Friday | March 6, 2026 |

ಭ್ರಷ್ಟಾಚಾರ; 1,839 ಪ್ರಕರಣಗಳಲ್ಲಿ ಇಲಾಖೆ ವಿಚಾರಣೆಯನ್ನೇ ನಡೆಸದ ಸರ್ಕಾರ

Support THE-FILE

spot_img

ಬೆಂಗಳೂರು; ಲೋಕಾಯುಕ್ತ ಕಾಯ್ದೆ ಕಲಂ 12(3) ಅಡಿಯಲ್ಲಿ ವರದಿ ಸ್ವೀಕರಿಸಿರುವ ಸಚಿವಾಲಯದ ಬಹುತೇಕ ಇಲಾಖೆಗಳು ಆರೋಪಿತ ಅಧಿಕಾರಿ, ನೌಕರರ ವಿರುದ್ಧ ಇಲಾಖೆ ವಿಚಾರಣೆ ನಡೆಸದಿರುವುದು ಇದೀಗ ಬಹಿರಂಗವಾಗಿದೆ. ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಆರೋಪಿತ ಅಧಿಕಾರಿ, ನೌಕರ ಸಿಬ್ಬಂದಿ ವಿರುದ್ಧ ಲೋಕಾಯುಕ್ತರು ಸಲ್ಲಿಸಿರುವ ವಿಚಾರಣೆ ವರದಿಗಳನ್ನಾಧರಿಸಿ ಇಲಾಖೆ ವಿಚಾರಣೆ ನಡೆಸದಿರುವ ಉನ್ನತ ಅಧಿಕಾರಿಗಳ ಭಂಡ ನಿರ್ಲಕ್ಷ್ಯವೂ ಪ್ರದರ್ಶನವಾಗಿದೆ.

ಲೋಕಾಯುಕ್ತ ಕಾಯ್ದೆ ಕಲಂ 12(3) ಅಡಿಯಲ್ಲಿ 2021ರ ಜುಲೈ 1ರಿಂದ ಜುಲೈ 31ರವರೆಗೆ ಒಟ್ಟು 2,193 ಪ್ರಕರಣಗಳಲ್ಲಿ ಇಲಾಖೆ ವಿಚಾರಣೆ ನಡೆಸಬೇಕು ಎಂದು ಲೋಕಾಯುಕ್ತ ಸಂಸ್ಥೆಯು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಈ ಪೈಕಿ ಕೇವಲ 354 ಪ್ರಕರಣಗಳಲ್ಲಷ್ಟೇ ಇಲಾಖೆ ವಿಚಾರಣೆ ನಡೆಸಲು ಕ್ರಮಕೈಗೊಂಡಿರುವ ಸರ್ಕಾರವು 1,839 ಪ್ರಕರಣಗಳಲ್ಲಿ ಇಲಾಖೆ ವಿಚಾರಣೆ ನಡೆಸಲು ಈವರೆವಿಗೂ ಕ್ರಮ ಕೈಗೊಂಡಿಲ್ಲ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್‌ 31ರಂದು ನಡೆದ ಸಭೆಯಲ್ಲಿ ಲೋಕಾಯುಕ್ತ ಪ್ರಕರಣಗಳ ಕುರಿತು ಚರ್ಚೆಯಾಗಿದೆ. ಇಲಾಖೆಗಳಲ್ಲಿ ಬಾಕಿ ಇರುವ ಇಲಾಖೆ ವಿಚಾರಣೆ ಕಡತಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್‌ ಅವರು ಸೂಚನೆ ನೀಡಿದ ಬೆನ್ನಲ್ಲೇ 1,839 ಪ್ರಕರಣಗಳಲ್ಲಿ ಇಲಾಖೆ ವಿಚಾರಣೆಗೆ ಕ್ರಮ ಕೈಗೊಳ್ಳದ ಇಲಾಖೆ ಮುಖ್ಯಸ್ಥರ ಬೇಜವಾಬ್ದಾರಿ ಮುನ್ನೆಲೆಗೆ ಬಂದಿದೆ. ಈ ಸಂಬಂಧ ನಡೆದಿರುವ ಸಭೆ ನಡವಳಿ ಮತ್ತು ಇಲಾಖೆ ವಿಚಾರಣೆ ನಡೆಸದೆ ಇಲಾಖೆಗಳ ಪಟ್ಟಿ ಹಾಗೂ ಪ್ರಕರಣಗಳ ವಿವರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ಲೋಕಾಯುಕ್ತರ ಶಿಫಾರಸ್ಸಿನ ಪ್ರಕಾರ ಇಲಾಖೆ ವಿಚಾರಣೆ ನಡೆಸಲು ಕ್ರಮ ಕೈಗೊಳ್ಳದ ಇಲಾಖೆಗಳ ಪಟ್ಟಿಯಲ್ಲಿ ಕಂದಾಯ ಇಲಾಖೆಯು ಅಗ್ರ ಸ್ಥಾನದಲ್ಲಿದೆ. 2021ರ ಜುಲೈ 31ರ ಅಂತ್ಯಕ್ಕೆ ಶಿಫಾರಸ್ಸಾಗಿದ್ದ 569 ಪ್ರಕರಣಗಳ ಪೈಕಿ ಕೇವಲ 69 ಪ್ರಕರಣಗಳಿಗಷ್ಟೇ ಇಲಾಖೆ ವಿಚಾರಣೆಗೆ ಕ್ರಮ ಕೈಗೊಂಡಿರುವ ಕಂದಾಯ ಇಲಾಖೆಯು ಇನ್ನೂ 500 ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳದಿರುವುದು ಇಲಾಖೆ ಒದಗಿಸಿರುವ ಮಾಹಿತಿಯಿಂದ ತಿಳಿದು ಬಂದಿದೆ.

