Friday | April 17, 2026 |

ಡಿಸಿಎಂಗಳಿಗೆ 5 ಕೋಟಿ ಸಂಗ್ರಹ; ಎಫ್‌ಐಆರ್‌ ದಾಖಲಿಸದ ಪೊಲೀಸರ ವಿರುದ್ಧ ಡಿಸಿಪಿಗೆ ದೂರು

ಬೆಂಗಳೂರು; ಉಪ ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ 5 ಕೋಟಿ ಹಣ ಸಂಗ್ರಹ ಮಾಡಲು ತಮ್ಮ ಕೈ ಕೆಳಗಿನ ಅಧಿಕಾರಿಗಳಿಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ ಸತೀಶ್‌ಕುಮಾರ್‌ ಎಸ್‌ ಹೊಸಮನಿ ಅವರು ತಾಕೀತು ಮಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ದೂರನ್ನಾಧರಿಸಿ ವಿಧಾನಸೌಧ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸದೆ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದಾರೆ.

ಮಹಾರಾಷ್ಟ್ರ ಗೃಹ ಸಚಿವರು 100 ಕೋಟಿ ಹಣ ಸಂಗ್ರಹಿಸಲು ಅಲ್ಲಿನ ಪೊಲೀಸ್‌ ಕಮಿಷನರ್‌ಗೆ ತಾಕೀತು ಮಾಡಿದ್ದರು ಎಂಬುದು ರಾಜಕೀಯ ವಲಯದಲ್ಲಿ ಚರ್ಚೆಗೀಡಾಗಿರುವ ಬೆನ್ನಲ್ಲೇ ಇದೇ ಮಾದರಿಯಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಇಲಾಖೆಯ ಕಾರ್ಯದರ್ಶಿಗೆ 5 ಕೋಟಿ ಸಂಗ್ರಹ ಮಾಡಬೇಕು ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ ಸತೀಶ್‌ಕುಮಾರ್‌ ಹೊಸಮನಿ ಅವರ ವಿರುದ್ಧದ ಆರೋಪ ಪ್ರಕರಣದಲ್ಲಿ ಯಾವುದೇ ಕ್ರಮ ವಹಿಸದ ಪೊಲೀಸರ ಕರ್ತವ್ಯಲೋಪವೂ ಮುನ್ನೆಲೆಗೆ ಬಂದಿದೆ.

ಉಪ ಮುಖ್ಯಮಂತ್ರಿಗಳಿಗೆ 5 ಕೋಟಿ ಹಣ ಸಂಗ್ರಹ ಮಾಡಲು ಗ್ರಂಥಾಲಯ ಇಲಾಖೆ ನಿರ್ದೇಶಕರು ತಾಕೀತು ಮಾಡಿರುವ ಪ್ರಕರಣದ ಕುರಿತು ಸಾಮಾಜಿಕ ಕಾರ್ಯಕರ್ತ ಎಚ್‌ ಎಂ ವೆಂಕಟೇಶ್‌ ಎಂಬುವರು ಶಿಕ್ಷಣ ಇಲಾಖೆಯ ಟಿಪ್ಪಣಿ ಹಾಳೆ ಸಮೇತ ಹಲವು ದಿನಗಳ ಹಿಂದೆ ದೂರು ಸಲ್ಲಿಸಿದ್ದರು. ದೂರನ್ನಾಧರಿಸಿ ಎಫ್‌ಐಆರ್‌ ದಾಖಲಿಸದ ಹಿನ್ನೆಲೆಯಲ್ಲಿ ಪ್ರಕರಣವನ್ನು ಇದೀಗ ಬೆಂಗಳೂರು ಕೇಂದ್ರ ವಿಭಾಗದ ಉಪ ಪೊಲೀಸ್‌ ಆಯುಕ್ತರ ಕಚೇರಿಗೆ ಕೊಂಡೊಯ್ದಿದ್ದಾರೆ.

