Friday | August 28, 2026 |

ಸಂಸ್ಕೃತ ವಿವಿಯಲ್ಲಿ ಅವ್ಯವಹಾರ; ಸ್ವಜಾತಿ, ಒಳಪಂಗಡಕ್ಕೆ ಮನ್ನಣೆ, ಕನ್ನಡ ಸಂಸ್ಕೃತಿಗೆ ನಿಂದನೆ

ಬೆಂಗಳೂರು; ಸಂಸ್ಕೃತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಸ್ವಜಾತಿ, ಒಳಪಂಗಡ, ಭಾಷೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಪರೀಕ್ಷಾ ಅವ್ಯವಹಾರದಲ್ಲಿ ನಿರತರಾಗಿದ್ದಾರೆ! ಆಂತರಿಕ ಅಂಕ ನೀಡಿಕೆಯಲ್ಲಿಯೂ ಪ್ರಾಧ್ಯಾಪಕರು ತಾರತಮ್ಯ ಧೋರಣೆ ಅನುಸರಿಸುತ್ತಿರುವುದು ಮತ್ತು ಮಲೆಯಾಳಿ ಭಾಷೆಗೆ ಒತ್ತು ನೀಡಿ ಕನ್ನಡ ಸಂಸ್ಕೃತಿಯನ್ನು ನಿಂದಿಸುತ್ತಿದ್ದಾರೆ ಎಂಬ ಗುರುತರವಾದ ಆರೋಪವೂ ಇದೀಗ ಕೇಳಿ ಬಂದಿದೆ.

ಬೆಂಗಳೂರಿನ ಅನಂತ್‌ ಐತಾಳ್‌ ಎಂಬುವರು ಈ ಕುರಿತು ಲಿಖಿತ ದೂರನ್ನು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ. ಈ ದೂರನ್ನಾಧರಿಸಿ ಕ್ರಮ ಕೈಗೊಳ್ಳುವ ಸಂಬಂಧ ಸಂಸ್ಕೃತ ವಿಶ್ವವಿದ್ಯಾಲಯದ ಕುಲಸಚಿವರಿಗೆ 2021ರ ಅಕ್ಟೋಬರ್‌ 1ರಂದು ಪತ್ರ ಬರೆದಿದ್ದಾರೆ. ದೂರಿನ ಪತ್ರ ‘ದಿ ಫೈಲ್‌’ಗೆ ಲಭ್ಯವಾಗಿದೆ.

ವಿಶ್ವವಿದ್ಯಾಲಯದದಲ್ಲಿ ಹಲವು ಪ್ರಾಧ್ಯಾಪಕರು ಕಳೆದ ಹಲವು ವರ್ಷಗಳಿಂದಲೂ ತಮಗೆ ಬೇಕಾದ ಹಾಗೆ ಮನಸೋ ಇಚ್ಛೆಯಿಂದ ವರ್ತಿಸುತ್ತಿದ್ದರೂ ಉನ್ನತ ಶಿಕ್ಷಣ ಇಲಾಖೆ ಮತ್ತು ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ.

‘ವ್ಯಾಕರಣ ವಿಭಾಗದ ಮುಖ್ಯಸ್ಥೆ ಶಿವಾನಿ ಅವರು ಎರಡನೇ ಷಣ್ಮಾಸಿಕದಲ್ಲಿ ಬೋಧನೆ ಸಂದರ್ಭದಲ್ಲಿ ಮಲೆಯಾಳಿ ಸಂಸ್ಕೃತಿಯನ್ನು ಹೊಗಳಿ ಕನ್ನಡ ಸಂಸ್ಕೃತಿಯನ್ನು ನಿಂದಿಸಿದ್ದಾರೆ. ಈ ಬಗ್ಗೆ ಕುಲಪತಿಗಳನ್ನು ಗಮನ ಸೆಳೆದಿದ್ದೇನೆ,’ ಎಂದು ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ದೂರಿನಲ್ಲಿ ವಿವರಿಸಿದ್ದಾರೆ.

ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಪಾಠ ಪ್ರವಚನಗಳು ನಿಗದಿತ ಸಮಯಕ್ಕೆ ಸರಿಯಾಗಿ ನಡೆಯುವುದಿಲ್ಲ. ಅವ್ಯವಸ್ಥೆಯಿಂದ ಕೂಡಿವೆ. ವ್ಯಾಕರಣದ ಕುರಿತು ಪ್ರಾಧ್ಯಾಪಕರಿಗೆ ಸರಿಯಾದ ತಿಳಿವಳಿಕೆ ಇಲ್ಲ. ತೋರಿಕೆಗೆ ಮಾತ್ರ ಅಲ್ಪಾವಧಿಯಲ್ಲಿಯೇ ವಿಷಯವನ್ನು ಅಪೂರ್ಣವಾಗಿ ಪೂರ್ಣಗೊಳಿಸುತ್ತಿದ್ದಾರೆ. ಹಲವು ಬಾರಿ ಕುಲಪತಿ, ಕುಲಸಚಿವರು ಮತ್ತು ವಿಭಾಗದ ಮುಖ್ಯಸ್ಥರಿಗೆ ಅನಂತ್‌ ಐತಾಳ್‌ ಅವರು ಗಮನಕ್ಕೆ ತಂದಿರುವುದು ದೂರಿನಿಂದ ತಿಳಿದು ಬಂದಿದೆ.

ಪರೀಕ್ಷಾ ಅವ್ಯವಹಾರ

ಪ್ರಥಮ ವರ್ಷದ ಷಣ್ಮಾಸಿಕ ಪರೀಕ್ಷೆ ಫಲಿತಾಂಶ ನೀಡಿಕೆಯಲ್ಲಿ ಅವ್ವವಹಾರ ನಡೆದಿದೆ ಎಂದು ದೂರಿರುವ ಅನಂತ್‌ ಐತಾಳ್‌ ಅವರು ಸ್ವ ಜಾತಿ, ಒಳಪಂಗಡ, ತಮ್ಮ ಭಾಷೆ ಆಧಾರದ ಮೇಲೆ ಅಂಕಗಳನ್ನು ನೀಡುತ್ತಿದ್ದಾರೆ. ವಿಷಯದ ಬಗ್ಗೆ ತಿಳಿವಳಿಕೆ ಇಲ್ಲದಿರುವವರಿಗೂ ಪ್ರತಿಶತ 70ರಿಂದ 80 ಅಂಕಗಳನ್ನು ನೀಡುತ್ತಿದ್ದಾರೆ ಎಂದು ಅರೋಪಿಸಿದ್ದಾರೆ.

ಕಾರೇಕಾ ವೃತ್ತಿ ಪತ್ರಿಕೆಯ ಆಂತರಿಕ ಅಂಕಗಳನ್ನು ನೀಡುವಾಗ 25 ಅಂಕಗಳಲ್ಲಿ 23 ರಷ್ಟು ಆಂತರಿಕ ಅಂಕಗಳನ್ನು ಪಡೆದಿದ್ದರೂ ಪರೀಕ್ಷೆ ಫಲಿತಾಂಶದಲ್ಲಿ 20 ಅಂಕಗಳನ್ನು ನೀಡಿ ಎಲ್ಲರಿಗಿಂತಲೂ ಕಡಿಮೆ ಅಂಕ ನಮೂದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಲೋಪವನ್ನು ಸರಿಪಡಿಸಬೇಕು ಎಂದು ನೀಡಿದ್ದ ಮನವಿ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅನಂತ್‌ ಐತಾಳ್‌ ಅವರು ದೂರಿನಲ್ಲಿ ವಿವರಿಸಿದ್ದಾರೆ. ಈ ದೂರನ್ನಾಧರಿಸಿ ಕೂಡಲೇ ಕ್ರಮ ಕೈಗೊಳ್ಳಿ ಎಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಕುಮಾರ್‌ನಾಯಕ್‌ ಅವರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಅವರಿಗೆ ಸೂಚಿಸಿರುವುದು ಪತ್ರದಿಂದ ತಿಳಿದು ಬಂದಿದೆ.

Hot this week

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ...

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...
Please Scan to make Your Contribution

Topics

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ...

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

Related Articles

Popular Categories

error: Content is protected !!