Wednesday | August 26, 2026 |

ಇ-ವಿಧಾನಮಂಡಲಕ್ಕೆ 253 ಕೋಟಿ ವೆಚ್ಚ; ಆರ್ಥಿಕ ಸಂಕಷ್ಟದಲ್ಲೂ ದುಂದುವೆಚ್ಚ!

ಬೆಂಗಳೂರು; ಪ್ರಾಯೋಗಿಕವಾಗಿ ಇ-ವಿಧಾನ ಮಂಡಲ ಯೋಜನೆಯನ್ನು ಅನುಷ್ಠಾನಗೊಳಿಸದೆಯೇ ನೇರವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲು ಮುಂದಾಗಿರುವ ವಿಧಾನಸಭೆ ಸಚಿವಾಲಯವು ಆರ್ಥಿಕ ಸಂಕಷ್ಟದ ಹೊತ್ತಿನಲ್ಲೇ ಕೋಟ್ಯಂತರ ರುಪಾಯಿ ದುಂದುವೆಚ್ಚ ಮಾಡಲು ಮುಂದಾಗಿದೆ.

ಈ ಯೋಜನೆ ಅನುಷ್ಠಾನಕ್ಕೆ ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಮ್ಮತಿ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಯೋಜನೆ ಹೊಣೆಗಾರಿಕೆಯನ್ನು ಕಿಯೋನಿಕ್ಸ್‌ಗೆ ವಹಿಸಲಾಗಿದೆ ಎಂದು ಗೊತ್ತಾಗಿದೆ. ಯೋಜನೆ ಸಂಬಂಧ ಡಿಪಿಆರ್‌ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಕಳೆದ 4 ವರ್ಷದ ಹಿಂದೆ 60.84 ಕೋಟಿ ರು. ಅಂದಾಜು ವೆಚ್ಚದಲ್ಲಿ ಇದೇ ಯೋಜನೆಯನ್ನು ಸಿದ್ಧಪಡಿಸಿದ್ದ ವಿಧಾನಸಭೆ ಸಚಿವಾಲಯ ಇದೀಗ ಅದೇ ಯೋಜನೆಯ ವೆಚ್ಚವನ್ನು 253 ಕೋಟಿ ರು.ಗೆ ಹೆಚ್ಚಳ ಮಾಡಿದೆ. ಸಚಿವಾಲಯದ ಈ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕೋವಿಡ್‌ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಹೊತ್ತಿನಲ್ಲಿ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳುವುದಕ್ಕೆ ರಾಜ್ಯ ಸರ್ಕಾರ ನಿರ್ಬಂಧಿಸಿದೆ. ಆದರೂ ವಿಧಾನಸಭೆ ಸಚಿವಾಲಯವು 253 ಕೋಟಿ ರು.ವೆಚ್ಚದಲ್ಲಿ ಇ-ವಿಧಾನಮಂಡಲ್‌ ಯೋಜನೆ ಅನುಷ್ಠಾನಗೊಳಿಸಲು ಮುಂದಾಗಿದೆ. ಅಲ್ಲದೆ ಇ-ವಿಧಾನಮಂಡಲ ಯೋಜನೆ ಕುರಿತು ಶಾಸಕರಿಗೆ ಯಾವುದೇ ಪ್ರಾಥಮಿಕ ತರಬೇತಿಯನ್ನೂ ನೀಡಿಲ್ಲ. ಇ-ಆಫೀಸ್‌ ತಂತ್ರಾಂಶವನ್ನು ಸಚಿವಾಲಯದ ಅಧಿಕಾರಿಗಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಬಳಸುತ್ತಿಲ್ಲ. ಹೀಗಿರುವಾಗ ಇ-ವಿಧಾನಮಂಡಲ ಯೋಜನೆ ಅನುಷ್ಠಾನಗೊಳಿಸಲು ನಡೆಸುತ್ತಿರುವ ತರಾತುರಿಯ ಹಿಂದೆ ‘ಕಮಿಷನ್‌ ವ್ಯವಹಾರ’ ವೂ ನಡೆದಿದೆ ಎಂಬ ಮಾತುಗಳು ಕೇಳಿ ಬಂದಿವೆ.

