Friday | April 17, 2026 |

ಜಾರಕಿಹೊಳಿ ವಿರುದ್ಧ 376-ಸಿ ಸೆಕ್ಷನ್; ‘ದಿ ಫೈಲ್‌’ ಮುಂದಿಟ್ಟಿದ್ದ ಕಾನೂನಿನ ಆಯಾಮ ವಿಸ್ತರಣೆ

ಬೆಂಗಳೂರು; ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಕ್ಕೆ ಗುರಿಯಾಗಿರುವ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಅವರ ವಿರುದ್ಧ 376 (ಸಿ) ದಾಖಲಿಸಿರುವುದರ ಹಿಂದೆ ಬಿಜೆಪಿ ಸರ್ಕಾರದ ದುರುದ್ದೇಶ ಅಡಗಿದೆ ಎಂದು ‘ದಿ ಫೈಲ್‌’ ಮುಂದಿಟ್ಟಿದ್ದ ಕಾನೂನಿನ ಆಯಾಮವನ್ನು ಇದೀಗ ಹಿರಿಯ ಕಾನೂನು ತಜ್ಞ ಸಿ ಎಚ್‌ ಹನುಮಂತರಾಯ ಅವರೂ ಸೇರಿದಂತೆ ಹಲವರು ವಿಸ್ತರಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡ ಮಾಡಿರುವ ಅವರು 376 (ಸಿ) ದಾಖಲಿಸಿರುವುದರ ಹಿಂದೆ ಆರೋಪಿಗೆ ಅನುಕೂಲ ಮಾಡಿಕೊಡುವ ಕಪಟತನವಿದೆ. ಸಾಂಸ್ಥಿಕ ದೌರ್ಜನ್ಯದ ವ್ಯಾಪ್ತಿಗೆ ಈ ದೂರನ್ನು ಸೀಮಿತಗೊಳಿಸಿದರೆ ಆರೋಪಿಯು ಸುಲಭವಾಗಿ ಜಾಮೀನು ಪಡೆದುಕೊಳ್ಳಲು ಅನುವಾಗುತ್ತದೆ ಎಂದು ಪ್ರತಿಪಾದಿಸಿದ್ದಾರೆ.
ರಮೇಶ ಜಾರಕಿಹೊಳಿ ನುಣುಚಿಕೊಳ್ಳಲು 376-ಸಿ ಸೆಕ್ಷನ್ ದಾರಿಯಾಗಲಿದೆಯೇ? ಎಂದು ‘ದಿ ಫೈಲ್‌’ 2021ರ ಮಾರ್ಚ್‌ 27ರಂದು ಕಾನೂನಿನ ಅಂಶಗಳನ್ನಾಧರಿಸಿ ವರದಿಯನ್ನು ಪ್ರಕಟಿಸಿತ್ತು.

ಅತ್ಯಾಚಾರ ಆರೋಪ; ರಮೇಶ ಜಾರಕಿಹೊಳಿ ನುಣುಚಿಕೊಳ್ಳಲು 376-ಸಿ ಸೆಕ್ಷನ್ ದಾರಿಯಾಗಲಿದೆಯೇ?

ಹೇಳಿಕೆಯಲ್ಲೇನಿದೆ?

