Thursday | August 20, 2026 |

ಒಕ್ಕಲಿಗರ ಸಂಘದ ಬೈಲಾ ತಿದ್ದುಪಡಿ; ದೇವೇಗೌಡರ ಮನವಿಗೆ ಮನ್ನಣೆ ನೀಡದ ಸರ್ಕಾರ

ಬೆಂಗಳೂರು; ರಾಜ್ಯ ಒಕ್ಕಲಿಗರ ಸಂಘದ ಬೈಲಾ ತಿದ್ದುಪಡಿಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಸೇರಿದಂತೆ ಹಲವರು ಬರೆದಿದ್ದ ಪತ್ರಗಳಿಗೆ ರಾಜ್ಯ ಬಿಜೆಪಿ ಸರ್ಕಾರ ಮಾನ್ಯತೆ ನೀಡಿಲ್ಲ. ಆಡಳಿತಾಧಿಕಾರಿ ಅವಧಿಯಲ್ಲಿ ಬೈಲಾ ತಿದ್ದುಪಡಿ ಮಾಡಲು ನಿರಾಕರಿಸಿದೆ. ಹೀಗಾಗಿ ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರಿಗೆ ಇದು ಹಿನ್ನಡೆಯಾದಂತಿದೆ.

ರಾಜ್ಯ ಒಕ್ಕಲಿಗರ ಸಂಘದ ಬೈಲಾ ತಿದ್ದುಪಡಿ ಮಾಡಿ ಆ ನಂತರ ಸಂಘದ ಚುನಾವಣೆ ನಡೆಸಬೇಕು ಎಂದು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ, ಸಚಿವ ಗೋಪಾಲಯ್ಯ, ವಿಧಾನಪರಿಷತ್‌ ಸದಸ್ಯ ಅ ದೇವೇಗೌಡ ಅವರು ಸಹಕಾರಿ ಇಲಾಖೆಗೆ ಪತ್ರ ಬರೆದಿದ್ದರು. ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಸಹಾಯಕ ಕಾರ್ಯದರ್ಶಿ, ಖಜಾಂಚಿ ಸೇರಿದಂತೆ ಇನ್ನಿತರೆ ಪದಾಧಿಕಾರಿಗಳನ್ನು ನೇರವಾಗಿ ಸಂಘದ ಎಲ್ಲಾ ಸದಸ್ಯರುಗಳಿಂದ ನಿರ್ದೇಶಕರ ಚುನಾವಣೆಯಲ್ಲಿಯೇ ಆಯ್ಕೆ ಮಾಡುವ ಸಂಬಂಧ ಉದ್ಧೇಶಿತ ಬೈಲಾ ತಿದ್ದುಪಡಿಗೆ ಒಪ್ಪದಿರಲು ಸಹಕಾರ ಇಲಾಖೆ ನಿಲುವು ತಾಳಿದೆ. ಇದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ಗೆ ಟಿಪ್ಪಣಿ ಹಾಳೆಯೊಂದು ಲಭ್ಯವಾಗಿದೆ.

ಸಂಘದಲ್ಲಿ ಒಟ್ಟು 5,20,721 ಮಂದಿ ಸದಸ್ಯರು ನೋಂದಣಿಯಾಗಿದ್ದಾರೆ. ಸಂಘದ ಬೈಲಾ 7(3)ರ ಪ್ರಕಾರ 11 ಜಿಲ್ಲಾ ಕ್ಷೇತ್ರಗಳಿಂದ 35 ಕಾರ್ಯಕಾರಿ ಸಮಿತಿ ಸದಸ್ಯರಿದ್ದಾರೆ. ಪದಾಧಿಕಾರಿಗಳ ನೇರ ಚುನಾವಣೆಗೆ ಬೈಲಾ ತಿದ್ದುಪಡಿ ಮಾಡಲು ಅಧ್ಯಕ್ಷರು, ಉಪಾಧ್ಯಕ್ಷರು, ಸಹಾಯಕ ಕಾರ್ಯದರ್ಶಿ, ಖಜಾಂಚಿ ಸೇರಿ ಒಟ್ಟು 5 ಸ್ಥಾನಗಳಿಗೆ ಯಾವ ಜಿಲ್ಲೆಯ ನಿರ್ದೇಶಕರ ಸಂಖ್ಯೆಯಲ್ಲಿ ಕಡಿಮೆ ಮಾಡಬೇಕು ಎಂಬ ಬಗ್ಗೆಯೂ ತೀರ್ಮಾನವಾಗಿಲ್ಲ ಎಂಬ ಸಂಗತಿ ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

