Wednesday | August 26, 2026 |

ಐಎಎಸ್‌ ಬಿಳಿಯಾನೆಗಳ ತೆವಳಿಕೆ; 30 ದಿನ ಮೀರಿದರೂ ವಿಲೇವಾರಿಯಾಗದ 41,069 ಕಡತ

ಬೆಂಗಳೂರು; ನಿಗದಿತ ಅವಧಿಯೊಳಗೆ ಕಡತಗಳ ವಿಲೇವಾರಿ ಮಾಡಬೇಕು ಎಂದು ಸರ್ಕಾರ ಹೊರಡಿಸಿರುವ ಸೂಚನೆಗಳನ್ನು ವಿವಿಧ ಇಲಾಖೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಾಯದರ್ಶಿಗಳೇ ಪಾಲಿಸುತ್ತಿಲ್ಲ. ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳ ಬಳಿ 30 ದಿನ ಮೀರಿದ್ದರೂ 41,069 ರಷ್ಟು ವಿಲೇವಾರಿ ಆಗದಿರುವುದು ಐಎಎಸ್‌ ಅಧಿಕಾರಿಗಳ ಆಡಳಿತ ವೈಖರಿ ಹೇಗಿದೆ ಎಂಬುದಕ್ಕೆ ಹಿಡಿದ ಕೈಗನ್ನಡಿಯಾಗಿದೆ.

‘ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಇತರೆ ಕಚೇರಿಗಳಲ್ಲಿ 15-20 ದಿನಗಳವರೆಗೆ ಕಡತಗಳನ್ನು ಇಟ್ಟುಕೊಳ್ಳಲಾಗುತ್ತಿದೆ. ಸಕಾಲಕ್ಕೆ ಕಡತಗಳು ವಿಲೇವಾರಿಯಾಗುತ್ತಿಲ್ಲ. ಈ ಬಗ್ಗೆ ಬಿಗಿ ಕ್ರಮ ಕೈಗೊಳ್ಳಬೇಕಾಗಿದೆ. ಅನಗತ್ಯವಾಗಿ ಕಡತ ಇಟ್ಟುಕೊಂಡು ಜನರನ್ನು ಅಲೆದಾಡಿಸುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟು ಕ್ರಮ ಜರುಗಿಸಲಾಗುವುದು,’ ಎಂದು ತಿಪಟೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಚ್ಚರಿಸಿದ್ದರ ಬೆನ್ನಲ್ಲೇ ಕಂದಾಯ ಇಲಾಖೆಯೂ ಸೇರಿದಂತೆ ಇನ್ನಿತರೆ 7 ಇಲಾಖೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಬಳಿಯೇ 30 ದಿನ ಮೀರಿ ಯಾವುದೇ ಕ್ರಮ ಆಗದೇ ಸಾವಿರಾರು ಸಂಖ್ಯೆಯಲ್ಲಿ ಕಡತಗಳಿರುವ ವಿಚಾರ ಮುನ್ನೆಲೆಗೆ ಬಂದಿದೆ.

ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ 2021ರ ಮಾರ್ಚ್‌ 18ರ ಅಂತ್ಯಕ್ಕೆ ಈ ಸಂಬಂಧ ಕಡತಗಳ ವಿಲೇವಾರಿ ಪ್ರಗತಿ ಕುರಿತು ಚರ್ಚೆ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ಗೆ ಅಂಕಿ ಅಂಶದ ವಿವರಗಳು ಲಭ್ಯವಾಗಿವೆ.

ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮಹೇಂದ್ರಜೈನ್‌, ನಗರಾಭಿವೃದ್ಧಿ ಇಲಾಖೆಯ ಡಾ ಜೆ ರವಿಶಂಕರ್‌, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್‌ ಅವರೂ ಸೇರಿದಂತೆ ಒಟ್ಟು 7 ಇಲಾಖೆಗಳಲ್ಲಿ ಕೇವಲ ಶೇ.23.29ರಷ್ಟು ಮಾತ್ರ ವಿಲೇವಾರಿ ಆಗಿದೆ.

ಭೌತಿಕ ಕಡತಗಳಿಗೆ ಮುಕ್ತಾಯ ಹಾಡುವ ಸಲುವಾಗಿಯೇ ಇ-ಆಫೀಸ್‌ ತಂತ್ರಾಂಶವನ್ನು ಅಳವಡಿಸಿದ್ದರೂ ಯಾವುದೇ ಪ್ರಗತಿ ಕಂಡು ಬಂದಿಲ್ಲ. ವಿಶೇಷವೆಂದರೆ ಇ-ಆಫೀಸ್‌ನಲ್ಲಿಯೇ 17,148 ಸಂಖ್ಯೆಯಷ್ಟು ಕಡತಗಳು ವಿಲೇವಾರಿಯಾಗಿಲ್ಲ ಎಂಬುದು ಲಭ್ಯವಿರುವ ಅಂಕಿ ಅಂಶದಿಂದ ತಿಳಿದು ಬಂದಿದೆ.

ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಜೈನ್‌ ಅವರ ಬಳಿ ಒಟ್ಟು 9,845 ಕಡತಗಳಿವೆ. ಇವರ ಬಳಿ ಇರುವ ಕಡತಗಳು 30 ದಿನ ಮೀರಿದ್ದರೂ ಯಾವುದೇ ಕ್ರಮ ವಹಿಸಿಲ್ಲ. ಗಡುವು ಮೀರಿದ್ದರೂ ಕಡತ ವಿಲೇವಾರಿ ಮಾಡದ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಪೈಕಿ ಮಹೇಂದ್ರ ಜೈನ್‌ ಅವರು ಅಗ್ರಪಂಕ್ತಿಯಲ್ಲಿರುವುದು ಗೊತ್ತಾಗಿದೆ.

ಹಾಗೆಯೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್‌ ಅವರ ಬಳಿ 2,564, ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ ಜೆ ರವಿಶಂಕರ್‌ ಅವರ ಬಳಿ 7,425 ಕಡತಗಳು ವಿಲೇವಾರಿಗೆ ಬಾಕಿ ಉಳಿದಿವೆ. ಈ ಕಡತಗಳು 30 ದಿನ ಮೀರಿ ಯಾವುದೇ ಕ್ರಮ ವಹಿಸಿಲ್ಲ ಎಂಬುದು ದಾಖಲೆಯಿಂದ ತಿಳಿದು ಬಂದಿದೆ.

ಇನ್ನು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ 6,403, ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯಲ್ಲಿ 7,559, ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿ 3,719, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3,554 ಕಡತಗಳು 30 ದಿನ ಮೀರಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಮಟ್ಟದಲ್ಲೇ ವಿಲೇವಾರಿ ಆಗದೇ ಬಾಕಿ ಉಳಿದಿವೆ.

Hot this week

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...
Please Scan to make Your Contribution

Topics

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

Related Articles

Popular Categories

error: Content is protected !!