ಅದೇ ರೀತಿ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 120 ಪ್ರಕರಣಗಳ ಪೈಕಿ ಕೇವಲ 8 ಪ್ರಕರಣಗಳಿಲ್ಲಷ್ಟೇ ಇಲಾಖೆ ವಿಚಾರಣೆ ಕೈಗೊಂಡು 112 ಪ್ರಕರಣಗಳಲ್ಲಿ ಒಂದೇ ಒಂದು ಕ್ರಮ ಕೈಗೊಂಡಿಲ್ಲ. ಹಾಗೆಯೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಲ್ಲಿ 172 ಪ್ರಕರಣಗಳಲ್ಲಿ ಕೇವಲ ಒಂದೇ ಒಂದು ಪ್ರಕರಣದಲ್ಲದಷ್ಟೇ ಕ್ರಮ ಕೈಗೊಂಡು ಇನ್ನು 171 ಪ್ರಕರಣಗಳಿಗೆ ಇಲಾಖೆ ವಿಚಾರಣೆ ನಡೆಸಲು ಮುಂದಾಗದಿರುವುದು ಗೊತ್ತಾಗಿದೆ.

ನಗರಾಭಿವೃದ್ಧಿ ಇಲಾಖೆಯಲ್ಲಿನ 282ರಲ್ಲಿ 279, ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ 113ರಲ್ಲಿ 107, ಸಮಾಜ ಕಲ್ಯಾಣ ಇಲಾಖೆಯ 46ರಲ್ಲಿ 45, ಸಾರಿಗೆ ಇಲಾಖೆಯ 28ರಲ್ಲಿ 27 ಪ್ರಕರಣಗಳಲ್ಲಿ ಇಲಾಖೆ ವಿಚಾರಣೆಯನ್ನೇ ಕೈಗೊಂಡಿಲ್ಲ.

ಇನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (63), ಪಶು ಸಂಗೋಪನೆ (28), ಕೃಷಿ (83), ಸಹಕಾರ ಇಲಾಖೆಯ (14) ಯೋಜನೆ, ಸಾಂಖ್ಯಿಕ (10), ಆಹಾರ ನಾಗರಿಕ ಸರಬರಾಜು (17), ರೇಷ್ಮೆ (11), ಜಲ ಸಂಪನ್ಮೂಲ (82), ಸಣ್ಣ ನೀರಾವರಿ (37), ಅರಣ್ಯ ಪರಿಸರ ಜೀವಿಶಾಸ್ತ್ರ (65) ವಾಣಿಜ್ಯ ಕೈಗಾರಿಕೆ (57) ತೋಟಗಾರಿಕೆ (32) ಇಲಾಖೆಯಲ್ಲಿನ ವಿಚಾರಣೆ ಪ್ರಕರಣಗಳಲ್ಲಿ ಒಂದೇ ಒಂದು ಕ್ರಮವನ್ನೂ ಕೈಗೊಂಡಿಲ್ಲ.

ಹಾಗೆಯೇ ಸಚಿವಾಲಯದ ಇಲಾಖೆಗಳಲ್ಲಿ ಒಟ್ಟು 1,754 ಇಲಾಖೆ ಪ್ರಕರಣಗಳ ಒಪೈಕಿ ನಿಯಮ 11ರ ಅಡಿಯಲ್ಲಿ 866, ನಿಯಮ 12ರಡಿ 100 ಪ್ರಕರಣಗಳಲ್ಲಷ್ಟೇ ದೋಷಾರೋಪಣೆ ಪಟ್ಟಿ ಜಾರಿಮಾಡಲಾಗಿದೆ. ಈ ಸಂಬಂಧ ವಿವರಣೆ ಕೊಟ್ಟಿರುವ 786 ಪ್ರಕರಣಗಳ ಪೈಕಿ 623 ಪ್ರಕರಣಗಳಿಗೆ ವಿಚಾರಣಾಧಿಕಾರಿಗಳನ್ನು ನೇಮಿಸಲಾಗಿದೆ. 2ನೇ ಕಾರಣ ಕೇಳುವ ನೋಟೀಸ್‌ಗೆ ಆರೋಪಿತ ಅಧಿಕಾರಿ ನೌಕರರಿಂದ ವಿವರಣೆ ಪಡೆದ ಒಟ್ಟು 132 ಪ್ರಕರಣಗಳಲ್ಲಿ 65 ಪ್ರಕರಣಗಳಲ್ಲಿ ಮಾತ್ರ ಅಂತಿಮ ಅದೇಶ ಹೊರಡಿಸಿದೆ. ಜೂನ್‌ 2021ರಲ್ಲಿ ಒಟ್ಟು 1,842 ಪ್ರಕರಣಗಳಿದ್ದರೆ ಜುಲೈ 2021ರಲ್ಲಿ 1,754 ಇಲಾಖೆ ವಿಚಾರಣೆ ಪ್ರಕರಣಗಳಿರುವುದು ಇಲಾಖೆ ಒದಗಿಸಿರುವ ಮಾಹಿತಿಯಿಂದ ಗೊತ್ತಾಗಿದೆ.

ಕಲಂ 12(3) ಅನ್ವಯ ಕಳಿಸಿಕೊಡಲಾಗುವ ವರದಿಗಳ ಮೇಲೆ ತೆಗೆದುಕೊಂಡ ಕ್ರಮದ ಬಗ್ಗೆ ಇಲಾಖಾ ಮುಖ್ಯಸ್ಥರು 3 ತಿಂಗಳೊಳಗಾಗಿ ಲೋಕಾಯುಕ್ತಕ್ಕೆ ವರದಿಗಳನ್ನೂ ಸಲ್ಲಿಸುತ್ತಿಲ್ಲ ಎಂದು ಲೋಕಾಯುಕ್ತ ರಿಜಿಸ್ಟ್ರಾರ್‌ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅಲ್ಲದೆ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಅವರು ಈ ಸಂಬಂಧ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img
error: Content is protected !!