Friday | March 6, 2026 |

ಅವ್ಯವಹಾರ; ಎಸಿಬಿ ದಾಳಿಗೊಳಗಾದ ಪಾಂಡುರಂಗ ಗರಗ್‌ಗೆ ತನಿಖೆ ಹೊಣೆ

Support THE-FILE

spot_img

ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದಡಿ ಎಸಿಬಿ ದಾಳಿಗೊಳಗಾಗಿರುವ ಅಧಿಕಾರಿಗೇ ಕೋಲಾರ-ಚಿಕ್ಕಬಳ್ಳಾಪುರ ಮೆಗಾ ಡೈರಿಯ ಬಾಯ್ಲರ್‌ ಖರೀದಿಯಲ್ಲಿನ ಅವ್ಯವಹಾರಗಳ ಕುರಿತು ತನಿಖೆಯ ಜವಾಬ್ದಾರಿಯನ್ನು ಬಿಜೆಪಿ ಸರ್ಕಾರ ಮುಂದುವರೆಸಿರುವುದು ವಿವಾದಕ್ಕೆ ದಾರಿಮಾಡಿಕೊಟ್ಟಿದೆ.

ಬೆಂಗಳೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕ ಡಿ ಪಾಂಡುರಂಗ ಗರಗ್‌ ಅವರನ್ನು ಪರಿವೀಕ್ಷಣಾಧಿಕಾರಿಯನ್ನಾಗಿ ನೇಮಿಸಿದ್ದ ರಾಜ್ಯ ಸರ್ಕಾರ, ಅವರ ನೇತೃತ್ವದಲ್ಲೇ ತನಿಖೆ ಅವಧಿಯನ್ನು 3 ತಿಂಗಳ ಅವಧಿಗೆ ವಿಸ್ತರಿಸಿ ಹೊರಡಿಸಿರುವ ಆದೇಶದ ಕುರಿತು ಇಲಾಖೆಯಲ್ಲಿಯೇ ಆಕ್ಷೇಪಗಳು ವ್ಯಕ್ತವಾಗಿವೆ.

ಪಾಂಡುರಂಗ್‌ ಗರಗ್‌ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಮರಿತಿಬ್ಬೇಗೌಡ ಅವರು ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌ ಅವರಿಗೆ ಪತ್ರ ಬರೆದಿರುವ ಬೆನ್ನಲ್ಲೇ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಅವ್ಯವಹಾರದ ತನಿಖೆಗೆ ನೇಮಿಸಿರುವುದು ಮುನ್ನೆಲೆಗೆ ಬಂದಿದೆ.

ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಭ್ರಷ್ಟಾಚಾರ ನಿಗ್ರಹ ದಳವು ಕಳೆದ ಕೆಲ ದಿನಗಳ ಹಿಂದೆಯಷ್ಟೇ ಪಾಂಡುರಂಗ ಗರಗ್‌ ಅವರ ಮನೆ ಮೇಲೆ ದಾಳಿ ನಡೆಸಿತ್ತು. ಗರಗ್ ಅವರಿಗೆ ಸಂಬಂಧಿಸಿದ ವಿಜಯನಗರದ ಮನೆ, ಜಯನಗರ, ಮಲ್ಲೇಶ್ವರಂ ಕಚೇರಿ ಹಾಗೂ ಚಿತ್ರದುರ್ಗದ ಮನೆ ಸೇರಿ ಐದು ಕಡೆ ಏಕಕಾಲಕ್ಕೆ ದಾಳಿ ನಡೆದಿತ್ತು. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ ಸಂಬಂಧ ಇವರನ್ನು ಅಮಾನತುಗೊಳಿಸಲು ಎಸಿಬಿಯು ಸಹಕಾರ ಇಲಾಖೆಗೆ ಪತ್ರ ಬರೆದಿತ್ತು. ಆದರೆ ಈವರೆವಿಗೂ ಸೇವೆಯಿಂದ ಅಮಾನತುಗೊಳಿಸಿಲ್ಲ ಎಂದು ತಿಳಿದು ಬಂದಿದೆ.

