುಮಾನಗಳು,ತಪ್ಪು ಮಾಹಿತಿ ಇರದಂತೆ ನೋಡಿಕೊಳ್ಳುವ ಜವಾಬ್ದಾರಿಯೂ ಬಣಕರ್‌ ಅವರ ಮೇಲೇಯೇ ಇತ್ತು. ಆದರೆ ಕೇವಲ ಆಸ್ತಿ ಮೌಲ್ಯ ನೀಡಿದ್ದ ಬಣಕರ್‌ ಅವರು ಟೆಂಡರ್‌ ಪರಿಶೀಲನಾ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಆ ನಂತರ ಟೆಂಡರ್‌ ಅಂಗೀಕಾರ ಸಮಿತಿ ಸಭೆಗೆ ಚಾಣಾಕ್ಷತೆಯಿಂದ ಗೈರಾದರು ಎಂದು ತಿಳಿದು ಬಂದಿದೆ.

ಬಯೋ ಮೆಡಿಕಲ್‌ ಉಪಕರಣಗಳ 3 ವರ್ಷಗಳ ನಿರ್ವಹಣೆಗೆ ಒಟ್ಟು 53.96 ಕೋಟಿ ಎಂದು ಅಂದಾಜಿಸಲಾಗಿದ್ದರೂ ಟೆಂಡರ್‌ ದಾಖಲಾತಿ ಪುಟ ಸಂಖ್ಯೆ 48ರಲ್ಲಿ ಮೊದಲ ವರ್ಷದ ಆಸ್ತಿ ಮೌಲ್ಯ 137.20 ಕೋಟಿ ಬದಲಾಗಿ 316.83 ಕೋಟಿ ಎಂದು ಮುದ್ರಿಸಲಾಗಿದ್ದನ್ನು ತಿದ್ದುಪಡಿ ಮಾಡಿರಲಿಲ್ಲ. ಇದರಿಂದಲೇ ಮೊದಲ ವರ್ಷದ ಕರಾರು ಮೌಲ್ಯ 9.6 ಕೋಟಿ ಬದಲು 27.56 ಕೋಟಿ ರೂಪಾಯಿಗೇರಿತ್ತು. ಇದರಿಂದ ಸರ್ಕಾರಕ್ಕೆ 14.29 ಕೋಟಿ ನಷ್ಟ ಉಂಟಾಗಿದೆ ಎಂದು ಹೇಳಲಾಗಿದೆ. ಇದಕ್ಕೂ ಬಣಕರ್‌ ಅವರೇ ನೇರ ಹೊಣೆಗಾರರು ಎಂದು ಗೊತ್ತಾಗಿದೆ.

ಬ್ಯಾಂಕ್‌ ಖಾತರಿಗೆ ಧಕ್ಕೆ?

ಟಿವಿಎಸ್‌ ಲಾಜಿಸ್ಟಿಕ್ಸ್‌ ಸರ್ವಿಸ್‌ ಲಿಮಿಟೆಡ್‌, ರಾಷ್ಟ್ರೀಕೃತವಲ್ಲದ ಯೆಸ್‌ ಬ್ಯಾಂಕ್‌ (YES BANK)ನಿಂದ 2019 ಮಾರ್ಚ್‌ 6ರಂದು 3,74,90,885 ರು ಮತ್ತು 2019ರ ಮಾರ್ಚ್‌ 14ರಂದು 5,51,15,409 ರು.ಗಳ ಖಾತರಿ ನೀಡಿತ್ತು. ಇದು ಭಾರತದ ರಾಷ್ಟ್ರೀಕೃತ ಬ್ಯಾಂಕ್‌ ಅಲ್ಲದಿದ್ದರೂ ಖಾತರಿ ಪಡೆದಿರುವುದು ಅನುಮಾನಗಳನ್ನು ಇನ್ನಷ್ಟು ಬಲಪಡಿಸಿದೆ. ಹಾಗೆಯೇ ಟಿವಿಎಸ್‌ ಲಾಜಿಸ್ಟಿಕ್ಸ್‌ ಸರ್ವಿಸ್‌ ಲಿಮಿಟೆಡ್‌ ಯೆಸ್‌ ಬ್ಯಾಂಕ್‌ನಿಂದ ನೀಡಿದ್ದ ಬ್ಯಾಂಕ್‌ ಖಾತರಿಯನ್ನು ಭಾರತದ ಯಾವುದೇ ರಾಷ್ಟ್ರೀಕೃತ ಬ್ಯಾಂಕ್‌ನಿಂದ ಬದಲಾಯಿಸಿ ನೀಡಿಲ್ಲ ಎಂದು ಗೊತ್ತಾಗಿದೆ.

ಯೆಸ್‌ ಬ್ಯಾಂಕ್‌ನ ಖಾತರಿ ಮೇಲೆ ಕರಾರು ಸಹಿ ಮಾಡಲಾಗಿದೆ. ಅಲ್ಲದೆ ಮುಂಗಡ ಮತ್ತು ಪ್ರತಿ ತಿಂಗಳೂ ಹಣ ಪಾವತಿಸಲಾಗುತ್ತಿದೆ ಎಂದು ಗೊತ್ತಾಗಿದೆ. ಇಲಾಖೆಯ ನಿಯಮಗಳಿಗೆ ವಿರುದ್ಧವಾಗಿದ್ದರೂ ಖಾಸಗಿ ಬ್ಯಾಂಕ್‌ನಿಂದ ಖಾತರಿ ಪಡೆದು ಅಕ್ರಮ ಎಸಗಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಒಂದು ವೇಳೆ ಯೆಸ್‌ ಬ್ಯಾಂಕ್‌ ದಿವಾಳಿ ಆಥವಾ ಇನ್ನಾವುದೋ ಅವ್ಯವಹಾರದಲ್ಲಿ ಸಿಕ್ಕಿ ಹಾಕಿಕೊಂಡಲ್ಲಿ ಸರ್ಕಾರಕ್ಕೆ, ಬ್ಯಾಂಕ್‌ ಖಾತರಿಗೆ ಧಕ್ಕೆ ಆಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

Hot this week

ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ  ಒಟ್ಟು 72 ಪ್ರಮುಖ...