ಕಾಗದ ರಹಿತ ವಿಧಾನಮಂಡಲ ವಹಿವಾಟು/ಕಲಾಪ ವ್ಯವಸ್ಥೆ ಮಾಡುವುದು ಮತ್ತು ಕಾಗದಕ್ಕಾಗಿ ವ್ಯಯ ಮಾಡುತ್ತಿರುವ ಸರ್ಕಾರದ ಹಣವನ್ನು ಉಳಿತಾಯ ಮಾಡುವ ಉದ್ದೇಶ ಹೊಂದಿರುವ ಈ ಯೋಜನೆಗೆ ಕೇಂದ್ರ ಸರ್ಕಾರವೇ ಶೇ. 60ರಷ್ಟು ನೀಡುವ ಹಣವನ್ನು ಒದಗಿಸಲಿದೆ. ಆರಂಭಿಕ ಹಂತದಲ್ಲಿ ಕೇಂದ್ರದ ಅನುದಾನವನ್ನು ಬಳಸಿಕೊಳ್ಳುತ್ತಿಲ್ಲ ಎಂದು ತಿಳಿದು ಬಂದಿದೆ. ಪ್ರಾಯೋಗಿಕ ಹಂತದಲ್ಲಿ ಯಶಸ್ಸನ್ನಾಧರಿಸಿ ಯೋಜನೆಯನ್ನು ವಿಸ್ತರಿಸಬೇಕಿದ್ದ ಸಚಿವಾಲಯವು ಅನಗತ್ಯವಾಗಿ ವೆಚ್ಚ ಮಾಡುತ್ತಿರುವುದು ದುಂದುವೆಚ್ಚಕ್ಕೆ ದಾರಿಮಾಡಿಕೊಡಲಿದೆ ಎಂಬ ಮಾತುಗಳು ಕೇಳಿ ಬಂದಿವೆ.

ಯೋಜನೆ ಅನುಷ್ಠಾನದ ಮೊದಲ ಹಂತದಲ್ಲಿ ಸಾಫ್ಟ್‌ವೇರ್‌ಗೆ 39.20 ಕೋಟಿ, ಹಾರ್ಡ್‌ವೇರ್‌, ನೆಟ್‌ವರ್ಕಿಂಗ್‌ಗೆ 1,24,26,14,655 ರು ಸೇರಿ ಒಟ್ಟು 1,63,46,87,002 ರು. ವೆಚ್ಚ ಅಂದಾಜಿಸಲಾಗಿದೆ. ಮೊದಲ ಹಂತಕ್ಕೆ ಖರೀದಿಯಾಗುವ ಸಾಫ್ಟ್‌ವೇರ್‌ ಮತ್ತು ಹಾರ್ಡ್‌ವೇರ್‌ಗೆ ಜಿ ಎಸ್‌ ಟಿ 29.42 ಕೋಟಿ ರು ಭರಿಸಬೇಕು. ಅದೇ ರೀತಿ ಯೋಜನೆ ಅನುಷ್ಠಾನದ 2ನೇ ಹಂತದಲ್ಲಿ 63.15 ಲಕ್ಷ ರು., ಸಾಫ್ಟ್‌ವೇರ್‌ಗೆ ಎಂದು ಅಂದಾಜಿಸಿರುವ ವಿಧಾನಸಭೆ ಸಚಿವಾಲಯವು ಹಾರ್ಡ್‌ವೇರ್‌, ನೆಟ್‌ವರ್ಕಿಂಗ್‌ಗೆ 50.94 ಕೋಟಿ ರು. ಸೇರಿ ಒಟ್ಟು 51,57,50,173 ರು. ಎಂದು ಅಂದಾಜಿಸಿದೆ. 2ನೇ ಹಂತದ ಉಪಕರಣಗಳ ಖರೀದಿಗೆ ಜಿ ಎಸ್‌ ಟಿ ಶುಲ್ಕ 9,28,35,031 ರು. ಎಂದು ಅಂದಾಜಿಸಿದೆ ಎಂದು ಗೊತ್ತಾಗಿದೆ.

ವಿಧಾನಮಂಡಲವನ್ನು ಕಾಗದ ರಹಿತವನ್ನಾಗಿಸುವ ಸಂಬಂಧ 2014ರಲ್ಲಿ ಉಭಯ ಸದನಗಳ ಅಂದಿನ ಪೀಠಾಧ್ಯಕ್ಷರು ಅಧ್ಯಯನ ಸಮಿತಿ ರಚಿಸಿದ್ದರು. ಈ ಸಮಿತಿಯು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿ ಈ ಸಂಬಂಧ ವರದಿಯನ್ನು ನೀಡಿತ್ತು. ಈ ಮಧ್ಯೆ ಬಜೆಟ್‌ ಪೂರ್ವದಲ್ಲಿ ಸುಮಾರು 66.00 ಕೋಟಿ ರು.ಗಳ ಅಂದಾಜು ಪಟ್ಟಿಯನ್ನು ನೀಡಿತ್ತು.

Hot this week

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

Related Articles

Popular Categories

error: Content is protected !!