ಪದಾಧಿಕಾರಿಗಳ ನೇರ ಆಯ್ಕೆ ಮಾಡಲು 11 ಜಿಲ್ಲಾ ಕ್ಷೇತ್ರಗಳ ವ್ಯಾಪ್ತಿಯ ಪ್ರತಿ ಮತಗಟ್ಟೆಯಲ್ಲಿಯೂ 6 ಪೆಟ್ಟಿಗೆಗಳನ್ನು ಇಡಬೇಕಿದೆ. ಇದರ ನಿರ್ವಹಣೆ ಮತ್ತು ಖರ್ಚು ವೆಚ್ಚಗಳು ಗಣನೀಯವಾಗಿ ಹೆಚ್ಚುತ್ತದೆ. ಈ ರೀತಿಯ ಬೈಲಾ ತಿದ್ದುಪಡಿಯನ್ನು ಸಂಘದ ಆಡಳಿತಾಧಿಕಾರಿ ಅವಧಿಯಲ್ಲಿ ಆಡಳಿತಾಧಿಕಾರಿ ಮಾಡಲು ಕಾನೂನಿನಲ್ಲಿ ಅವಕಾಶ ಇದೆಯೇ ಎಂಬ ಬಗ್ಗೆ ಸರ್ಕಾರವನ್ನು ಕೋರಲು ಇಲಾಖೆ ಮುಂದಾಗಿದೆ ಎಂಬುದು ಗೊತ್ತಾಗಿದೆ.

‘ಸಂಘದ ಸದಸ್ಯರ ಪೈಕಿ ಶೇ.60ಕ್ಕಿಂತಲೂ ಹೆಚ್ಚಿನ ಸದಸ್ಯರು ಗ್ರಾಮೀಣ ಭಾಗದವರಾಗಿದ್ದು ಅವರೆಲ್ಲರೂ ಮೊಬೈಲ್‌ ಸಂಖ್ಯೆಯನ್ನು ಹೊಂದಿರುವುದಿಲ್ಲ. ವರ್ಚುವಲ್‌ ಸರ್ವ ಸದಸ್ಯರ ಸಭೆಗೆ ಭಾಗವಹಿಸಲು ಅಗತ್ಯವಿರುವ ಸ್ಮಾರ್ಟ್‌ ಫೋನ್‌ ಹೊಂದಿರುವ ಸಾಧ್ಯತೆ ಕಡಿಮೆ ಇದೆ. ಇವರುಗಳು ವರ್ಚುವಲ್‌ ಸರ್ವ ಸದಸ್ಯರ ಸಭೆಯಲ್ಲಿ ಅಭಿಪ್ರಾಯವನ್ನು ವ್ಯಕ್ತಪಡಿಸಲು ಸಾಧ್ಯವಾಗುವುದಿಲ್ಲ. ದೊಡ್ಡಮಟ್ಟದ ಸದಸ್ಯರನ್ನೊಳಗೊಂಡ ಸಂಘದ ಸದಸ್ಯರನ್ನು ಕರೆದು ಬೈಲಾ ತಿದ್ದುಪಡಿ ಅಂಶಗಳನ್ನೊಳಗೊಂಡ ದೊಡ್ಡಮಟ್ಟದ ತೀರ್ಮಾನದ ಬಗ್ಗೆ ಸದಸ್ಯರ ಅಭಿಪ್ರಾಯವನ್ನು ಏಕಕಾಲದಲ್ಲಿ ಸಂಗ್ರಹಿಸುವುದು ಕಷ್ಟಕರ. ಹೀಗಾಗಿ ಸಂಘದ ಚುನಾವಣೆ ನಡೆಸಲು ಚುನಾವಣಾಧಿಕಾರಿ ನೇಮಕ ಮಾಡಬೇಕು,’ ಎಂದು ಹಲವರು ಕೋರಿದ್ದರು.