ಸಚಿವರಾಗಿದ್ದವರೊಬ್ಬರ ವಿರುದ್ಧ ಯುವತಿಯೊಬ್ಬರು ಮಾಡಿರುವ ಲೈಂಗಿಕ ದೌರ್ಜನ್ಯದ ಆರೋಪದ ಕುರಿತು ದೂರು ನೋಂದಾಯಿಸಲ್ಪಟ್ಟಿದೆ. ಸಂತ್ರಸ್ತೆ ತನ್ನ ದೂರಿನಲ್ಲಿ ಸಚಿವರು ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದರೆ ನೌಕರಿ ಕೊಡಿಸುವ ಆಮಿಷ ಒಡ್ಡಿ ಬಲೆಗೆ ಹಾಕಿಕೊಂಡಿದ್ದಾಗಿ ತಿಳಿಸಿದ್ದಾರೆ. ಸಚಿವರೊಬ್ಬರು ಸಾರ್ವಜನಿಕ ನೌಕರ. ತನ್ನ ಶಾಸನಬದ್ಧ ಅಧಿಕಾರವನ್ನು ಬಳಸಿ ಅಕ್ರಮವಾಗಿ ಕೆಲಸ ಕೊಡಿಸುವುದನ್ನು ದುರ್ನಡತೆ ಎಂದು ವ್ಯಾಖ್ಯಾನಿಸಲಾಗಿದೆ. ಭ್ರಷ್ಟಾಚಾರ ಕೇವಲ ಹಣದ ರೂಪದಲ್ಲಿಯೇ ಇರಬೇಕಾಗಿಲ್ಲ. ಅದು ಯಾವ ಬಗೆಯಲ್ಲಾದರೂ ಇರಬಹುದು. ಇದು ಕಾನೂನಿನ ಅಡಿಯಲ್ಲಿ ಶಿಕ್ಷಾರ್ಹವಾದುದು ಎಂದು ಹೇಳಿಕೆಯಲ್ಲಿ ಸಿ ಎಚ್‌ ಹನುಮಂತರಾಯ, ವಕೀಲರಾದ ಕೆ.ಬಿ.ಕೆ.ಸ್ವಾಮಿ, ಡೆರಿಕ್ ಅನಿಲ್‌ ವಿವರಿಸಿದ್ದಾರೆ.

ಬಾಧಿತೆಯ ದೂರನ್ನು ಆಧರಿಸಿ ಐಪಿಸಿ ಸೆಕ್ಷನ್ 376C ಅಡಿಯಲ್ಲಿ ಎಫ್.ಐ.ಆರ್ ಹೂಡಲಾಗಿದೆ. ಹೆಣ್ಣೊಂದು ಸಾಂಸ್ಥಿಕವಾಗಿ ಕಾನೂನಿನ ರಕ್ಷಣೆಯಲ್ಲಿದ್ದಾಗ ನಡೆಯುವ ದೌರ್ಜನ್ಯದ ಕುರಿತು ಈ ಕಲಂ ಸ್ಪಷ್ಟವಾಗಿ ಹೇಳುತ್ತದೆ. ಮಾಜಿ ಸಚಿವರ ಪ್ರಕರಣದಲ್ಲಿ ಸಂತ್ರಸ್ತೆಯು ಕಾನೂನಿನ ದೃಷ್ಟಿಯಿಂದ ಯಾವುದೇ ಸಾಂಸ್ಥಿಕ ಹಿಡಿತದಲ್ಲಿ ಇರಲಿಲ್ಲ. ಅಲ್ಲದೆ ಸಚಿವರನ್ನು ಒಂದು ಸಂಸ್ಥೆಯೆಂದು ಅರ್ಥೈಸಲಾಗದು. ಜೈಲು, ಆಸ್ಪತ್ರೆ, ಮಹಿಳಾ ರಕ್ಷಣಾ ಕೇಂದ್ರ, ಮಹಿಳಾ ಹಾಸ್ಟೆಲ್‌ನಂತಹ ವಸತಿ ಕೇಂದ್ರದಲ್ಲಿ ಮಹಿಳೆಯರು ತಾತ್ಕಾಲಿಕವಾಗಿ ಅಥವಾ ಶಾಶ್ವತವಾಗಿ ಕಾನೂನಿನ ಅಡಿಯಲ್ಲಿ ರಕ್ಷಣೆಯಲ್ಲಿರುತ್ತಾರೆ. ಅಲ್ಲಿ ಜರುಗುವ ಲೈಂಗಿಕ ಅಪರಾಧ ಪ್ರಕರಣಗಳನ್ನು ಗಣನೆಗೆ ತೆಗೆದುಕೊಂಡು ರೂಪಿಸಿರುವ ಕಾನೂನಿನ ಅಂಶವನ್ನು ಸದರಿ ಪ್ರಕರಣದಲ್ಲಿ ಅಳವಡಿಸುವುದು ಸರಿಯಲ್ಲ ಎಂದು ಪ್ರತಿಪಾದಿಸಿದ್ದಾರೆ.

