Friday | April 17, 2026 |

ಮೋದಿ ಹುಟ್ಟುಹಬ್ಬಕ್ಕೆ ಜಾಹೀರಾತು; ಪ್ರಾಯೋಜಿತ ಪುರವಣಿಗಳಿಗೆ 44.85 ಲಕ್ಷ ರು. ವೆಚ್ಚ

ಬೆಂಗಳೂರು; ಕೋವಿಡ್‌-19 ನಿರ್ವಹಣೆಗಾಗಿ ಹಣವಿಲ್ಲ, ಸಂಪನ್ಮೂಲ ಸ್ಥಗಿತಗೊಂಡಿದೆ, ಖಜಾನೆ ಬರಿದಾಗಿದೆ ಎಂದೆಲ್ಲಾ ದೈನೈಸಿ ಸ್ಥಿತಿಯನ್ನು ಮುಂದಿರಿಸಿದ್ದ ರಾಜ್ಯ ಬಿಜೆಪಿ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬಕ್ಕೆ ನೀಡಿದ್ದ ಪತ್ರಿಕೆಗಳ ಪ್ರಾಯೋಜಿತ ಪುರವಣಿಗಳಿಗೆ 44.85 ಲಕ್ಷ ರು.ಗಳನ್ನು ವೆಚ್ಚ ಮಾಡಿದೆ.

ರಾಜ್ಯಕ್ಕೆ ಜಿಎಸ್‌ಟಿ ಸೇರಿದಂತೆ ವಿವಿಧ ರೀತಿಯ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಒಕ್ಕೂಟ ಸರ್ಕಾರವು ಎಸಗುತ್ತಿರುವ ತಾರತಮ್ಯ ಮತ್ತು ಪ್ರವಾಹ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ವಾಸ್ತವ ಪರಿಹಾರ ಮೊತ್ತವನ್ನು ಹಂಚಿಕೆ ಮಾಡುವಲ್ಲಿ ಅನ್ಯಾಯ ಎಸಗುತ್ತಿದೆ ಎಂಬ ಬಲವಾದ ಆರೋಪಗಳ ನಡುವೆಯೇ ರಾಜ್ಯ ಬಿಜೆಪಿ ಸರ್ಕಾರವು ಪ್ರಧಾನಿ ಮೋದಿ ಅವರ ಹುಟ್ಟುಹಬ್ಬಕ್ಕೆ ರಾಜ್ಯದ ಬೊಕ್ಕಸದಿಂದ 44.85 ಲಕ್ಷ ರು.ಗಳನ್ನು ಜಾಹೀರಾತಿಗಾಗಿ ವೆಚ್ಚ ಮಾಡಿರುವುದು ಮುನ್ನೆಲೆಗೆ ಬಂದಿದೆ.

ಜಾಹೀರಾತು ವೆಚ್ಚದ ವಿವರ (ಪತ್ರಿಕೆವಾರು)

ವಿಜಯವಾಣಿ – 9,86,972 ರು.

ವಿಜಯ ಕರ್ನಾಟಕ – 6,68,239 ರು.

ಪ್ರಜಾವಾಣಿ – 7,42,522 ರು.

ಉದಯವಾಣಿ – 4,84,332 ರು.

ಕನ್ನಡಪ್ರಭ – 3,95,640 ರು.

ಸಂಯುಕ್ತ ಕರ್ನಾಟಕ – 4,16,164 ರು.

ಹೊಸ ದಿಗಂತ – 3,95,640 ರು.

ವಿಶ್ವವಾಣಿ – 3,95,640 ರು.

ಈ ಜಾಹೀರಾತನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ನೇರವಾಗಿ ಪತ್ರಿಕೆಗಳಿಗೆ ಬಿಡುಗಡೆ ಮಾಡಿಲ್ಲ. ಬದಲಿಗೆ ಸರ್ಕಾರದಿಂದ ಅಂಗೀಕೃತ ಏಜೆನ್ಸಿಗಳ ಮೂಲಕ ಜಾಹೀರಾತನ್ನು ಬಿಡುಗಡೆ ಮಾಡಿದೆ. ಆದರೆ ಪ್ರಾದೇಶಿಕ, ಜಿಲ್ಲಾ ಮತ್ತು ತಾಲೂಕು ಮಟ್ಟದ ಪತ್ರಿಕೆಗಳಿಗೆ ಜಾಹೀರಾತು ಬಿಡುಗಡೆ ಮಾಡಿಲ್ಲ ಎಂದು ತಿಳಿದು ಬಂದಿದೆ.

ಅತಿಥಿ ಉಪನ್ಯಾಸಕರಿಗೆ ಗೌರವ ಸಂಭಾವನೆ, ಆಟೋ ಚಾಲಕರು, ತರಕಾರಿ, ಹೂ ಬೆಳೆಗಾರರು, ನೇಕಾರರು, ಸವಿತಾ ಸಮಾಜ, ವಲಸೆ ಕಟ್ಟಡ ಕಾರ್ಮಿಕರು ಸೇರಿದಂತೆ ಇನ್ನಿತರರಿಗೆ ಪೂರ್ಣ ಪ್ರಮಾಣದಲ್ಲಿ ಪರಿಹಾರ ನೀಡದ ಸರ್ಕಾರ, ಪ್ರಧಾನಿ ಹುಟ್ಟು ಹಬ್ಬಕ್ಕೆ 44.85 ಲಕ್ಷ ರು.ಗಳನ್ನು ಜಾಹೀರಾತಿಗಾಗಿ ಖರ್ಚು ಮಾಡಿರುವುದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.

Hot this week

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

Topics

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

Related Articles

Popular Categories

error: Content is protected !!