Saturday | May 23, 2026 |

ಕೋವಿಡ್‌ 2ನೇ ಅಲೆ ಹೊಡೆತ; 60,000 ಕೋಟಿ ನಷ್ಟ, ಶೇ.14.73ಕ್ಕೇರಿದ ನಿರುದ್ಯೋಗದ ಮಟ್ಟ

ಬೆಂಗಳೂರು; ಕೋವಿಡ್‌ ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್‌ಡೌನ್‌ನಿಂದಾಗಿ ಮೇ ತಿಂಗಳ ಆರಂಭದಲ್ಲಿಇಯೇ ಸುಮಾರು 60,000 ಕೋಟಿ ರು. (8 ಬಿಲಿಯನ್‌) ನಷ್ಟವಾಗಿದೆ. ಅಲ್ಲದೆ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) ಶೇ.3.75ನಷ್ಟು ನಷ್ಟವಾಗಿದೆ. ಮೇ 23ರ ಅಂತ್ಯಕ್ಕೆ ಕೊನೆಗೊಂಡ ವಾರದಲ್ಲಿ ನಿರುದ್ಯೋಗ ಮಟ್ಟವು ಶೇ.14.73ರಷ್ಟಿದೆ.

ಮೇ ತಿಂಗಳಲ್ಲಿ ಜಾರಿಗೊಳಿಸಿದ್ದ ಲಾಕ್‌ಡೌನ್‌ ತಂದೊಡ್ಡಿರುವ ಆರ್ಥಿಕ ಪರಿಣಾಮಗಳ ಕುರಿತು ಸೆಂಟರ್‌ ಫಾರ್‌ ಮಾನಿಟಿರಿಂಗ್‌ ಇಂಡಿಯನ್‌ ಎಕಾನಮಿ ಸಮೀಕ್ಷೆ ನಡೆಸಿದೆ. ಇದರ ಪ್ರಕಾರ ನಿರುದ್ಯೋಗ ಮಟ್ಟವು ನಗರ ಭಾರತದಲ್ಲಿ ಶೇ.17ಕ್ಕಿಂತ ಹೆಚ್ಚು ಹಾಗೂ ಗ್ರಾಮೀಣ ಭಾರತದಲ್ಲಿ ಸುಮಾರು ಶೇ.14ರಷ್ಟಿದೆ.

2021ರ ಏಪ್ರಿಲ್‌ನಲ್ಲಿ ನಿರುದ್ಯೋಗ ದರವು ಶೇ.8ಕ್ಕೇರಿತ್ತು. ಮಾರ್ಗಸೂಚಿಗಳ ಪೈಕಿ ಕೆಲವೊಂದನ್ನು ಸಡಿಲಿಸಿದ ಪರಿಣಾಮ ಕಾರ್ಮಿಕರ ಭಾಗವಹಿಸುವಿಕೆಯು ಶೇ.40ರಷ್ಟಿತ್ತು. ಆದರೆ ಮೇ ತಿಂಗಳಲ್ಲಿ ಇದರ ಪ್ರಮಾಣ ಕುಸಿಯಲಾರಂಭಿಸಿತು. ಹೀಗಾಗಿ ಮೇ ತಿಂಗಳಲ್ಲಿ ನಿರುದ್ಯೋಗ ದರ ಇಳಿದಿದೆ. ಮೇ 23ಕ್ಕೆ ಕೊನೆಗೊಂಡ ವಾರದಲ್ಲಿ ನಿರುದ್ಯೋಗ ದರವು ಶೇ.14.5ಕ್ಕೇರಿತು. ಏಪ್ರಿಲ್ 2020 ರಲ್ಲಿ ಭಾರತವು ಸಾಂಕ್ರಾಮಿಕ ರೋಗಕ್ಕೆ ತುತ್ತಾದಾಗ ಸುಮಾರು 126 ಮಿಲಿಯನ್ ಉದ್ಯೋಗ ನಷ್ಟವಾಗಿತ್ತು ಎಂಬುದನ್ನು ಸಮೀಕ್ಷೆಯು ಹೊರಗೆಡವಿದೆ.

2020ರಲ್ಲಿ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದ್ದ ಉದ್ಯೋಗ ಮಾರುಕಟ್ಟೆ ಸೆಪ್ಟಂಬರ್‌ನಲ್ಲಿ ಚೇತರಿಕೆ ಕಂಡಿತ್ತಲ್ಲದೇ ಡಿಸೆಂಬರ್ ಹೊತ್ತಿಗೆ ಸ್ವಲ್ಪಮಟ್ಟಿಗೆ ಸುಧಾರಣೆ ಆಗಿತ್ತು. ಆದರೆ ಎರಡನೇ ಅಲೆ ಆರಂಭವಾದ ಜನವರಿಯಲ್ಲಿ ಕುಸಿಯಲಾರಂಭಿಸಿತು. ಮಾರ್ಚ್‌ವರೆಗೂ ಇದೇ ಸ್ಥಿತಿಯಲ್ಲಿತ್ತು ಎಂದು ಸಮೀಕ್ಷೆ ತಿಳಿಸಿದೆ.

ಸಂಬಳ ಪಡೆಯುವ ಉದ್ಯೋಗಗಳಲ್ಲಿ ಕುಸಿತ ಸ್ಥಿರವಾಗಿದೆ. ಕೋವಿಡ್‌ ಸಾಂಕ್ರಾಮಿಕ ಹರಡುವಿಕೆ ಮೊದಲು ದೇಶದಲ್ಲಿ 403.5 ಮಿಲಿಯನ್‌ ಉದ್ಯೋಗಗಳಿದ್ದವು. ಡಿಸೆಂಬರ್‌ 2020 ಮತ್ತು ಜನವರಿ 2021ರಲ್ಲಿ 400 ಮಿಲಿಯನ್‌ಗಿಳಿದಿತ್ತು. ಕೋವಿಡ್‌ 2ನೇ ಅಲೆ ಹೊಡೆತಕ್ಕೆ ಉದ್ಯೋಗ ಮಾರುಕಟ್ಟೆ ಸಿಲುಕಿದ ಪರಿಣಾಮ ಉದ್ಯೋಗಗಳ ಸಂಖ್ಯೆಯನ್ನು 3.5 ಮಿಲಿಯನ್‌ಗಿಳಿಸಲಾಗಿದೆ. ಇದೇ ಹೊತ್ತಿನಲ್ಲಿ ಸಂಬಳ ಪಡೆಯುವ ಉದ್ಯೋಗಿಗಳ ಪ್ರಮಾಣವೂ ಕುಸಿಯಲಾರಂಭಿಸಿವೆ.

Hot this week

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು...
Please Scan to make Your Contribution

Topics

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು...

ಸ್ವಚ್ಛ ನಗರಿಯ ಕಸದ ಕರಾಳತೆ; ಪರೀಕ್ಷೆಯಿಲ್ಲದೇ ವಿಷಕಾರಿ ತ್ಯಾಜ್ಯ ನಿರ್ವಹಣೆ, ಸಿಎಂ ತವರಿನಲ್ಲೇ ಅವೈಜ್ಞಾನಿಕ ವಿಲೇವಾರಿ?

ಬೆಂಗಳೂರು;  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ  ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ...

Related Articles

Popular Categories

error: Content is protected !!