Sunday | March 15, 2026 |

ಕೋಟ್ಯಂತರ ಮೊತ್ತದ ವರಮಾನ ಸೋರಿಕೆ; ವರ್ತಕರ ದಂಡ ಮನ್ನಾಕ್ಕೆ ಸಿಎಜಿ ಆಕ್ಷೇಪ

Support THE-FILE

spot_img

ಬೆಂಗಳೂರು; ತೆರಿಗೆ ಪಾವತಿದಾರರು ಮಾಸಿಕ ಸಲ್ಲಿಕೆಗಳನ್ನು ಖಚಿತಪಡಿಸಿಕೊಳ್ಳದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಕರ್ತವ್ಯಲೋಪದಿಂದಾಗಿ ನಿರಂತರವಾಗಿ ಕೋಟ್ಯಂತರ ಮೊತ್ತದ ವರಮಾನ ಸೋರಿಕೆಯಾಗುತ್ತಿದೆ.

ಆರ್ಥಿಕ ಮತ್ತು ರಾಜಸ್ವ ವಲಯಗಳಿಗೆ ಸಂಬಂಧಿಸಿದಂತೆ ಮಾರ್ಚ್‌ 2019 ಅಂತ್ಯಕ್ಕೆ ಸಿಎಜಿ ನೀಡಿರುವ ವರದಿಯು ಕರ್ನಾಟಕ ಮೌವತೆ ಅಧಿನಿಯಮ ಪರಿಚ್ಛೇದ 74(4) ರ ಅಡಿಯಲ್ಲಿ ದಂಡ ವಸೂಲು ಮಾಡದೇ ವರಮಾನ ಸೋರಿಕೆಯಾಗುತ್ತಿರುವುದನ್ನು ಮುನ್ನೆಲೆಗೆ ತಂದಿದೆ.

ಬಳ್ಳಾರಿ, ಬೆಂಗಳೂರು, ಬಿದರೆ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹೊಸಪೇಟೆ, ಕಲಬುರಗಿ ಹಾಗೂ ರಾಯೂಚೂರು ಜಿಲ್ಲೆಗಳ 22 ಕಚೇರಿ ವ್ಯಾಪ್ತಿಯಲ್ಲಿ ಕರ್ನಾಟಕ ಮೌವತೆ ಅಧಿನಿಯಮ ಪರಿಚ್ಛೇದ 74(4) ರ ಅಡಿಯಲ್ಲಿ17.62 ಕೋಟಿ ದಂಡ ವಿಧಿಸಿರಲಿಲ್ಲ ಎಂಬುದು ಸಿಎಜಿ ವರದಿಯಿಂದ ತಿಳಿದು ಬಂದಿದೆ.

ಕಾಂಗ್ರೆಸ್‌ ಸರ್ಕಾರದಲ್ಲಿ ಪೂರ್ಣಾವಧಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ, ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್‌ ಡಿ ಕುಮಾರಸ್ವಾಮಿ ಅವರ ಅವಧಿಯಲ್ಲಿ ಈ ನಷ್ಟ ಸಂಭವಿಸಿದೆ. ಈಗಿನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಕಳೆದಿದ್ದರೂ ಅಧಿಕಾರಿಗಳಿಗೆ ನೋಟೀಸ್‌ ನೀಡಿದೆಯೇ ವಿನಃ ಇನ್ನೂ ಪೂರ್ಣ ಪ್ರಮಾಣದಲ್ಲಿ ದಂಡ ವಸೂಲು ಮಾಡಿಲ್ಲ ಎಂದು ತಿಳಿದು ಬಂದಿದೆ.

ಕರದಾತರು ಸ್ಥಳೀಯ ಸನ್ನದು ಲೆಕ್ಕಪರಿಶೋಧಕರಿಂದ ಲೆಕ್ಕ ತಪಾಸಣೆ ನಡೆಸಿರುವುದಿಲ್ಲ. ಕರ ನಿರ್ಧರಣಾ ಅಧಿಕಾರಿಗಳು ಅಧಿನಿಯಮದ ಪ್ರಕಾರ ನೋಟೀಸ್‌ ನೀಡುವ ಮೂಲಕ ಅಥವಾ ಕಡ್ಡಾಯವಾಗಿ ವಿಧಿಸಬಹುದಾಗಿದ್ದ ದಂಡವನ್ನು ವಿಧಿಸುವ ಮೂಲಕ ಅನುಸರಣಾ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿರಲಿಲ್ಲ.

