Friday | March 27, 2026 |

ಕಿಸಾನ್‌ ಯೋಜನೆ 2ನೇ ಕಂತಿನ ಬಿಡಿಗಾಸು ಕೊಡದ ಸರ್ಕಾರ; ಮಠಗಳಿಗಿರುವ ನೆರವು ರೈತರಿಗೇಕಿಲ್ಲ?

Support THE-FILE

spot_img

ಬೆಂಗಳೂರು: ಕೋವಿಡ್‌ನಿಂದ ಉದ್ಭವಿಸಿರುವ ಆರ್ಥಿಕ ಸಂಕಷ್ಟದಲ್ಲೂ ಮಠ ಮಾನ್ಯಗಳಿಗೆ 80 ಕೋಟಿ ಅನುದಾನ ಬಿಡುಗಡೆ ಮಾಡಿರುವ ರಾಜ್ಯ ಬಿಜೆಪಿ ಸರ್ಕಾರವು 2020-21ನೇ ಸಾಲಿನ ಪ್ರಧಾನಮಂತ್ರಿ ಕಿಸಾನ್‌ ಕರ್ನಾಟಕ ಯೋಜನೆಯಡಿ ಎರಡನೇ ಕಂತಿನ ಆರ್ಥಿಕ ಸಹಾಯ ಧನ ಬಿಡುಗಡೆ ಮಾಡಲು ಈವರೆವಿಗೂ ನಯಾ ಪೈಸೆಯನ್ನೂ ಬಿಡುಗಡೆ ಮಾಡಿಲ್ಲದಿರುವುದು ಇದೀಗ ಬಹಿರಂಗವಾಗಿದೆ.

ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾಗಿರುವ ಪ್ರಧಾನಮಂತ್ರಿ ಕಿಸಾನ್‌ ಯೋಜನೆಗೆ ರಾಜ್ಯ ಸರ್ಕಾರವು ಅನುದಾನವನ್ನು ಹಂಚಿಕೊಳ್ಳುತ್ತಿದೆ. ಆದರೆ 2020-21ನೇ ಸಾಲಿನಲ್ಲಿ ರಾಜ್ಯ ಸರ್ಕಾರದಿಂದ ನೀಡುವ 4,000 ರು. ಹೆಚ್ಚುವರಿ ಆರ್ಥಿಕ ಸಹಾಯಧನದ ಎರಡನೇ ಕಂತಿನ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಈ ಕುರಿತು ಕೃಷಿ ಆಯುಕ್ತರು 2021ರ ಮಾರ್ಚ್‌ 16ರಂದು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

4,000 ರು.ಗಳ ಹೆಚ್ಚುವರಿ ಆರ್ಥಿಕ ನೆರವನ್ನು 2 ಕಂತುಗಳಲ್ಲಿ ಪಿ ಎಂ ಕಿಸಾನ್‌ ಕರ್ನಾಟಕ ಯೋಜನೆಯಡಿ ನೀಡುತ್ತಿದೆ. ಇದಕ್ಕಾಗಿ ರಾಜ್ಯವಲಯದ ಲೆಕ್ಕ ಶೀರ್ಷಿಕೆ (2401-00-800-1-05-100) ಅಡಿ ಒಟ್ಟು 2,100 ಕೋಟಿ ರು. ನಿಗದಿಪಡಿಸಿತ್ತು. ಈ ಪೈಕಿ 2020-21ನೇ ಸಾಲಿನಲ್ಲಿ ಎರಡನೇ ಕಂತಿಗೆ 51,66,395 ರೈತರಿಗೆ 1,033.28 ಕೋಟಿ ಹಾಗೂ ಮೊದಲನೇ ಕಂತಿನ ಬಾಕಿ ಬಾಕಿ 56,665 ರೈತರಿಗೆ 11.33 ಕೋಟಿ ರು. ಸೇರಿ ಒಟ್ಟಾರೆ 2020-21ನೇ ಸಾಲಿಗೆ 1,044.61 ಕೋಟಿ ರು. ಅನುದಾನ ಒದಗಿಸಬೇಕಿತ್ತು.