ಇವರನ್ನು ಅಮಾನತುಗೊಳಿಸುವ ಪ್ರಸ್ತಾವನೆ ಕುರಿತು ಅಂತಿಮ ತೀರ್ಮಾನ ಹೊರಬೀಳುವ ಮುನ್ನವೇ ಮೆಗಾ ಡೈರಿಯ ಬಾಯ್ಲರ್‌ ಖರೀದಿ ಅವ್ಯವಹಾರಗಳ ಕುರಿತು ಶಾಸನಬದ್ಧ ಪರಿವೀಕ್ಷಣೆ ನಡೆಸಲು ಗರಗ್‌ ಅವರ ಅವಧಿಯನ್ನು 3 ತಿಂಗಳ ಅವಧಿಗೆ ವಿಸ್ತರಿಸಿ 2021ರ ಫೆ. 3ರಂದು ಆದೇಶ ಹೊರಡಿಸಿದೆ. ಆದೇಶದ ಪ್ರತಿ ‘ದಿ ಫೈಲ್‌ಗೆ ಲಭ್ಯವಾಗಿದೆ.

ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರ ಕಲಂ 65ರಡಿ ಶಾಸನಬದ್ಧ ಪರಿವೀಕ್ಷಣೆ ನಡೆಸಲು ಪಾಂಡುರಂಗ ಗರಗ್‌ ಅವರನ್ನು ಸರ್ಕಾರ ನೇಮಿಸಿತ್ತು. ಗರಗ್‌ ಅವರು ಶೇ.50ರಷ್ಟು ಮಾತ್ರ ಪರಿವೀಕ್ಷಣೆಯನ್ನು ಪೂರ್ಣಗೊಳಿಸಿದ್ದರು. ಹೀಗಾಗಿ ವರದಿ ಸಲ್ಲಿಸಲು ಇನ್ನೂ 3 ತಿಂಗಳ ಕಾಲಾವಕಾಶ ನೀಡಿ ಎಂದು ಸಹಕಾರ ಸಂಘಗಳ ರಿಜಿಸ್ಟ್ರಾರ್‌ ಎಸ್‌ ಜಿಯಾಉಲ್ಲಾ ಅವರು 2021ರ ಫೆ.20ರಂದು ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಈ ಪತ್ರವೂ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಪ್ರಕರಣದ ಹಿನ್ನೆಲೆ

120 ಕೋಟಿ ಅಂದಾಜು ವೆಚ್ಚದಲ್ಲಿ ನಂದಿ ಕ್ರಾಸ್‌ನಲ್ಲಿ ಮೆಗಾ ಡೇರಿ ನಿರ್ಮಾಣ ಸಂಬಂಧ 2013ರಲ್ಲಿ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿತ್ತು. ಆದರೆ 18 ತಿಂಗಳ ಕಾಲಾವಧಿಯಲ್ಲಿ ಮೆಗಾ ಡೈರಿ ನಿರ್ಮಾಣ ಕಾರ್ಯ ಪೂರ್ಣಗೊಂಡಿರಲಿಲ್ಲ. ನಿಗದಿತ ಅವಧಿಯಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳ್ಳದ ಕಾರಣ ವೆಚ್ಚವು 200 ಕೋಟಿಗೇರಿತ್ತು. ಹೀಗಾಗಿ ಸುಮಾರು 80 ಕೋಟಿ ರು. ಒಕ್ಕೂಟಕ್ಕೆ ನಷ್ಟವಾಗಿತ್ತು ಎಂಬ ಅಂಶ ಜಿಯಾಉಲ್ಲಾ ಅವರು ಬರೆದಿರುವ ಪತ್ರದಿಂದ ತಿಳಿದು ಬಂದಿದೆ. ಹಾಗೆಯೇ ಬಾಯ್ಲರ್‌ ಖರೀದಿ, ಸಿವಿಲ್‌ ಕಾಮಗಾರಿ ಮತ್ತು ಇಟಿಪಿ (ಎಫಲಿಯಂಟ್‌ ಟ್ರೀಟ್‌ಮೆಂಟ್‌ ಪ್ಲಾಂಟ್‌) ಘಟಕ ನಿರ್ಮಾಣದಲ್ಲೂ ಅವ್ಯವಹಾರ ನಡೆದಿದೆ ಎಂಬ ದೂರು ಸಲ್ಲಿಕೆಯಾಗಿತ್ತು.