ಸರ್ಕಾರಿ ಜಮೀನು ಭೂಗಳ್ಳರ ಪಾಲು; ಪಿ ನಂಬರ್ ದುರಸ್ತಿ ಹೆಸರಿನಲ್ಲಿ ಅಕ್ರಮ, ತಹಶೀಲ್ದಾರ್‍‌ಗಳೇ ಭಾಗಿ, ಕ್ರಮವೇ ಇಲ್ಲ

ಬೆಂಗಳೂರು;  ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಹೋಬಳಿ ಸಂಪಂಗೆರೆ ಗ್ರಾಮದಲ್ಲಿನ...

7ನೇ ವೇತನ ಆಯೋಗ ಶಿಫಾರಸ್ಸು; ಬದ್ಧ ವೆಚ್ಚದಲ್ಲಿ ಹೆಚ್ಚಳ, 15,000 ಕೋಟಿಯಿಂದ 20,000 ಕೋಟಿಗೆ ಏರಿಕೆ

ಬೆಂಗಳೂರು;  7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿದಲ್ಲಿ  ಮುಂಬರುವ ವರ್ಷಗಳಲ್ಲಿ ಬದ್ಧ...

ವಿಚಾರಣೆಗಳಿಗೆ ಹಾಜರಾಗದಿದ್ದರೂ ಸಂಭಾವನೆ ಕೋರಿದ ಪಬ್ಲಿಕ್ ಪ್ರಾಸಿಕ್ಯೂಟರ್ಸ್‌: 590 ಪ್ರಕರಣ ಪತ್ತೆ

ಬೆಂಗಳೂರು; ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ...

ಹುದ್ದೆಗಳ ಸಂಖ್ಯೆಯಲ್ಲಿ ಗಣನೀಯ ಕಡಿತ, ಸಾಮಾಜಿಕ ನ್ಯಾಯಕ್ಕೆ ಪೆಟ್ಟು; ವಿವಿಗಳ ಅಭಿಪ್ರಾಯ ಬಹಿರಂಗ

ಬೆಂಗಳೂರು; ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ  ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸಿದ್ದಲ್ಲಿ ...

Topics

ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ  ಒಟ್ಟು 72 ಪ್ರಮುಖ...

ಸರ್ಕಾರಿ ಜಮೀನು ಭೂಗಳ್ಳರ ಪಾಲು; ಪಿ ನಂಬರ್ ದುರಸ್ತಿ ಹೆಸರಿನಲ್ಲಿ ಅಕ್ರಮ, ತಹಶೀಲ್ದಾರ್‍‌ಗಳೇ ಭಾಗಿ, ಕ್ರಮವೇ ಇಲ್ಲ

ಬೆಂಗಳೂರು;  ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಹೋಬಳಿ ಸಂಪಂಗೆರೆ ಗ್ರಾಮದಲ್ಲಿನ...

7ನೇ ವೇತನ ಆಯೋಗ ಶಿಫಾರಸ್ಸು; ಬದ್ಧ ವೆಚ್ಚದಲ್ಲಿ ಹೆಚ್ಚಳ, 15,000 ಕೋಟಿಯಿಂದ 20,000 ಕೋಟಿಗೆ ಏರಿಕೆ

ಬೆಂಗಳೂರು;  7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿದಲ್ಲಿ  ಮುಂಬರುವ ವರ್ಷಗಳಲ್ಲಿ ಬದ್ಧ...

ವಿಚಾರಣೆಗಳಿಗೆ ಹಾಜರಾಗದಿದ್ದರೂ ಸಂಭಾವನೆ ಕೋರಿದ ಪಬ್ಲಿಕ್ ಪ್ರಾಸಿಕ್ಯೂಟರ್ಸ್‌: 590 ಪ್ರಕರಣ ಪತ್ತೆ

ಬೆಂಗಳೂರು; ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ...

ಹುದ್ದೆಗಳ ಸಂಖ್ಯೆಯಲ್ಲಿ ಗಣನೀಯ ಕಡಿತ, ಸಾಮಾಜಿಕ ನ್ಯಾಯಕ್ಕೆ ಪೆಟ್ಟು; ವಿವಿಗಳ ಅಭಿಪ್ರಾಯ ಬಹಿರಂಗ

ಬೆಂಗಳೂರು; ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ  ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸಿದ್ದಲ್ಲಿ ...

ದೇಶದ್ರೋಹಿ ಘೋಷಣೆ, ದೇಶ ವಿರೋಧಿ ಚಟುವಟಿಕೆ; 24 ಪ್ರಕರಣಗಳಲ್ಲಿ 3 ಬಿ ರಿಪೋರ್ಟ್

ಬೆಂಗಳೂರು; ದೇಶದ್ರೋಹಿ ಘೋಷಣೆ ಕೂಗಿದ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ  ಕಳೆದ ಮೂರು...

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

Related Articles

Popular Categories

error: Content is protected !!