‘ವ್ಯವಸ್ಥೆಯಲ್ಲಿ ಅಂತರ್ಗತವಾಗಿರುವ ನಿಯಂತ್ರಣಗಳನ್ನು ಜಾರಿಗೊಳಿಸುವಲ್ಲಿನ ವಿಫಲತೆಯು ವರಮಾನದ ಸೋರಿಕೆಯಲ್ಲಿ ಪರಿಣಿಮಿಸುತ್ತದೆ, ‘ ಎಂದು ಸಿಎಜಿ ವರದಿ ಅಭಿಪ್ರಾಯಪಟ್ಟಿದೆ.
ಇಂತಹ ಪ್ರಕರಣಗಳನ್ನು 2019ರ ಅಗಸ್ಟ್‌ ಡಿಸೆಂಬರ್‌ 2019ರ ನಡುವೆ ಸರ್ಕಾರ ಹಾಗೂ ಇಲಾಖೆ ಗಮನಕ್ಕೆ ತಂದ ನಂತರ 3 ಪ್ರಕರಣಗಳಲ್ಲಿ 0.84 ಲಕ್ಷ ಮೊತ್ತವನ್ನಷ್ಟೇ ವಸೂಲು ಮಾಡಲಾಗಿದೆ. 1,081 ಪ್ರಕರಣಗಳಲ್ಲಿ 4.20 ಕೋಟಿ ಮೊತ್ತದಷ್ಟು ದಂಡದ ಪಾವತಿಸಲು ಆದೇಶ ಹೊರಡಿಸಿದೆ. 10.02 ಲಕ್ಷ ಮೊತ್ತವು ಒಳಗೊಂಡಂತೆ 67 ಪ್ರಕರಣಗಳಲ್ಲಿ ತಗಾದೆ ನೋಟೀಸ್‌ಗಳನ್ನು ನೀಡಿದೆ ಎಂದು ಇಲಾಖೆ ಸಿಎಜಿಗೆ ಉತ್ತರಿಸಿರುವುದು ತಿಳಿದು ಬಂದಿದೆ.

4 ವರ್ತಕರು ನಮೂನೆ ಮೌವತೆ 240ರಲ್ಲಿ 15.15 ಲಕ್ಷ ಮೊತ್ತದಷ್ಟು ಹೆಚ್ಚುವರಿ ತೆರಿಗೆ ಬಾಧ್ಯತೆಯನ್ನು ಘೋಷಿಸಿಕೊಂಡಿದ್ದರು. ಈ ಪೈಕಿ ಕೇವಲ ಇಬ್ಬರು ವರ್ತಕರು ಮಾತ್ರ 3.63 ಲಕ್ಷ ಮೊತ್ತವನ್ನು ಪಾವತಿಸಿದ್ದರು. ಇಬ್ಬರು ವರ್ತಕರುಗಳಿಂದ ಪಾವತಿ ಆಗಬೇಕಿದ್ದ ತೆರಿಗೆ ಬಾಧ್ಯತೆ 11.52 ಲಕ್ಷ ಮೊತ್ತವು ವಾಣಿಜ್ಯ ತೆರಿಗೆಗಳ ಇಲಾಖೆಯ ವಿದ್ಯುನ್ಮಾನ ಸಲ್ಲಿಕೆ ವ್ಯವಸ್ಥೆಯಲ್ಲಿ ಪಾವತಿಯಾಗದೇ ಬಾಕಿ ಉಳಿದಿತ್ತು. ಅಲ್ಲದೆ ಈ ರೀತಿಯಾಗಿ ಹೆಚ್ಚುವರಿ ತೆರಿಗೆ ಬಾಧ್ಯತೆಯ ಪಾವತಿಯನ್ನು ಖಚಿತಪಡಿಸಿಕೊಳ್ಳದೆಯೂ ಕೂಡ ದಂಡಗಳನ್ನು ಮನ್ನಾ ಮಾಡಲಾಗಿತ್ತು ಎಂದು ಸಿಎಜಿ ವರದಿ ಗಮನಿಸಿದೆ.