ಈ ಹಾಲು ಮಹಾಮಂಡಳಕ್ಕೆ ಸಂಬಂಧಿಸಿದಂತೆ ಪರಿವೀಕ್ಷಣೆ ಮಾಡಲು ಕೊಟ್ಟಿದ್ದ ಜವಾಬ್ದಾರಿಯನ್ನು ಸದರಿ ಅಧಿಕಾರಿಯಿಂದ ಈ ಕೂಡಲೇ ಹಿಂಪಡೆಯಬೇಕು. ಕಳೆದ 6 ತಿಂಗಳಿನಲ್ಲಿ ಅವರು ಮಾಡಿರುವ ಕೆಲಸ ಮತ್ತು ಕೊಟ್ಟಿರುವ ವರದಿಗಳನ್ನು ಉನ್ನತ ಮಟ್ಟದ ಸಮಿತಿ ಮೂಲಕ ಪುನರ್‌ ಪರಿಶೀಲನೆಗೊಳಪಡಿಸಬೇಕು. ಎಸಿಬಿ ಕೊಟ್ಟಿರುವ ಶಿಫಾರಸ್ಸಿನಂತೆ ಈ ಕೂಡಲೇ ಸದರಿ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಮತ್ತು ಯಾವುದೇ ಕಾರಣಕ್ಕೂ ಇಲಾಖೆ ವಿಚಾರಣೆ ಅಥವಾ ಎಸಿಬಿ ವಿಚಾರಣೆ ಪೂರ್ಣಗೊಳ್ಳುವ ತನಕ ಅಮಾನತಿನಲ್ಲಿರಿಸಬೇಕು. ಇದು ಯಾವುದು ಆಗಿಲ್ಲವೆಂದರೆ ಈ ವ್ಯಕ್ತಿಗೆ ದೊಡ್ಡಮಟ್ಟದ ಭ್ರಷ್ಟ ರಾಜಕಾರಣಿಗಳ ಅಥವಾ ಅಧಿಕಾರಿಗಳ ಕೃಪಾಕಟಾಕ್ಷ ಇದೆ ಎನ್ನುವುದು ಶತಸಿದ್ಧ.

ರವಿ ಕೃಷ್ಣಾರೆಡ್ಡಿ, ರಾಜ್ಯಾಧ್ಯಕ್ಷರು. ಕರ್ನಾಟಕ ರಾಷ್ಟ್ರ ಸಮಿತಿ

‘ಹಾಲು ಒಕ್ಕೂಟದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಸತ್ಯಾಸತ್ಯತೆಯನ್ನು ಕಂಡುಕೊಳ್ಳಲು ಮತ್ತು ಅವ್ಯವಹಾರದಲ್ಲಿ ಭಾಗಿಯಾದ, ಕರ್ತವ್ಯಲೋಪ, ಬೇಜವಾಬ್ದಾರಿ ವರ್ತನೆ, ಸಂಘದ ಮತ್ತು ಸದಸ್ಯರ ಹಿತ ಕಾಪಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಆಡಳಿತ ದುರುಪಯೋಗಪಡಿಸಿಕೊಂಡು ಒಕ್ಕೂಟಕ್ಕೆ ಆಗಿರುವ ನಷ್ಟ ಉಂಟಾಗಲು ಕಾರಣಕರ್ತರಾಗಿರುವವರ ವಿರುದ್ಧ ನಿಖರವಾಗಿ ಜವಾಬ್ದಾರಿ ನಿಗದಿಪಡಿಸಿ ಒಕ್ಕೂಟಕ್ಕೆ ಆಗಿರುವ ನಷ್ಟ ವಸೂಲಿ ಮಾಡುವ ಸಂಬಂಧ ಪರಿವೀಕ್ಷಣೆ ನಡೆಸಲು ಪಾಂಡುರಂಗ ಗರಗ್‌ ಅವರನ್ನು ನೇಮಿಸಲಾಗಿತ್ತು ಎಂಬ ಸಂಗತಿ ಪತ್ರದಿಂದ ಗೊತ್ತಾಗಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img
error: Content is protected !!