Sunday | September 20, 2026 |

ಅನುಭವಮಂಟಪ ; ಸಿಎಂ ಭಾಷಣದ ನೇರಪ್ರಸಾರಕ್ಕೆ 42.26 ಲಕ್ಷ ರು. ವೆಚ್ಚ

ಬೆಂಗಳೂರು; ಬೀದರ್‌ ಜಿಲ್ಲೆಯ ಬಸವ ಕಲ್ಯಾಣದಲ್ಲಿ ನಡೆದಿದ್ದ ನೂತನ ಅನುಭವ ಮಂಟಪ ನಿರ್ಮಾಣ ಮತ್ತು ಇನ್ನಿತರೆ ಪೂಜಾ ಕಾರ್ಯುಕ್ರಮಗಳಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿಗಳ ಭಾಷಣವನ್ನು 30 ನಿಮಿಷ ಅವಧಿಯ ನೇರ ಪ್ರಸಾರಕ್ಕೆ ಬಿಜೆಪಿ ಸರ್ಕಾರವು ಒಟ್ಟು 42.26 ಲಕ್ಷ ರು. ಖರ್ಚು ಮಾಡಿತ್ತು. ಮುಖ್ಯಮಂತ್ರಿಗಳ ಭಾಷಣದ ನೇರ ಪ್ರಸಾರಕ್ಕೂ ಜಾಹೀರಾತು ರೂಪದಲ್ಲಿ ಲಕ್ಷಾಂತರ ರುಪಾಯಿ ವೆಚ್ಚ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

2021ರ ಜನವರಿ 6ರಂದು ಬೀದರ್‌ ಜಿಲ್ಲೆಯ ಬಸವ ಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣ ಮತ್ತು ಇನ್ನಿತರೆ ಭೂಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಇದೇ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಭಾಷಣವನ್ನು 30 ನಿಮಿಷಗಳ ಕಾಲ ಸುದ್ದಿ ವಾಹಿನಿಗಳು ನೇರ ಪ್ರಸಾರ ಮಾಡಿದ್ದವು. ಇದಕ್ಕಾಗಿ ಒಟ್ಟು 42.26 ಲಕ್ಷ ರು.ಗಳನ್ನು ಸುದ್ದಿವಾಹಿನಿಗಳಿಗೆ ಪಾವತಿಸಿರುವುದು ತಿಳಿದು ಬಂದಿದೆ.

ಸುದ್ದಿವಾಹಿನಿವಾರು ವೆಚ್ಚದ ವಿವರ

ಟಿ ವಿ 9 ಕನ್ನಡ – ( ಪ್ರತಿ ಸೆಕೆಂಡಿಗೆ 4,400 ) – 7, 92, 000 ರು.

ಸುವರ್ಣ ನ್ಯೂಸ್‌ ( 2,100 ) 3, 78, 000 ರು.

ಪಬ್ಲಿಕ್‌ ಟಿ ವಿ ( 3,250 ) 5, 85, 000 ರು.

ನ್ಯೂಸ್‌ 18 ( 2,300) – 4, 14, 000 ರು.

ಬಿ ಟಿ ವಿ ನ್ಯೂಸ್‌ ( 2,000 ) 3, 60, 000 ರು.

ಪ್ರಜಾ ಟಿ ವಿ ( 1,600 ) 2, 88, 000 ರು.

ಕಸ್ತೂರಿ ನ್ಯೂಸ್‌ ( 1,600 ) 2, 88, 000 ರು.

ರಾಜ್‌ ನ್ಯೂಸ್‌ ( 1,500) – 2, 70, 000 ರು.

ದಿಗ್ವಿಜಯ್‌ ಟಿ ವಿ ( 2,000 ) – 3, 60, 000 ರು.

ಟಿ ವಿ 5 ಕನ್ನಡ ( 1,500)- 2, 70, 000 ರು.

ಪವರ್‌ ಟಿ ವಿ ( 1,500- 15 ನಿಮಿಷ) – 1, 35, 000

ಜಿ ಎಸ್‌ ಟಿ ವೆಚ್ಚವೂ ಸೇರಿ ಒಟ್ಟು 48, 85, 200 ರು.ಗಳು ವೆಚ್ಚವಾಗಬಹುದೆಂದು ಅಂದಾಜಿಸಿದ್ದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಡೆಯಲ್ಲಿ 42,26,760 ರು.ಗಳನ್ನು ಪಾವತಿಸಲು ಮಂಜೂರಾತಿ ನೀಡಿತ್ತು ಎಂದು ತಿಳಿದು ಬಂದಿದೆ.