ಈ ಸರಳ ಕಾನೂನಿನ ಅಂಶ ಪೊಲೀಸ್‌ ಇಲಾಖೆಗೆ ತಿಳಿದಿಲ್ಲ ಎಂದು ಭಾವಿಸಲಾಗದು. ಇದರ ಹಿಂದೆ ಆರೋಪಿಗೆ ಅನುಕೂಲ ಮಾಡಿಕೊಡುವ ಕಪಟತನವಿದೆ. ಸಾಂಸ್ಥಿಕ ದೌರ್ಜನ್ಯದ ವ್ಯಾಪ್ತಿಗೆ ಈ ದೂರನ್ನು ಸೀಮಿತಗೊಳಿಸಿದರೆ ಆರೋಪಿಯು ಸುಲಭವಾಗಿ ಜಾಮೀನು ಪಡೆದುಕೊಳ್ಳಲು ಅನುವಾಗುತ್ತದೆ. ಅಲ್ಲದೆ ಈ ಪ್ರಕರಣವನ್ನು ಅತ್ಯಾಚಾರವಲ್ಲದ ಲೈಂಗಿಕ ಕ್ರಿಯೆ ಎಂದು ವ್ಯಾಖ್ಯಾನಿಸಿ, ಕಾನೂನಿನ ಅಡಿಯಲ್ಲಿ ಸಂತ್ರಸ್ತೆಗೆ ದೊರಕುವ ಕಾನೂನಿನ ಮೂಲಭೂತ ರಕ್ಷಣೆಯನ್ನು ಹೊಸಕಿ ಹಾಕುವ ಹುನ್ನಾರ ಅಡಗಿದೆಯೇ ಎಂಬ ಬಲವಾದ ಶಂಕೆಗೆ ಎಡೆಮಾಡಿಕೊಟ್ಟಂತಾಗುತ್ತದೆ.

ಹಾಗಾಗಿ ಈ ಪ್ರಕರಣದಲ್ಲಿ ಸೆಕ್ಷನ್ 376ರ ಅಡಿಯಲ್ಲಿಯೇ ತನಿಖೆಯನ್ನು ಸ್ಥಿರಗೊಳಿಸಬೇಕು. ಕಾನೂನಿನ ಅಡಿಯಲ್ಲಿ ಶೋಷಿತರಿಗೆ ನ್ಯಾಯಬದ್ಧವಾಗಿ ಲಭಿಸಬೇಕಾದ ರಕ್ಷಣೆಗಳನ್ನು ತಪ್ಪಿಸುವುದು ಅಕ್ಷ್ಯಮ. ಇಲ್ಲದೇ ಹೋದಲ್ಲಿ ಇದು ಸರ್ಕಾರದ ತನಿಖಾ ಸಂಸ್ಥೆಗಳು ಅತ್ಯಾಚಾರ ಸಂತ್ರಸ್ತೆಯ ಮೇಲೆ ನಡೆಸುವ ಪರೋಕ್ಷ ದಾಳಿಯೆಂದು ಅರ್ಥೈಸಬೇಕಾದೀತು ಎಂದು ವಿಶ್ಲೇಷಿಸಿದ್ದಾರೆ.

Hot this week

ಪುರಾತತ್ವ ಇಲಾಖೆಯಲ್ಲಿಯೂ ಶೇ.60ರಷ್ಟು ಕಮಿಷನ್‌ಗೆ ಬೇಡಿಕೆ; ಲಂಚದ ಪ್ರಮಾಣ ಕಡಿಮೆ ಮಾಡಿಸಲು ಅಲವತ್ತುಕೊಂಡ ಗುತ್ತಿಗೆದಾರರು

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಕಚೇರಿ ಹೊಂದಿರುವ  ಪುರಾತತ್ವ...

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

Topics

ಪುರಾತತ್ವ ಇಲಾಖೆಯಲ್ಲಿಯೂ ಶೇ.60ರಷ್ಟು ಕಮಿಷನ್‌ಗೆ ಬೇಡಿಕೆ; ಲಂಚದ ಪ್ರಮಾಣ ಕಡಿಮೆ ಮಾಡಿಸಲು ಅಲವತ್ತುಕೊಂಡ ಗುತ್ತಿಗೆದಾರರು

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಕಚೇರಿ ಹೊಂದಿರುವ  ಪುರಾತತ್ವ...

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

Related Articles

Popular Categories

error: Content is protected !!