ಅಲ್ಲದೆ ಈ ಸಂಬಂಧ ನೀಡಿದ್ದ ದೂರಿಗೆ ಹೆಚ್ಚಿನ ಮಾಹಿತಿ ನೀಡುವಂತೆ ನೀಡಿದ್ದ ನೋಟೀಸ್‌ಗೆ ವೆಂಕಟೇಶ್‌ ಅವರು ನೀಡಿದ್ದ ಉತ್ತರವೂ ಸಂಬಂಧಿತ ಕಡತದಲ್ಲಿ ಇಲ್ಲವೆಂದು ಠಾಣಾಧಿಕಾರಿಗಳು ಸಬೂಬು ಹೇಳುವ ಮೂಲಕ ಪ್ರಕರಣವನ್ನು ಮುಚ್ಚಿ ಹಾಕಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

‘ಠಾಣೆಯಲ್ಲಿ ದೂರು ಅಥವಾ ಮಾಹಿತಿಯನ್ನು ಠಾಣಾಧಿಕಾರಿಗಳು ಪಡೆದ ತಕ್ಷಣ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಬೇಕೆಂದು ಭಾರತದ ಸರ್ವೋಚ್ಛ ನ್ಯಾಯಾಲಯ ತನ್ನ ತೀರ್ಪಿನಲ್ಲಿ ತಿಳಿಸಿದೆ. ಆದರೆ ತಮ್ಮ ವ್ಯಾಪ್ತಿಯಲ್ಲಿ ಬರುವ ವಿಧಾನಸೌಧ ಠಾಣೆಯ ಅಧಿಕಾರಿಗಳು ಇದರ ಪಾಲನೆ ಮಾಡದೇ ಅವರ ಸೇವಾ ಕರ್ತವ್ಯವನ್ನು ಮರೆತಿದ್ದಾರೆ,’ ಎಂದು ಉಪ ಪೊಲೀಸ್‌ ಆಯುಕ್ತರಿಗೆ ನೀಡಿರುವ ದೂರಿನಲ್ಲಿ ವೆಂಕಟೇಶ್‌ ಅವರು ವಿವರಿಸಿದ್ದಾರೆ.

ಹಾಗೆಯೇ ‘ನಾನು ನೀಡಿದ್ದ ದೂರಿನಂತೆಯೇ ಮಹಾರಾಷ್ಟ್ರ ಸರ್ಕಾರದಲ್ಲಿ ಕೂಡ ಪೊಲೀಸ್‌ ಕಮಿಷನರ್‌ಗೆ ಗೃಹ ಮಂತ್ರಿಗಳು 100 ಕೋಟಿ ಹಣವನ್ನು ಪ್ರತಿ ತಿಂಗಳು ಸಂಗ್ರಹಿಸಿ ಕೊಡಬೇಕೆಂದು ಸೂಚಿಸಿರುವುದು ಅಲ್ಲಿನ ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲಗಳನ್ನು ಉಂಟು ಮಾಡಿದೆ. ಅಲ್ಲಿನ ಸರ್ಕಾರದ ಅಳಿವು ಉಳಿವು ಪ್ರಶ್ನೆಯೂ ಎದುರಾಗಿದೆ. ಅದೇ ರೀತಿಯಲ್ಲಿ ಈ ಪ್ರಕರಣವು ಕರ್ನಾಟಕ ಸರ್ಕಾರದ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ ಸತೀಶ್‌ಕುಮಾರ್ ಹೊಸಮನಿ ಅವರು ಉಪ ಮುಖ್ಯಮಂತ್ರಿಗಳಿಗೆ 5 ಕೋಟಿ ಹಣ ಸಂಗ್ರಹ ಮಾಡುವಂತೆ ತಾಕೀತು ಮಾಡಿರುವುದು ತನಿಖೆಗೆ ಒಳಪಡುವ ವಿಷಯವಾಗಿದೆ. ಇದರಲ್ಲಿ ಸಾರ್ವಜನಿಕ ಹಿತಾಸಕ್ತಿಯೂ ಅಡಗಿದೆ. ಹೀಗಾಗಿ ದೂರನ್ನಾಧರಿಸಿ ತಕ್ಷಣವೇ ಎಫ್‌ಐಆರ್‌ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು,’ ಎಂದೂ ಉಪ ಆಯುಕ್ತರಿಗೆ ಮನವಿ ಮಾಡಿರುವುದು ಪತ್ರದಿಂದ ತಿಳಿದು ಬಂದಿದೆ.