ಮಹತ್ವವಾದ ಬೈಲಾ ತಿದ್ದುಪಡಿಯನ್ನು ಆಡಳಿತಾಧಿಕಾರಿಯವರ ಅವಧಿಯಲ್ಲಿ ಸಂಘಗಳ ಕಾಯ್ದೆ ಅಡಿಯಲ್ಲಿ ಮಾಡುವುದು ಸೂಕ್ತವೇ ಎಂಬ ಬಗ್ಗೆ ಸರ್ಕಾರದ ನಿರ್ದೇಶನ ಕೋರಿದ್ದ ಇಲಾಖೆ, ಅಂತಿಮವಾಗಿ ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರ ಅಡಿಯಲ್ಲಿ ಸಂಘಗಳ ಬೈಲಾ ತಿದ್ದುಪಡಿ ಮಾಡುವ ಅವಕಾಶವಿಲ್ಲ ಎಂದು ನಿಲುವು ತಾಳಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

ನಿವೃತ್ತ ಐಎಎಸ್ ಅಧಿಕಾರಿ ಶಂಕರಲಿಂಗೇ ಗೌಡ ಅವರನ್ನು ಆಡಳಿತಾಧಿಕಾರಿಯನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ಫೆ.21ರಿಂದ ಜಾರಿಗೆ ಬರುವಂತೆ ಶಂಕರಲಿಂಗೇಗೌಡ ಅವರು ಮುಂದಿನ 6 ತಿಂಗಳವರೆಗೂ ಆಡಳಿತಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ. ನೂತನ ಆಡಳಿತಾಧಿಕಾರಿಯಾಗಿರುವ ಶಂಕರಲಿಂಗೇಗೌಡ ಅವರು 6 ತಿಂಗಳ ಅವಧಿಯಲ್ಲಿ ಸಂಘದಲ್ಲಿನ ನ್ಯೂನತೆಗಳನ್ನು ಸರಿಪಡಿಸಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ ನಡೆಸಿ ಚುನಾಯಿತ ಆಡಳಿತ ಮಂಡಳಿಗೆ ಅಧಿಕಾರ ಹಸ್ತಾಂತರಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸಹಕಾರ ಇಲಾಖೆ ಆದೇಶ ಹೊರಡಿಸಿತ್ತು.

Hot this week

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಹಿಂದುಳಿದ ಸಮುದಾಯ ಅಭಿವೃದ್ಧಿ ನಿಗಮಗಳಿಗೆ 473.41 ಕೋಟಿ ಅನುದಾನ ಹಂಚಿಕೆ; ನಾಲ್ಕೂವರೆ ತಿಂಗಳಾದರೂ ನಯಾಪೈಸೆಯೂ ಬಿಡುಗಡೆಯಾಗಿಲ್ಲ

ಬೆಂಗಳೂರು; ಆರ್ಥಿಕ ವರ್ಷ ಆರಂಭವಾಗಿ ನಾಲ್ಕೂವರೆ ತಿಂಗಳಾದರೂ ಸಹ ಹಿಂದುಳಿದ ವರ್ಗಗಳ...
Please Scan to make Your Contribution

Topics

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಫ್ರೀಡಂ ಹಬ್ಬಕ್ಕೆ 6 ಕೋಟಿ ವೆಚ್ಚ!; ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಕೆಲಸ ಆರಂಭಿಸಿದ ಕಂಪನಿ

ಬೆಂಗಳೂರು; ಹೊಸದಾಗಿ ವಿದ್ಯಾರ್ಥಿ ನಿಲಯಗಳ ಆರಂಭ, ಅನುಮೋದಿತ ಕಾಮಗಾರಿಗಳ ಕಾರ್ಯಭಾರಕ್ಕೆ ನಲುಗಿ...

3,206 ಪಂಚಾಯ್ತಿಗಳಲ್ಲಿ ಶಾಸನಬದ್ಧ ತೆರಿಗೆ ವಸೂಲು; ಸರ್ಕಾರಕ್ಕೆ ಪಾವತಿಯಾಗದ 17.28 ಕೋಟಿ ಎಲ್ಲಿದೆ?

ಬೆಂಗಳೂರು; ರಾಜ್ಯದ 27 ಜಿಲ್ಲೆಗಳ 3,206 ಪಂಚಾಯ್ತಿಗಳು ಸರಕು ಸೇವಾ ತೆರಿಗೆ,...

Related Articles

Popular Categories

error: Content is protected !!