Hot this week

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

ಎಪಿಎಂಸಿಯಲ್ಲಿ ಅಕ್ರಮ; ನಿಯಮಬಾಹಿರವಾಗಿ 2,132 ಕಮಿಷನ್ ಏಜೆಂಟ್ ಲೈಸೆನ್ಸ್ ಮಂಜೂರು,

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ  ಸ್ವಂತ ಪ್ರಾಂಗಣ ಹೊಂದದೇ ಇದ್ದರೂ ಸಹ...

ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ  ಒಟ್ಟು 72 ಪ್ರಮುಖ...

ಸರ್ಕಾರಿ ಜಮೀನು ಭೂಗಳ್ಳರ ಪಾಲು; ಪಿ ನಂಬರ್ ದುರಸ್ತಿ ಹೆಸರಿನಲ್ಲಿ ಅಕ್ರಮ, ತಹಶೀಲ್ದಾರ್‍‌ಗಳೇ ಭಾಗಿ, ಕ್ರಮವೇ ಇಲ್ಲ

ಬೆಂಗಳೂರು;  ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಹೋಬಳಿ ಸಂಪಂಗೆರೆ ಗ್ರಾಮದಲ್ಲಿನ...

Topics

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

ಎಪಿಎಂಸಿಯಲ್ಲಿ ಅಕ್ರಮ; ನಿಯಮಬಾಹಿರವಾಗಿ 2,132 ಕಮಿಷನ್ ಏಜೆಂಟ್ ಲೈಸೆನ್ಸ್ ಮಂಜೂರು,

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ  ಸ್ವಂತ ಪ್ರಾಂಗಣ ಹೊಂದದೇ ಇದ್ದರೂ ಸಹ...

ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ  ಒಟ್ಟು 72 ಪ್ರಮುಖ...

ಸರ್ಕಾರಿ ಜಮೀನು ಭೂಗಳ್ಳರ ಪಾಲು; ಪಿ ನಂಬರ್ ದುರಸ್ತಿ ಹೆಸರಿನಲ್ಲಿ ಅಕ್ರಮ, ತಹಶೀಲ್ದಾರ್‍‌ಗಳೇ ಭಾಗಿ, ಕ್ರಮವೇ ಇಲ್ಲ

ಬೆಂಗಳೂರು;  ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಹೋಬಳಿ ಸಂಪಂಗೆರೆ ಗ್ರಾಮದಲ್ಲಿನ...

7ನೇ ವೇತನ ಆಯೋಗ ಶಿಫಾರಸ್ಸು; ಬದ್ಧ ವೆಚ್ಚದಲ್ಲಿ ಹೆಚ್ಚಳ, 15,000 ಕೋಟಿಯಿಂದ 20,000 ಕೋಟಿಗೆ ಏರಿಕೆ

ಬೆಂಗಳೂರು;  7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿದಲ್ಲಿ  ಮುಂಬರುವ ವರ್ಷಗಳಲ್ಲಿ ಬದ್ಧ...

ವಿಚಾರಣೆಗಳಿಗೆ ಹಾಜರಾಗದಿದ್ದರೂ ಸಂಭಾವನೆ ಕೋರಿದ ಪಬ್ಲಿಕ್ ಪ್ರಾಸಿಕ್ಯೂಟರ್ಸ್‌: 590 ಪ್ರಕರಣ ಪತ್ತೆ

ಬೆಂಗಳೂರು; ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ...

ಹುದ್ದೆಗಳ ಸಂಖ್ಯೆಯಲ್ಲಿ ಗಣನೀಯ ಕಡಿತ, ಸಾಮಾಜಿಕ ನ್ಯಾಯಕ್ಕೆ ಪೆಟ್ಟು; ವಿವಿಗಳ ಅಭಿಪ್ರಾಯ ಬಹಿರಂಗ

ಬೆಂಗಳೂರು; ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ  ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸಿದ್ದಲ್ಲಿ ...

Related Articles

Popular Categories

error: Content is protected !!