Monday | August 24, 2026 |

ಮುತ್ತಪ್ಪ ರೈ ಭದ್ರತೆ; ಕಾನೂನು ಸುವ್ಯವಸ್ಥೆ ಶಾಖೆಯಲ್ಲಿ ಶ್ರೀರಾಮುಲು ಶಿಫಾರಸ್ಸು ಪತ್ರವೇ ಇಲ್ಲ

ಬೆಂಗಳೂರು; ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್‌ ಮುತ್ತಪ್ಪ ರೈ ಅವರಿಗೆ ಭದ್ರತೆ ನೀಡುವ ಸಂಬಂಧ ಸಚಿವ ಬಿ ಶ್ರೀರಾಮುಲು ಅವರು ಗೃಹ ಇಲಾಖೆಗೆ ಬರೆದಿದ್ದ ಶಿಫಾರಸ್ಸು ಪತ್ರ, ಟಿಪ್ಪಣಿ ಹಾಳೆಯು ಕಾನೂನು ಸುವ್ಯವಸ್ಥೆ ಶಾಖೆಯಲ್ಲಿ ಲಭ್ಯವಿಲ್ಲ ಎಂದು ಒಳಾಡಳಿತ ಇಲಾಖೆಯು ಉತ್ತರಿಸಿದೆ.

ಬಹು ಕೋಟಿ ವಂಚನೆ ಆರೋಪಕ್ಕೆ ಗುರಿಯಾಗಿರುವ ಯುವರಾಜಸ್ವಾಮಿ ಮನೆ ಮೇಲೆ ಪೊಲೀಸರು ನಡೆಸಿದ್ದ ದಾಳಿ ವೇಳೆಯಲ್ಲಿ ಶ್ರೀರಾಮುಲು ಹೆಸರಿನಲ್ಲಿರುವ ಲೆಟರ್‌ ಹೆಡ್‌ ಪತ್ರದಲ್ಲಿ ಎನ್‌ ಮುತ್ತಪ್ಪ ರೈಗೆ ಗೃಹ ಇಲಾಖೆಯಿಂದ ಭದ್ರತೆ ನೀಡುವ ಸಂಬಂಧ ಇಂಗ್ಲೀಷ್‌ನಲ್ಲಿ ಟೈಪ್ ಮಾಡಿದ್ದ ಪತ್ರವು ದೊರೆತಿತ್ತು. ಇದನ್ನು ದೋಷಾರೋಪಣೆ ಪಟ್ಟಿಯಲ್ಲಿಯೂ ಉಲ್ಲೇಖಿಸಿತ್ತು.

ಶಿಫಾರಸ್ಸು ಪತ್ರ ದೊರೆತಿದ್ದನ್ನು ದೋಷಾರೋಪಣೆ ಪಟ್ಟಿಯಲ್ಲಿ ಉಲ್ಲೇಖಿಸಿದ್ದರೂ ಇದೀಗ ಇಂತಹ ಶಿಫಾರಸ್ಸು ಪತ್ರ ಅಥವಾ ಟಿಪ್ಪಣಿ ಹಾಳೆಯು ಲಭ್ಯವಿಲ್ಲ ಎಂದು ಉತ್ತರಿಸಿರುವ ಒಳಾಡಳಿತ ಇಲಾಖೆಯು ಮುಚ್ಚಿಡುತ್ತಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ.

ಯುವರಾಜಸ್ವಾಮಿ ಮನೆ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಹಲವು ದಾಖಲಾತಿ, ವಿವಿಧ ಸಚಿವರ ಹೆಸರಿನಲ್ಲಿದ್ದ ಲೆಟರ್‌ಹೆಡ್‌ಗಳನ್ನು ವಶಪಡಿಸಿಕೊಂಡಿದ್ದರು.

ಇದರಲ್ಲಿ ಜಯ ಕರ್ನಾಟಕ ಸಂಘಟನೆಗೆ ಸೇರಿದ್ದ ಲೆಟರ್‌ಹೆಡ್‌ ಕೂಡ ಇತ್ತು. ಇದೇ ಲೆಟರ್‌ಹೆಡ್‌ನಲ್ಲಿ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈಗೆ ಭದ್ರತೆ ನೀಡುವ ಸಂಬಂಧ ಗೃಹ ಇಲಾಖೆಗೆ ಕೋರಿರುವ ಬಗ್ಗೆ ಲೆಟರ್‌ಹೆಡ್‌ನಲ್ಲಿ ಇಂಗ್ಲೀಷ್‌ನಲ್ಲಿ ಟೈಪ್‌ ಮಾಡಲಾಗಿತ್ತು. ಎಂಬುದು ದೃಢೀಕರಿಸಿದ ದೋಷಾರೋಪಣೆ ಪಟ್ಟಿಯಿಂದ ಗೊತ್ತಾಗಿತ್ತು.

ಆರ್‌ಟಿಜಿಎಸ್‌ ಮೂಲಕ 18 ಲಕ್ಷ ವರ್ಗಾವಣೆ

ಯುವರಾಜಸ್ವಾಮಿಯು ಕರ್ನಾಟಕ ಬ್ಯಾಂಕ್‌ನಲ್ಲಿ ಹೊಂದಿದ್ದ ಖಾತೆಯಿಂದ (ಖಾತೆ ಸಂಖ್ಯೆ; 5502000100052301) ಬಿ ಶ್ರೀರಾಮುಲು ಖಾತೆಗೆ (ಖಾತೆ ಸಂಖ್ಯೆ; KARBH19210399488) 2019ರ ಜುಲೈ 29ರಂದು 5 ಲಕ್ಷ ಹಾಗೂ 2019ರ ಆಗಸ್ಟ್‌ 1ರಂದು 13 ಲಕ್ಷ ರು. (ಖಾತೆ ಸಂಖ್ಯೆ ;KARBH19213654613) ಆರ್‌ಟಿಜಿಎಸ್‌ ಮೂಲಕ ಹಣ ವರ್ಗಾವಣೆ ಆಗಿರುವುದು ದೋಷಾರೋಪಣೆ ಪಟ್ಟಿಯಲ್ಲಿ ಲಗತ್ತಿಸಿರುವ ಬ್ಯಾಂಕ್‌ನ ವಹಿವಾಟಿನ ದಾಖಲೆಯಿಂದ ತಿಳಿದು ಬಂದಿತ್ತು.

ಇದಲ್ಲದೆ ಯುವರಾಜಸ್ವಾಮಿ ಮನೆಯಲ್ಲಿ ವಶಪಡಿಸಿಕೊಂಡಿದ್ದ ದಾಖಲಾತಿಗಳಲ್ಲಿ ಮುರುಗೇಶ್‌ ನಿರಾಣಿ, ಉಮೇಶ್‌ ಕತ್ತಿ, ಟಿ ಶಾಮ್‌ಭಟ್‌ ಸೇರಿದಂತೆ ಹಲವು ಗಣ್ಯರ ಹೆಸರಿನಲ್ಲಿದ್ದ ಲೆಟರ್‌ಹೆಡ್‌ಗಳು ಮತ್ತು ದಾಖಲೆಗಳು ದೊರೆತಿದ್ದನ್ನು ಸ್ಮರಿಸಬಹುದು.

Hot this week

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

Related Articles

Popular Categories

error: Content is protected !!