 

ಪ್ರಕರಣದ ಹಿನ್ನೆಲೆ

ಉಪ ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ 5 ಕೋಟಿ ಹಣ ಸಂಗ್ರಹ ಮಾಡಲು ತಮ್ಮ ಕೈ ಕೆಳಗಿನ ಅಧಿಕಾರಿಗಳಿಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ ಸತೀಶ್‌ಕುಮಾರ್‌ ಎಸ್‌ ಹೊಸಮನಿ ಅವರು ತಾಕೀತು ಮಾಡಿದ್ದಾರೆ ಎಂದು ಶಿವಾನಂದ ದೊಡ್ಡಮನಿ ಎಂಬುವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರನ್ನು ಸಲ್ಲಿಸಿದ್ದರು. ಇದನ್ನಾಧರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಶಿಕ್ಷಣ ಇಲಾಖೆಯ ಅಭಿಪ್ರಾಯವನ್ನು ಕೋರಿತ್ತು.

‘ದೂರಿನ ಪತ್ರವು ಸರ್ಕಾರದ ಮುಖ್ಯ ಕಾರ್ಯದರ್ಶಿ ಮೂಲಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವೆಗಳು-3) ಸ್ವೀಕೃತವಾಗಿದೆ. ಈ ದೂರಿನ ಕುರಿತು ಇಲಾಖೆಯು ಶಿಕ್ಷಣ ಇಲಾಖೆಯ ಅಭಿಪ್ರಾಯವನ್ನು ಕೋರಿದೆ. ದೂರಿನ ಪತ್ರದಲ್ಲಿನ ಅಂಶಗಳ ಬಗ್ಗೆ ಸತ್ಯಾಸತ್ಯತೆ ತಿಳಿಯದೇ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಅಭಿಪ್ರಾಯ ನೀಡುವುದು ಕಷ್ಟಸಾಧ್ಯವಾಗುತ್ತದೆ,’ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಿಸಿರುವುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

ನಗರಾಭಿವೃದ್ಧಿ ಇಲಾಖೆಯು 50 ಕೋಟಿ ರು.ಅನುದಾನ ಬಿಡುಗಡೆ ಮಾಡಿದ್ದು, ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಮತ್ತು ಉಪ ಮುಖ್ಯಮಂತ್ರಿಗಳಿಗೆ 5 ಕೋಟಿ ಹಣ ಸಂಗ್ರಹ ಮಾಡಬೇಕು ಎಂದು ಕೈ ಕೆಳಗಿನ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ ಎಂದು ಶಿವಾನಂದ ದೊಡ್ಡಮನಿ ಎಂಬುವರು ದೂರಿನಲ್ಲಿ ಆರೋಪಿಸಿದ್ದಾರೆ.

Hot this week

ಪುರಾತತ್ವ ಇಲಾಖೆಯಲ್ಲಿಯೂ ಶೇ.60ರಷ್ಟು ಕಮಿಷನ್‌ಗೆ ಬೇಡಿಕೆ; ಲಂಚದ ಪ್ರಮಾಣ ಕಡಿಮೆ ಮಾಡಿಸಲು ಅಲವತ್ತುಕೊಂಡ ಗುತ್ತಿಗೆದಾರರು

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಕಚೇರಿ ಹೊಂದಿರುವ  ಪುರಾತತ್ವ...

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

Topics

ಪುರಾತತ್ವ ಇಲಾಖೆಯಲ್ಲಿಯೂ ಶೇ.60ರಷ್ಟು ಕಮಿಷನ್‌ಗೆ ಬೇಡಿಕೆ; ಲಂಚದ ಪ್ರಮಾಣ ಕಡಿಮೆ ಮಾಡಿಸಲು ಅಲವತ್ತುಕೊಂಡ ಗುತ್ತಿಗೆದಾರರು

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಕಚೇರಿ ಹೊಂದಿರುವ  ಪುರಾತತ್ವ...

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

Related Articles

Popular Categories

error: Content is protected !!