‘2020-21ನೇ ಸಾಲಿನಲ್ಲಿ ಎರಡನೇ ಕಂತಿನ ಆರ್ಥಿಕ ಸಹಾಯಧನವನ್ನು ಪಾವತಿಸಲು ಅನುದಾನ ಇಲ್ಲಿಯವರೆಗೆ ಬಿಡುಗಡೆ ಮಾಡಿಲ್ಲ, ‘ ಎಂದು ಕೃಷಿ ಆಯುಕ್ತರು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಅನುದಾನ ಹೆಚ್ಚುವರಿ ಆರ್ಥಿಕ ಸಹಾಯಧನ ಬಿಡುಗಡೆಯಾಗದ ಕಾರಣ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ಸಾವಿರಾರು ಸಂಖ್ಯೆಯ ರೈತರು ಸಂಕಷ್ಟದಲ್ಲಿದ್ದರೂ ಕೃಷಿ ಸಚಿವ ಬಿ ಸಿ ಪಾಟೀಲ್‌ ರೈತರ ಸಂಕಷ್ಟವನ್ನು ಆಲಿಸಿಲ್ಲ.!

ಇದೇ ಲೆಕ್ಕ ಶೀರ್ಷಿಕೆಯಲ್ಲಿ ಕಳೆದ ಸಾಲಿನಲ್ಲಿ 59346.00 ಲಕ್ಷ ರುಗ.ಳನ್ನು ಪ್ರಸಕ್ತ ಸಾಲಿನಲ್ಲಿ ಬಳಸಿಕೊಂಡಿದ್ದ ಕೃಷಿ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಒದಗಿಸಿರುವ ಅನುದಾನವನ್ನು ಉಳಿಕೆ ಮಾಡಲು ಮುಂದಾಗಿದೆ ಎಂದು ಗೊತ್ತಾಗಿದೆ.

ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ಈವರೆವಿಗೆ 60,85,996 ರೈತರು ಪಿಎಂಕೆ ಪೋರ್ಟಲ್‌ನಲ್ಲಿ ಮತ್ತು 3,77,990 ಸ್ವಯಂ/ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿದ್ದಾರೆ. ನೋಂದಣಿ ವಿವರಗಳನ್ನು ಪರಿಶೀಲಿಸಿದ ನಂತರ ಕೇಂದ್ರ ಸರ್ಕಾರಕ್ಕೆ ಒಟ್ಟು 57,09,537 ರೈತರ ವಿವರಗಳನ್ನು ಕಳಿಸಿರುವುದು ಕೃಷಿ ಸಚಿವ ಬಿ ಸಿ ಪಾಟೀಲ್‌ ಅವರು 2021ರ ಮಾರ್ಚ್‌ 17ರಂದು ನಡೆದಿದ್ದ ವಿಧಾನಸಭೆ ಅಧಿವೇಶನದಲ್ಲಿ ಡಾ ಅಜಯ್‌ ಧರ್ಮಸಿಂಗ್‌ ಅವರಿಗೆ ಲಿಖಿತ ಉತ್ತರದಿಂದ ತಿಳಿದು ಬಂದಿದೆ.

ಅಲ್ಲದೆ ಯೋಜನೆ ಜಾರಿಯಾದ ದಿನದಿಂದ ಈವರೆವಿಗೆ 53,96,762 ರೈತರಿಗೆ ಹಣ ಸಂದಾಯವಾಗಿದೆ. ವಿವಿಧ ಕಾರಣಗಳಿಂದಾಗಿ 20,584 ಫಲಾನುಭವಿ ರೈತರಿಗೆ ಯೋಜನೆಯ ಅರ್ಥಿಕ ನೆರವು ಲಭಿಸಿಲ್ಲ. 2018-19ರಲ್ಲಿ 1106062, 2019-20ರಲ್ಲಿ 4304980, 2020-21ರಲ್ಲಿ 296964 ರೈತರು ಪಿಎಂಕೆ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ. 2018-19ರಲ್ಲಿ 19,872, 2019-20ರಲ್ಲಿ 50,10,591, 2020-21ರಲ್ಲಿ 53,96,762 ರೈತರು ಆರ್ಥಿಕ ನೆರವು ಪಡೆದಿರುವುದು ಗೊತ್ತಾಗಿದೆ.

Hot this week

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

Topics

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

Related Articles

Popular Categories

error: Content is protected !!