ಅಲ್ಲದೆ ಜನ ಸಾಮಾನ್ಯರ ಕಲ್ಯಾಣಕ್ಕಾಗಿ ರೂಪಿಸಿದ್ದ ಯೋಜನೆಗಳ ಸಮಗ್ರ ಚಿತ್ರಣವನ್ನೊಳಗೊಂಡ ಮತ್ತು ಕೋವಿಡ್‌ ನಿಯಂತ್ರಣಕ್ಕೆ ಕೈಗೊಂಡಿದ್ದಕ್ರಮಗಳ ಕುರಿತು 15ರಿಂದ 30 ನಿಮಿಷದ ಕಾರ್ಯಕ್ರಮ ಪ್ರಸಾರ ಮಾಡಿರುವ ಟಿ ವಿ ಚಾನಲ್‌ಗಳಿಗೆ ರಾಜ್ಯ ಬಿಜೆಪಿ ಸರ್ಕಾರವು 57. 02 ಲಕ್ಷ ರು.ಗಳನ್ನು ವೆಚ್ಚ ಮಾಡಿತ್ತು.

ರಾಜ್ಯ ಬಿಜೆಪಿ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬಕ್ಕೆ ಪತ್ರಿಕೆಗಳ ಪ್ರಾಯೋಜಿತ ಪುರವಣಿಗಳಿಗೆ 44.85 ಲಕ್ಷ ರು.ಗಳನ್ನು ವೆಚ್ಚ ಮಾಡಿತ್ತು. ಅಮಿತ್‌ ಶಾ ಕಾರ್ಯಕ್ರಮಗಳ ಜಾಹೀರಾತಿಗೆ 89 ಲಕ್ಷ ರು. ಖರ್ಚು ಮಾಡಿದ್ದನ್ನು ಸ್ಮರಿಸಬಹುದು.

ಕೋವಿಡ್‌ ನಿಯಂತ್ರಣಕ್ಕೆ ಸರ್ಕಾರ ಹಮ್ಮಿಕೊಂಡಿರುವ ಯೋಜನೆ, ಕಾರ್ಯಕ್ರಮಗಳ ಸಮಗ್ರ ಚಿತ್ರಣವನ್ನು ಬಿಂಬಿಸುವ ನಾಲ್ಕು ಪುಟಗಳ ಪ್ರಾಯೋಜಿತ ಪುರವಣಿಗಾಗಿ 2020ರಲ್ಲಿ ಒಟ್ಟು 1.60 ಕೋಟಿ ರು.ಗಳನ್ನು ವೆಚ್ಚ ಮಾಡಿದೆ. ಈ ಪೈಕಿ ಹೊಸ ದಿಗಂತ ಪತ್ರಿಕೆ ಸಿಂಹಪಾಲು ಪಡೆದಿದ್ದು, ಉಳಿದೆಲ್ಲ ಪತ್ರಿಕೆಗಳಿಗಿಂತ ಅತಿ ಹೆಚ್ಚಿನ ಮೊತ್ತದ ಜಾಹೀರಾತು ನೀಡಿತ್ತು.

ಅತಿಥಿ ಉಪನ್ಯಾಸಕರಿಗೆ ಗೌರವ ಸಂಭಾವನೆ, ಆಟೋ ಚಾಲಕರು, ತರಕಾರಿ, ಹೂ ಬೆಳೆಗಾರರು, ನೇಕಾರರು, ಸವಿತಾ ಸಮಾಜ, ವಲಸೆ ಕಟ್ಟಡ ಕಾರ್ಮಿಕರು ಸೇರಿದಂತೆ ಇನ್ನಿತರರಿಗೆ ಪೂರ್ಣ ಪ್ರಮಾಣದಲ್ಲಿ ಪರಿಹಾರ ನೀಡದ ಸರ್ಕಾರ ನೇರ ಪ್ರಸಾರದ ಹೆಸರಿನಲ್ಲಿ ಲಕ್ಷಾಂತರ ರುಪಾಯಿಗಳನ್ನು ವೆಚ್ಚ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.

Hot this week

ಖರ್ಗೆ ಕುಟುಂಬ ಸದಸ್ಯರ ಸಿದ್ದಾರ್ಥ ವಿಹಾರ ಟ್ರಸ್ಟ್‌; ಪ್ರಕರಣ ಮುಂದುವರಿಕೆ, ಲೋಕಾಯುಕ್ತ ಎಸ್‌ಪಿ ಗೆ ನೋಟೀಸ್‌ ನೀಡಿದ ನ್ಯಾಯಾಲಯ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ,...

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...
Please Scan to make Your Contribution

Topics

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ...

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

Related Articles

Popular Categories

error: Content is protected !!